ನಾಗರೇಖಾ ಗಾಂವಕರ ಬರೆದ ಈ ಭಾನುವಾರದ ಕತೆ “ಸೋಡಿನಾಟ”
ನೌಕರಿ ಸೇರಿದ ಹೊಸದರಲ್ಲಿ ಅಪ್ಪನ ಉಮೇದಿಗೆ ಕಡಿಮೆ ಇರಲಿಲ್ಲ. ಸಾಯುವವರೆಗೂ ಮನೆಯ ಜವಾಬ್ದಾರಿ ನಿಭಾಯಿಸುತ್ತಾ ಬದುಕಿದ ಜೀವ ತನ್ನಪ್ಪ. ಸಾಯುವ ಹಿಂದಿನ ದಿನವೂ “ಅಪ್ಪಾ!! ಸುಸ್ತಾಗಿದೆ ನಿಂಗೆ. ಮನಿಕಾ” ಎಂದು ಹಾಸಿಗೆ ಜಾಡಿಸಿ ತಲೆದಿಂಬು ಸರಿ ಮಾಡಿಕೊಟ್ಟರೆ “ಮಾಬ್ಲೂ ಮಲಗುಲಾ ಮನೇ!! ಆ ಹಾಳೆ ಕಟ್ಟು ತಕಂಡ ಬಾ!!” ಎಂದು ತಮ್ಮ ಲೆಕ್ಕದ ಪುಸ್ತಕ ತರಿಸಿಕೊಂಡು ಆ ವರ್ಷದ ಖರ್ಚು ವೆಚ್ಚ ಬರೆದುದನ್ನು ಮತ್ತೊಮ್ಮೆ ಚೆಕ್ ಮಾಡಿದ್ದರು. “ಮಾಬ್ಲು ಗಿಡವಕ್ಕೆ ಈ ಸಲ ಗೊಬ್ಬರ ಹಾಕಬೇಕಾಗತ. ಯಾರಿಗರೂ ಹೇಳ. ಗೊಬ್ಬರ ಇದೇ ನೋಡ. ಚೌತಿ ಮುಗದ್ದೆ ಹಾಕಸೇ ಬಿಡುವಾ” ಎಂದರು.
ನಾಗರೇಖಾ ಗಾಂವಕರ ಬರೆದ ಕತೆ “ಸೋಡಿನಾಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

