Advertisement

ಸುವರ್ಣ ಚೆಳ್ಳೂರು

ಮೂಕ ನಾಯಕನ ದೇಶ ಯಾವುದು

ರಾಘವೇಂದ್ರಾಯ ನಮಃ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ್ದ ನಮಗೆ ಒಂದಿಷ್ಟು ನಯ ವಿನಯ ಪ್ಯಾಂಟಸಿ ರಮ್ಯತೆ ಇತ್ತು. ನಾವಾಗಿ ನಾವು ‘ದಲಿತ’ ರೂಪಿಸಿದಾಗ ಅಗ್ನಿ ಪರ್ವತದಂತೆ ಮನದೊಳಗೆ ಲಾವಾ ಕುದಿಯುತ್ತಿತ್ತು. ಆ ಮಳವಳ್ಳಿ ಪೈಲ್ವಾನನೂ ಬ್ಲೇಡೇಟಿನ ಚಿಕ್ಕಣ್ಣನೂ ನಮ್ಮ ಬೆನ್ನು ತಟ್ಟಿದ್ದರು. ಬೋರ್ಡಿಗೆ ಹಚ್ಚಿದ ಸಾಯಂಕಾಲದ ಒಳಗೆ ತರಾವರಿ ಕೀಳು ಬಯ್ಗಳಗಳು ಅದೇ ದಲಿತ ಪತ್ರಿಕೆಯ ಮೂಲೆಗಳಲ್ಲೆಲ್ಲ ದಾಖಲಾಗುತ್ತಿದ್ದವು. ಅವನ್ನೆಲ್ಲ ಇಲ್ಲಿ ದಾಖಲಿಸಲಾಗದು. ಮೊಗಳ್ಳಿ ಗಣೇಶ್ ಬರೆಯುವ ಸರಣಿ.

Read More

ಬೆದೆಗೆ ಬಂದವಳ ಮೆದುವಾಗಿ ತಳ್ಳಿಬಿಟ್ಟಿದ್ದೆ

ಅವಳು ಬಿಗಿಯಾಗಿ ನನ್ನ ಕೈ ಹಿಡಿದೇ ಇದ್ದಳು. ವಿದಾಯದ ಗಳಿಗೆಯಲ್ಲಿ ಅಮರ ಪ್ರೇಮದ ಮೋಹವೇ…’ನಾಳೆ ಸಿಗುವೆ’ ಎಂದಿದ್ದೆ. ‘ನಿಜವಾಗ್ಲೂ… ನನ್ನ ತಲೆ ಮೇಲೆ ಕೈ ಇಟ್ಟು ಆಣೆ ಮಾಡಿ ಇನ್ನೊಂದ್ಸಲ ಹೇಳಿ’ ಎಂದು ಪ್ರತಿ ಉತ್ತರಕ್ಕೆ ಕಾದಳು. ಕೈ ಹಿಡಿದು ತಲೆ ಮೇಲೆ ಇಟ್ಟುಕೊಂಡಳು. ‘ನಾಳೆ ಅನ್ನೋದು ಕೂಡ ಒಂದು ಸುಳ್ಳು, ಅಂದಾಜು; ಕೇವಲ ನಿರೀಕ್ಷೆ…ಊಹೆ’ ಎಂದೆ.  ‘ಅಷ್ಟೆಲ್ಲ ಬೇಡ. ಸಿಕ್ತೀನಿ; ಸಿಗಲ್ಲಾ ಅನ್ನೊದ್ರಲ್ಲಿ ಯಾವ್ದಾದ್ರು ಒಂದನ್ನ ಹೇಳಿ ಏನೂ ಬೇಜಾರು ಮಾಡ್ಕೋದಿಲ್ಲ’ ಎಂದಳು. ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯಲ್ಲಿ ಮೊಗಳ್ಳಿ ಗಣೇಶ್ ಬರಹ

Read More

ಯಾವ ಅಖಾಡಗಳಲ್ಲೂ ನಾನು ಗೆಲ್ಲಲಿಲ್ಲ

ಸುಮ್ಮನಿರಲಾರದ ನಾನು ಒಂದು ಚೇಷ್ಟೆ ಮಾಡಿದ್ದೆ. ಹುಡುಗಾಟಿಕೆಯೊ ಬರಹದ ಉತ್ಸಾಹವೊ; ಒಟ್ಟಿನಲ್ಲಿ ಹಾಸ್ಟೆಲಲ್ಲಿ ದೆವ್ವಗಳ ಕಾಟ ಎಂದು ವೆಂಕಟೇಶನ ಭೀತಿಯ ಬಗ್ಗೆ ಲೇಖನ ಬರೆದು ಬಿಟ್ಟಿದ್ದೆ. ಅದನ್ನು ಸಾಮಾನ್ಯರು ಓದಿದ್ದರೆ ಖಂಡಿತ ಹೆದರಿ ನಂಬಿಬಿಡುತ್ತಿದ್ದರು. ಆ ಪರಿಯಲ್ಲಿ ಹಾರಾರ್ ಆಗಿ ಬರೆದಿದ್ದೆ. ಕಲ್ಪನೆಯೇ ಹೆಚ್ಚಾಗಿತ್ತು. ಸುಮ್ಮನೆ ವೆಂಕಟೇಶನ ಜೊತೆ ‘ದೆವ್ವಗಳ ಕಾಟವಂತಲ್ಲಾ’ ಎಂದು ವಿಚಾರಿಸಿದ್ದೆ ಅಷ್ಟೇ. ಆತ ಒಂದಿಷ್ಟು ವಿವರ ಹೇಳಿದ್ದು ನಿಜ. ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ.

Read More

ನರಭಕ್ಷಕ ಹೆಜ್ಜೆಗಳ ಸಪ್ಪಳ

ಇವನೇನಾ ಆ ಸಾಹೇಬ… ಕುದುರೆ ಗಾಡಿಯ ಮೇಲೆ ಬಂದು ದಿಕ್ಕೆಟ್ಟವರಿಗೆ ಹೊಸ ಬಟ್ಟೆ ದಾನ ಮಾಡುತ್ತಿದ್ದವನು ಎನಿಸಿ ಅಚ್ಚರಿಗೊಂಡೆ. ಆ ಕಾಲಕ್ಕೇ ಆತ ವಿಪರೀತ ಲಂಚಕೋರನಾಗಿ ಹಲವು ಬಾರಿ ಸಸ್ಪೆಂಡ್ ಆಗಿದ್ದ. ಡಿಸ್‌ಮಿಸ್‌ ಒಂದೇ ಬಾಕಿ ಇದ್ದದ್ದು. ಆ ಮನೆಯೂ ಅವನದಾಗಿರಲಿಲ್ಲ. ಬಾಡಿಗೆ ಮನೆ ಅದು. ಅದರ ಅಳತೆಯೊ ಹತ್ತು ಬೈ ಹತ್ತು ಅಡಿ ಮಾತ್ರ. ಮೇಲೆ ತಗಡು ಹಾಸಿದ್ರು. ಸಾಲಾಗಿ ಅದೇ ತರದ ಇನ್ನೂ ನಾಲ್ಕು ಮನೆಗಳಿದ್ದವು.
ಮೊಗಳ್ಳಿ ಗಣೇಶ್ ಬರೆಯುವ ಸರಣಿ

Read More

ನರಕದಲ್ಲಿ ಕ್ಷಣ ಬೆರಳದ್ದಿ ಬಂದಿದ್ದೆ

ನನ್ನ ಇತಿ ಮಿತಿಯಲ್ಲಿ ಅವುಗಳಲ್ಲಿ ಬೇಕಾದವನ್ನು ಆಯ್ದುಕೊಂಡೆ. ಬರೆವ ಬಣ್ಣಗಳು ಆಗಲೇ ಹೈಸ್ಕೂಲು, ಪಿಯು ಕಾಲೇಜಿನಲ್ಲೆ ಅಂಟಿಕೊಂಡಿದ್ದವು ಎಂದು ಹೇಳಿದ್ದೆ. ಲೈಬ್ರರಿಯ ತರಾವರಿ ಗ್ರಂಥಗಳ ಬೆಟ್ಟ ಕಂಡ ಕೂಡಲೆ ಬರೆಯುವುದನ್ನೆ ಮರೆತುಬಿಟ್ಟಿದ್ದೆ. ಹಾದಿ ಬೀದಿಯಲ್ಲಿ ಅಲೆವಾಗ ಎಷ್ಟೊಂದು ಚೆಲುವೆಯರ ಕಂಡೆ; ನಗರದ ಮೂಲೆ ಮೂಲೆಯ ನರಕವ ಕಂಡೆ…
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ