Advertisement

Tag: Travelling

ಧೋಲ್ಕಲ್ ಗಣೇಶನಿಗಾಗಿ ಬೆಟ್ಟ ಹತ್ತಿಯೇಬಿಟ್ಟೆ!

ಅಲ್ಲಿಂದ ಸ್ವಲ್ಪ ದೂರ ಸೂರ್ಯನ ಕಿರಣ ಬಿದ್ದು, ಗಾಳಿಯೂ ಸೋಕಿ ತುಸು ದಣಿವು ಕಡಿಮೆಯಾಯಿತು. ಮತ್ತೆ ಮುಂದುವರೆದಂತೆ ತುಸು ಇಳಿಜಾರಿಗೆ ಸಾಗಿದ ದಾರಿ ಮತ್ತೆ ಸ್ವಲ್ಪ ಹೆಚ್ಚೇ ಏರುಹಾದಿಯಲ್ಲಿ ಕರೆದುಕೊಂಡುಹೋಯಿತು. ಅದು ತಲುಪಿದ್ದು ದೊಡ್ಡ ದೊಡ್ಡ ಬಂಡೆಗಳ ಬಳಿ. ಅಲ್ಲಿಂದ ಮುಂದೆ ಯಾವ ದಾರಿಯಿರಲಿಲ್ಲ. ಹತ್ತೋಕೆ ಆಗುತ್ತೋ ಇಲ್ವೋ ಅನ್ನೋ ಹಾಗಿದ್ದ ಬಂಡೆಗಳು. ಇಲ್ಲಿಂದ ಮುಂದೆ ಮುಂದಿನ ೨೦೦—೩೦೦ ಮೀಟರಿನ ದಾರಿ ತುಸು ಕಠಿಣವಾಗೇ ಇತ್ತು. ಹೆಜ್ಜೆ ಇಡೋದರಲ್ಲಿ ಸ್ವಲ್ಪ ಹೆಚ್ಚುಕಡಿಮೆಯಾದರೂ ಒಂದು ನಾಲ್ಕು ಮೂಳೆಗಳು ರಿಪೇರಿಗೆ ಹೋಗೋದು ಗ್ಯಾರಂಟಿ. ಅಲ್ಲಿಂದಲೂ ಗಣೇಶ ಏನೂ ಕಾಣಿಸುತ್ತಿರಲಿಲ್ಲ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ಹಾರಲು ತವಕಿಸುವ ಮನಸ್ಸಿಗೆ ಪ್ರವಾಸವೆಂಬ ರೆಕ್ಕೆಯಿರಲಿ

ಎಲ್ಲ ಹಕ್ಕಿಗಳಂತೆಯೇ ನನ್ನ ಕಣ್ಣಿಗೆ ಕಾಣಿಸಿದ ಆ ಹಕ್ಕಿ ವಿಶೇಷವಾದುದು ಎಂದು ನನಗೇನೂ ಗೊತ್ತಿರಲಿಲ್ಲ. ಜೀವನದಲ್ಲಿ ಎಷ್ಟೋ ಬಾರಿ ಹೀಗೆಯೇ ಆಗುತ್ತದೆ. ನಮ್ಮೊಡನೆ ಇರುವ ಯಾವುದೋ ವಿಷಯದ ವಿಶೇಷತೆ, ಇನ್ಯಾರೋ ಹೇಳಿದಾಗಲೇ ಅರಿವಾಗುವುದು. ಹಕ್ಕಿಗಳೋ ಸದಾ ವಿಶೇಷ ಕತೆಗಳನ್ನು ತಿಳಿದಿರುತ್ತವೆ. ಯಾಕೆಂದರೆ ಪ್ರವಾಸ ಎಂಬುದು ಅವುಗಳಿಗೆ ವಿಶೇಷವೇ ಅಲ್ಲ. ಆದರೆ ಮನುಷ್ಯರು ಮಾತ್ರ ಪ್ರವಾಸ ಹೋಗಬೇಕಾದರೆ..

Read More

ಪದ್ಮಸಂಭವನ ಭವಸಾಗರದಲ್ಲಿ: ಅಬ್ದುಲ್ ರಶೀದ್ ಪ್ರವಾಸ ಕಥನ

ಕಾಶ್ಮೀರದ ಕಾರ್ಗಿಲ್ ನಿಂದ ಇನ್ನೂರೈವತ್ತು ಕಿಲೋಮೀಟರ್ ದಲ್ಲಿರುವ ಪದುಮ್ ಪಟ್ಟಣಕ್ಕೆ ಹೋಗಿದ್ದ ಲೇಖಕರ ಹಿಮ ಪಯಣದ ಕಥೆಗಳು.

Read More

ನಂಗೆ ಮಾತ್ರ ಯಾಕೆ ಹಿಂಗೆ : ಭಾರತಿ ಅಪ್ರವಾಸ ಕಥನ

ಕಲ್ಪಾಕ್ಕಮ್‌ನಲ್ಲಿ ನನ್ನ ನೆಂಟರ ಮನೆಗೆ ಹೋದಾಗಿನ ಒಂದು ಅನುಭವ ಕೂಡಾ ಮರೆಯಲಾಗದ್ದು. ಅಲ್ಲಿ ಅವರ ಮನೆಯನ್ನ ದಾಟಿ ಬಂದರೆ ರಸ್ತೆ. ಅದನ್ನ ದಾಟಿದರೆ ಆ ಪಕ್ಕಕ್ಕೆ ಸಮುದ್ರ!

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ