ಮೇ ೧೮, ೨೦೧೩
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಸಿಡುಬು ಮಾರಮ್ಮನ ಸಿತಲಾ ಸಪ್ತಮಿ    
ತವಿಶ್ರೀ
ಶನಿವಾರ, 23 ಆಗಸ್ಟ್ 2008 (08:15 IST)

‘ಸಿತಲಾ ಸಪ್ತಮಿ' ಈ ಹೆಸರು ಕೇಳಿರುವಿರಾ? ಇದೊಂದು ಉತ್ಸವದ ದಿನ ಎಂದರೆ ಅಚ್ಚರಿಯಾ? ಈ ಆಚರಣೆಯು ಗುಜರಾತ್ ಮತ್ತು ಸಿಂಧ್ ಪ್ರಾಂತ್ಯಗಳಲ್ಲಿ ಹೆಚ್ಚು ಪ್ರಚಲಿತವಾಗಿದೆಯಂತೆ. 

ಗುರುವಾರ ಸಂಜೆ ೪ ಘಂಟೆಗೇ ನಮ್ಮಲ್ಲಿಯ ಮ್ಯಾನೇಜರ್ ಶಹಾ ಬೇಗ ಮನೆಗೆ ಹೋಗಬೇಕು ಎಂದು ನನ್ನ ಅನುಮತಿ ಕೇಳಿದ. ಅಲ್ಲಪ್ಪ, ಇವತ್ತು ಶುಕ್ರವಾರ - ನಾಳೆ ನಾಡದ್ದು ರಜೆಯಾದ್ದರಿಂದ, ಎಲ್ಲ ಕೆಲಸವನ್ನೂ ಇಂದೇ ಮುಗಿಸಬೇಕು. ಹಾಗೆ ಬೇಗ ಹೋಗಲು ಇವತ್ಯಾವ ಹಬ್ಬವಿದೆ? ಗೋಕುಲಾಷ್ಟಮಿ ನಾಳಿದ್ದು ಎಂದೆ. ಅದಕ್ಕವನು, ‘ನಹಿಂ ಸಾಬ್, ಕಲ್ ಸಿತಲಾ ಸಪ್ತಮಿ, ಘರ್ ಮೆ ಚೂಲ್ಹಾ ನಹೀಂ ಜಲಾನ ಹೈ.  ಕಲ್ ಕಾ ಖಾನಾ ಆಜ್ ಹೀ ಪಕಾನೇಕ ಹೈ - ಉಸ್ ಲಿಯೆ ಜಲ್ದಿ ಘರ್ ಜಾಕೆ ಮೈ ಮದದ್ ಕರನಾ ಹೈ, ಎಂದಿದ್ದ (ಇಲ್ಲ ಸಾಹೇಬ್ರ, ನಾಳೆ ಸಿತಲಾ ಸಪ್ತಮೀ, ಮನೆಯಲ್ಲಿ ಒಲೆ ಹಚ್ಚುವಂತಿಲ್ಲ, ನಾಳೆಯ ಊಟದ ತಯಾರಿ ಇಂದೇ ಮಾಡಬೇಕು - ಆದ್ದರಿಂದ ಬೇಗ ಮನೆಗೆ ಹೋಗಿ, ಸಹಾಯಿಸಬೇಕು). 

ಇದ್ಯಾವುದಪ್ಪ, ನಾನು ಕೇಳಿರದ ಹೊಸ ಹಬ್ಬ ಎಂದು ಅದರ ಬಗ್ಗೆ ಸ್ವಲ್ಪ ಬೆಳಕು ಚೆಲ್ಲಲು ಅವನಿಗೆ ಕೇಳಿದೆ. ಅದಕ್ಕವನು, ನನಗೆ ಅದರ ಬಗ್ಗೆ ಹೆಚ್ಚಿನದಾಗಿ ಗೊತ್ತಿಲ್ಲ. ಆದರೆ, ಹಿಂದೆ ಸಿಡುಬು ರೋಗ ತಗುಲಿದಾಗ ಅದನ್ನು ಗುಣಪಡಿಸಲು ಸಿತಲಾದೇವಿ ಅರ್ಥಾತ್ ಮಾರಮ್ಮನನ್ನು ಒಲಿಸಿಕೊಳ್ಳಲು ಮಾಡುತ್ತಿದ್ದ ವ್ರತವಿದು ಎಂದು ಬೇಗ ಹೊರಟು ಹೋದ. ಹೋದವನು ಸುಮ್ಮನೆ ಹೋದನಾ! ನನ್ನ ತಲೆಯಲ್ಲಿ ಸಿತಲಾದೇವಿಯ ಹುಳ ಬಿಟ್ಟು ಹೋಗಿದ್ದ. ಸಂಜೆ ಮನೆಗೆ ಬರುವವರೆಗೂ ನನ್ನ ಎಲ್ಲ ಸ್ನೇಹಿತರನ್ನೂ (ಬೇರೆ ಬೇರೆ ಪ್ರದೇಶಗಳಿಂದ ಬಂದಿರುವವರು) ಕೇಳಿ, ಅದರ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಅದು ಹೀಗಿದೆ:

ಸ್ವಾತಂತ್ರ್ಯಾ ಪೂರ್ವದ ದಿನಗಳಲ್ಲಿ ಜನಗಳು ಸಿಡುಬು ರೋಗ ತಗುಲಿ ಸಾಯುತ್ತಿದ್ದುದು ಸಾಮಾನ್ಯ ಎಂಬುದನ್ನು ಬಲ್ಲೆವು. ಅದಕ್ಕೆ ಲಸಿಕೆ ಲಭ್ಯವಾಗುವರೆವಿಗೂ, ಅದರ ಬಗ್ಗೆ ಮೂಢನಂಬಿಕೆ ಇರುವ ಜನಗಳು, ಅದು ಮಾರಿಯ ಕೋಪ ಎಂದೇ ಪರಿಗಣಿಸಿದ್ದರು. ಅದೂ ಅಲ್ಲದೇ ಈ ಸಾಂಕ್ರಾಮಿಕ ರೋಗ ತಗುಲಿದವರನ್ನು ಊರಿನಿಂದ ಹೊರಗೆ ಇಡುತ್ತಿದ್ದರು. ಹಾಗಾಗಿ ಮಾರಿಯ ದೇಗುಲವನ್ನು ಊರ ಹೊರಗೆ ಕಾಣಬಹುದು.  ಈಕೆಯನ್ನು ಗ್ರಾಮದೇವತೆಯೆಂದೂ ಆರಾಧಿಸುವರು. ಮರಗಳ ಕೆಳಗೆ ಅಥವಾ ಸ್ಮಶಾನದ ಹತ್ತಿರ ಈ ದೇಗುಲವನ್ನು ಕಾಣುವುದು ಸಾಮಾನ್ಯ.  ಗುಜರಾತ್ ಮತ್ತು ಸಿಂಧ್ ಪ್ರಾಂತ್ಯದಲ್ಲಿ ಈ ದೇವಿಯ ಆರಾಧನೆ ಹೆಚ್ಚು. ಈ ಮಾರಮ್ಮ ದೇವಿಯನ್ನು ಒಲಿಸಿಕೊಂಡು, ರೋಗ ನಿವಾರಣೆ ಮಾಡಿಕೊಳ್ಳಲು ಶ್ರಾವಣ ಮಾಸದ ಸಪ್ತಮಿಯಂದು ಸಿತಲಾ ಸಪ್ತಮೀ ಎಂದು ಆಚರಿಸಲು ಆರಂಭಿಸಿದರು.

ಸಿತಲಾ ಶೀತಲಾ ದೇವಿ ಎಂದರೆ ತಂಪಾಗಿರಿಸುವ ದೇವತೆ ಎಂದರ್ಥ. ಬಂಗಾಳ ಅಸ್ಸಾಮ್ ಪ್ರಾಂತ್ಯದಲ್ಲಿ ಶೀತಲದೇವಿಯೆಂದೂ, ಮಹಾರಾಷ್ಟ್ರ ಗುಜರಾತ್ ಸಿಂಧ್ ಪ್ರಾಂತ್ಯಗಳಲ್ಲಿ ಸಿತಲೆಯೆಂದೂ ಮತ್ತು ತಮಿಳುನಾಡಿನಲ್ಲಿ ಮಾರಮ್ಮನೆಂದೂ ಆರಾಧಿಸುವ ಶಕ್ತಿದೇವತೆ ಇವಳು. ಜನಗಳ ನಂಬಿಕೆಯಂತೆ ಈ ದೇವಿಯು ವಿಧವೆಯರು ಮತ್ತು ಮಕ್ಕಳಿರುವ ತಾಯಂದಿರ ಪ್ರಾರ್ಥನೆಯನ್ನು ಸ್ವೀಕರಿಸಿ ಅವರ ಮನದಿಂಗಿತವನ್ನು ಶೀಘ್ರವಾಗಿ ಪೂರೈಸುವಳಂತೆ. ಈಕೆಯ ಪ್ರತಿಮೆಯನ್ನು ಕಲ್ಲಿನ ರೂಪದಲ್ಲೂ ಮತ್ತು ಬೇವಿನ ವೃಕ್ಷದ ರೂಪದಲ್ಲೂ ಆರಾಧಿಸುವರು.  ಬೇವು ತನುವನ್ನು ತಂಪಾಗಿರಿಸುವ ಶಕ್ತಿಯನ್ನು ಹೊಂದಿದೆ.  
 
ಇಂದಿನ ವಿಶೇಷತೆ ಏನೆಂದರೆ, ಮನೆಯಲ್ಲಿ ಉರಿ ಹಚ್ಚಬಾರದು, ಅಡುಗೆ ಮಾಡಬಾರದು, ಬಿಸಿ ಪದಾರ್ಥಗಳನ್ನು ಸೇವಿಸಬಾರದು. ಹಿಂದಿನ ದಿನ ಎಂದರೆ ಷಷ್ಠಿಯಂದು ಅಡುಗೆ ಮಾಡಿ, ಸಪ್ತಮಿಯಂದು ಅದನ್ನೇ ಸೇವಿಸಬೇಕು. ತಣ್ಣನೆಯ ಆಹಾರವನ್ನು ಸೇವಿಸುವುದರಿಂದ ತನುವೂ ತಣ್ಣಗಿರುವುದು, ಬಿಸಿ ಏರುವ ಜ್ವರವೂ ಕಡಿಮೆ ಆಗುವುದು ಎಂಬ ನಂಬಿಕೆ. 

ಕತ್ತೆಯು ಸಿತಲಾ ದೇವಿಯ ವಾಹನವಂತೆ. ಆ ದೇವಿಯ ಆರಾಧನೆಯಿಂದ ಕುರುಡರಿಗೆ ದೃಷ್ಟಿಯನ್ನೂ, ಅಂಗವೈಕಲ್ಯರಿಗೆ ಸುಂದರ ದೇಹವನ್ನೂ, ಬಡವರಿಗೆ ಸಿರಿ ಸಂಪತ್ತನ್ನೂ ಮತ್ತು ಬಂಜೆಗೆ ಮಕ್ಕಳನ್ನೂ ದಯಪಾಲಿಸುವಳೆಂದು ನಂಬುವರು. ಈ ದೇವಿಗೆ ಕೋಳಿ, ಕುರಿಯ ರಕ್ತವನ್ನೂ ಅರ್ಪಿಸುವುದು ವಾಡಿಕೆಯಲ್ಲಿದೆ. ಕೆಂಪು ಸೀರೆಯನ್ನುಟ್ಟು ಕೈಗಳಲ್ಲಿ ಪೊರಕೆಯನ್ನೂ, ಬೀಸಣಿಕೆಯನ್ನೂ, ತ್ರಿಶೂಲವನ್ನೂ ಮತ್ತು ಕಪಾಲವನ್ನೂ ಹಿಡಿದಿರುವ ಚಿತ್ರದಂತೆ ರೂಪಿಸುವರು.

ಸಿಡುಬಿನ ಪಿಡುಗು ಈಗ ಕಡಿಮೆಯಾಗಿದ್ದರೂ ಸಿತಲಾ ದೇವಿಯ ಆರಾಧನೆ ಮಾತ್ರ ಕಡಿಮೆ ಆಗಿಲ್ಲ. ವಿವಿಧ ಭಾಷೆ, ಜೀವನ ಸ್ವರೂಪವನ್ನು ಹೊಂದಿರುವ ವಿವಿಧ ಪ್ರಾಂತ್ಯಗಳ ಜನಗಳನ್ನು ಒಂದೆಡೆ ಸೇರಿಸುವ ರಾಷ್ಟ್ರೀಯ ದೇವತೆಯನ್ನು ಆರಾಧಿಸುವ ಸ್ವರೂಪದಲ್ಲಿ ಒಗ್ಗಟ್ಟನ್ನು ಮೂಡಿಸುವ ಪ್ರಯತ್ನ ಇರುವುದು ಒಳ್ಳೆಯದೇ ಅಲ್ಲವೇ?

ಪುಟದ ಮೊದಲಿಗೆ
 
Votes:  3     Rating: 4.33    
 
 
ಸಂಬಂಧಿಸಿದ ಲೇಖನಗಳು
  ಆಪಲ್ ಎಂಬ ಮೊಬೈಲ್ ಮಾಯಾವಿ:ಸುದರ್ಶನ ಗುರುರಾಜ ಬರಹ
  ಕೈಗಂಟಿದ ಮಸಿಯನ್ನು ಮುಖಕ್ಕೆ ಬಳಿದುಕೊಂಡರೆ? ಸುಧೀಂದ್ರ ಬರಹ
  ಕಮಲ ತನ್ನನ್ನು ತಾನೇ ಹೊಸಕಿತೇ?:ನರಸಿಂಹ ರಾಯಚೂರ್ ಪ್ರಶ್ನೆ
  ಎಸ್.ಮಂಜುನಾಥ್ ಮಾಡಿರುವ ಖಡ್ಗ ಮೀಮಾಂಸೆ
  ಓಟೇ ಹಾಕದ ಒಂಟಿ ಓಲೆಯ ಬೀರಯ್ಯ:ಗಂಗಾಧರಯ್ಯ ಬರಹ
  ಮಲೆಗಳಲ್ಲಿ ಮದುಮಗಳು ಎಲ್ಲಿ? ದಿಲಾವರ್ ರಾಮದುರ್ಗ ಬ್ಲಾಗ್
  ಅಮ್ಮನ ಕೂಡೆ ವೋಟ್ ಮಾಡಿದ್ದು:ಸ್ಮಿತಾ ಮಾಕಳ್ಳಿ ಬರಹ
  ವೋಟು ಹಾಕಿ ಸೋತ ಮುಖಗಳು:ಉಮಾರಾವ್ ಬರಹ
  ಸಚಿನ್ ಕೊಳಿಗೆ ಕಂಡ ಮಲೆಗಳಲ್ಲಿ ಮದುಮಗಳು
  ‘ಡೇರಿ ಡಾಕ್ಟರ್ ಹೋರಿ ಮಾಸ್ಟರ್’:ಮತ್ತೊಂದು ಕಥಾಪ್ರಸಂಗ
  ದೆವ್ವವಾದ ನರಭಕ್ಷಕ:ಕಾರ್ಲೋ ಅನುವಾದಿಸಿದ ಕಾರ್ಬೆಟ್ ಕಥನ
  ಪೈ ಎಂಬ ಮಾಯೆಯ ಸಿನೆಮಾ ಗಣಿತ:ದಿಲಾವರ್ ರಾಮದುರ್ಗ ಬರಹ
  ಆನ್ ಲೈನ್ ಆರಂಭಶೂರರ ಕುರಿತು ದತ್ತರಾಜ್ ಅನಿಸಿಕೆಗಳು
  ಮಲೆಗಳಲ್ಲಿ ಮದುಮಗಳಿಗೆ ರೂಪಲಕ್ಷ್ಮಿ ಮರುಳಾಗಿ ಬರೆದದ್ದು
  ‘ಡೇರಿ ಡಾಕ್ಟರ್ ಹೋರಿ ಮಾಸ್ಟರ್:ಒಂದು ಕಥಾಪ್ರಸಂಗ
  ಎವರೆಸ್ಟ್ ಏರಿದ್ದು ಮೊದಲು ಯಾರು?:ಎಂ.ವೆಂಕಟಸ್ವಾಮಿ ಬರಹ
  ಮಾಂಕ್ಷಾವಲಿ ನಾಮಾಂಕಿತ ಮಂಟೇಸ್ವಾಮಿ:ಬಾಬು ಕೌದೇನಹಳ್ಳಿ ಬರಹ
  ಕರ್ನಾಟಕ ಜನಸಾಹಿತ್ಯ ಸಮಾವೇಶ:ಅರುಣ ಜೋಳದ ಸಮೀಕ್ಷೆ
  ಚಾರ್ಲ್ಸ್ ಡಾರ್ವಿನರ ಆಮೆಗಳು:ಪಾಲಹಳ್ಳಿ ವಿಶ್ವನಾಥ್ ಬರಹ
  ತಗಾದೆಯಿಲ್ಲದ ಯುಗಾದಿ ಇರಲಿ:ಅನಸೂಯಾದೇವಿ ಹಾರೈಕೆ
  ಯುಗಾದಿಯ ಬಿಸಿಲಲ್ಲಿ ರತ್ನಪಕ್ಷಿಯ ಅರಸುತ್ತಾ:ಗೊರವರ ಬರಹ
  ಮುದುಕಿಯೊಬ್ಬಳ ಒಳ್ಳೆಯ ಶಾಪ:ಪ್ರೀತಂ ರಾವ್ ಲಂಡನ್ ಡೈರಿ
  ಜಗತ್ತಿನೆದುರು ನಿರುತ್ತರ ಕೊರಿಯ:ರೋಹಿತ ಬರಹ
  ಪರಿಮಳ ಹೊತ್ತು ಬರುತ್ತಿದ್ದವರು:ಎಲ್.ಸಿ.ಸುಮಿತ್ರ ನೆನಪುಗಳು
  ದೇವದೂತರಂತೆ ಬಂದಿದ್ದವರು:ಮಿಂಚುಳ್ಳಿ ಲಹರಿ
  ಬಿಗ್ ಬಾಸ್ ಎಂಬ ಮನೆ ಮುರುಕ ಆಟದ ಕುರಿತು ಭಾವನಾ ರಾವ್ ಮರುಕ
  ಹೃಷಿಕೇಶ್ ಬಡಪಾಯಿಗಳಿಗಾಗಿ ಬರೆದ ೩೭೧ನೇ ವಿಧಿಯ ಪಾಠ
  ರೈಲುಗಾಡಿಯ ರೀಲುಗಳು:ಸುಮನ್ ದೇಸಾಯಿ ಪ್ರಹಸನ
  ‘ಲೈಫ್ ಆಫ್ ಪೈ'ಕುರಿತು ಎ.ಎನ್.ಪ್ರಸನ್ನ
  ಬೆಳ್ಳೂರು ವೆಂಕಟಪ್ಪ ಬರೆದ ಮಂಟೇಸ್ವಾಮಿ ಕಥನ
  ಜೋ ಜೋ ಜೋ ಜೋ ಮಲಗಿದ್ದ ಕಂದಾ:ಪ್ರಶಾಂತ್ ಬರಹ
  ವಿಕ್ರಮನ ಕಥೆಗಳ ಕುರಿತು ಭಾವನಾ ಬರೆದ ವಿಮರ್ಶೆಯ ಸಾಲುಗಳು
  ಕೊಕ್ಕರೆಯಂಥ ಮನುಷ್ಯರು:ಎಸ್.ಮಂಜುನಾಥ್ ಗದ್ಯಚಿತ್ರ
  ಒಂದಿಷ್ಟು ಪ್ರೀತಿ ಕೇಳುವ ‘ಗೊಂಬೆಗಳ ಲವ್’:ರೂಪಲಕ್ಷ್ಮಿ ಬರಹ
  ಇಂಗಿಹೋದ ಬಾವಿಯಲ್ಲಿ:ರೋಹಿತ ಚಕ್ರತೀರ್ಥ ಬರಹ
  ಮಾಹಿತಿ ಹಕ್ಕಿನ ಮಾವಿನಕಾಯಿಯ ಕುರಿತು ಹೃಷಿಕೇಶ್ ದೇಸಾಯಿ
  ಅಜ್ಜಿಯ ಜೊತೆಗೆ ಗೌರಿಯ ನಡಿಗೆ:ನಾಗ ಐತಾಳರ ಬರಹ
  ಹೀಗೆ ನಮ್ಮೊಳಗೊಬ್ಬ ಪಾಂಡು ಪ್ರತಿಬಿಂಬ:ವಸಂತ ಬರಹ
  ಅರವಿಂದರ ದಾರ್ಶನಿಕ ಚಿಂತನೆ:ವಾಸುದೇವಮೂರ್ತಿ ಮರುಪರಿಶೀಲನೆ
  ಕಾಲುವೆಗಳ ಊರಿನ ಕಾಮನೆಗಳು:ನಿಹಾರಿಕಾ ಡೈರಿಯ ಪುಟಗಳು
  ಆಧ್ಯಾತ್ಮಿಕತೆ ಎಂಬ ಹೊಸ ಆಕರ್ಷಣೆ:ದತ್ತರಾಜ್ ಬರಹ
  ‘ಸ್ವಚ್ಛತೆ’ಯ ಅತಿ ಹುಚ್ಚು ಹೆಚ್ಚಾದೊಡೆ:ತ್ರಿವೇಣಿ ಬರಹ
  ಭುವನೇಶ್ವರಿ ಹೆಗಡೆ ಬರೆದ ನಾಮದ ಬಲವೊಂದಿದ್ದರೆ ಸಾಕೋ..
  ಕೂಡ್ಲಿಗಿಯ ಕಾಡು ಪಾಡು: ಸ್ವರೂಪ್ ಕೊಟ್ಟೂರು ಬರೆದಿದ್ದು
  ಶಾಂತಲ ಎಂಬ ಸರ್ವಮಾನ್ಯಳ ಕುರಿತು ವೆಂಕಟೇಶ್.ಕೆ
  ಗೊಂದಲಿಗರ ಕಥನಕಲೆ:ಅರುಣ್ ಜೋಳದ ಬರಹ
  ಮಣಿಕಾಂತ್ ಹೊಸ ಪುಸ್ತಕದ ಒಂದು ಅಧ್ಯಾಯ
  ಅರವತ್ತಾರರ ಹೆದರಿಕೆ ಮುಗಿಯಿತು:ಭಾರತಿ ಬರಹ
  ಟಿ.ಪಿ ವ್ಯಾಸಮುದ್ರಿ ವಿರಚಿತ ಎರಡು ಹಳ್ಳಿ ಪ್ರಸಂಗಗಳು
  ಪ್ರಜ್ಞಾವಂತರು ಸ್ವಲ್ಪ ಬುದ್ಧಿ ಹೇಳಿ ಪ್ಲೀಸ್
  ಕ್ಯಾರೆಟ್ ಮೂಗಿನ ಸ್ನೋ ಮ್ಯಾನ್:ಯೋಗೀಂದ್ರ ಕಾಲಂ
  ವಿಶ್ವರೂಪಂ ವಿರೋಧದ ಹಿಂದಿನ ಕೆಟ್ಟರೂಪಗಳು:ಸಬೀಹಾ ಬರಹ
  ಎಸ್.ಮಂಜುನಾಥ್ ಕಂಡುಕೊಂಡ ಸಂಕ್ರಾಂತಿಯ ಸತ್ಯಗಳು
  ಬೋನ್‌ಸೈ ನಿಟ್ಟುಸಿರು ಕೇಳಿದಿರಾ?: ರಾಜಗೋಪಾಲ್ ಬರಹ
  ಬಾಹ್ಯಾಕಾಶದಲ್ಲೂ ಮನುಷ್ಯನದೇ ಕಸ:ವೆಂಕಟಸ್ವಾಮಿ ಬರಹ