Advertisement

ಪುಸ್ತಕ ಪ್ರಕಟಣೆಯ ಪ್ರಸಂಗಗಳು: ಎಚ್. ಗೋಪಾಲಕೃಷ್ಣ ಸರಣಿ

ಪುಸ್ತಕಕ್ಕೆ ಹೆಸರು ಇಡಬೇಕಿತ್ತಲ್ಲ. ಮುಖಪುಟ ಬರೆದಾಗ ಪುಸ್ತಕದ ಹೆಸರೂ ಕೊಟ್ಟರೆ ಕಲರ್ ಕಾಂಬಿನೇಷನ್‌ಗೆ ಉತ್ತಮ ಎನ್ನುವ ಅಭಿಪ್ರಾಯ ಬಂದಿತ್ತು. ನನ್ನ ಕತೆಗಳ ಹಸ್ತಪ್ರತಿಯ ಒಂದು ಕತೆ ಹೆಸರು ವೈಶಾಖ ಎಂದು. ಈಗಾಗಲೇ ಚದುರಂಗ ಅವರು ವೈಶಾಖ ಎನ್ನುವ ಕಾದಂಬರಿ ಬರೆದು ಅದು ಪ್ರಖ್ಯಾತವಾಗಿತ್ತು. ನನ್ನ ಸಂಕಲನಕ್ಕೂ ವೈಶಾಖ ಹೆಸರು ಇಟ್ಟರೆ ಓದುಗರು ಕನ್ಫ್ಯೂಸ್ ಮಾಡಿಕೊಳ್ಳುವ ಸಂಭವ ಹೆಚ್ಚಿರುತ್ತೆ ಅನಿಸಿತು. ಆದರೂ ಚದುರಂಗರ ವೈಶಾಖ ಕಾದಂಬರಿಯು. ನನ್ನದು ಸಣ್ಣ ಕಥಾ ಸಂಗ್ರಹ, ಅದರಿಂದ ಹೆಸರು ಅದೇ ಇರಲಿ ಎನ್ನುವ ತೀರ್ಮಾನ ತೆಗೆದುಕೊಂಡೆ…!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೬ನೇ ಬರಹ ನಿಮ್ಮ ಓದಿಗೆ

Loading

ಅಂಕಣ

Latest

ಅಪ್ಪಿಕೋ ಭೂತಾಯಿ ಗೌರಾದೇವಿ!: ಸುಕನ್ಯಾ ಕನಾರಳ್ಳಿ ಅಂಕಣ

ಅಧಿಕಾರಿಗಳಿಗೆ ಈಗ ಪೇಚಿಗಿಟ್ಟುಕೊಂಡಿತು. ಸದ್ಯಕ್ಕೆ ಅಲ್ಲಿಂದ ತೊಲಗಿ ನಂತರ ಬಂದರೆ ಹೇಗೆ? ಆದಿವಾಸಿ ಹೆಂಗಸರಿಗೆ ಸರಕಾರದ ಕುತಂತ್ರಗಳೇನೂ ಅಪರಿಚಿತವಲ್ಲ. ಅವರ ಆಯುಧಗಳನ್ನು ಹೊತ್ತೊಯ್ದು ಕೊಡುವ ನೆಪದಲ್ಲಿ ತಾತ್ಕಾಲಿಕವಾಗಿ ಕಟ್ಟಿದ್ದ ಸೇತುವೆಯನ್ನು ಅದೇ ಅಸ್ತ್ರಗಳಿಂದ ಉರುಳಿಸಿದಾಗ ಸರಕಾರ ಇತ್ತ ಕಡೆಯಲ್ಲಿ, ಇವರೆಲ್ಲ ಅತ್ತ ಕಡೆಯಲ್ಲಿ. ಇಡೀ ರಾತ್ರಿ ಸರಕಾರದ ಮಂದಿ ಮತ್ತೆ ಕಾಡೊಳಗೆ ನುಸುಳದಂತೆ ಹೆಂಗಸರು ಕಾವಲಿದ್ದರು. ಮಾರನೆಯ ದಿನ ಹಳ್ಳಿಗೆ ಹಿಂತಿರುಗಿದ ಗಂಡಸರಿಗೆ ಆಶ್ಚರ್ಯ ಕಾದಿತ್ತು. ಮಾರ್ಚ್ ೩೧, ೧೯೭೪ ರಂದು ಕಣಿವೆಯಲ್ಲಿ ತಮಟೆ ಕಹಳೆಗಳ ಸಮೇತ ಬೃಹತ್ ಪ್ರದರ್ಶನ ನಡೆಯಿತು. ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹನ್ನೆರಡನೆಯ ಬರಹ

ಸಾಹಿತ್ಯ

ಸುಧಾ ಆಡುಕಳ ಬರೆದ ಈ ಭಾನುವಾರದ ಕತೆ “ಆರೂವರೆ ಅಡಿಯ ಮನುಷ್ಯ”

ನಾನು ಗುರುವೆಂದು ಭಾವಿಸಿದ ಫುಲೆ ದಂಪತಿಗಳು ಹೇಳಿದ್ದೂ ಇದೇ ಮಾತುಗಳನ್ನು. ಪುಟ್ಟ ಬಾಲಕಿಯರಿಂದ ಹಿಡಿದು, ಮದುವೆಯಾಗಿ ವಿಧವೆಯರಾದ ಹೆಣ್ಣುಗಳವರೆಗೆ ಎಲ್ಲರ ಕೈಯ್ಯಲ್ಲಿಯೂ ಅಕ್ಷರದ ದೀವಿಗೆಯನ್ನು ಹಿಡಿಸಬೇಕೆಂದು ಅವರು ಶ್ರಮಿಸಿದ ಮಾರ್ಗ ನನ್ನೆದುರು ತೆರೆದುಕೊಂಡಿತ್ತು. ಅವರು ಹುಟ್ಟುಹಾಕಿದ ಅರಿವಿನ ಸಸಿಯಿಂದು ಆರೈಕೆಯಿಲ್ಲದೇ ಸೊರಗಿ ಸಾಯುವ ಸ್ಥಿತಿಯಲ್ಲಿತ್ತು. ವಾಸ್ತವ ಸತ್ಯವನ್ನರಿಯಲು ನಾನು ರಾಜ್ಯದ ತುಂಬೆಲ್ಲ ಸಂಚರಿಸತೊಡಗಿದೆ. ಸುಧಾ ಆಡುಕಳ ಬರೆದ ಕತೆ "ಆರೂವರೆ ಅಡಿಯ ಮನುಷ್ಯ" ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಸರಣಿ

ಸುಂದರ ಕಾಡಿನ ರೋಚಕ ಕಥೆಗಳು (೬): ರೂಪಾ ರವೀಂದ್ರ ಜೋಶಿ ಸರಣಿ

ಬೆಟ್ಟದ ಬಲಬದಿಯ ಕಿರುದಾರಿ ಹಿಡಿದು ಸಾಗಿದರೆ, ಅಲ್ಲೊಂದು ನೆಲ್ಲಿ ಮರ. ಅದರ ಬುಡದಲ್ಲಿ ನಮ್ಮ ನಾಯಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದುಕೊಂಡಿದೆ. ನಾನು ಗಾಬರಿಯಿಂದ ಜೋರಾಗಿ ಅಳತೊಡಗಿದೆ. ಯಾರೋ ರಾತ್ರಿ ಅಲ್ಲಿರುವ ಪೊದೆಯಲ್ಲಿ ನಾಡ ಬಾಂಬು ಇಟ್ಟಿದ್ದಾರೆ! ಮಾಂಸದ ವಾಸನೆಗೆ ಮರುಳಾಗಿ, ಅದು ಆ ಬಾಂಬನ್ನು ಬಯಲಲ್ಲಿ ತಂದಿಟ್ಟುಕೊಂಡು ಇಡಿದಾಗಿ ಕಚ್ಚದೆ, ಮೆಲ್ಲಗೆ ಒಂದು ಮೂಲೆಯನ್ನು ಬಿಡಿಸಿದೆ. ಅದಕ್ಕೇ ಸ್ವಲ್ಪಭಾಗ ಸಿಡಿದು, ಅದರ ಮೇಲ್ದವಡೆ ಸ್ವಲ್ಪ ಸೀಳಿತ್ತು. ಬಾಯೆಲ್ಲ ರಕ್ತ ಸಿಕ್ತ. ರೂಪಾ ರವೀಂದ್ರ ಜೋಶಿ ಬರೆಯುವ "ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ" ಸರಣಿಯ ಹದಿನೈದನೆಯ ಕಂತು

ಪ್ರವಾಸ

ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಇಂದಿನಿಂದ

ನಡುನಡುವೆ ನಗುವಿನ ಅಲೆಗಳ ವಿನಿಮಯವಾಗಿದ್ದಷ್ಟೇ ನನಗೆ ಗೊತ್ತು. ಹತ್ತಾರು ಸಿಗಡಿಗಳು, ಸ್ವಲ್ಪ ಸ್ವಲ್ಪವೇ ಪುಡಿ ಮೀನುಗಳೊಂದಿಗೆ ಮರಳುವ ಧಾವಂತದಲ್ಲಿದ್ದರು. ಆದರೂ ನಾಲ್ಕಾರು ಮೀನುಗಳನ್ನೂ ನಮಗೂ ಕಟ್ಟಿಕೊಡಲು ಬಂದರು! ನಾವು ಬೇಡವೆಂದಿದ್ದಕ್ಕೆ ಬೇಸರಿಸಿಕೊಂಡರು. ನಾಲ್ಕಾರು ಸಿಗಡಿಗಳ ತೋರಿಸಿ ಕುಶಿ ಪಟ್ಟ. ಕಡಲ ಕಿನಾರೆಗೆ ಬಡಿದು ಬಡಿದೂ ಸವೆದ ಚಪ್ಪಲಿ ಹಾಕಿ ಹೊರಟಾಗ ಮನದ ಕರಳು ಚುರುಕ್‌ ಎಂದಿತು. ಭೈರವಿ ರಾಗದ ಆಲಾಪದಂತೆ ಭಾಸವಾದ ಅಲೆಗಳು ಅವಳ ಕಾಲಂದುಗೆಗೆ ಮತ್ತೆ ಮತ್ತೆ ಮುತ್ತಿಕ್ಕುತಾ ಖುಷಿಯಲ್ಲಿ ಮರಳುತ್ತಲಿದ್ದವು. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…”

ವ್ಯಕ್ತಿ ವಿಶೇಷ

ಹೊಸ ಬದುಕಿಗೆ ಬಿದ್ದ ಬುನಾದಿ: ಜುಲೇಖಾ ಬೇಗಂ ಜೀವನ ವೃತ್ತಾಂತ

ಬಿಡುವಿದ್ದಾಗೆಲ್ಲ ಅವರ ಮನೆಗೆ ಹೋಗುವುದು ಸಾಮಾನ್ಯವಾಯಿತು. ಸುಮ್ಮನಿರುವ ಗೆಜ್ಜೆ ನನ್ನ ಮನಸ್ಸಲ್ಲೇನೊ ಸದ್ದು ಮಾಡಿದರಂತೆ. ‘ನಾನೂ ಗೆಜ್ಜೆ ಕಟ್ಬೇಕು. ಕಟ್ರಿ’ ಎಂದು ಅಲವತ್ತುಕೊಂಡೆ. ‘ಹಾಗೆಲ್ಲ ಕಟ್ಬಾರ್ದವ್ವಾ, ದೇವ್ರಿಗೆ ಪೂಜೆ ಮಾಡಿ ಕಟ್ಟೋದು ಗೊತ್ತೇನು?’ ಎಂದು ಸುಮ್ಮನಿರಿಸಲು ನೋಡಿದರು. ಬಿಡುವವಳಲ್ಲ ನಾನು, ‘ಹಾಂ, ನಾನೂ ಪೂಜೆ ಮಾಡ್ತೇನಿ. ಕಟ್ರಲಾ’ ಎನ್ನುತ್ತಿದ್ದೆ. ನನ್ನ ಚಾಲಾಕಿತನ ಕಂಡು ನಕ್ಕು, ತಲೆ ಬಡಿದುಕೊಂಡು, ‘ನಿಮ್ಮವ್ವ ಬಿಟ್ಟಾಳ ನಮ್ಮನ್ನ, ಕಸಬರಿಕಿ ತಗೊಂಡು ಓಡ್ಸ್ಕೋತಾ ಬರ್ತಾರ’ ಎಂದು ತಮಾಷೆ ಮಾಡಿಬಿಡುತ್ತಿದ್ದರು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ"

ಸಂಪಿಗೆ ಸ್ಪೆಷಲ್

ವಿಫುಲ ರೂಪ ಧಾರಿಣಿ ಹುಡುಕಾಡುತಿದೆ ಮನುಷ್ಯ ಪ್ರೀತಿಗಾಗಿ….: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಬರಹ

ಇಂದಿನ ಆಧುನಿಕ ತಂತ್ರಜ್ಞಾನ ಕೃತಕ ಬುದ್ಧಿಮತ್ತೆಯಲ್ಲಿ ನಿಸರ್ಗದ ಚೈತನ್ಯವನ್ನು ನೋಡುವುದನ್ನು ಮರೆತುಬಿಟ್ಟಿದ್ದೇವೆ. ಗುಬ್ಬಿ ಗೂಡು ಕಟ್ಟುವುದನ್ನು,ಸೂರ್ಯೋದಯ ಚಂದ್ರೋದಯಗಳ ನಯನ ಮನೋಹರ ದೃಶ್ಯವನ್ನು, ಕರು ಆಕಳ ಕೆಚ್ಚಲನ್ನು ಹುಡುಕುವ ಹೊತ್ತನ್ನು ಮರೆತುಬಿಟ್ಟಿದ್ದೇವೆ. ಆಕಾಶದಿಂದ ಜಾರುವ ಮಳೆ, ಕಾಮನಬಿಲ್ಲು, ಇಬ್ಬನಿಯ ರೂಪ, ಪ್ರೀತಿ -ವಿರಹಗಳ ನಡುವಿನ ಬಾಂಧವ್ಯ, ಮೌನ ರಹಸ್ಯಗಳ ನಡುವಿನ ವಿಸ್ಮಯ. ಇವುಗಳ ನಡುವಿನ ಪ್ರೀತಿಯನ್ನು ಗಳಿಸುವ, ಬೆಳೆಸುವ, ಉಳಿಸುವ ದಾಹ ನಮ್ಮದಾಗಲಿ ಎಂಬ ಆಶಯ ವಿಫುಲ ರೂಪ ಧಾರಣಿಯದು. ಏಕೆಂದರೆ 'ದಾರಿ ನೂರಾರಿವೆ ಬಿಡುಗಡೆಯ ಬೆಳಕಿನ ಅರಮನೆಗೆ' ಎಂಬ ಸಾಲುಗಳು ನಮ್ಮಲ್ಲಿ ಪ್ರೀತಿಯ ಬುಗ್ಗೆ ಚಿಮ್ಮುವಂತಾಗಲಿ. ಜಿ.ಎಸ್.‌ ಶಿವರುದ್ರಪ್ಪನವರ ಕವಿತೆಗಳನ್ನು ಆಧರಿಸಿದ 'ವಿಫುಲ ರೂಪ ದಾರಿಣಿ' ಕಾವ್ಯ ಅಭಿನಯದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ರಶ್ಮಿ ಕಬ್ಬಗಾರು ಬರೆದ ಈ ದಿನದ ಕವಿತೆ

"ಅವಳ ಕಣ್ಣಿಂದ್ಯಾವ ಕಿಡಿ ಸಿಡಿಯಿತೋ ಮೈಯಿಂದಾವ ಘಮಲು ಕೋಲು ಮೀಸೆಯ ಗಡದಪ್ಪನ ಜನುಮಕ್ಕೆ ತಿವಿಯಿತೂ ಕಾಣೆ ಈಚಲು ಮರದ ಮಡಿಕೆ ತಲೇ ಮೇಲೆ ಆಕಾಶದಿಂದ ಕೌಚಿದಂತೆ ಶುರುವಾಯ್ತು ಜಡಿ ಮಳೆ ಮಡಗೋದು ಮದ್ಲು ಮಡಗವೋ ಎಲ್ಲಿ ನಿನಗಂಡ ಗ್ಯಾನ ಎಲ್ಲೈತೆ ಅವಂಗೆ ?"-ರಶ್ಮಿ ಕಬ್ಬಗಾರು ಬರೆದ ಈ ದಿನದ ಕವಿತೆ

ಸುಧಾ ಆಡುಕಳ ಬರೆದ ಈ ಭಾನುವಾರದ ಕತೆ “ಆರೂವರೆ ಅಡಿಯ ಮನುಷ್ಯ”

ನಾನು ಗುರುವೆಂದು ಭಾವಿಸಿದ ಫುಲೆ ದಂಪತಿಗಳು ಹೇಳಿದ್ದೂ ಇದೇ ಮಾತುಗಳನ್ನು. ಪುಟ್ಟ ಬಾಲಕಿಯರಿಂದ ಹಿಡಿದು, ಮದುವೆಯಾಗಿ ವಿಧವೆಯರಾದ ಹೆಣ್ಣುಗಳವರೆಗೆ ಎಲ್ಲರ ಕೈಯ್ಯಲ್ಲಿಯೂ ಅಕ್ಷರದ ದೀವಿಗೆಯನ್ನು ಹಿಡಿಸಬೇಕೆಂದು ಅವರು ಶ್ರಮಿಸಿದ ಮಾರ್ಗ ನನ್ನೆದುರು ತೆರೆದುಕೊಂಡಿತ್ತು. ಅವರು ಹುಟ್ಟುಹಾಕಿದ ಅರಿವಿನ ಸಸಿಯಿಂದು ಆರೈಕೆಯಿಲ್ಲದೇ ಸೊರಗಿ ಸಾಯುವ ಸ್ಥಿತಿಯಲ್ಲಿತ್ತು. ವಾಸ್ತವ ಸತ್ಯವನ್ನರಿಯಲು ನಾನು ರಾಜ್ಯದ ತುಂಬೆಲ್ಲ ಸಂಚರಿಸತೊಡಗಿದೆ. ಸುಧಾ ಆಡುಕಳ ಬರೆದ ಕತೆ "ಆರೂವರೆ ಅಡಿಯ ಮನುಷ್ಯ" ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ