Advertisement

ಪಿಯುಸಿಯ ಕಡುಕಷ್ಟದ ಆ ದಿನಗಳು….: ಬಸವನಗೌಡ ಹೆಬ್ಬಳಗೆರೆ ಸರಣಿ

ನನ್ನ ರೂಮಿನಲ್ಲಿ ಬೇರೆ ಬೇರೆ ಕಾಲೇಜಿನ ಹುಡುಗರು ಇದ್ದರು. ನಾವು ಮಧ್ಯಾಹ್ನ ಹಸಿವನ್ನು ನೀಗಿಸಿಕೊಳ್ಳಲು ಸಾಮಾನ್ಯವಾಗಿ ಕ್ರೀಂ ಬನ್ ತಿನ್ನುತ್ತಿದ್ದೆವಾದರೂ ಕೆಲವೊಮ್ಮೆ ಸುಖ ಸಾಗರ ಹೋಟೆಲ್ಲಿಗೆ ಇಡ್ಲಿ ತಿನ್ನೋಕೆ ಹೋಗ್ತಿದ್ವಿ. ಇಲ್ಲಿನ ಸಾಂಬಾರ್ ತುಂಬಾ ಚೆನ್ನಾಗಿರೋದು. ನಮಗೆ ಜಾಸ್ತಿ ಇಡ್ಲಿ ತಿನ್ನೋಕೆ ದುಡ್ಡು ಇಲ್ಲದೇ ಇರುತ್ತಿದ್ದರಿಂದ ಎರಡೇ ಇಡ್ಲಿ ತಿನ್ತಾ ಇದ್ದೆವು. ಆದರೆ ಸಾಂಬಾರನ್ನು ನಾವೇ ಹಾಕಿಕೊಳ್ಳುವ ವ್ಯವಸ್ಥೆ ಅಲ್ಲಿದ್ದುದ್ದರಿಂದ ಇಡ್ಲಿಗಿಂತ ಸಾಂಬಾರನ್ನೇ ನಾವು ಹೆಚ್ಚು ಬಡಿಸಿಕೊಂಡು ತಿನ್ನುತ್ತಿದ್ದೆವು. ಹಸಿವೆಂಬುದು ಬಹಳ ಕೆಟ್ಟದ್ದು. ಇದನ್ನು ಅನುಭವಿಸಿದವರಿಗೇ ಗೊತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೈದನೆಯ ಕಂತು ನಿಮ್ಮ ಓದಿಗೆ

Loading

ಅಂಕಣ

Latest

ಅನಿವಾಸಿಗಳಿಗೆ “ಇಳೆಯ” ಸಂಗೀತದ ಹಿತ: ಡಾ. ವಿನತೆ ಶರ್ಮಾ ಅಂಕಣ

ಬ್ಯಾಂಡ್ ಹೊಂದಿರುವ ಸಂಗೀತ ವಾದ್ಯಗಳ ವೈವಿಧ್ಯತೆ, ತಬಲಾ ಬಾರಿಸುವ ನಿಪುಣತೆ, ಕೊಳಲು ಊದುವ ಮಾಧುರ್ಯ, ವಯಲಿನ್ ನುಡಿಸುವ ತನ್ಮಯತೆ, ಕೀಬೋರ್ಡ್ ಮೇಲೆ ನಲಿದಾಡುವ ಬೆರಳುಗಳ ಚಾಕಚಕ್ಯತೆ, ಎಲ್ಲವೂ ಚೊಕ್ಕವಾಗಿ ಚೆಂದೆನಿಸಿತ್ತು. ನಾನು ಇದೆ ಮೊದಲ ಬಾರಿ ಎಲೆಕ್ಟ್ರಿಕ್ ತಬಲಾ ನೋಡಿದ್ದು, ಬೆರಗಾಗಿದ್ದು. ಅದನ್ನು ಬಾರಿಸುತ್ತಿದ್ದ ಯುವಕ ಕಾರ್ಯಕ್ರಮವನ್ನು ನಿರ್ದೇಶಿಸುತ್ತಿದ್ದ ಕೂಡ. ಅವಲ್ಲದೆ, ಇನ್ನಿಬ್ಬರು ಎರಡು ಶಾಸ್ತ್ರೀಯ ತಬಲಾಗಳನ್ನೂ ಬಾರಿಸುತ್ತಿದ್ದರು. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

ಸಾಹಿತ್ಯ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಬಟ್ಟೆ ಅಂಗಡಿಯಲ್ಲಿದ್ದ ಸುಮುಖ ಪ್ಯಾಂಟೊಂದರ ಕಡೆಗೆ ಕೈ ತೋರಿಸಿದ್ದ. ಬಟ್ಟೆ ತೋರಿಸುತ್ತಿದ್ದ ಯುವತಿ ಇವನು ಕೈತೋರಿಸಿದೆಡೆಗೆ ನೋಡಿದಳು. ಆರು ಜೇಬುಗಳು, ಸುತ್ತಮುತ್ತೆಲ್ಲಾ ಉದ್ದುದ್ದ ಬಳ್ಳಿ ಬೆಳೆದಂತಿದ್ದ ಗಿಲಿಗಿಲಿ ಪ್ಯಾಂಟೊಂದು ಅಲ್ಲಿತ್ತು. ಅದು ಸುಮುಖ ಯಾವಾಗಲೂ ಹೋಗುತ್ತಿದ್ದ ಬಟ್ಟೆ ಅಂಗಡಿ. ಅದರ ಮಾಲೀಕರಿಂದ ಹಿಡಿದು ಎಲ್ಲರನ್ನೂ ಪರಿಚಯವಿತ್ತು ಸುಮುಖನಿಗೆ. ಈಗ ಬಟ್ಟೆ ತೋರಿಸುತ್ತಿದ್ದ ಯುವತಿಯೂ ಸಹ ಇವನ ಪರಿಚಯದವಳೇ. ಡಾ. ವಿಶ್ವನಾಥ ಎನ್ ನೇರಳಕಟ್ಟೆ ಕತೆ “ಸುಮುಖ ಮತ್ತು ಗಾಂಧಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಸರಣಿ

ಕಿಶೋರಿ ತರಬೇತಿಯ ಸುತ್ತಮುತ್ತ: ಅನುಸೂಯ ಯತೀಶ್ ಸರಣಿ

ಕಿಶೋರಿ ತರಬೇತಿಯ ಪ್ರಮುಖ ಆಶಯ ಹದಿಹರೆಯದ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳದ ವಿವಿಧ ರೂಪಗಳನ್ನು ಪರಿಚಯಿಸುವುದು ಮತ್ತು ಮಕ್ಕಳ ಸಾಗಾಟದ ಬಗ್ಗೆ ಎಚ್ಚರಿಕೆ ಮೂಡಿಸುವುದು. ಆ ವಯೋಮಾನದ ಮಕ್ಕಳಿಗೆ ಏನು ತಿಳಿದಿರುವುದಿಲ್ಲ ಎಂದು ಭಾವಿಸಿದ್ದೆವು. ಆದರೆ ನಮ್ಮೆಲ್ಲರ ನಿರೀಕ್ಷೆಗಳು ಸುಳ್ಳಾದವು. ಮಕ್ಕಳ ಸಾಗಾಟ ಏಕೆ ಮಾಡುತ್ತಾರೆ ಎಂದಾಗ ಬಂದು ಉತ್ತರಗಳು ಇಂದಿನ ಮಕ್ಕಳು ತುಂಬಾ ಪ್ರಬುದ್ಧರಾಗಿದ್ದಾರೆ ಎಂಬ ಸಂದೇಶ ನೀಡುತ್ತಿದ್ದವು. ಅನುಸೂಯ ಯತೀಶ್ "ಬೆಳೆಯುವ ಮೊಳಕೆ" ಸರಣಿ

ಪ್ರವಾಸ

ಶಿಕ್ಷಣದ ರೀತಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಗುವಿನ ಸಾಮರ್ಥ್ಯ, ಒಲವು, ಮನೋಧರ್ಮಗಳನ್ನು ತಿಳಿಯುವ ಭಾಷೆ, ಗಣಿತಕ್ಕೆ ನಂತರದ ಸ್ಥಾನ, ಮೊದಲು ಮಗು ಭಾವನಾತ್ಮಕವಾಗಿ ಹೇಗಿದೆಯೆಂದು ತಿಳಿದು, ಅಂದಾಜು ಮಾಡಿ ಪೋಷಕರಿಗೆ ತಿಳಿಸುತ್ತಾರೆ. ತನ್ನ ವಯಸ್ಸಿನವರೊಡನೆ ಹೇಗೆ ಸಂವಹನ ಮಾಡುತ್ತದೆ, ಒಂದು ತಂಡದ ಸದಸ್ಯನಾಗಿ ಹೇಗೆ ಕೆಲಸ ಮಾಡುತ್ತದೆ, ನೆರವು ನೀಡಬಲ್ಲದೆ, ನೆರವು ಪಡೆಯಬಲ್ಲದೆ, ಇತರರ ಸಾಮರ್ಥ್ಯವನ್ನು ಗೌರವಿಸಬಲ್ಲದೆ, ತನ್ನ ನಿಲುವನ್ನು ಇತರರ ಮೇಲೆ ಹೇರದೆ ತರ್ಕಬದ್ಧವಾಗಿ ವಿವರಿಸಬಲ್ಲದೆ, ತಪ್ಪನ್ನು ತಿದ್ದಿಕೊಳ್ಳಬಲ್ಲದೆ, ನಿರಾಶೆ, ವೈಫಲ್ಯಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ, ಅನ್ಯ ಸಂಸ್ಕೃತಿ, ಹಿನ್ನೆಲೆಯಿಂದ ಬಂದ ಮಕ್ಕಳನ್ನು ಹೇಗೆ ಕಾಣುತ್ತದೆ… ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ”

ವ್ಯಕ್ತಿ ವಿಶೇಷ

ಭಾವೈಕ್ಯ ನಿಧಿ ಜಯದೇವ ಜಗದ್ಗುರುಗಳ ಘನ ವ್ಯಕ್ತಿತ್ವ: ರಂಜಾನ್ ದರ್ಗಾ ಬರಹ

ಶಿಕ್ಷಣದ ಮೂಲಕವೇ ಸಮಾಜದ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂಬುದು ಅವರ ದೃಢನಿರ್ಧಾರವಾಗಿತ್ತು. ಸಂಚಾರ ಕಾಲದಲ್ಲಿ ಭಕ್ತರು ನೀಡಿದ ಕಾಣಿಕೆಗಳನ್ನು ಸಂಗ್ರಹಿಸಿ ವಿದ್ಯಾಪ್ರಸಾರಕ್ಕೆ ವಿನಿಯೋಗಿಸುವ ಮೂಲಕ ಶಿಕ್ಷಣದಲ್ಲಿ ಕ್ರಾಂತಿಯನ್ನೇ ಮಾಡಿದರು. ಈ ಶಿಕ್ಷಣದ ಸೌಲಭ್ಯವನ್ನು ಬೇರೆ ಧರ್ಮಗಳ ಬಡವರಿಗೂ ದೊರೆಯುವಂತೆ ನೋಡಿಕೊಂಡರು. ಜಯದೇವ ಜಗದ್ಗುರುಗಳ ೬೮ನೇ ವರ್ಷದ ಸ್ಮರಣೋತ್ಸವದ (ಅಕ್ಟೋಬರ್‌ ೨) ಸಂದರ್ಭದಲ್ಲಿ ಅವರ ಕುರಿತು ರಂಜಾನ್‌ ದರ್ಗಾ ಬರಹ ನಿಮ್ಮ ಓದಿಗೆ

ಸಂಪಿಗೆ ಸ್ಪೆಷಲ್

ಹಾಸ್ಯದ ಹೊಂಬಿಸಿಲು ಹಳಿಸುತ್ತಿದೆಯೇ?: ಡಾ. ರಾಜೇಂದ್ರಕುಮಾರ್‌ ಮುದ್ನಾಳ್ ಬರಹ

ಮಾತು 'ಮನೆ' ಕಟ್ಟಬೇಕು, ಮಾತು ಮೌನವಾಗಬೇಕು. ಮಾತು 'ಮಮತೆ'ಯಾಗಬೇಕು ಮಾತು 'ಹಾಸ್ಯದ ಮನ್ವಂತರ 'ಸೃಷ್ಟಿಸಬೇಕು. ಡಿವಿಜಿ ಹೇಳುವಂತೆ 'ನಗು ನಗುವ ಕಣ್ಣುಗಳಿಗೆ ಹೊಗೆಯ ನೂದಲು ಬೇಡ 'ಎಂಬ ಮಾತು ನೆನಪಿಸಿಕೊಳ್ಳಬೇಕು. ಹಾಸ್ಯ 'ವಿಕಾಸ' ವಾಗಬೇಕೇ ವಿನಹ ಕಸದ ಬುಟ್ಟಿಯಾಗಬಾರದಲ್ಲವೇ? ನಗುವಿನ ಕನಸುಗಳ ಮನೆಯಲ್ಲಿ ಕಲ್ಲು ಬೀಳದೆ ಕಲ್ಲು ಕೂಡ ಕರಗುವಂತ ನಗುವನ್ನು ಸೃಷ್ಟಿಸುವಂತಹ ನಗೆ ಹಬ್ಬ ನಮ್ಮದಾಗಬೇಕು. ಟಿ.ವಿ. ವಾಹಿನಿಗಳು ಬಿತ್ತರಿಸುತ್ತಿರುವ ಹಾಸ್ಯ ಕಾರ್ಯಕ್ರಮಗಳ ಗುಣಮಟ್ಟದ ಕುರಿತು ಡಾ. ರಾಜೇಂದ್ರಕುಮಾರ್‌ ಮುದ್ನಾಳ್ ಬರಹ

ಈ ದಿನದ ಚಿತ್ರ

ಪುನೀತ್‌ ಕಬ್ಬುರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಪುನೀತ್ ಕಬ್ಬುರ್. ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ನವರು. ನೀನಾಸಂ ಪದವೀಧರರಾಗಿರುವ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಂಗಭೂಮಿ ಮತ್ತು ಸಿನಿಮಾ ನಿರ್ದೇಶನ ವಿಭಾಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಗೀತಾ ಹೆಗಡೆ ಬರೆದ ಈ ದಿನದ ಕವಿತೆ

"ಯಾವ ಯುಗಭಿತ್ತಿಯಲಿ ಮೂಡಿತೀ ತೇಜ ಧರ್ಮನೇಗಿಲು ಉತ್ತ ಭೌಮಬೀಜ ಮೊಳೆತು ಹೆಮ್ಮರವಾಗಿ, ಭಕ್ತಿಬಾಂದಳದಲ್ಲಿ ಬಿತ್ತರಿಸಿತೋ ಭಾವಸೋಜಿಗವಾಗಿ, ಅಂಕುರದ ಒಳಗಣ್ಣು ಚಿತ್ತದಾಕಾಶವನೆ ಎತ್ತರಿಸಿತೋ"- ಗೀತಾ ಹೆಗಡೆ ಬರೆದ ಈ ದಿನದ ಕವಿತೆ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಬಟ್ಟೆ ಅಂಗಡಿಯಲ್ಲಿದ್ದ ಸುಮುಖ ಪ್ಯಾಂಟೊಂದರ ಕಡೆಗೆ ಕೈ ತೋರಿಸಿದ್ದ. ಬಟ್ಟೆ ತೋರಿಸುತ್ತಿದ್ದ ಯುವತಿ ಇವನು ಕೈತೋರಿಸಿದೆಡೆಗೆ ನೋಡಿದಳು. ಆರು ಜೇಬುಗಳು, ಸುತ್ತಮುತ್ತೆಲ್ಲಾ ಉದ್ದುದ್ದ ಬಳ್ಳಿ ಬೆಳೆದಂತಿದ್ದ ಗಿಲಿಗಿಲಿ ಪ್ಯಾಂಟೊಂದು ಅಲ್ಲಿತ್ತು. ಅದು ಸುಮುಖ ಯಾವಾಗಲೂ ಹೋಗುತ್ತಿದ್ದ ಬಟ್ಟೆ ಅಂಗಡಿ. ಅದರ ಮಾಲೀಕರಿಂದ ಹಿಡಿದು ಎಲ್ಲರನ್ನೂ ಪರಿಚಯವಿತ್ತು ಸುಮುಖನಿಗೆ. ಈಗ ಬಟ್ಟೆ ತೋರಿಸುತ್ತಿದ್ದ ಯುವತಿಯೂ ಸಹ ಇವನ ಪರಿಚಯದವಳೇ. ಡಾ. ವಿಶ್ವನಾಥ ಎನ್ ನೇರಳಕಟ್ಟೆ ಕತೆ “ಸುಮುಖ ಮತ್ತು ಗಾಂಧಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು


ನಮ್ಮ ಫೇಸ್ ಬುಕ್


ನಮ್ಮ ಟ್ವಿಟ್ಟರ್



ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ


ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ