Advertisement

ಅಲೆಮಾರಿ ಗುಡಾರಗಳು, ಮುಂಗುಸಿ ಭದ್ರ ಮತ್ತು ಮಂಚಿಗೆ: ಎಸ್. ಗಂಗಾಧರಯ್ಯ ಅನುಭವ ಕಥನ

ಭದ್ರ ಬಂದವನೇ ಕೈಯ್ಯಲ್ಲಿದ್ದ ಪುಟ್ಟ ಬುಡುಬುಡಿಕೆಯನ್ನು ಚೆಡ್ಡಿ ಜೇಬೊಳಕ್ಕೆ ತುರುಕಿಕೊಂಡು `ಎದ್ದಾಳಿ ಮತ್ತೆ ಬೇಗ’ ಅಂತ ನಮ್ಮನ್ನು ಏಳಿಸಿಕೊಂಡು ಶೆಟ್ಟೀಕೆರೆಯ ಕೆರೆಯ ಅಂಗಳಕ್ಕೆ ಕರೆದೊಯ್ದು ಅಲ್ಲಿ ತಾವರೆ ಬೀಜಗಳನ್ನು ಹುಡುಕತೊಡಗಿದ. ಭದ್ರನೊಂದಿಗೆ ನಾವೂ ಕೈ ಜೋಡಿಸಿದೆವು. ಕೆರೆಯ ಅಂಗಳದಲ್ಲಿ ಬಿಟ್ಟಿದ್ದ ಬಿರಿಗಳ ನಡುವಲ್ಲಿ ಗೋಚರಿಸುತ್ತಿದ್ದ ತಾವರೆ ಬೀಜಗಳನ್ನು ಮೂವರೂ ಜೇಬಿಗಿಳಿಕೊಂಡು ಮತ್ತೆ ಮಂಚಿಗೆಯತ್ತ ಬಂದೆವು. ಭದ್ರ ಸುತ್ತಲೂ ಸಿಕ್ಕಿದ ಪುರಲೆಗಳನ್ನು ಒಂದೆಡೆ ಗುಪ್ಪೆ ಹಾಕಿ ಬೆಂಕಿ ಹಚ್ಚಿ ತಾವರೆ ಬೀಜಗಳನ್ನು ಆ ಬೆಂಕಿಗೆ ಹಾಕಿ ಸುಟ್ಟ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಮೂರನೆಯ ಕಂತು

Loading

ಅಂಕಣ

Latest

ಮನುಷ್ಯನ ಒಂದೇ ಜನ್ಮದಲ್ಲಿ ಹಲವು ಜನ್ಮಗಳು – ಏನಿದರ ಮರ್ಮ?: ಎಲ್. ಜಿ. ಮೀರಾ ಅಂಕಣ

ನಮ್ಮ ಗುರುತು ನಮಗೇ ಸಿಗದಷ್ಟು ನಾವು ಬದಲಾವುಗುವುದರ ಮರ್ಮ ಏನು? ಅದೂ ಅಲ್ಲದೆ ಎಲ್ಲರೂ ಹೀಗಾಗುವುದಿಲ್ಲ. ಎಲ್ಲ ಸಿದ್ಧಾರ್ಥರೂ ಬುದ್ಧರಾಗುವುದಿಲ್ಲ, ಎಲ್ಲ ನವಕೋಟಿ ನಾರಾಯಣರೂ ಪುರಂದರದಾಸರಾಗುವುದಿಲ್ಲ, ಎಲ್ಲ ಅಂಗುಲಿಮಾಲರೂ ಬೌದ್ಧಭಿಕ್ಷುವಾಗುವುದಿಲ್ಲ. ಹೀಗೆ ತಮ್ಮನ್ನು ತಾವು ಗುರುತೇ ಸಿಗದಂತೆ ನವೀಕರಿಸಿಕೊಳ್ಳಲು ಎಲ್ಲರಲ್ಲೂ ಇಲ್ಲದ ಏನೋ ಒಂದು ಗುಣವಿಶೇಷ ಈ ವ್ಯಕ್ತಿಗಳಲ್ಲಿ ಇರಬೇಕು ಅಥವಾ ಹೀಗೆ ಬದಲಾವುಗುವುದಕ್ಕಾಗಿ ಏನೋ ಒಂದು ಬಲವಾದ ಕಾರಣವನ್ನು ಬದುಕು ನಿರ್ಮಿಸಿರಬೇಕು. ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

ಸಾಹಿತ್ಯ

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು”

ಅವರು ಹೇಳಿದ ದ್ವೀಪವಾಸಿ ಮುತ್ತುಕೋಯಾನ ಕಥೆಯನ್ನು ಕೇಳಿದರೆ ಏಕಕಾಲದಲ್ಲಿ ನಗುವೂ ವಿಷಾದವೂ ಖೇದವೂ ನಗುವೂ, ವಿಷಾದವೂ, ಖೇದವೂ, ವೈರಾಗ್ಯವೂ ಉಂಟಾಗುವ ಹಾಗೆ ಇತ್ತು. ಮುಕ್ತಿಯಾರರು ಹೇಳಿದ ಹಾಗೆ ಮುತ್ತುಕೋಯಾರಿಗೆ ಸುಮಾರು ಎಂಬತ್ತರ ಆಸುಪಾಸು ವಯಸ್ಸು ಇರಬಹುದು. ಅವರು ಕಳೆದ ಮೂವತ್ತು ವರ್ಷಗಳಿಂದ ಮಾನಸಿಕ ಅಸ್ವಸ್ಥರಂತೆ ನಟಿಸುತ್ತಾ ಮೀನು ಹಿಡಿದುಕೊಂಡು ಈ ಪುಟ್ಟ ದ್ವೀಪದಲ್ಲಿ ಬದುಕುತ್ತಿದ್ದರು. ಹಾಗೆ ನಟಿಸಿರದೆ ಇದ್ದರೆ ಇವರು ಜೈಲು ಪಾಲಾಗಬೇಕಿತ್ತು. ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು” ನಿಮ್ಮ ಓದಿಗೆ

ಸರಣಿ

ಮೊದಲ ಶಾಲೆಯ ಪ್ರಾರಂಭದ ಅನುಭವಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ  

ನಾನು ಆ ಮನೆಗೆ ಹೋಗುತ್ತೇನೆ ಎಂದು ತಿಳಿದು ಅವರು ಬಾಕಿ ಇರುವ ಕರೆಂಟ್ ಬಿಲ್ ಕಟ್ಟಿದ್ದರಂತೆ ಹಾಗೂ ಕ್ಲೀನ್ ಮಾಡಿಸಿದ್ದರಂತೆ. ಯಾವಾಗ ನಾನು ಹೋಗೋದಿಲ್ಲ ಎಂದು ತಿಳಿದ ಮೇಲೆ ನನ್ನ ಮೇಲೆ ಗರಂ ಆದರು. ಆದರೆ ಇದನ್ನು ತೋರಿಸಿಕೊಳ್ಳುವ ಹಾಗಿರಲಿಲ್ಲ. ಮನದಲ್ಲಿ ನನ್ನ ಬಗ್ಗೆ ಕೋಪವು ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಆಗ ಇವರೇ ನಮ್ಮ ಹೆಚ್ಚೆಂ ಆದ್ದರಿಂದ ನನಗೆ ಕಿರಿಕ್ ಕೊಡಲು ಶುರು ಮಾಡಿದರು. ರಜಾ ಕೇಳಿದಾಗ ತಕ್ಷಣ ಪ್ರತಿಕ್ರಿಯೆ ನೀಡದೇ ಇರುತ್ತಿದ್ದುದು, ಸುಖಾ ಸುಮ್ಮನೇ ಅದು ಮಾಡಿಲ್ಲ ಇದು ಮಾಡಿಲ್ಲ ಎಂದು ಹೇಳುತ್ತಿದ್ದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ಮೂರನೆಯ ಕಂತು ನಿಮ್ಮ ಓದಿಗೆ

ಪ್ರವಾಸ

ಅಲೆಮಾರಿಯ ಆಗುಂಬೆ ಹಾಗೂ ಟ್ರೋಜನ್‌: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಕುಮಾರ ವ್ಯಾಸನ ರೂಪಕ ಅಲಂಕಾರದಂತೆ ಆಗುಂಬೆ ಸುಂದರ, ಮನೋಹರ. ಅಂತಹ ಒಂದು ಅನನ್ಯ ಅನುಭವ ಪಡೆದುದು ನಾವು ಅಲ್ಲಿನ ಜಲಪಾತಗಳ ದರ್ಶನ ಪಡೆಯಲು ಹೊರಟಾಗ. ಹೆಬ್ರಿಯಿಂದ ಕೆಲವೇ ಕಿಲೋ ಮೀಟರ್ ದೂರವಿದೆ. ಇಲ್ಲಿನ ಜಲಪಾತಗಳನ್ನು ವೀಕ್ಷಿಸಲು ಪೋಲಿಸ್ ಠಾಣೆಯ ಅನುಮತಿ ಪಡೆಯುವುದು ಕಡ್ಡಾಯ! ಇವೆಲ್ಲವೂ ಕಾಡಿನೊಳಗಿನವು. ಕೆಲವು ರಕ್ಷಿತಾರಣ್ಯದಲ್ಲಿವೆ. ಚುಮು ಚುಮು ಮುಂಜಾವಲಿ ಇಲ್ಲಿಗೆ ಬಂದಿಳಿದೆ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಆಗುಂಬೆಯ ಕುರಿತ ಬರಹ

ವ್ಯಕ್ತಿ ವಿಶೇಷ

ಕುಣಿಯಬೇಕಿದ್ದ ಕಾಲುಗಳ ಕಟ್ಟಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಸರಿ, ಮಳೆ ನಿಂತು ಮನೆ ತಲುಪುವ ಹೊತ್ತಿಗೆ ರಾತ್ರಿ ಎಂಟರ ಹೊತ್ತು. ದೊಡ್ಡ ರಾದ್ಧಾಂತವೇ ಆಗಿತ್ತು. ‘ಯಾಕಿಷ್ಟು ತಡವಾಯ್ತು?’ ಪ್ರಶ್ನೆ ಗಡುಸಾಗಿಯೇ ಕೇಳಿಸಿತು. ಏನು ಉತ್ತರಿಸಬೇಕೆಂದು ತೋರದೆ, ಬೇಬಿಯಕ್ಕನೊಂದಿಗೆ ಪಿಚ್ಚರ್ ನೋಡುವುದಕ್ಕೆ ಹೋಗಿದ್ದೆ ಎಂದುಬಿಟ್ಟೆ. ನಂತರ ಕೇಳಿದ್ದು, ಕೆನ್ನೆಯ ಮೇಲೆ ಬಿದ್ದ ಛಟಾರ್ ಎಂಬ ಏಟಿನ ದನಿಯಷ್ಟೇ! ‘ಹೇಳದೆ ಕೇಳದೆ ಇನ್ನೆಲ್ಲಿಯೂ ಹೋಗಕೂಡದು. ಡಾನ್ಸ್ ಕ್ಲಾಸ್ ಸೇರಿಸಿಯೇ ತಪ್ಪು ಮಾಡಿದೆ’ ಎಂದು ಹೇಳಿದ್ದರೆ ಅತ್ತು ಸುಮ್ಮನಾಗುತ್ತಿದ್ದೆ. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನಾರನೆಯ ಕಂತು

ಸಂಪಿಗೆ ಸ್ಪೆಷಲ್

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

ಅಂಗಡಿ ಎಂದರೆ ಒಂದು ಗುಡಿಸಲು. ಅದಕ್ಕೆ ಸಿನಿಮಾ ಟಿಕೇಟ್ ಕೌಂಟರ್‌ನಂಥ ಒಂದೇ ಕಿಟಕಿ. ಅದರ ಹಿಂದೆ ಮೆಕ್ಸಿಕೊ ದೇಶದವರಂಥ ಕಟೆದು ಮಾಡಿದಂತಹ ಮುಖದ ಗಿರಿಜಾ ಮೀಸೆಯ ಒಬ್ಬನು ಕುಳಿತಿದ್ದ. ಅವನು ಮಾತೇ ಆಡುತ್ತಿರಲಿಲ್ಲ. ಮುಖದ ಮೇಲೆ ಯಾವ ಭಾವವೂ ಇರಲಿಲ್ಲ. ಬೆರಳಿನಲ್ಲೇ ಇಷ್ಟು ರೂಪಾಯಿ ಎಂದು ತೋರಿಸುತ್ತಿದ್ದ. ಅಷ್ಟು ರೂಪಾಯಿ ಕಿಟಕಿಯಲ್ಲಿ ತೂರಿದರೆ ಆ ಕಡೆಯಿಂದ ಒಂದು ಗ್ಲಾಸ್ ನಲ್ಲಿ ಬಿಳಿ ಬಣ್ಣದ ದ್ರವವನ್ನು ಸುರಿದುಕೊಡುತ್ತಿದ್ದ. ಷೇಕ್ಸಪೀಯರ್ ಹೆಸರಿನಲ್ಲಿ ಅದನ್ನು ಗುಟುಕರಿಸಿದೆವು. “ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ರೂಪಶ್ರೀ ಕಲ್ಲಿಗನೂರ್‌ ಬರೆದ ಎರಡು ಕವಿತೆಗಳು

"ಅತ್ತು ಹಗುರಾಗಲಾದರೂ ಹೇಳಬೇಕು ಅವುಗಳ‌ ಹೆಗಲ‌ ಮೇಲೆ ಕೈಯಿಟ್ಟು ಸುಡುಸುಡುತ್ತಿರುವ ಜಗತ್ತು ಒಂಚೂರಾದರೂ ತಂಪಾಗಬಹುದು" -ರೂಪಶ್ರೀ ಕಲ್ಲಿಗನೂರ್‌ ಬರೆದ ಎರಡು ಕವಿತೆಗಳು

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು”

ಅವರು ಹೇಳಿದ ದ್ವೀಪವಾಸಿ ಮುತ್ತುಕೋಯಾನ ಕಥೆಯನ್ನು ಕೇಳಿದರೆ ಏಕಕಾಲದಲ್ಲಿ ನಗುವೂ ವಿಷಾದವೂ ಖೇದವೂ ನಗುವೂ, ವಿಷಾದವೂ, ಖೇದವೂ, ವೈರಾಗ್ಯವೂ ಉಂಟಾಗುವ ಹಾಗೆ ಇತ್ತು. ಮುಕ್ತಿಯಾರರು ಹೇಳಿದ ಹಾಗೆ ಮುತ್ತುಕೋಯಾರಿಗೆ ಸುಮಾರು ಎಂಬತ್ತರ ಆಸುಪಾಸು ವಯಸ್ಸು ಇರಬಹುದು. ಅವರು ಕಳೆದ ಮೂವತ್ತು ವರ್ಷಗಳಿಂದ ಮಾನಸಿಕ ಅಸ್ವಸ್ಥರಂತೆ ನಟಿಸುತ್ತಾ ಮೀನು ಹಿಡಿದುಕೊಂಡು ಈ ಪುಟ್ಟ ದ್ವೀಪದಲ್ಲಿ ಬದುಕುತ್ತಿದ್ದರು. ಹಾಗೆ ನಟಿಸಿರದೆ ಇದ್ದರೆ ಇವರು ಜೈಲು ಪಾಲಾಗಬೇಕಿತ್ತು. ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು” ನಿಮ್ಮ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ