Advertisement

ಹುಲಿವೇಷ:  ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಎರಡು ಮೂರು ಅಂಗಡಿಗೆ ಹೋಗಿ ವಾಪಾಸು ಬರುವಾಗ ಆ ಸಣ್ಣ ಹುಲಿಯನ್ನು ಹಿಡಿದುಬಿಟ್ಟೆ! ಒಂದು ಕ್ಷಣ ಹುಲಿ ಹಿಡಿದ ವೀರನ ಗತ್ತು ಗಾಂಭೀರ್ಯ ನನ್ನೊಳಗೆ ಹರಿಯಿತು. ಬೆದರಿ ಬೆವೆತು ನನ್ನ ಹಿಡಿತದಿಂದ ಪಾರಾಗಲು ಒದ್ದಾಡುತಿತ್ತು. ನೋಡಿದರೆ ಯಾರಾದರೂ ಹೇಳಬಹುದಿತ್ತು ಇದು ಫ್ರೊಫೆಷನಲ್ ಹುಲಿ ಅಲ್ಲ ಅಂತ. ಮುಖದ ಗೆರೆಗಳಲ್ಲಿ ಮಾತ್ರ ಇದು ಹುಲಿವೇಷ ಅಂತ ಗುರುತಿಸಬಹುದಾದಷ್ಟು ಮಾತ್ರ ಬಣ್ಣವನ್ನು ಹಚ್ಚಿಕೊಂಡು ಮೈಯಲ್ಲಿನ ಪಟ್ಟೆ ಬೇರೆ ಯಾವುದೊ ಪ್ರಾಣಿಯನ್ನು ಹೋಲುತ್ತಿತ್ತು. ಹೇಗೆ ಮಾತಾಡಿಸಿದರೂ ಹುಲಿಯ ಬಾಯಿಂದ ಒಂದು ಶಬ್ದವೂ ಹೊರಬರಲಿಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಹನ್ನೊಂದನೆಯ ಬರಹ

Loading

ಅಂಕಣ

Latest

ತೇಜಸ್ವಿ ನಮ್ಮನ್ನಗಲಿದ ತಿಂಗಳಲ್ಲಿ, ಅವರಿದ್ದ ಊರಿನಲ್ಲಿ…: ಸುಕನ್ಯಾ ಕನಾರಳ್ಳಿ ಅಂಕಣ

ಭಾಷೆ ಅರ್ಥ ಮಾಡಿಸುವುದಕ್ಕಿಂತ ಅಪಾರ್ಥಕ್ಕೆ ಹಾದಿಯನ್ನು ಬಿಚ್ಚುತ್ತದೆ ಎನ್ನುವುದು ನನಗೆ ಗೊತ್ತು. ಕಲೆಯ ಸೃಷ್ಟಿಗೆ ಗ್ರಾಮೀಣ ಮತ್ತು ಪ್ರಕೃತಿ ತೆರೆದುಕೊಂಡಷ್ಟು ನಗರ ಮತ್ತು ಆಧುನಿಕ ತೆರೆದುಕೊಳ್ಳುವುದಿಲ್ಲವೊ ಏನೊ ಅಂತಷ್ಟೇ ಹೇಳಬೇಕಿತ್ತು. ಯಾಕೆಂದರೆ ಗ್ರಾಮೀಣ ಮತ್ತು ಪ್ರಕೃತಿಗಳಲ್ಲಿ ಸೌಂದರ್ಯ ಇರುತ್ತದೆ. ನಾವು ಕ್ಲಿಕ್ಕಿಸಲು ಮಾಲ್‌ಗೆ ಹೇಗೆ ಹೋಗುವುದಿಲ್ಲವೋ ಹಾಗೆಯೇ ಸ್ಲಮ್ಮಿಗೂ ಹೋಗುವುದಿಲ್ಲ. ಅದು ಫೋಟೋಗ್ರಾಫಿಕ್ ಸೌಂದರ್ಯವನ್ನು ಶುದ್ಧನೆಲೆಯಲ್ಲಿ ಅರ್ಥ ಮಾಡಿಕೊಳ್ಳುವ ಪರಿಣಿತರಿಗೆ ಮಾತ್ರ ಸಾಧ್ಯವೋ ಏನೋ. ಯಾಕೆಂದರೆ ಫೋಟೋಗ್ರಫಿ ಕೇವಲ ಹವ್ಯಾಸವಾದಾಗ ಕಣ್ಣಿಗೆ ಹಿತವಾದದ್ದನ್ನು ಮಾತ್ರ ಆರಿಸಿಕೊಳ್ಳುತ್ತದೆ. ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

ಸಾಹಿತ್ಯ

ನಾಗರೇಖಾ ಗಾಂವಕರ ಬರೆದ ಈ ಭಾನುವಾರದ ಕತೆ “ಸೋಡಿನಾಟ”

ನೌಕರಿ ಸೇರಿದ ಹೊಸದರಲ್ಲಿ ಅಪ್ಪನ ಉಮೇದಿಗೆ ಕಡಿಮೆ ಇರಲಿಲ್ಲ. ಸಾಯುವವರೆಗೂ ಮನೆಯ ಜವಾಬ್ದಾರಿ ನಿಭಾಯಿಸುತ್ತಾ ಬದುಕಿದ ಜೀವ ತನ್ನಪ್ಪ. ಸಾಯುವ ಹಿಂದಿನ ದಿನವೂ “ಅಪ್ಪಾ!! ಸುಸ್ತಾಗಿದೆ ನಿಂಗೆ. ಮನಿಕಾ” ಎಂದು ಹಾಸಿಗೆ ಜಾಡಿಸಿ ತಲೆದಿಂಬು ಸರಿ ಮಾಡಿಕೊಟ್ಟರೆ “ಮಾಬ್ಲೂ ಮಲಗುಲಾ ಮನೇ!! ಆ ಹಾಳೆ ಕಟ್ಟು ತಕಂಡ ಬಾ!!” ಎಂದು ತಮ್ಮ ಲೆಕ್ಕದ ಪುಸ್ತಕ ತರಿಸಿಕೊಂಡು ಆ ವರ್ಷದ ಖರ್ಚು ವೆಚ್ಚ ಬರೆದುದನ್ನು ಮತ್ತೊಮ್ಮೆ ಚೆಕ್ ಮಾಡಿದ್ದರು. “ಮಾಬ್ಲು ಗಿಡವಕ್ಕೆ ಈ ಸಲ ಗೊಬ್ಬರ ಹಾಕಬೇಕಾಗತ. ಯಾರಿಗರೂ ಹೇಳ. ನಾಗರೇಖಾ ಗಾಂವಕರ ಬರೆದ ಕತೆ “ಸೋಡಿನಾಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಸರಣಿ

ಉದ್ದಕೊಕ್ಕಿನ ಸೂರಕ್ಕಿ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಉದ್ದಕೊಕ್ಕಿನ ಸೂರಕ್ಕಿಗಳು ಉದುರೆಲೆ, ಕುರುಚಲು ಕಾಡು, ಎಸ್ಟೇಟು, ಮನೆಗಳ ಸುತ್ತಮುತ್ತಲು ಬೆಳೆದ ಹೂದೋಟಗಳಲ್ಲಿ ವಾಸ ಮಾಡುತ್ತವೆ. ಉದ್ದಕೊಕ್ಕಿನ ಸೂರಕ್ಕಿಗಳು ನೆಕ್ಟರಿನೈಡೆ ಕುಟುಂಬಕ್ಕೆ ಸೇರಿದ ಇತರ ಸೂರಕ್ಕಿಗಳಂತೆ ಮಕರಂದಪ್ರಿಯ ಹಕ್ಕಿಗಳು. ಕಾಡಿನಲ್ಲಾಗಲೀ, ಎಸ್ಟೇಟು-ಹೂದೋಟವೇ ಆಗಲೀ, ಮರಗಿಡಗಳಲ್ಲಿ ಹೂವರಳಿದರೆ ಸಾಕು, ಮಕರಂದಕ್ಕಾಗಿ ಎಲ್ಲಿದ್ದರೂ ಹಾಜರು! ಮಕರಂದವನ್ನು ಹೀರುವುದಕ್ಕಾಗಿಯೇ ಹೇಳಿಸಿ ಮಾಡಿಸಿದಂತಿರುವ, ಬಾಗಿದ ಉದ್ದವಾದ ಕೊಕ್ಕು ಮತ್ತು ಕೊಳವೆಯಂತಹ ನಾಲಿಗೆ. ಡಾ. ಎಸ್.ವಿ. ನರಸಿಂಹನ್‌ ಬರೆಯುವ "ಹಕ್ಕಿಪಕ್ಷಿ ಚಿತ್ರ ಸಂಪುಟ" ಸರಣಿಯಲ್ಲಿ ಉದ್ದಕೊಕ್ಕಿನ ಸೂರಕ್ಕಿಗಳ ಕುರಿತ ಬರಹ ಇಲ್ಲಿದೆ

ಪ್ರವಾಸ

ತುಂಬಾ ಕುಡಿದರೂ ತಲೆಗೇರದ `ತುಂಬಾ’: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

`ಮೇಘಾಲಯದ ವಾಕೆನ್ ಹಳ್ಳಿಯೊಂದರಲ್ಲಿ ನಡೆಯುವ ಬುಡಕಟ್ಟು ಉತ್ಸವದಲ್ಲಿ ಇದೇ ರೀತಿಯ ಪೇಯ ನೀಡುತ್ತಾರೆʼ ಎಂದು ಮೇಘಾಲಯದ ಗೆಳೆಯನೊಬ್ಬ ಅರುಹಿದ್ದ. ಇಲ್ಲಿನ ನಿರ್ಮಲ ಬುಡಕಟ್ಟು ಯಾವುದೇ ಪಂಗಡಕ್ಕೆ ಸೇರಿದವರಲ್ಲ. ದೇವರ ಹೆಸರು ಲಿಂಗ್‌ದಾ. ನೀವು ಕೇಳಿಲ್ಲ ಬಿಡಿ. ಭಕ್ತರು ತಮ್ಮ ಹೊಸ ಬೆಳೆಯನ್ನು ದೇವರಿಗೆ ಸಮರ್ಪಿಸುತ್ತಾರೆ. ಅಕ್ಕಿಯಿಂದ ತಯಾರಿಸಿದ ಬಿಯರೇ ಇಲ್ಲಿನ ದೇವರಿಗೆ ನೈವೇದ್ಯ. ಅದನ್ನೇ ಬಂದವರಿಗೆಲ್ಲಾ ತೀರ್ಥವಾಗಿ ಹಂಚುತ್ತಾರೆ! ಹಾಗಾಗಿ ಸರ್ವಾಂತರಯಾಮಿ ಈ ಪೇಯ! ಜಗದಗಲ ಹಬ್ಬಿದ ಈ ಸಂಪ್ರದಾಯಗಳ ತಾಯಿ ಬೇರೊಂದೆ ಅತಿಥಿ ಸತ್ಕಾರ ಮತ್ತು ಆರೋಗ್ಯ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

ವ್ಯಕ್ತಿ ವಿಶೇಷ

ಅಂದುಕೊಂಡಿದ್ದು ಆಗೇಹೋಯಿತು!: ಜುಲೇಖಾ ಬೇಗಂ ಜೀವನ ವೃತ್ತಾಂತ

ಜುಬೇದಾಬಾಯಿ ಅವರನ್ನು ಮಾಕನೂರು ಭರಮಣ್ಣ ಅವರು ಅಪಹರಿಸಲು ಸಾಧ್ಯವಿರಲಿಲ್ಲ. ಅವರು ಪಾತ್ರಕ್ಕಾಗಿ ಹುಡುಕಾಡುತ್ತಿದ್ದರು; ನಾನೂ ಕಾಯುತ್ತಿದ್ದೆ. ರೋಗಿ ಬಯಸುವುದಕ್ಕೂ ವೈದ್ಯ ಹೇಳುವುದಕ್ಕೂ ಸರಿ ಹೋದರೆ ಇನ್ನೇನು? ಖುಷಿಯಿಂದ ಕುಪ್ಪಳಿಸಿದೆ. ಎರಡು ನಿಮಿಷ ಭೂಮಿಕೆಯಲ್ಲಿ ಇರುತ್ತಿದ್ದೆನೊ ಇಲ್ಲವೊ, ಆದರೆ ಆನಂದಿಸಿದೆ. ಮಾತಿಲ್ಲದ ಮುಖ್ಯ ಪಾತ್ರ ನನಗೆ ಸಿಕ್ಕಿತಲ್ಲಾ ಎಂಬ ಸಂಭ್ರಮ. ಉಳಿದವರೆಲ್ಲ, ‘ನಿಂಗೆ ಕೊಂಬು ಬರಬಾರದವ್ವಾ’ ಎಂದು ಛೇಡಿಸುತ್ತಾ, ನಗಿಸುತ್ತಿದ್ದರು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹನ್ನೆರಡನೆಯ ಕಂತು

ಸಂಪಿಗೆ ಸ್ಪೆಷಲ್

ವಿಷ್ಣು ಪುರಾಣ: ವಿನಾಯಕ ಎಸ್.‌ ನಾಯಕ ಬರೆದ ಲಲಿತ ಪ್ರಬಂಧ

ಏನೋ ಗಂಭೀರವಾದ ವಿಷಯವಿರಬೇಕೆಂದು ಕರೆ ಸ್ವಿಕರಿಸಿದೆ, ಕರೆ ಸ್ವಿಕರಿಸುತ್ತಿದ್ದಂತೆ ವಿಷ್ಣು ಸ್ವಲ್ಪ ಗಾಬರಿಯಿಂದ ಅಣ್ಣ ಸ್ವಲ್ಪ ಅರ್ಜೆಂಟಾಗಿ ಹಡಿನಬಾಳಕ್ಕೆ ಬಂದು ಹೋಗು. ತಿಮ್ಮಪ್ಪಜ್ಜ ಬಹಳ ಸಿರಿಯಸ್ ಆಗಿದ್ದು ಇನ್ನೇನು ಒಂದೆರಡು ತಾಸು ಬದುಕಿರಬಹುದೇನೋ. ಕಣ್ಣೆಲ್ಲಾ ಮೇಲಕ್ಕೆ ಹೋಗಿ ನಾಲಿಗೆ ಹೊರಕ್ಕೆ ಬಂದಿದೆ ಅಂದ. ತಿಮ್ಮಪ್ಪಜ್ಜನ ವಿಚಾರ ಕೇಳಿ ನನಗೂ ಸ್ವಲ್ಪ ಕನಿಕರ ಹುಟ್ಟಿ ಕೂಡಲೆ ಬರುವುದಾಗಿ ಶುಗರ್, ಹಿಮೊಗ್ಲೊಬಿನ್ ಪರೀಕ್ಷಿಸುವ ಮಿಟರ್ ಹಾಗೂ ಬಿ.ಪಿ ನೋಡುವ ಮೀಟರ್ ತೆಗೆದುಕೊಂಡು ವೈದ್ಯಾಧಿಕಾರಿಗಳ ಅನುಮತಿ ಪಡೆದು ಹೊರಟೆ, ನಾನು ತಿಮ್ಮಪ್ಪಜ್ಜನ ಮನೆಗೆ ತಲುಪಿದಾಗ ಅರ್ಧ ಊರೆ ಅಲ್ಲಿ ನೆರೆದಿತ್ತು. ವಿನಾಯಕ ಎಸ್.‌ ನಾಯಕ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಪ್ರಶಾಂತ್ ಬೆಳತೂರು ಬರೆದ ಈ ದಿನದ ಕವಿತೆ

"ಬೆಂದು ಬೂದಿಯಾಗಿ ಬಿಡಬೇಕೆಂಬ ಜಿದ್ದಿಗೆ ಬೀಳದೆ ನಿನ್ನ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿ ಕಡುಕಪ್ಪು ಇದ್ದಿಲಿನಂತಾಗುವ ಕಳಂಕವನ್ನು ಸುಲಭದಲ್ಲಿ ಕಳಚಿಕೊಳ್ಳಲಾಗದೆ ಪ್ರೇಮದ ಹೆಸರಲ್ಲಿ ಸುಮ್ಮನೆ ಉರಿಯುತ್ತೇನೆ..!"-ಪ್ರಶಾಂತ್ ಬೆಳತೂರು ಬರೆದ ಈ ದಿನದ ಕವಿತೆ

ನಾಗರೇಖಾ ಗಾಂವಕರ ಬರೆದ ಈ ಭಾನುವಾರದ ಕತೆ “ಸೋಡಿನಾಟ”

ನೌಕರಿ ಸೇರಿದ ಹೊಸದರಲ್ಲಿ ಅಪ್ಪನ ಉಮೇದಿಗೆ ಕಡಿಮೆ ಇರಲಿಲ್ಲ. ಸಾಯುವವರೆಗೂ ಮನೆಯ ಜವಾಬ್ದಾರಿ ನಿಭಾಯಿಸುತ್ತಾ ಬದುಕಿದ ಜೀವ ತನ್ನಪ್ಪ. ಸಾಯುವ ಹಿಂದಿನ ದಿನವೂ “ಅಪ್ಪಾ!! ಸುಸ್ತಾಗಿದೆ ನಿಂಗೆ. ಮನಿಕಾ” ಎಂದು ಹಾಸಿಗೆ ಜಾಡಿಸಿ ತಲೆದಿಂಬು ಸರಿ ಮಾಡಿಕೊಟ್ಟರೆ “ಮಾಬ್ಲೂ ಮಲಗುಲಾ ಮನೇ!! ಆ ಹಾಳೆ ಕಟ್ಟು ತಕಂಡ ಬಾ!!” ಎಂದು ತಮ್ಮ ಲೆಕ್ಕದ ಪುಸ್ತಕ ತರಿಸಿಕೊಂಡು ಆ ವರ್ಷದ ಖರ್ಚು ವೆಚ್ಚ ಬರೆದುದನ್ನು ಮತ್ತೊಮ್ಮೆ ಚೆಕ್ ಮಾಡಿದ್ದರು. “ಮಾಬ್ಲು ಗಿಡವಕ್ಕೆ ಈ ಸಲ ಗೊಬ್ಬರ ಹಾಕಬೇಕಾಗತ. ಯಾರಿಗರೂ ಹೇಳ. ನಾಗರೇಖಾ ಗಾಂವಕರ ಬರೆದ ಕತೆ “ಸೋಡಿನಾಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ