ಕಾಸರವಳ್ಳಿ, ಕಾಯ್ಕಿಣಿ ಮತ್ತು ಟ್ರಾಫಿಕ್!: ಸುಕನ್ಯಾ ಕನಾರಳ್ಳಿ ಅಂಕಣ
ನಮ್ಮ ಅಪಾರ್ಟ್ಮೆಂಟಿನ ತನಕವೂ ಇದ್ದ ಪೊಲೀಸರನ್ನು ಕಂಡಾಗ ಮಾತ್ರ ಇದು ಜಯಂತ ಎಫೆಕ್ಟ್ ಅಲ್ಲ ಅಂತ ಅರಿವಾಗಿತ್ತು. ಸೆಕ್ಯೂರಿಟಿ ಹತ್ತಿರ ನಿಲ್ಲಿಸಿ ಏನ್ರೀ ಇದು ಅವಾಂತರ ಎಂದು ವಿಚಾರಿಸಿದೆ. ‘ಅಯ್ಯೋ, ಮೇಡಮ್. ಸಿಎಂ ಬರ್ತಾ ಇದಾರೆ. ಪಕ್ಕದ ಹೋಟೆಲ್ಲಿನಲ್ಲಿ ಪ್ರಜಾವಾಣಿ ವಾರ್ಷಿಕ ಸಾಧಕಿಯರಿಗೆ ಅಭಿನಂದನೆ ಸಮಾರಂಭ ಇದೆ. ನಿಮ್ಮ ಹೆಸರು ಸಹ ಒಂದಲ್ಲಾ ಒಂದು ದಿನ ಬರುತ್ತೆ ನೋಡ್ತಾ ಇರಿ,’ ಎಂದು ರೇಗಿಸಿದಾಗ, ‘ಆ ಹೊತ್ತಿಗೆ ನಾನು ಇರೊಲ್ಲ. ಇದ್ದರೂ ಹೋಗೊಲ್ಲ,’ ಎಂದು ಉಡಾಫೆಯಿಂದ ನಕ್ಕು ಗೇಟನ್ನು ದಾಟಿ ಒಳಹೊಕ್ಕು ಸಮಾಧಾನದ ನಿಟ್ಟುಸಿರು ಬಿಟ್ಟೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತೆರಡನೆಯ ಬರಹ


