ಸೆಪ್ಟೆಂಬರ್ ೩, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಅನಂತಮೂರ್ತಿ ಬರೆದ ಗಾಂಧಿ ಕವಿತೆ    
ಯು ಆರ್ ಅನಂತಮೂರ್ತಿ
ಶುಕ್ರವಾರ, 30 ಜನವರಿ 2009 (03:46 IST)
'..ಹೇ ರಾಂ’

ಡಾ.ಯು.ಆರ್.ಅನಂತಮೂರ್ತಿಯವರು ಇದೀಗ ಹೊಸ ಹುಮ್ಮಸ್ಸಿನಿಂದ ಕವಿತೆಗಳನ್ನು ಬರೆಯಲು ಆರಂಭಿಸಿದ್ದಾರೆ. ಇದು ನಮಗೂ ಖುಷಿಯ ವಿಷಯ.

ಹೊಸದಾಗಿ ಬರೆಯುವವರೂ ಬೆರಗಾಗುವಂತೆ, ಎಲ್ಲ ಬಗೆಯ ಓದುಗರೂ ಆರಾಮಕುರ್ಚಿಯಿಂದ ಬೆನ್ನು ಸಡಿಲಿಸಿಕೊಂಡು ತಲೆಯೆತ್ತಿ ಓದುವಂತೆ ಮಾಡುತ್ತಿರುವ ಈ ಹೊಸ ಕವಿತೆಗಳು ಆಧುನಿಕ ಭಾರತದ ಹಿರಿಯ ಬರಹಗಾರನೊಬ್ಬನ ಇಳಿ ವಯಸ್ಸಿನ ಸಂಕೋಚ, ಸಡಗರ ಹಾಗೂ ಹೆದರಿಕೆಗಳನ್ನು ಸಹಜ ಹರಿವಿನ ಕನ್ನಡದಲ್ಲಿ ದಾಖಲಿಸುತ್ತಿವೆ.ಮೋಹನದಾಸ ಕರಮ್ ಚಂದ್ ಗಾಂಧಿ ‘ಹೇ ರಾಂ’ಎಂದು ತೀರಿಹೋದ ಈ ದಿನದಂದು ಅನಂತಮೂರ್ತಿಯವರ ಈ ಹೊಸ ಕವಿತೆಯನ್ನು ಪ್ರಕಟಿಸುತ್ತಿದ್ದೇವೆ. ಸಮಸ್ತ ಲೋಕವನ್ನು ಸಂಸಾರದಂತೆ ಕಂಡ ಗಾಂಧಿ ಹಾಗೂ ತನ್ನ ಸಂಸಾರ ಮಾತ್ರ ಲೋಕವಾಗಿದ್ದ ಎಂಟನೇ ಹೆನ್ರಿ - ಈ ಇಬ್ಬರು ಮನುಷ್ಯರು ಈ ದಿನದ ಕವಿತೆಯಲ್ಲಿದ್ದಾರೆ.

ಗಾಂಧಿ ಮತ್ತು ಎಂಟನೇ ಹೆನ್ರಿ

ಬೇಸರವಾದಾಗ ತಾಯಂದಿರು ಊಟ ಬಿಡಲ್ಲವೆ?
ಮಾತಾಡೋದು ಬಿಡಲ್ಲವೆ?
ಎಲ್ಲ ಬಿಟ್ಟಂತೆ ಕಂಡರೂ ಕಸ ಮುಸುರೆ ಅಂತ, ವ್ರತಗ್ರಿತ ಅಂತ
ಕಾಲ ಕಳೀತಾನೆ ಮನೆಮಂದಿ ಮೇಲೆ ಒಂದು ಕಣ್ಣಿಟ್ಟು ಕಾಯಲ್ಲವೆ?

ಅದೇ ಆಗ್ರಹದ ಗಾಂಧೀಗೆ
ದೇಶವೇ ಊರು ಅಂತಅನ್ನಿಸಿ
ಊರೇ ಮನೆಯಾಗಿ ಬಿಟ್ಟು
ಚರಿತ್ರೆ ಅಂದರೆ ಸಂಸಾರದ ಒಳಗಿನ ಕಳವಳ ಸಿಟ್ಟು ಸಿಡುಕು
ಕೆಲವೊಮ್ಮೆ ಕೋಲಾಹಲಗಳಂತೆಯೂ
ಕಂಡರೆ,

ಎಂಟನೇ ಹೆನ್ರಿ ಎನ್ನುವ ಬ್ರಿಟಿಷ್ ಪ್ರಭುವಿಗೆ
ತಾನೇ ದೇಶವೆನ್ನಿಸಿ
ದೇಶ ಉಳಿಯೋದೇ ತನ್ನ ಬೀಜದಿಂದ ಹುಟ್ಟುವ ಮಗನಿಂದ ಎನ್ನಿಸಿ
ಈ ಮಗರಾಯನನ್ನು ಪಡೆಯೋಕೆ ಅರ್ಹವಾದ ಯೋನಿಹುಡುಕುತ್ತ
ಸರದಿಮೇಲೆ ಮದುವೆಯಾಗಿ
ಗಂಡು ಹೆರಲಾರದ ಯೋನಿಗಳು ದೇಶದ್ರೋಹಿಗಳಾಗಿ ಕಂಡು
ಸರದಿಮೇಲೆ ಮದುವೆಯಾದವರನ್ನು ಸರದಿ ಮೇಲೆಕೊಂದು
ಆಳೋದು ಎಂಟನೇ ಹೆನ್ರಿಗೆ
ದೈವಸಂಕಲ್ಪವೇ ತನ್ನ ಮೂಲಕ ಈಡೇರಿ ಒಂಬತ್ತನೇ ಹೆನ್ರಿಯನ್ನು
ಹಡೆಯುವ ಚರಿತ್ರೆ

-ಯು.ಆರ್.ಅನಂತಮೂರ್ತಿ

ಪುಟದ ಮೊದಲಿಗೆ
 
Votes:  6     Rating: 3.67    
 
 
ಸಂಬಂಧಿಸಿದ ಲೇಖನಗಳು
  ಯಡಿಯೂರಪ್ಪನವರು ಬೀದರಿಗೆ ಬಂದ ವೃತ್ತಾಂತವು
  ಧಾರಾಳ ಮಾತು ನಮಗೇ ಆಪತ್ತು!
  ಏಳು ಕಲಾವಿದೆಯರ ಏಳು ವರ್ಣಗಳು
  ರಾಮ ಭಕ್ತ ಹನುಮನೋ, ಹನುಮ ಭಕ್ತ ರಾಮನೋ
  `ಅಲ್ನೋಡಿ ಕಲೀರಿ' ಅಂದ್ರೇನು ದರ್ಶನ್?
  ಹುಲ್ಲಿನ ಮೇಲೆ ಕೂತ ಹುಡುಗ ರಾಮುಲು
  ಜಾಗತೀಕರಣ ನೀತಿಕಥಾ-6: ಗುರುಚರಿತೆ
  ನ್ಯೂಯಾರ್ಕ್ ಜಿಮ್ ಬಳ್ಳಾರಿ ದೇವರ ನೋಡಲು ಬಂದ ಕಥೆ!
  ಶಿಕ್ಷಣ ಮೀಸಲು ನೀತಿಯನ್ನು ನೀವೂ ಬೆಂಬಲಿಸಿ
  ಯೋಗರಾಜ್ ಭಟ್ ಬರೆದ `ಪಂಚರಂಗಿ' ಕವಿತೆಗಳು
  ನೋವೆಂದರೆ ಅಳು ಮಾತ್ರವೇ? :ಹರೀಶ್ ಬರಹ
  ರಾಖೀ ಹಬ್ಬದ ದಿನ ವಿಲಾಸಣ್ಣನ ನೆನಪು
  ಭಿಕ್ಷುಕರು ಮತ್ತು ಸಾಹಿರ್ ಸಾಲುಗಳು: ದಿವಾಕರ್ ಬರಹ
  ಕನ್ನಡ ಯುವ ಬರಹಗಾರರಿಗೆ ಟೊಟೊ ಪುರಸ್ಕಾರ
  ಕನ್ನಡದ ಜಗನ್ಮೋಹಿನಿ ಹರಿಣಿಯೊಂದಿಗೆ ಒಂದಷ್ಟು ಹರಟೆ
  ಪೆಜತ್ತಾಯ ಬರೆದ ತ್ರಿಚಕ್ರಿ ಗೋವಿಂದ ಭಟ್ಟರ ಕಥೆ
  ಜಾಗತೀಕರಣ ನೀತಿಕಥಾ-5: ಕಲ್ಲು ಸಿಕ್ಕರೆ ಕೊಳ್ಳಿರೋ...
  ಏನೂ ನನ್ನದಲ್ಲವೆಂಬ ಸ್ವಾತಂತ್ರ್ಯ:ನಾಗಶ್ರೀ ನಂಬಿರುವುದು
  ಸ್ವಾತಂತ್ರ್ಯ ಅಂದ್ರೆ ಏನು?:ಸುಶ್ರುತ ಕೇಳಿದ ಪ್ರಶ್ನೆಗಳು
  ಮೆಟ್ರೋ ಬದಿಯಲ್ಲೇ ಮಲ್ಲಿಗೆ ದಂಡೆಯ ಪರಿಮಳ
  ಗುಬ್ಬಚ್ಚಿಗಳಿಗೆ ಸ್ವಾತಂತ್ರ್ಯದ ಕಾಳು: ಹೇಮಾ ಬರಹ
  ಸ್ವಾತಂತ್ರದ ಮೊದಲ ಕ್ಷಣಗಳು:ಅಯ್ಯಂಗಾರ್ ನೆನಪುಗಳು
  ಕೆಂಡಸಂಪಿಗೆ ಕಮೆಂಟಿಗರು ಮೊನ್ನೆಯಿಂದಲೇ ಸ್ವತಂತ್ರರು!
  ಹಳ್ಳಿ ಹೈಕಳಿಗೆ ಬೇಡದ ಕನ್ನಡ ಶಾಲೆ: ಪೆಜತ್ತಾಯ ಚಿಂತನೆ
  ಅನು ಪಾವಂಜೆ ಬರೆದ ಅಜ್ಜನ ಮನೆಯ ನೆನಪುಗಳು
  ಒಬ್ಬ ಅತಿಸಾಮಾನ್ಯನ ಗೊಣಗಾಟ : ಸುದರ್ಶನ್ ಬರಹ
  ಮುಂಬೈನ ಮಂಕಿ ಬ್ರಿಡ್ಜ್ ನಲ್ಲೊಬ್ಬ ಪತಿತ ಪಾವನ ತಿರುಕ
  ಗ್ರೆಗರಿಯವರ ಪ್ರಶ್ನೆಗಳಿಗೆ ಯಾರು ಉತ್ತರಿಸುತ್ತಾರೆ?
  ಅಮೇರಿಕಾ ದೇಶದ ಅಂಗಳದ ಅಂಗಡಿಗಳು
  ಗವಾಕ್ಷಿಯಲ್ಲಿ ಬಂದಿರುವ ಡಬ್ಬಿಂಗ್ ಪಿಶಾಚಿ!
  ಮಹಾನುಭಾವ ಬಿ.ಆರ್.ಪಂತುಲು:ಬಸವರಾಜು ಬರಹ
  ನಾನೂ ಲಾಂಗ್ ಜಂಪ್ ಹಾರಿದೆ: ಆರ್.ಜಿ.ಭಟ್ ಬರಹ
  ಆಸ್ಟ್ರೇಲಿಯಾ ಪತ್ರ: ದೇವರ ನಂಬದ ಸ್ತ್ರೀ ಪ್ರಧಾನಿ
  ತೆಂಗಿನ ಜುಟ್ಟೂ ತಮ್ಮನ ಜುಟ್ಟೂ: ಪರೀಕ್ಷಿತಾ ಬರಹ
  ಸ್ಯಾನ್ ಬಾರ್ನ್ ಪ್ರಾಯೋಗಿಕ ಕೃಷಿ ಕ್ಷೇತ್ರ: ವೆಂಕಟೇಶ್ ಬರಹ
  ಸವಣೂರಿನ ಭಂಗಿಗಳು ತೋರಿಸಿದ ಸತ್ಯಗಳು
  ಗ್ರೆಗರಿ ಕಳಕೊಂಡದ್ದು,ಎಂ ಆರ್ ಪಿ ಎಲ್ ಕಳೆದುಕೊಂಡದ್ದು
  ನಾರೀಕೇರಳ...ಮಳೆ,ಸುದ್ದಿರಾಜಕೀಯ:ಕನಕ ಬರಹ
  ಜಾಗತೀಕರಣ ನೀತಿಕಥಾ- ಕತೆಯೆಂಬ ಕತೆ
  ಇಟ್ಟಿಗೆ ಮಣ್ಣಿನ ರಾಶಿಯ ಮುಂದೆ..:ಲಕ್ಷ್ಮಿ ಕುಡ್ಲ ಬರಹ
  ಅಕ್ರಮ ಗಣಿ ಕಂಡರೂ ನಾವು ಯಾಕೆ ಕುರುಡರು?
  ಮಂಗಳೂರಲ್ಲಿ ಪತ್ರಾವೋ ಉಪವಾಸ ಕುಂತಿದ್ದರು...
  ಗ್ರೆಗರಿ ಪತ್ರಾವೊಗಾಗಿ ವೈದೇಹಿ ಮೊರೆ
  ಗ್ರೆಗರಿ ಪತ್ರಾವೋ ಮನೆಗೆ ಜೆ.ಸಿ.ಬಿ. ಎರಗಿದ ಕಥೆ
  ಅರವತ್ತರ ಉಲ್ಲಾಸದಲ್ಲಿ ನಸೀರುದ್ದೀನ್ ಷಾ: ಬಸು ಬರಹ
  ಜಾಗತೀಕರಣ ನೀತಿಕಥಾ 3: ಸಿಐಡಿ ಹೇಳಿದ ಕತೆ
  ಆಸ್ಟ್ರೇಲಿಯಾ ಓಲೆ: ಓದಲು ಬಂದು ತಾಯಾದವರ ಕಥೆ
  ಗಣಿಯಿಂದ ಹೊರಬರುತ್ತಿರುವ ದುರ್ನಾತಗಳು
  ಆಳುವವರೂ,ಆಳಿಸಿಕೊಳ್ಳುವವರೂ,ಪ್ರಜಾಪ್ರಭುತ್ವವೂ....
  ಈ ಗೋಕಾಕ್ ಎಂದರೆ ಯಾರು? ಹೃಷಿಕೇಶ್ ಬರಹ
  ಫುಟ್ಬಾಲ್, ಮಂಡೇಲಾ ಮತ್ತು ಒಂದು ಕವಿತೆ
  ಅಹಲ್ಯೆಯಾಗಬೇಕಿದ್ದವಳು ಏಡಿ ಹಿಡಿದದ್ದು....
  ರಾಧಜ್ಜಿ ಸೀಕರ್ಣೆ ಬೇಡಾ ಅಂದ ಕಥೆ
  ಬದಲಾದ ಕಾಲಮಾನ: ರಾಜೇಶ್ವರಿ ತೇಜಸ್ವಿ ಬರಹ
  ಈ ಪೈಶಾಚಿಕತೆಗೆ ಕೊನೆಯೇ ಇಲ್ಲವೇ?