Advertisement

ಕೋಟಿ ಯೋಜನವಿರಲಿ, ದಾಟಿ ಬರುವೆನು… ಬಿಳಿಮಲೆಗೆ: ಸುಕನ್ಯಾ ಕನಾರಳ್ಳಿ ಅಂಕಣ

ಸುಖವಾದ ಊಟವಾದ ಮೇಲೆ ಸುಮಾರು ಎರಡು ರಾತ್ರಿಗಳಿಂದ ನಿದ್ದೆಯಿಲ್ಲದೇ ಬಳಲಿದ್ದ ನನ್ನ ಕಣ್ಣುಗಳನ್ನು ಇನ್ನಿಲ್ಲದಂತೆ ಅಗಲವಾಗಿ ತೆರೆದು ಇರಿಸಿದ್ದು ‘ಕೃಷ್ಣಸಂಧಾನ’ ಪ್ರಸಂಗದ ತಾಳಮದ್ದಳೆ ಕಾರ್ಯಕ್ರಮ. ಸುಮಾರು ಎರಡು ಗಂಟೆಗಳ ಕಾಲ ಆ ಭಾಷೆ, ವಾಗ್ವೈಖರಿ, ಹಾಸ್ಯ, ಅಭಿನಯಗಳು ಅದೆಂತಹ ಬೌದ್ಧಿಕ ಸಾಂತ್ವನವನ್ನು ನೀಡಿದವೆಂದರೆ ಅಮೆರಿಕಾದ ವಿಶ್ವವಿದ್ಯಾಲಯದಲ್ಲಿ ಸತತವಾಗಿ ಮೂರು ಗಂಟೆಗಳ ಉಪನ್ಯಾಸವನ್ನು ತಲ್ಲೀನಳಾಗಿ ಕೇಳಿಸಿಕೊಂಡು ನಂತರ ಅದನ್ನು ಅರಗಿಸಿಕೊಳ್ಳಲು ಮುಂದಿನ ಒಂದು ವಾರದ ಮಟ್ಟಿಗೆ ಹೆಣಗುತ್ತಿದ್ದೆನಲ್ಲ, ಇದು ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಇನ್ನೊಂದು ಹತ್ತು ದಿನವಾದರೂ ನಿನ್ನ ತಲೆಗೆ ಬಿಡುವಿರುವುದಿಲ್ಲ, ಬಿಡು ಎಂದು ಕಣ್ಣು ಹೊಡೆಯುತ್ತಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹದಿನೇಳನೆಯ ಬರಹ

Loading

ಅಂಕಣ

Latest

ನಾಕವೋ? ನರಕವೋ?!: ಜಯಲಕ್ಷ್ಮಿ ಪಾಟೀಲ್ ಅಂಕಣ

ಕಾಶ್ಮೀರವನ್ನು ನೋಡಿಯೇ ಇಲ್ಲದ ಆದರೆ ಮತ್ತೂ ಮತ್ತೂ ಆತಂಕವಾದಿಗಳ ದಾಳಿಗೆ, ಧರ್ಮಗಳ ಮೂಲಕ ಅಲ್ಲಿನ ಜನರನ್ನು ಒಡೆದು ಆಳುತ್ತಿರುವವರ ದಾಳಿಗೆ ಒಳಗಾಗುತ್ತಲೇ ಇರುವ ಕಾಶ್ಮೀರ ಕುರಿತು ನನಗೆ ಯಾವಾಗಲೂ ಭಯ ಮಿಶ್ರಿತ ಕುತೂಹಲ. ಕಾಶ್ಮೀರ ನನಗೆ ರಮ್ಯವಾಗಿ ಎಂದಾದರೂ ಕಂಡಿದ್ದರೆ ಅದು ಅದು ಶಮ್ಮಿ ಕಪೂರ್, ಶಶಿ ಕಪೂರ್ ಅವರ ಸಿನಿಮಾಗಳಲ್ಲಿ. ಇತ್ತೀಚಿನ ಪೆಹಲ್‌ಗಾಮ್ ಅಟ್ಯಾಕ್‌ವರೆಗೂ ಉಗ್ರಗಾಮಿಗಳ ಅಟ್ಟಹಾಸದ ಪ್ರಕರಣಗಳನ್ನೆ ಕೇಳುತ್ತಾ ಬಂದಿದ್ದೇನೆ. ಹೊರಗಿನವರು ಸಾಲದು ಅಂತ ನಮ್ಮ ರಾಜಕಾರಣಿಗಳ ಧರ್ಮದಾಟ ಬೇರೆ! ಅಯ್ಯೋ ಭಾರತಮಾತೆ… ಜಯಲಕ್ಷ್ಮಿ ಪಾಟೀಲ್ ಬರೆಯುವ "ಗರ್ದಿ ಗಮ್ಮತ್ತು" ಅಂಕಣದ ನಾಲ್ಕನೆಯ ಬರಹ

ಸಾಹಿತ್ಯ

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ”

ನಾನು ಭಯಪಟ್ಟ ಸಮಯ ಕೊನೆಗೂ ಬಂತು... ಬ್ರೂನೊವನ್ನು ಮೆರ್ಸಿ ಕಿಲಿಂಗ್ ಮಾಡುವ ಸಮಯ... ನಾನು ಬ್ರೂನೋ ಕಡೆಗೆ ದಯೆಯಿಂದ ನೋಡಿದೆ. ಅದು ಹಿಂದಿನಂತೆ ನನ್ನನ್ನು ಗುರುತಿಸುತ್ತಿಲ್ಲ. ತನ್ನ ತುಟಿಗಳನ್ನು ಚಾಚಿ ನಗುವುದು ಮರೆತಿದೆ. ಚುರುಕಾಗಿ ಚಲಿಸುತ್ತಿದ್ದ ಹಿಂದಿನ ಬ್ರೂನೊ ಇಲ್ಲ ಈಗ. ಅದರ ಚಲನೆಗಳಲ್ಲಿಯೂ, ವ್ಯವಹಾರದಲ್ಲಿಯೂ ಬಹು ಬದಲಾವಣೆಗಳು. ಅದು ಈಗ ವೈದ್ಯಶಾಸ್ತ್ರ ಸಂಶೋಧನೆಗೆ ಕೆಲಸಕ್ಕೆ ಬರದ ಪ್ರಾಣಿ. ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ "ಬೂದು ಬಣ್ಣದ ಆಕಾಶ"‌

ಸರಣಿ

ಬಯಸುವುದು ಒಂದು ಸಿಗುವುದು ಮತ್ತೊಂದು!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಿಲ್ದಾಣಕ್ಕೆ ನಡೆಯುವಾಗ ಆಗಾಗ್ಗೆ ಎದ್ದು ಬರುತ್ತಿದ್ದ ಶೂಗಳು ನನ್ನ ನಡಿಗೆಯ ವೇಗವನ್ನು ಕುಂಠಿತಗೊಳಿಸಿದ್ದವು. ನಾನು ತಡವಾಗುತ್ತದೆಯೆಂದು ಭಾವಿಸಿ ಶೂಗಳನ್ನು ಕೈಯಲ್ಲಿ ಹಿಡಿದು ರೈಲ್ವೇ ನಿಲ್ದಾಣ ಸಿಗುವವರೆಗೆ ಓಡಿದೆ. ನನ್ನ ಅದೃಷ್ಟಕ್ಕೆ ರೈಲು ಇನ್ನೂ ಹೋಗಿರಲಿಲ್ಲ. ಟಿಕೇಟ್ ತೆಗೆದುಕೊಂಡು ರೈಲನ್ನು ಹತ್ತಿ ಕುಳಿತೆ. ಇದೇ ಮೊದಲ ಬಾರಿಗೆ ನಾನು ಧಾರವಾಡಕ್ಕೆ ಹೋಗುತ್ತಿದ್ದೆ. ನನ್ನ ಎದುರಿಗೆ ಕುಳಿತಿದ್ದವರ ಬಳಿ ಹೇಗೆ ಹೋಗಬೇಕೆಂದು ಕೇಳಿದಾಗ ಅವರು ಮಾಹಿತಿ ತಿಳಿಸಿದರಲ್ಲದೇ ನನ್ನ ಬಗ್ಗೆ ಕನಿಕರ ತೋರಿ "ನಿಮಗೆ ಕೆಲಸ ಸಿಗದಿದ್ದರೆ ನನಗೆ ಕರೆ ಮಾಡಿ ನಾನು ನಿಮಗೆ ಬೇರೊಂದು ಕೆಲಸ ಕೊಡಿಸುತ್ತೇನೆ" ಎಂದು ಅವರ ನಂಬರ್ ಕೊಟ್ಟು ಹೋದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

ಪ್ರವಾಸ

ನಾಲಗೆ ಹೊರಳದ ನಾಡಿನಲ್ಲಿ ಮೂರು ದಿನ…: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಸುಣ್ಣದ ಕಲ್ಲಿನ ವಿಚಿತ್ರ ವಿನ್ಯಾಸ. ಜೇನು ತಟ್ಟಿಯಂತಹ ವಿಭಿನ್ನ ಸಂಯೋಜನೆ. ಬೆಳಕಿಗೆ ಹೊಳೆವ ಕಲ್ಲಿನ ಚೂರುಗಳು. ದನದ ಕೆಚ್ಚಲಿನಾಕೃತಿಯ ವಿನ್ಯಾಸವೂ ಉಂಟು. ಹಲಸಿನ ಕಾಯಿಯಂತಹ ನೇತಾಡುವ ಮಣ್ಣ ಹೆಂಟೆಗಳು. ವಿಭಿನ್ನ ವಿನ್ಯಾಸ, ಆಕಾರ. ಹಾವು, ಶಂಕ, ಗದೆ, ರಾಕ್ಷಸ ಆಲದ ಬಿಳಲುಗಳಂತಹ ರಚನೆ. ಹತ್ತು ಹೆಡೆ ಸರ್ಪ, ಮುದುಕ, ಗಂಟಲಿನ ರಚನೆ, ಹೊಸ ಹೊಸ ವಿನ್ಯಾಸದ ಬಲ್ಬುಗಳಂತಹ ರಚನೆಗಳು, ಒಂದೇ ಎರಡೇ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಊರಿನ ಪರಿಚಯ

ವ್ಯಕ್ತಿ ವಿಶೇಷ

ನಾನೆಂಬ ‘ನನ್ನ’ನ್ನು ಅಳಿಸುವ ಆಧ್ಯಾತ್ಮಿಕ ಜಗತ್ತು: ಜುಲೇಖಾ ಬೇಗಂ ಜೀವನ ವೃತ್ತಾಂತ

ಕುರ್ಚಿ ಅಡಿಗಳಲ್ಲಿ, ನೆಲ ಮತ್ತು ಚಾಪೆಯ ಸ್ಥಳಗಳನ್ನು ಗುಡಿಸಿ ಸ್ವಚ್ಛಗೊಳಿಸುವುದೆಂದರೆ ಬರೋಬ್ಬರಿ ಎರಡು ಗಂಟೆಗಳ ಕೆಲಸ. ನನ್ನ ಎಳೆ ರಟ್ಟೆಯಲ್ಲಿದ್ದ ಶಕ್ತಿಯೆಲ್ಲವೂ ಸೋರಿ ಹೋದಂತೆ ಅನಿಸುತ್ತಿತ್ತು. ನಟಿ ಫ್ಲೋರಿನಾ ಬಾಯಿಯವರದ್ದೇ ಮೇಲುಸ್ತುವಾರಿ. ‘ಇನ್ನೂ ಆಗಿಲ್ಲವಾ?’ ಎಂದು ಅಧಿಕಾರ ಸಾಧಿಸುವ ಮಾತುಗಳನ್ನೇ ಪ್ರಶ್ನೆಯಾಗಿ ಕೇಳುತ್ತಿದ್ದರು. ಅಂದಹಾಗೆ, ಇದೆಲ್ಲದರ ನಡುವೆ ಅವರ ಸಾಕಿದ ಮಗಳು ದೂರದ ಹಾಸ್ಟೆಲ್‌ನಲ್ಲಿ ಓದುತ್ತಿದ್ದಳು. ರಜೆಗೆಂದು ಬಂದಾಗ ನನ್ನನ್ನು ಕಂಡಳು. ಆಡಲು ಜೊತೆಯಾಗುತ್ತಾಳೆ ಎಂದುಕೊಂಡಿದ್ದಳೋ ಏನೊ, ಅದಕ್ಕಾಗಿ ನನ್ನ ಬರುವಿಕೆಯನ್ನೇ ದೂರದಲ್ಲೇ ನಿಂತು ಕಾಯುತ್ತಿದ್ದಳು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ"

ಸಂಪಿಗೆ ಸ್ಪೆಷಲ್

ಬಾಪುವಿನ ನೆರಳಲ್ಲಿ ಬೆಳಕು ಕಾಣಿಸುವ ‘ನಮ್ಮೊಳಗೊಬ್ಬ ಗಾಂಧಿ’ಯ ಸತ್ಯಾನ್ವೇಷಣೆ: ಡಾ.ರಾಜೇಂದ್ರಕುಮಾರ್ ಕೆ ಮುದ್ನಾಳ್

ಮಹಿಳೆಯರ ಬದುಕು ಸ್ವಾವಲಂಬಿಯಾಗಿರಬೇಕೆಂದು ಶಕ್ತಿದಾಯಕವಾಗಿ ಇರಬೇಕೆಂದು ಗಾಂಧಿ ಬಯಸಿದ್ದರು ಎಂಬುದನ್ನು ಮೂಕಮ್ಮ ಮತ್ತು ರಮಾ ಪಾತ್ರದ ಮೂಲಕ ನಾಟಕಕಾರರು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ರಮಾ ವಿಧವೆಯಾಗಿದ್ದರು ಮತ್ತೊಬ್ಬನನ್ನು ಪ್ರೀತಿಸಿ ಮರು ಮದುವೆ ಮಾಡಿಕೊಳ್ಳುವ ಉತ್ಸಾಹವನ್ನು ತೋರಿಸಿದ್ದು ಕೂಡ ಗಾಂಧಿ ವಿಚಾರಧಾರೆಗಳಿಗೆ ಮನಸೋತು. ರಮಾ ಮತ್ತು ರಹಿಮರ ಪ್ರೇಮ ಭಾವೈಕ್ಯತೆಯ ಪ್ರತೀಕವಾಗಿ ಹೊರಹೊಮ್ಮಿದೆ. 'ನಮ್ಮೊಳಗೊಬ್ಬ ಗಾಂಧಿ' ನಾಟಕದ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ದಾದಾಪೀರ್‌ ಜೈಮನ್‌ ಅನುವಾದಿಸಿದ ಅನಿತಾ ತಂಪಿ ಕವಿತೆ ‘ಪ್ರೇತಂ’

"ಮಣ್ಣಲ್ಲಿ ಈವರೆಗೆ ಹುಟ್ಟಿದ ಎಲ್ಲಾ ಹೆಣ್ಣುಗಳು  ಮುಖಕ್ಕೆ ಬಣ್ಣ ಬಳಿದುಕೊಂಡು  ಮುಡಿಗೆ ಮಲ್ಲಿಗೆ ಮುಡಿದುಕೊಂಡು ವಯ್ಯಾರ ಮಾಡಿಕೊಂಡು  ದಾರಿಯ ತುಂಬುತ್ತಾ  ಪ್ರಚಂಡ ಮಹಾಭೋಗಕ್ಕೆ ಆಹ್ವಾನಿಸುವುದನ್ನು ಕಂಡು   ದಿಗ್ಭ್ರಮೆಗೊಂಡು ಉದ್ರೇಕಗೊಂಡು ಎಣಿಸಲಾರದಷ್ಟು ತುಟಿಗಳು ಮೊಲೆಗಳು  ಗುಪ್ತಾಂಗದಿಂದ ಧುಮ್ಮಿಕ್ಕಿ ಬಂದ  ಅಗಾಧ ನೀರಿನೊಳಗೆ  ಮುಳುಗಿ, ಮೇಲೆದ್ದು, ಮತ್ತೆ ಮುಳುಗಿ ಸತ್ತ  ಉಬ್ಬಿ  ದಡಕ್ಕೆ ಬಿದ್ದ"- ದಾದಾಪೀರ್‌ ಜೈಮನ್‌ ಅನುವಾದಿಸಿದ ಅನಿತಾ ತಂಪಿ ಕವಿತೆ ‘ಪ್ರೇತಂ’

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ”

ನಾನು ಭಯಪಟ್ಟ ಸಮಯ ಕೊನೆಗೂ ಬಂತು... ಬ್ರೂನೊವನ್ನು ಮೆರ್ಸಿ ಕಿಲಿಂಗ್ ಮಾಡುವ ಸಮಯ... ನಾನು ಬ್ರೂನೋ ಕಡೆಗೆ ದಯೆಯಿಂದ ನೋಡಿದೆ. ಅದು ಹಿಂದಿನಂತೆ ನನ್ನನ್ನು ಗುರುತಿಸುತ್ತಿಲ್ಲ. ತನ್ನ ತುಟಿಗಳನ್ನು ಚಾಚಿ ನಗುವುದು ಮರೆತಿದೆ. ಚುರುಕಾಗಿ ಚಲಿಸುತ್ತಿದ್ದ ಹಿಂದಿನ ಬ್ರೂನೊ ಇಲ್ಲ ಈಗ. ಅದರ ಚಲನೆಗಳಲ್ಲಿಯೂ, ವ್ಯವಹಾರದಲ್ಲಿಯೂ ಬಹು ಬದಲಾವಣೆಗಳು. ಅದು ಈಗ ವೈದ್ಯಶಾಸ್ತ್ರ ಸಂಶೋಧನೆಗೆ ಕೆಲಸಕ್ಕೆ ಬರದ ಪ್ರಾಣಿ. ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ "ಬೂದು ಬಣ್ಣದ ಆಕಾಶ"‌

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ