ಎಲ್.ಎನ್. ಮುಕುಂದರಾಜ್ ಕವಿತೆ ಮತ್ತು ಸಮಾಜ: ಜಯಲಕ್ಷ್ಮಿ ಪಾಟೀಲ್ ಅಂಕಣ
ಮುಕುಂದರಾಜ್ ಅವರು ಈ ಕವನವನ್ನು ಬರೆದು ದಶಕಗಳೇ ಕಳೆದಿರಬಹುದು. ಆದರೆ ಸಮಾಜ, ಮನುಷ್ಯನ ಬುದ್ಧಿ, ಸ್ವಭಾವ ಮಾತ್ರ ಅವತ್ತಿಗೂ ಇವತ್ತಿಗೂ ಯಾವತ್ತಿಗೂ ಬದಲಾಗದು ಎನ್ನುವುದನ್ನು ‘ದಾರಿಯುದ್ದಕ್ಕು’ ಕವನ ತುಂಬಾ ಸಮರ್ಥವಾಗಿ ಬಿಂಬಿಸುತ್ತದೆ. ಈ ಕವಿತೆಯನ್ನು ಓದಿದ ಕೂಡಲೇ ಮುಂದಿನ ಕವಿತೆ ಓದುತ್ತೇನೆ ಎಂದರೆ ಅದು ಸಾಧ್ಯವಾಗದು. ಇದರೊಳಗೆ ಅಡಗಿದ ಅಸಹಾಯಕತೆ, ಮಾರ್ಮಿಕತೆ ಮತ್ತೆ ಮತ್ತೆ ಓದುವಂತೆ ಮಾಡುತ್ತದೆ. ಇಡೀ ಕವಿತೆ ಸರ್ರಿಯಲಿಸಂನ ಜೊತೆಗೆ ತುಸು ಗಜಲ್ ಛಾಯೆಯನ್ನೂ ಹೊತ್ತಿರುವುದು ವಿಶೇಷ. ಅಸ್ತಿತ್ವವಾದದ ನೆಲೆಯಲ್ಲಿ ನಾನು ಈ ನವ್ಯ ಕವನವನ್ನು ನೋಡುತ್ತಿದ್ದೇನೆ.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣದ ಆರನೆಯ ಬರಹ

