ಸೆಪ್ಟೆಂಬರ್ ೭, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಮಕ್ಕಳ ಸಂಪಿಗೆಯಲ್ಲಿ ಪೂಜಾಶ್ರೀ ಬರೆದ ಬಣ್ಣಗಳು    
ಸಂಪಾದಕ
ಶನಿವಾರ, 30 ಆಗಸ್ಟ್ 2008 (05:21 IST)

ಪ್ರೀತಿಯ ಮಕ್ಕಳೇ,

ಚಿತ್ರಕಲೆ ಯಾರಿಗೆ ಇಷ್ಟವಿಲ್ಲ ಹೇಳಿ? ಹಾಸನದ ಚಿತ್ಕಲಾ ಪೌಂಡೇಶನ್‌ನಲ್ಲಿ ಹಲವು ಪುಟಾಣಿ ಕಲಾವಿದರು ಚಿತ್ರಕಲೆಯನ್ನು ಶ್ರದ್ಧೆಯಿಂದಲೂ, ಪ್ರೀತಿಯಿಂದಲೂ ಕಲಿಯುತ್ತಿದ್ದಾರೆ. ಅವರಲ್ಲಿ ಕೆಲವರನ್ನು ನಾವು ಈಗಾಗಲೇ ಪರಿಚಯಿಸಿದ್ದೇವೆ. ಈ ವಾರದ ಅತಿಥಿ ಪೂಜಾಶ್ರೀ ಕೆ.ಎಸ್. ಪೂಜಾಶ್ರೀ ಇಲ್ಲಿನ ಕೇಂದ್ರಿಯ ವಿದ್ಯಾಲಯದಲ್ಲಿ ಒಂಭತ್ತನೆಯ ತರಗತಿಯಲ್ಲಿ ಓದುತ್ತಿದ್ದಾಳೆ. ತಂದೆ ಕೆನರಾ ಬ್ಯಾಂಕ್ ಉದ್ಯೋಗಿ ಕೆ.ಎಸ್.ಎನ್.ಭಟ್ ಹಾಗೂ ತಾಯಿ ವೀಣಾ ಶಂಕರ್.

ಪೂರ್ಟ್‌ರೇಟ್ ಚಿತ್ರಗಳನ್ನು ಬಿಡಿಸುವ ಆಸಕ್ತಿ ಇರುವ ಪೂಜಾಶ್ರೀಗೆ ಪ್ರಾಣಿಗಳ ಚಿತ್ರಗಳನ್ನು ಬಿಡಿಸುವುದೂ ತುಂಬಾ ಇಷ್ಟ. ಚಿತ್ರ ನೋಡಲೂ ಸುಂದರವಾಗಿರಬೇಕಲ್ವಾ? ಎನ್ನುವುದು ಈ ಚಿಗುರು ಕಲಾವಿದೆಯ ಪ್ರಶ್ನೆ? ಇಲ್ಲಿರುವ ಚಿತ್ರಗಳನ್ನು ನೋಡಿ ಬಿಡಿಸಿದ್ದಾ? ನೋಡದೆ ಬಿಡಿಸಿದ್ದಾ? ಎಂದರೆ, ಅರ್ಧ ನೋಡಿ, ಇನ್ನರ್ಧ ನೋಡದೆ ಎನ್ನುವ ಉತ್ತರ ಕೊಡುತ್ತಾಳೆ. ಯಾವುದೇ ಚಿತ್ರ ಬಿಡಿಸಿದರೂ ಅದರಲ್ಲಿ ನನ್ನ ಕಲ್ಪನೆಯ ಭಾಗವೂ ಸ್ವಲ್ಪ ಇರುತ್ತದೆ ಎನ್ನುವ ಪೂಜಾಶ್ರೀಯ ಸಮಜಾಯಿಸಿ. ಪೂಜಾಶ್ರೀಗೆ ಡಾಕ್ಟರ್ ಆಗುವ ಆಸೆ. ಹಾಗೆ ಡಾಕ್ಟರ್ ಆಗಿ ಸಮಾಜ ಸೇವೆ ಮಾಡುವ ಕನಸು.

`ಚಿತ್ರಕಲೆಗೆ ಮನೆಯಲ್ಲಿ ಅಪ್ಪ, ಅಮ್ಮ ಪ್ರೋತ್ಸಾಹ ನೀಡುತ್ತಾರೆ. ದೇಸಾಯಿ ಸರ್ ಚೆನ್ನಾಗಿ ಚಿತ್ರ ಬಿಡಿಸಲು ಕಲಿಸಿಕೊಡುತ್ತಾರೆ, ಈ ಬಾರಿ ಚಿತ್ರಕಲೆ ಪರೀಕ್ಷೆಗೆ ಕುಳಿತುಕೊಳ್ಳಬೇಕೆಂದಿದ್ದೇನೆ` ಎನ್ನುವ ಪೂಜಾಶ್ರೀಗೆ ಅನೇಕ ಬಹುಮಾನಗಳೂ ಬಂದಿವೆ. ಕನ್ನಡ ಸಂಸ್ಕೃತಿ ಇಲಾಖೆ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾಳೆ. ಎರಡು ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಚಿನ್ನದ ಪದಕ ಗಳಿಸಿದ್ದಾಳೆ. ಮುಂದೆ ಯಾವುದೇ ವೃತ್ತಿಯನ್ನು ಆಯ್ದುಕೊಳ್ಳಬೇಕಾಗಿ ಬಂದರೂ ಚಿತ್ರಕಲೆಯೂ ನನ್ನ ಜೊತೆಗೆ ಇರುತ್ತದೆ ಎನ್ನುತ್ತಾಳೆ.

ಪೂಜಾಶ್ರೀಯ ಚಿತ್ರಗಳು ನಿಮಗೂ ಇಷ್ಟವಾಗಿರಬೇಕಲ್ವಾ? ನಿಮಗೆ ತಿಳಿದಿರುವ ಇಂತಹ ಚಿಗುರು ಪ್ರತಿಭೆಗಳ ಕುರಿತು ನಮಗೆ ಬರೆದು ತಿಳಿಸಿ. ಮಕ್ಕಳು ಬರೆದ ಕಥೆ, ಕವಿತೆ, ಚಿತ್ರಗಳನ್ನು editor@kendasampige.com ಗೆ ಇಮೇಲ್ ಮಾಡಿ. ಮಕ್ಕಳ ಸಂಪಿಗೆಯ ಮೂಲಕ ಅವರನ್ನು ಪ್ರೋತ್ಸಾಹಿಸೋಣ.

ಪುಟದ ಮೊದಲಿಗೆ
 
Votes:  8     Rating: 4.88    
 
 
ಸಂಬಂಧಿಸಿದ ಲೇಖನಗಳು
  ಸಚಿನ್ ದೇವರಾದರೂ ಕ್ರಿಕೆಟ್ ಧರ್ಮವಲ್ಲ
  ಬಿ ಎ ಬಿ ಎ ಎಂದೇಕೆ ಬೀಳುಗಳೆಯುವಿರಿ? ಸೀಮಾ ಸಮತಲ ಬರಹ
  ಧಾರವಾಡದ ಮೊದಲ ದಿನಗಳು : ಸ್ಮಿತಾ ಮಾಕಳ್ಳಿ ಬರಹ
  ಬಂಗಾರದಂತ ಎನ್ನ ಚಾದರ: ಸೀಮಾ ಸಮತಲ ಬರಹ
  ಮಕ್ಕಳ ಸಂಪಿಗೆಯಲ್ಲಿ ಮುದ್ದು ಬರೆದ ಕವಿತೆ
  ಕಾಲೇಜು ಸಂಪಿಗೆ: ಗುರುವಿನ ಗುಲಾಮನಾಗದ ತನಕ...
  ನನ್ನ ಶತ್ರುವೂ ಅಕ್ಕ, ನನ್ನ ಗೆಳತಿಯೂ ಅಕ್ಕ
  ಕಾಲೇಜು ಸಂಪಿಗೆ : ಲಾರಾಳ ಲೌವ್ಲಿ ಲೋಕ
  ಕಾಲೇಜು ಸಂಪಿಗೆ : ಸೀಮಾ ಸಮತಲ ಬರೆದ ಹಿಮಾಲಯ ಕಥನ
  ಕಾಲೇಜು ಸಂಪಿಗೆಯಲ್ಲಿ ಕಾವ್ಯ ಬರೆದ ಕವಿತೆಗಳು
  ಮಕ್ಕಳ ಸಂಪಿಗೆಯಲ್ಲಿ ಸಂಕೇತನ ಬಣ್ಣಗಳು
  ಕಾಲೇಜು ಸಂಪಿಗೆಯಲ್ಲಿ ಲಕ್ಷ್ಮಿ ವಾರಣಾಶಿ ಬರೆದ ಕವಿತೆ
  ಮಕ್ಕಳ ಸಂಪಿಗೆ: ಭಗವತಿ ಹೇಳುವ ಮೂರು ಕಥೆಗಳು
  ‘ಅಜ್ಜಿಮನೆಯಲ್ಲಿ’ ೬ : ದೇವಸ್ಥಾನದಲ್ಲೊಂದು ಪ್ರಶ್ನೆ
  ಕಾಲೇಜು ಸಂಪಿಗೆ: ಜಾತಿರಗಳೆಯಿಲ್ಲದ ಬಾಲ್ಯ
  ಮಕ್ಕಳ ಸಂಪಿಗೆಯಲ್ಲಿ ಜೀವನ್ ಜೋಸ್ ಬಣ್ಣಗಳು
  ಮಕ್ಕಳ ಸಂಪಿಗೆ: 'ಅಜ್ಜಿಮನೆಯಲ್ಲಿ' ಧಾರಾವಾಹಿ
  ಕಾಲೇಜು ಸಂಪಿಗೆ: ಸ್ಕೂಟಿ ಏರಿ ರಾಜಕುಮಾರಿ
  ಕಾಲೇಜು ಸ೦ಪಿಗೆಯಲ್ಲಿ ಕಾರ್ತಿಕ್ ಬರೆದ ಕವಿತೆ
  ಮಕ್ಕಳ ಸಂಪಿಗೆ: ತೋಪಿನಲ್ಲಿ ಮರಕೋತಿ ಆಡುವಾಗ
  ಕಾಲೇಜು ಸಂಪಿಗೆ: ಈಜುಕೊಳದಲ್ಲೇ ತೀರಿಹೋದಳು ಪುಟ್ಟಿ
  ನವೋದಯದ ದಿನಗಳು ೩- ಫಸ್ಟ್ ಸಂಡೆ ಮತ್ತು ಪರೀಕ್ಷೆ ಭಯ
  ಅಜ್ಜಿಮನೆಯಲ್ಲಿ ೩: ಟಂಗ್ ಟ್ವಿಸ್ಟರ್ಸು-ಹೇಳಿ ನೋಡೋಣ?
  ಅಜ್ಜಿಮನೆಯಲ್ಲಿ ೨- ಮೋಡದ ಹಾಡು
  ಕಾಲೇಜು ಸಂಪಿಗೆ: ಅಪ್ಪ ಅಮ್ಮನ ಜಗಳದ ನಡುವೆ ಗುಲ್ಮೊಹರ್
  ಮಕ್ಕಳ ದಿನ ವಿಶೇಷ : ಅಜ್ಜಿ ಮನೆಯಲ್ಲಿ ಅಳು ಬಂದಿದ್ದು
  ಕಾಲೇಜು ಸಂಪಿಗೆಯಲ್ಲಿ ವೇದಾ ನೂಪುರ ಬರೆದ ಕವಿತೆಗಳು
  ಕಾಲೇಜು ಸಂಪಿಗೆಯಲ್ಲಿ ಚರಿತ ಬರೆದ ಲೇಖನ
  ಮಕ್ಕಳ ಸಂಪಿಗೆಯಲ್ಲಿ ಗ್ರೀಷ್ಮಾಳ ಚಿತ್ರಗಳು
  ಕಾಲೇಜು ಸಂಪಿಗೆ: ಮಲೆಯಾಳ ನೆಲದಲ್ಲಿ ಕಾಡು ಮಕ್ಕಳ ಕನಸು
  ಮಕ್ಕಳ ಸಂಪಿಗೆಯಲ್ಲಿ ವರುಣ ಚೆಲ್ಲಿದ ಬಣ್ಣಗಳು
  ನವೋದಯದ ದಿನಗಳು ೨ - ಅಲ್ಲೇನು ಕೋತಿ ಕುಣಿತೈತಾ..?
  ಕಾಲೇಜು ಸಂಪಿಗೆ: ಪರೀಕ್ಷೆ, ಫೇಲು, ಅಮ್ಮ, ಅಪ್ಪ ಇತ್ಯಾದಿ
  ಕಾಲೇಜು ಸಂಪಿಗೆಯಲ್ಲಿ ನವೋದಯದ ದಿನಗಳು
  ಕಾಲೇಜು ಸಂಪಿಗೆ : ಇಲ್ಲಿ ನೀರು ಮಾರಾಟಕ್ಕಿದೆ!
  ಮಕ್ಕಳ ಸಂಪಿಗೆಯಲ್ಲಿ ಅಮ್ಮ ಹೇಳಿದ ಕತೆ
  ಮಕ್ಕಳ ಸಂಪಿಗೆಯಲ್ಲಿ ವಿವೇಕನ ಫ್ಯಾಂಟಸಿಗಳು
  ಕಾಲೇಜುಸಂಪಿಗೆಯಲ್ಲಿ ರಂಗನತಿಟ್ಟು
  ಕಾಲೇಜು ಸಂಪಿಗೆ: ತೊತ್ತೊ ಚಾನಳ ಸ್ವಚ್ಛಂದ ಲೋಕ
  ಮಕ್ಕಳ ಸಂಪಿಗೆ: ಸತ್ತೇನೇ ಎಲೇ ಗಿಡ್ಡಕ್ಕಿ!?
  ಕಾಲೇಜು ಸಂಪಿಗೆ: ರಕ್ಷಾಬಂಧನದ ಬಂಧ
  ಮಕ್ಕಳ ಸಂಪಿಗೆಯಲ್ಲಿ ಕಿರಣನ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಮಗನ ಭಾಷಾ ಸಾಹಸಗಳು
  ಮಕ್ಕಳ ಸಂಪಿಗೆಯಲ್ಲಿ ಭಗವತಿ ಹೇಳಿದ ಕಥೆ
  ಕಾಲೇಜು ಸಂಪಿಗೆಯಲ್ಲಿ ದಿಲೀಪ ಬರೆದ ಕವಿತೆ
  ಕಾಲೇಜು ಸಂಪಿಗೆಯಲ್ಲಿ ಗೌತಮ ಬರೆದ ಕಥೆ
  ಮಕ್ಕಳ ಸಂಪಿಗೆಯಲ್ಲಿ ಸಿತಾರಾ ಮಾಡಿದ ಭಾಷಣ
  ಕಾಲೇಜು ಸಂಪಿಗೆಯ ಮೊದಲ ಲೇಖನ
  ಮಕ್ಕಳ ಸಂಪಿಗೆಯಲ್ಲಿ ಲಕ್ಕಿ ಸನ್
  ಮಕ್ಕಳ ಸಂಪಿಗೆಯಲ್ಲಿ ಉಲ್ಲಾಸದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಂಬರ್ ನೀಲ್ ಬರೆದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಪ್ರಮೇಯ
  ಮಕ್ಕಳ ಸಂಪಿಗೆಯಲ್ಲಿ ಆಶಿತ್ ಭಟ್
  ಮಕ್ಕಳಸಂಪಿಗೆಯಲ್ಲಿ ಹಾಸನದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ‘ಚುಪ್ರಿ'ಯ ಕವಿತೆಗಳು