Advertisement

Tag: ನೆನಪಾದಾಗಲೆಲ್ಲ

ಬಾಂಬುದಾಳಿಗೀಡಾಗಿ ಬಾನುಲಿ ಬರಿದಾಗಿದೆ ಮೌನವಾಗಿದೆ…

ಭಾಷಣ ಸ್ಪರ್ಧೆಯ ದಿನ ಬಂದಿತು. ಹೈಸ್ಕೂಲು ಕಟ್ಟಡದ ಹಿಂದಿನ ಗೋಡೆಯ ಮೇಲೆ ಹೋಗಿ ಕುಳಿತೆ. ಗೋಡೆ ಜಿಗಿದು ಸಭಾಭವನಕ್ಕೆ ಹೋಗಬೇಕೆಂದರೆ ಧೈರ್ಯ ಸಾಲದು. ಹಾಫ್ ಪ್ಯಾಂಟ್ ಹರಿದಿತ್ತು. ಷರ್ಟ್ ಗಲೀಜಾಗಿತ್ತು. ಕ್ಷೌರಿಕರಿಗೆ ಕೊಡಲಿಕ್ಕೆ ಹಣವಿಲ್ಲದ್ದಕ್ಕಾಗಿ ಕೂದಲು ಬೆಳೆದಿತ್ತು. ಕೊಬ್ಬರಿ ಎಣ್ಣೆ ಇಲ್ಲದ್ದಕ್ಕಾಗಿ ಕೂದಲು ಒಣಗಿದ್ದರಿಂದ ಕಾಡು ಮನುಷ್ಯನ ಹಾಗೆ ಕಾಣುತ್ತಿದ್ದೆ. ಭಾಷಣ ಮಾಡುವ ಸ್ಫೂರ್ತಿಗೆ ಪೂರಕವಾಗಿರುವಂಥ ಯಾವುದೂ ಇರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 63ನೇ ಕಂತು ನಿಮ್ಮ ಓದಿಗೆ

Read More

ಸೀರೆಯ ಸೆರಗಿನಲ್ಲಿ ಅನ್ನ-ಸಾರು….!

ಹೊಸಪೇಟೆಯ ಬಡತನ ನನ್ನನ್ನು ದಿಗಿಲು ಬಡಿಸಿತು. ಬೆಳಗಿನ ನಾಷ್ಟಾ ಮತ್ತು ಮಧ್ಯಾಹ್ನದ ಊಟದ ವೇಳೆ, ತಂತಿಬೇಲಿಯ ಆಚೆ ಬಡವರು ಅನ್ನಕ್ಕಾಗಿ ಕಾಯುತ್ತಿದ್ದರು. ನಮಗೆ ಇಲ್ಲಿ ಬೇಕಾದಷ್ಟು ಆಹಾರ ನೀಡುತ್ತಿದ್ದರು. ನನ್ನ ಕೆಲವರು ಗೆಳೆಯರಿಗೆ ಆ ನಿರ್ಗತಿಕರ ಬಗ್ಗೆ ತಿಳಿಸಿ ಒಂದು ಯೋಜನೆ ರೂಪಿಸಿದೆ. ನಾವೆಲ್ಲ ಹೆಚ್ಚಿಗೆ ಅನ್ನ ಹಾಕಿಸಿಕೊಳ್ಳುವುದು. ಸ್ವಲ್ಪ ತಿಂದ ಹಾಗೆ ಮಾಡಿ ಅವರ ಬಳಿ ಹೋಗುವುದು. ಆ ಬಡ ಹೆಣ್ಣುಮಕ್ಕಳು ಸೆರಗೊಡ್ಡುವುದು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 62ನೇ ಕಂತು ನಿಮ್ಮ ಓದಿಗೆ.

Read More

ನಾಲ್ಕಾಣೆಯಿಂದ ಒಂದು ಪ್ರಾಣ ಉಳಿಯಿತು!

ಆಕೆ ಅಗಸಿಯ ಕಡೆಗೆ ಹೋಗುತ್ತಿರುವುದರಿಂದ ಏನಾಗಿದೆ ಎಂದು ಕೇಳಿಯೆಬಿಟ್ಟೆ. ಅಡುಗೆಯಲ್ಲಿ ಉಪ್ಪಿಲ್ಲವೆಂದು ಗಂಡ ಹೊಡೆದಿರುವುದಾಗಿ ತಿಳಿಸಿದಳು. ‘ಆತ ಹಣ ಕೊಡದಿದ್ದರೆ ಉಪ್ಪು ಎಲ್ಲಿಂದ ತರಲಿ’ ಎಂದು ಕೇಳಿದಳು. ಈ ರೀತಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಬಾವಿಗೆ ಹಾರುವುದಾಗಿ ಹೊರಟೇಬಿಟ್ಟಳು. ಮತ್ತೆ ತಡೆದೆ. ಬಿಗಿ ಮುಷ್ಟಿಯಲ್ಲಿದ್ದ ನಾಲ್ಕಾಣೆಯನ್ನು ತೋರಿಸುತ್ತ ‘ಇದನ್ನು ಕೊಟ್ಟರೆ ವಾಪಸ್ ಹೋಗುವೆಯಾ’ ಎಂದು ಕೇಳಿದೆ. ಆಕೆ ಕೃತಜ್ಞತೆಯಿಂದ ತೆಗೆದುಕೊಂಡು ಮನೆಯ ದಾರಿ ಹಿಡಿದಳು. ಆ ನಾಲ್ಕಾಣೆಯನ್ನು ಖರ್ಚು ಮಾಡಿದೆನೆಂದು ಭಾವಿಸಿ ತಾಯಿ ಬಡಿದದ್ದು ನೋವೆನಿಸಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 58ನೇ ಕಂತು ನಿಮ್ಮ ಓದಿಗೆ.

Read More

ಯುದ್ಧದಲ್ಲಿ ಗೆಲ್ಲುವುದು ಸಾವು ಮಾತ್ರ…

ಯುಸಿ಼ಫ್ ತನ್ನ ಹದಿನೈದು ವರ್ಷದ ಮಗ ಆದಮ್‌ನ ಹಿಂದೆ ನಿಂತ. ಅಂಬೆಗಾಲು ಹಾಕುತ್ತ ಜನರ ಕಾಲೊಳಗಿಂದ ಬಾಗಿಲ ಬಳಿ ಹೋಗಲು ಮಗನಿಗೆ ತಿಳಿಸಿದ. ಆದಮ್ ಪ್ರಯತ್ನಪಟ್ಟು ಬಾಗಿಲ ಬಳಿ ಬಂದು ಹೊರಗೆ ನುಸುಳಿ ಓಡತೊಡಗಿದ. ಆದರೆ ನಾಜಿಗಳ ಗುಂಡಿಗೆ ಗುರಿಯಾದ. ಮಗನನ್ನು ಹಿಂಬಾಲಿಸಿದ ಯುಸಿ಼ಫ್ ಮೇಲೂ ಗುಂಡು ಹಾರಿಸಲಾಯಿತು. ನಾಜಿಯೊಂದು ಓಡಿ ಬಂದು ಬಿದ್ದ ಯುಸಿ಼ಫ್‌ನನ್ನು ಬೂಟುಗಾಲಿನಿಂದ ಒದ್ದು, ಬಂದೂಕಿನಿಂದ ತಿವಿಯಲಾಯಿತು. ಖತಿನ್ ಅನುಭವಿಸಿದ ಕೊನೆ ಗಳಿಗೆಯನ್ನು ಮೂರ್ಛಾವಸ್ಥೆಯಲ್ಲಿದ್ದ ಯುಸಿ಼ಫ್ ನೋಡಲಾಗಲಿಲ್ಲ. ನಾಜಿಗಳು ಅಲ್ಲಿಂದ ಹೋದ ನಂತರ ನೆರೆ ಗ್ರಾಮದ ಜನರು ಯುಸಿ಼ಫ್‌ನನ್ನು ಬದುಕಿಸಿದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ಸರಣಿ

Read More

ಸಮಾಜವಾದದ ಪ್ರೇರಣೆಗೊಂದು ಉದಾಹರಣೆ ಸೋವಿಯತ್‌ ರಷ್ಯಾ

ಸೋವಿಯತ್ ದೇಶಕ್ಕೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಯುವಕರೆಲ್ಲ ಎರಡನೇ ಮಹಾಯುದ್ಧದ ನಂತರ ಜನಿಸಿದವರೇ ಆಗಿದ್ದರು. ಅವರಿಗೆ ೧೯೧೭ರ ಕ್ರಾಂತಿಯಾಗಲಿ, ೧೯೪೫ರಲ್ಲಿ ಕೊನೆಗೊಂಡ ಎರಡನೇ ಮಹಾಯುದ್ಧದ ಅನಾಹುತಗಳಾಗಲೀ ಅನುಭವಕ್ಕೆ ಬರಲು ಸಾಧ್ಯವೇ ಇಲ್ಲ. ಅವನ್ನೆಲ್ಲ ಅವರು ತಿಳಿದುಕೊಳ್ಳುವುದು ಹಿರಿಯರ ಅನುಭವದಿಂದ, ಇತಿಹಾಸದ ಪುಟಗಳಿಂದ. ಬಹುಪಾಲು ಯುವಕರು ಇದನ್ನೆಲ್ಲ ಅರಿತರೂ ಐರೋಪ್ಯ ದೇಶಗಳ ಜನರ ಮತ್ತು ಅವರು ಬಳಸುವ ವಸ್ತುಗಳ ಸಂಪರ್ಕದಿಂದ ಅವರ ಮನಸ್ಸು ಕ್ರಮೇಣ ಕೊಳ್ಳುಬಾಕ ಸಂಸ್ಕೃತಿಯ ಕಡೆಗೆ ವಾಲತೊಡಗಿತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ ೫೦ನೇ ಕಂತು ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ