Advertisement

ಸೆರಗ ಬಿಡು ಮರುಳೆ: ಜಯಲಕ್ಷ್ಮಿ ಪಾಟೀಲ್ ಅಂಕಣ

ಅಗತ್ಯವಿಲ್ಲದಿದ್ದರೂ, ಇಷ್ಟವಿಲ್ಲದಿದ್ದರೂ, ಪಾಲಿಸಲೇಬೇಕು ಎನ್ನುವುದು ಹೇರಿಕೆಯಾದಾಗ ಸಂಪ್ರದಾಯಗಳು ಸಂಕೋಲೆಗಳಾಗಿ ಹಿಂಸಿಸತೊಡಗುತ್ತದೆ. ಈ ಹೇರಿಕೆ ಕೇವಲ ಸಮಾಜದ್ದಲ್ಲ ನಮ್ಮೊಳಗಿನದೂ ಸಹ! ‘ಸಂಪ್ರದಾಯವನ್ನು ಬಿಟ್ಟು ನಡೆದಲ್ಲಿ ಏನಾದರೂ ಅವಘಡ ಸಂಭವಿಸಿದರೆ ಗತಿ ಏನು ಮುಂದೆ?!’ ಎನ್ನುವ ನಮ್ಮೊಳಗಿನ ಭೀತಿಯೇ ಅರ್ಧ ಮನುಷ್ಯರನ್ನು, ‘ಬಿಟ್ಟರೂ ಬಿಡಲಾರದೀ ಮಾಯೆ’ ಎಂದು ತ್ರಿಶಂಕು ಸ್ಥಿತಿಯಲ್ಲಿ ನೇತಾಡುವಂತೆ ಮಾಡುತ್ತದೆ. ಕಾಲಾಂತರದಲ್ಲಿ ಅಕ್ಷರ, ಹಣ, ಸಾರಿಗೆ ಮತ್ತು ಮಾಧ್ಯಮ ಇತ್ಯಾದಿ ಅನುಕೂಲತೆ ಎಲ್ಲರಿಗೂ ಎಟುಕತೊಡಗಿದಂತೆ, ಅಷ್ಟಿಷ್ಟು ಮೌಢ್ಯಗಳು, ಸಂಪ್ರದಾಯದ ಸಂಕೋಲೆಗಳು ಸಡಿಲಗೊಂಡರೂ, ತ್ರಿಶಂಕು ಸ್ಥಿತಿಯಿಂದ ಅಷ್ಟು ಸುಲಭದಲ್ಲಿ ಬಿಡುಗಡೆ ಸಿಗುವುದಿಲ್ಲ.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣದ ಎಂಟನೆಯ ಬರಹ

Loading

ಅಂಕಣ

Latest

ಈ ಬದುಕಿನ ಪ್ರೀತಿ ಪ್ರೇಮ ಪ್ರಣಯ…: ಸುಕನ್ಯಾ ಕನಾರಳ್ಳಿ ಅಂಕಣ

ಮದುವೆಯಾಗಲು ಕಾಯುತ್ತಿದ್ದ ದಿನಗಳಲ್ಲಿ ಭ್ರಮೆ ನಿಧಾನವಾಗಿ ಕರಗುತ್ತಿತ್ತು. ಈ ನನ್ನ ಮಗ ಮತ್ತು ನನ್ನ ನಡುವೆ ಇರುವ ಸಮಾನ ಆಸಕ್ತಿಗಳಾದರೂ ಏನು ಎಂದು ಉತ್ತರವೇ ಇಲ್ಲದ ಪ್ರಶ್ನೆಗಳಲ್ಲಿ ದಿನ ಕಳೆಯುತ್ತಿತ್ತು. ಹತ್ತಿರ ಬಂದರೂ ದೇಹ ಸ್ಪಂದಿಸದಿರುವಾಗ ಬದುಕೆಲ್ಲ ಸಿಕ್ಕಿ ಬಿದ್ದು ಏನು ಗತಿ ಎಂದು ಕಳವಳಿಸಲು ಪ್ರಾರಂಭಿಸಿದ್ದೆ. ಒಮ್ಮೆ ಸುಷ್ಮಾ ಸ್ವರಾಜಳ ಅವಳಿಯಂತೆ ಕಾಣಿಸುವ ಅವನ ಅಮ್ಮನನ್ನು ಭೇಟಿಯಾದೆ. ಡಿ ಎಚ್ ಲಾರೆನ್ಸನ ಸನ್ಸ್ ಅಂಡ್ ಲವರ್ಸ್ ಕಾದಂಬರಿ ನೆನಪಿಗೆ ಬಂತು. ಈಕೆ ಉಡದ ಹಿಡಿತದವಳು. ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ನಾಲ್ಕನೆಯ ಬರಹ

ಸಾಹಿತ್ಯ

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ಎನುಗಂಟಿ ವೇಣುಗೋಪಾಲ್ ತೆಲುಗು ಕತೆ

"ಬಹಳ ದೂರ ಬಂದ ಮೇಲೆ ನೀವು ಎದುರಾದಿರಿ" ಎಂದು ಹೇಳುವುದು ಮುಗಿದ ಮೇಲೆ ಉಳಿದ ಅರ್ಧ ಗ್ಲಾಸ್ ಮದ್ಯವನ್ನು ಖಾಲಿ ಮಾಡಿದ ರಂಜಿತ್. "ಇಗೋ ಪುರಾವೆ... ನನ್ನ ಕೈ ಮೇಲಿನ ಗಾಯ" ಎನ್ನುತ್ತಾ ಬಲಗೈಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ತೋರಿಸಿದ ರಂಜಿತ್. "ಹೌದು, ಆಗ ನೀವು ಬಲಗೈಯಿಂದ ಲಿಫ್ಟ್ ಕೇಳಿದಾಗ ಬೀದಿ ದೀಪದ ಬೆಳಕಿನಲ್ಲಿ ಗಮನಿಸಿದೆ. ಆ ಗಾಯ ನೋಡಿಯೇ ಲಿಫ್ಟ್ ಕೊಟ್ಟೆ" ಎಂದ ವಾಸುದೇವ ರಾವ್. ರಂಜಿತ್ ಒಮ್ಮೆಲೇ ದಂಗಾದನು. "ಆತಂಕ ಪಡಬೇಡಿ. ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಕತೆಗಾರ ಎನುಗಂಟಿ ವೇಣುಗೋಪಾಲ್ ಅವರ ಕತೆ “ಚೋರಿ”

ಸರಣಿ

ಸಾಹಿತಿಗಳ ಶೋಷಣೆ…: ಎಚ್. ಗೋಪಾಲಕೃಷ್ಣ ಸರಣಿ

ಈಗಲೂ ಅಂದಿನ ನಮ್ಮ ಭಂಡಾಟ ನೆನೆಸಿಕೊಂಡರೆ ಈಗಲೂ ನಾಲ್ಕು ತೆಪರಾಕಿ ನಮಗೆ ನಾವೇ ಕೊಟ್ಕೋಬೇಕು ಅನಿಸುತ್ತೆ ಸರ. ಪಾಪ ಕನ್ನಡದ ಸಾಹಿತಿಗಳು ಬಡವರು, ಕಾಸು ಕಾಸಿಗೆ ಪರದಾಡುವಷ್ಟು ಬಡವರು ಅಂತ ಗೊತ್ತಿದ್ದೂ ಅವರಿಗೆ ಸಂಭಾವನೆ ಕೊಡದೆ ಬರೀ ಅರ್ಧ ಕಪ್ ಕಾಫಿ ಎರಡು ಬಿಸ್ಕತ್‌ನಲ್ಲಿ ಅವರ ನಾಲ್ಕೈದು ಗಂಟೆ ವೇಸ್ಟ್ ಮಾಡ್ತಾ ಇದ್ದೆವು ಅನ್ನುವ ಸಂಕಟ! ಮೊದಮೊದಲು ಹೀಗೆ ಸಭೆ ನಡೆಸುವಾಗ ಮುಜುಗರ ಅಂತ ಅನಿಸುತ್ತಾ ಇರಲಿಲ್ಲ. ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

ಪ್ರವಾಸ

ತುಂಬಾ ಕುಡಿದರೂ ತಲೆಗೇರದ `ತುಂಬಾ’: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

`ಮೇಘಾಲಯದ ವಾಕೆನ್ ಹಳ್ಳಿಯೊಂದರಲ್ಲಿ ನಡೆಯುವ ಬುಡಕಟ್ಟು ಉತ್ಸವದಲ್ಲಿ ಇದೇ ರೀತಿಯ ಪೇಯ ನೀಡುತ್ತಾರೆʼ ಎಂದು ಮೇಘಾಲಯದ ಗೆಳೆಯನೊಬ್ಬ ಅರುಹಿದ್ದ. ಇಲ್ಲಿನ ನಿರ್ಮಲ ಬುಡಕಟ್ಟು ಯಾವುದೇ ಪಂಗಡಕ್ಕೆ ಸೇರಿದವರಲ್ಲ. ದೇವರ ಹೆಸರು ಲಿಂಗ್‌ದಾ. ನೀವು ಕೇಳಿಲ್ಲ ಬಿಡಿ. ಭಕ್ತರು ತಮ್ಮ ಹೊಸ ಬೆಳೆಯನ್ನು ದೇವರಿಗೆ ಸಮರ್ಪಿಸುತ್ತಾರೆ. ಅಕ್ಕಿಯಿಂದ ತಯಾರಿಸಿದ ಬಿಯರೇ ಇಲ್ಲಿನ ದೇವರಿಗೆ ನೈವೇದ್ಯ. ಅದನ್ನೇ ಬಂದವರಿಗೆಲ್ಲಾ ತೀರ್ಥವಾಗಿ ಹಂಚುತ್ತಾರೆ! ಹಾಗಾಗಿ ಸರ್ವಾಂತರಯಾಮಿ ಈ ಪೇಯ! ಜಗದಗಲ ಹಬ್ಬಿದ ಈ ಸಂಪ್ರದಾಯಗಳ ತಾಯಿ ಬೇರೊಂದೆ ಅತಿಥಿ ಸತ್ಕಾರ ಮತ್ತು ಆರೋಗ್ಯ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

ವ್ಯಕ್ತಿ ವಿಶೇಷ

ಹಾರಿಹೋದ ಪ್ರಾಣಪಕ್ಷಿ!: ಜುಲೇಖಾ ಬೇಗಂ ಜೀವನ ವೃತ್ತಾಂತ

ಆವತ್ತು ಸೋಮವಾರ. ಮುರುಡಯ್ಯನವರು ಸ್ನಾನ ಮುಗಿಸಿಕೊಂಡು ಕಾಲುದಾರಿಯನ್ನು ಹತ್ತಿ ಮೇಲೆ ಬರುತ್ತಿದ್ದರು. ‘ಅಂಕದ ಪರದೆ ಜಾರಿದ ಮೇಲೆ, ನಾಟಕವಿನ್ನು ಉಳಿದಿಹುದೇ?’ ಎಂದು ಹಾಡುತ್ತಾ ಮುರುಡಯ್ಯನವರು ಹೆಬ್ಬೆಟ್ಟು ಎಡವಿ ಧೊಪ್ಪೆಂದು ಕೆಳಗೆ ಬಿದ್ದಿದ್ದರು. ಅದನ್ನು ನೋಡಿದ ಕಂಪೆನಿಯ ಕೆಲವರು ಎತ್ತುವುದಕ್ಕೆಂದು ಮುಂದಾದರು. ಆಗ ಮುರುಡಯ್ಯನವರು ಏನೂ ಇಲ್ಲವೆಂಬಂತೆ ತಲೆಯಾಡಿಸುತ್ತಾ, ‘ವಹಿಸಿದ ಪಾತ್ರ ತೀರಿದ ಮೇಲೆ’ ಎಂದಿದ್ದಷ್ಟೇ, ಪ್ರಾಣಪಕ್ಷಿ ಹಾರಿಹೋಗಿತ್ತು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ

ಸಂಪಿಗೆ ಸ್ಪೆಷಲ್

ಮಿಸ್ಟರ್‌ ಇಡ್ಲಿಯ ಮನಸಿನ ಮಾತು… : ಗುರುರಾಜ ಕುಲಕರ್ಣಿ ಪ್ರಬಂಧ

ಒಂದು ಕಾಲ್ಪನಿಕ ಸಂದರ್ಭದಲ್ಲಿ ಜಗತ್ತಿನ ಎಲ್ಲರೂ ಅಳಿದು, ಒಬ್ಬನೇ ಮನುಷ್ಯನು ಉಳಿದನೆಂದು ಕಲ್ಪಿಸಿಕೊಳ್ಳಿ. ಅವನಿಗೆ 'ಸರಳ ತಿನಿಸಾದ' ಇಡ್ಲಿಯನ್ನು ತಯಾರಿಸಲು ಸಾಧ್ಯವಾಗುತ್ತದೆಯಾ? ಊಹೂಂ.. ಇಲ್ಲ. ಯಾಕೆಂದರೆ ನನ್ನ ತಯಾರಿಕೆಯ ಪೂರ್ಣ ಚಿತ್ರಣ ಒಬ್ಬನಿಗೂ ಪೂರ್ತಿಯಾಗಿ ತಿಳಿದಿಲ್ಲ. ಎಲ್ಲರಿಗೂ ತಮ್ಮ ಭಾಗ ಮಾತ್ರ ಗೊತ್ತು.. ರೈತನಿಗೆ ಇಡ್ಲಿ ತಟ್ಟೆಯ ತಯಾರಿಕೆ ತಿಳಿದಿಲ್ಲ, ಗಣಿಗಾರನಿಗೆ ಸಾಂಬಾರಿನ ಮಸಾಲೆಯ ಕತೆ ಗೊತ್ತಿಲ್ಲ, ಇಂಧನ ಒದಗಿಸಿದವನಿಗೆ ಹುಳಿಯಾಗುವಿಕೆಯ ವಿಜ್ಞಾನ ತಿಳಿದಿಲ್ಲ. ಕೆಲವರಿಗೆ ಇಡ್ಲಿಯೆಂದರೆ ಏನೆಂದೇ ಗೊತ್ತಿಲ್ಲ! ಈ ಜನರು ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಾರೆ, ವಿಭಿನ್ನ ಭಾಷೆಗಳನ್ನು ಮಾತನಾಡುತ್ತಾರೆ, ವಿಭಿನ್ನ ಧರ್ಮಗಳನ್ನು ಪಾಲಿಸುತ್ತಾರೆ. ಗುರುರಾಜ್‌ ಕೆ. ಕುಲಕರ್ಣಿ ಪ್ರಬಂಧ ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಸಿ.ಬಿ.ಐನಳ್ಳಿ ಬರೆದ ಎರಡು ಕವಿತೆಗಳು

"ಬೆಳದಿಂಗಳ ಆ ಕಾರ್ಗತ್ತಲಲಿ ನೆನಪಾದದ್ದು ಕಲ್ಯಾಣದ ಪುಟ್ಟ ಹಣತೆ ಎದೆಯ ಕತ್ತಲೆಯೆಲ್ಲಾ ಕಳೆದು ಕೆಸರೆಲ್ಲ ಹಾಗೇ ಕರಗಿಹೋಗಿ ಹಕ್ಕಿಯಾಗಿ ಅವನಂತೆ ಏರುತ್ತಾ ಇಳಿಯುತ್ತಾ ಪ್ರೀತಿಯ ಆಗಸದಲಿ ತೇಲಾಡಿದೆ ಮೊದಲಸಲ ಲೋಕದಿ ಮನುಷ್ಯರು ಕಾಣತೊಡಗಿದರು" -ಸಿ.ಬಿ.ಐನಳ್ಳಿ ಬರೆದ ಎರಡು ಕವಿತೆಗಳು

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ಎನುಗಂಟಿ ವೇಣುಗೋಪಾಲ್ ತೆಲುಗು ಕತೆ

"ಬಹಳ ದೂರ ಬಂದ ಮೇಲೆ ನೀವು ಎದುರಾದಿರಿ" ಎಂದು ಹೇಳುವುದು ಮುಗಿದ ಮೇಲೆ ಉಳಿದ ಅರ್ಧ ಗ್ಲಾಸ್ ಮದ್ಯವನ್ನು ಖಾಲಿ ಮಾಡಿದ ರಂಜಿತ್. "ಇಗೋ ಪುರಾವೆ... ನನ್ನ ಕೈ ಮೇಲಿನ ಗಾಯ" ಎನ್ನುತ್ತಾ ಬಲಗೈಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ತೋರಿಸಿದ ರಂಜಿತ್. "ಹೌದು, ಆಗ ನೀವು ಬಲಗೈಯಿಂದ ಲಿಫ್ಟ್ ಕೇಳಿದಾಗ ಬೀದಿ ದೀಪದ ಬೆಳಕಿನಲ್ಲಿ ಗಮನಿಸಿದೆ. ಆ ಗಾಯ ನೋಡಿಯೇ ಲಿಫ್ಟ್ ಕೊಟ್ಟೆ" ಎಂದ ವಾಸುದೇವ ರಾವ್. ರಂಜಿತ್ ಒಮ್ಮೆಲೇ ದಂಗಾದನು. "ಆತಂಕ ಪಡಬೇಡಿ. ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಕತೆಗಾರ ಎನುಗಂಟಿ ವೇಣುಗೋಪಾಲ್ ಅವರ ಕತೆ “ಚೋರಿ”

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ