ಗಣೇಶ ಮೂರ್ತಿಯ ಗಿಫ್ಟ್ ಮಹಿಮೆ…: ಬಸವನಗೌಡ ಹೆಬ್ಬಳಗೆರೆ ಸರಣಿ
ಒಮ್ಮೆ ವೈದ್ಯರ ಬಳಿ ನಮ್ಮ ಕಂಪೆನಿಯ ಬಗ್ಗೆ ಹೆಚ್ಚಿಗೆ ಹೇಳಲು ಹೋಗಿ ಅವರಿಂದ ಉಗಿಸಿಕೊಂಡಿದ್ದೆ. ಚಿಕ್ಕವನಿದ್ದಾಗಿಂದಲೂ ನಾನು ಮತ್ತೊಬ್ಬರಿಂದ ಹೇಳಿಸಿಕೊಳ್ಳುವುದಾಗಲಿ, ಬಯ್ಯಿಸಿಕೊಳ್ಳುವ ಕೆಲಸ ಮಾಡಿರಲಿಲ್ಲ. ಒಂದೊಮ್ಮೆ ಈ ಕೆಲಸದಲ್ಲಿ ಯಾರಾದ್ರೂ ಏನಾದ್ರೂ ಅಂದರೆ ಕೆಲಸವನ್ನು ಬಿಟ್ಟು ಹೋಗುವಷ್ಟು ಸಿಟ್ಟು ಬರುತ್ತಿತ್ತು. ಆದರೆ ನನಗೆ ಜೀವನದಲ್ಲಿ ಸೆಟ್ಲ್ ಆಗಬೇಕೆಂಬ ಮನೋಭಿಲಾಶೆ ಇದ್ದುದರಿಂದ ಎಷ್ಟೇ ಒತ್ತಡ ಬಂದರೂ ನಾನು ಸಹಿಸಿಕೊಳ್ಳುತ್ತಿದ್ದೆ. ಆದರೆ ಚಿಕ್ಕವನಿದ್ದಾಗ ನನಗೆ ಈ ಮನೋಸ್ಥಿತಿ ಇರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತನೆಯ ಕಂತು ನಿಮ್ಮ ಓದಿಗೆ

