ಗರತಿಗಂಗಮ್ಮ ಮತ್ತು ಡಿಸ್ಕೋ ಲೈಟು!: ಸುಕನ್ಯಾ ಕನಾರಳ್ಳಿ ಅಂಕಣ
ಸಮಂಜಸತೆ ಮತ್ತು ಸಾವಯವತೆ ದೃಶ್ಯಸಂಸ್ಕೃತಿಯ ಅನಿವಾರ್ಯ ಭಾಗ ಎನ್ನುವುದನ್ನು ನಾವು ಸಾರಾಸಗಟಾಗಿ ಮರೆತಿದ್ದೇವೆ ಅಂತನ್ನಿಸುತ್ತದೆ. ಸನ್ಯಾಸಿಯೊಬ್ಬರು ಧೀಮಂತ ಭಂಗಿಯಲ್ಲಿ ನಿಂತಿರುವ ರಸ್ತೆಯುದ್ದಕ್ಕೂ ಲಲನೆಯರು ಚಿನ್ನ ವಜ್ರಗಳನ್ನು ಹೊತ್ತು ನಿಂತ ಬ್ಯಾನರುಗಳು ಕಣ್ಣಿಗೆ ಹೊಡೆಯುತ್ತವೆ. ಕಳೆದವಾರ ಶ್ರೀರಾಮಕೃಷ್ಣರ ವೃತ್ತವನ್ನೂ ಕಚ್ಚಿಕೊಂಡಂತೆ ಸುತ್ತ ಮುತ್ತಲೆಲ್ಲ ಯಾವುದೋ ಕಾರ್ಪೊರೇಟರನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ಫ್ಲೆಕ್ಸ್ ಬ್ಯಾನರುಗಳು ಹಲ್ಲು ಕಿರಿದಿದ್ದೇ ಕಿರಿದಿದ್ದು. ಇದೆಲ್ಲದರ ನಡುವೆ ಪರಮಹಂಸರು ಪೆಚ್ಚಾಗಿ ಕೂತಂತಿತ್ತು!
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ನಲವತ್ತೆರಡನೆಯ ಬರಹ


