Advertisement

ಮಿಂಚುಳಗಳು ಮತ್ತು ಕಲ್ಬಾವಿ: ಎಸ್. ಗಂಗಾಧರಯ್ಯ ಅನುಭವ ಕಥನ

ಇವರು ಯಾರೊಬ್ಬರನ್ನು ಬೈದದ್ದಾಗಲಿ, ಯಾರ ಮೇಲೆ ಆಗಲಿ ಸಿಟ್ಟು ಮಾಡಿಕೊಂಡಿದ್ದನ್ನಾಗಲಿ ನಾನು ಯಾವತ್ತೂ ಕಂಡಿರಲಿಲ್ಲ. ಚಂದದ ನಗು ಹಾಗೂ ಮೌನ ಇವರ ಬಲು ದೊಡ್ಡ ಶಕ್ತಿಗಳಾಗಿದ್ದವು. ಇನ್ನೊಬ್ಬರಿಗೆ ಭಾರವಾಗದಂತೆ ಬದುಕಬೇಕು ಅಂತ ಯಾವಾಗಲೂ ಹೇಳುತ್ತಿದ್ದ ಗೋವಿಂದಪ್ಪ ತನ್ನ ಕೈಲಾದ ಕೆಲಸವನ್ನು ಮಾಡುತ್ತಿದ್ದರು. ಅಂತೆಯೇ ಯಾರಾದರೂ ಯಾವುದಾದರೂ ಕೆಲಸವನ್ನು ಹೇಳಿದರೆ ಒಂಚೂರೂ ಬೇಸರವಿಲ್ಲದೆ ಪಾಲಿಸುತ್ತಿದ್ದರು. ಒಂಥರಾ ನಿರುಮ್ಮಳ ಜೀವಿ. ಆದರೆ ಇಂಥ ಗೋವಿಂದಪ್ಪ ನಿದ್ದೆಗೆ ಜಾರಿದಾಗ ಮಾತ್ರ ಸಹಿಸಲಸಾಧ್ಯದ ವ್ಯಕ್ತಿಯಾಗಿಬಿಡುತ್ತಿದ್ದರು. ಏಕೆಂದರೆ ಇವರು ಹೊಡೆಯುತ್ತಿದ್ದ ಗೊರಕೆಯ ಸದ್ದು ಅವರು ಮಲಗಿದ್ದ ಮನೆಯವರಿಗೆ ಮಾತ್ರವಲ್ಲ ಸುತ್ತಲ ಯಾವ ಜೀವಿಯನ್ನೂ ಬಡಪಟ್ಟಿಗೆ ಬಿಡುತ್ತಿರಲಿಲ್ಲ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಏಳನೆಯ ಕಂತು

Loading

ಅಂಕಣ

Latest

 ರಿಚರ್ಡ್ ಫೇನ್ಮನ್ – ಅದ್ಭುತ ಪ್ರತಿಭೆಯ ವಿಲಕ್ಷಣ ವಿಜ್ಞಾನಿ: ಡಾ. ಎಲ್. ಜಿ. ಮೀರಾ ಅಂಕಣ

ಇಡೀ ಜೀವನವನ್ನು ಭೌತಶಾಸ್ತ್ರದ ಅಧ್ಯಯನ ಮತ್ತು ಆರಾಧನೆಯಲ್ಲಿ ಕಳೆದ ಫೇನ್ಮನ್ ಒಬ್ಬ ಅಸಾಧ್ಯ ಕುತೂಹಲಿ ಮತ್ತು ಮಹಾತುಂಟ. ವಿಜ್ಞಾನಿ ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮೂಡುವ `ಗಂಭೀರ, ನಗಲು ಬಾರದ, ಚಿಂತನಾಪರ, ಮಿತಭಾಷಿ ವ್ಯಕ್ತಿತ್ವ’ಕ್ಕೆ ಒಂದು ವಿರುದ್ಧಪದ ಇವರು! ಸದಾ ಯಾರದಾದರೂ ಕಾಲೆಳೆಯತ್ತಾ ನಗುತ್ತಾ ನಗಿಸುತ್ತಾ, ಚಿತ್ರ ಬರೆಯಲು ಕಲಿಯುತ್ತಾ, ವಾದ್ಯ ನುಡಿಸಲು ಪ್ರಯತ್ನಿಸುತ್ತಾ, ಕ್ಯಾಬರೆ ನೃತ್ಯಗಾತಿಯರ ಜೊತೆಯಲ್ಲಿ ಸಂಭಾಷಣೆ ಮಾಡುತ್ತಾ..... ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

ಸಾಹಿತ್ಯ

ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಸ್ಲಾ..ಟ್!”

ಹನ್ನೆರಡರ ಸುಮಾರಿಗೆ ಎಲ್ಲರೂ ಒಟ್ಟಾದರು. ಸೀನಪ್ಪ ಎಲ್ಲ ರೆಡಿ ಮಾಡಿಟ್ಟಿದ್ದ; ಇನ್ನೊಂದು ಅರ್ಧ ಗಂಟೆ ಒಳಗೆ ಎಲ್ಲಾ ಮುಗಿಸಿ ಬಿಡುವ ಸೂಚನೆ ಇತ್ತು. ಆಗ ಶುರುವಾಯಿತು ಏನೋ ಗಲಿಬಿಲಿ. ಸೀನಪ್ಪ ಬಂದ “ಸಾರ್ ನಾನು ಹೊರಗಿರುತ್ತೇನೆ ನಾನಾಗಲೇ ತೋರಿಸಿದ್ದೆನಲ್ಲ ಕೌಂಟರ್ ಎರಡರಲ್ಲಿ ದೇವರಾಜ ಅನ್ನುವವರನ್ನ, ಅವರೆಲ್ಲ ಮಾಡಿಕೊಡುತ್ತಾರೆ” ಎಂದ. ಬಾಯಿಗೆ ಕೈ ಅಡ್ಡ ಇಟ್ಟು “ಲೋಕಾಯುಕ್ತರು ಬಂದಿದ್ದಾರೆ ಹಾಗಾಗಿ ಸ್ವಲ್ಪ ತಡ ಆಗಬಹುದು, ಒಂದು ಮೂತ್ತರಿಂದ ಎರಡೂ ಮೂವತ್ತು ಊಟದ ಸಮಯ. ಅದು ಕೂಡ ಸ್ವಲ್ಪ ಹಿಂದೆ ಮುಂದೆ ಆಗಬಹುದು." ವಸಂತಕುಮಾರ್ ಕಲ್ಯಾಣಿ ಬರೆದ ಕತೆ "ಸ್ಲಾ..ಟ್!" ನಿಮ್ಮ ಈ ಭಾನುವಾರದ ಓದಿಗೆ

ಸರಣಿ

ಬಾಸ್‌ಗಳು ಹೀಗಿದ್ರೆ ಎಷ್ಟು ಚೆಂದ ಅಲ್ವಾ??: ಬಸವನಗೌಡ ಹೆಬ್ಬಳಗೆರೆ ಸರಣಿ

ಒಮ್ಮೆ ಹೀಗೆ ಆಯ್ತಂತೆ: ಒಮ್ಮೆ ಒಂದು ಕಚೇರಿಯವರ ಬಳಿ ದೇವರು ಪ್ರತ್ಯಕ್ಷನಾಗಿ ‘ನಿಮಗೇನು ವರ ಬೇಕು’ ಎಂದು ಕೇಳಿದನಂತೆ. ಆಗ ಬಾಸಿಗೂ ಮೊದಲೇ ಅವರ ಸಿಬ್ಬಂದಿಯೊಬ್ಬನು ‘ನಾನು ಅಮೇರಿಕಾಗೆ ಹೋಗುವ ವರ ನೀಡು’ ಎಂದನಂತೆ. ತಕ್ಷಣ ದೇವರು ‘ತಥಾಸ್ತು’ ಎಂದನಂತೆ. ಮತ್ತೊಬ್ಬನೂ ಸಹ ‘ನಾನು ಲಂಡನ್‌ಗೆ ಹೋಗುವಂತೆ ಮಾಡು’ ಎಂದಾಗ ದೇವರು ಹಾಗೆ ಮಾಡಿದನಂತೆ. ಆಗ ಬಾಸಿನ ಸರದಿಯಲ್ಲಿ ದೇವರ ವರ ಕೇಳುವಾಗ ಅವನಿಗಿಂತ ಮುಂಚೆ ಅವರ ನೌಕರರು ವರ ಕೇಳಿದ್ದಕ್ಕೆ ಸಿಟ್ಟು ಬಂದು ಅವರಿಬ್ಬರೂ ಕಚೇರಿಗೆ ವಾಪಸ್ಸು ಬರುವ ಹಾಗೆ ಮಾಡು ಎಂದು ಕೇಳಿದನಂತೆ!! ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

ಪ್ರವಾಸ

ಮೋಹಕ ಕುದುರೆಮುಖ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಶಿಖರದ ತಲುಪಿದೆವೆನ್ನುವಾಗ ಸಣ್ಣದೊಂದು ಝರಿ ಅಡ್ಡ ಹಾಯುವುದು. ಅದನ್ನು ದಾಟಿ ಕಟ್ಟಿ ತಂದ ತಿಂಡಿ ತಿಂದು ಶಿಖರಾಗ್ರ ತಲುಪಿದೆವು. ಅಲ್ಲಿನ ಮಂಜಿನಲ್ಲಿ ಕುಣಿದು ಕುಪ್ಪಳಿಸಿದೆವು. ಶಿಖರಾಗ್ರದಿಂದ ಕಾಣುವ ಮೋಹನ ಮೋಹಕ ನೋಟಕೆ ಕಾದು ಕುಳಿತೆವು. ಒಂದೆರಡು ಬಾರಿ ಕಣಿವೆಯ ರುದ್ರ ಸೌಂದರ್ಯವನ್ನು ವೀಕ್ಷಿಸಿದೆವು. ಕುದುರೆ ಮುಖದಿಂದ ಮುಳ್ಳಯ್ಯನಗಿರಿಯ ವಿಹಂಗಮ ನೋಟ ನೋಡಬಹುದು. ಯಾವುದಕ್ಕೂ ಮಂಜು ನಮಗೆ ಅವಕಾಶವೀಯಲೇ ಇಲ್ಲ. ಮುಳ್ಳಯ್ಯನ ಗಿರಿ ಏರಿ ಕುದುರೆ ಮುಖ ಪರ್ವತ ನೋಡಿ ಪರವಶನಾದುದು ನೆನಪಿದೆ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಕುದುರೆಮುಖ ಕುರಿತ ಬರಹ

ವ್ಯಕ್ತಿ ವಿಶೇಷ

ಪ್ರೀತಿಯ ಸುಳಿಯಲ್ಲಿ ಸಿಲುಕಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ ಅವಳು ಬೇರಾರೂ ಅಲ್ಲ. ಕಂಪೆನಿಯ ಮಾಲೀಕರಾದ ಮಾಂಡ್ರೆ ಕವಿಗಳ ಮಗಳು, ಭಾಗೀರಥಿಯನ್ನೇ. ನಾನು ಹೌಹಾರಿಹೋದೆ. ಅವನೂ ಏನೂ ಸಾಮಾನ್ಯನಲ್ಲ; ಕಂಪೆನಿಯಲ್ಲಿ ಮಾಂಡ್ರೆ ಕವಿಗಳಿಗೆ ಬಲಗೈ ಆಗಿದ್ದ. ಏನೇ ಹೊಸ ನಾಟಕಗಳ ಸ್ಕ್ರಿಪ್ಟ್ ಬರೆಯುವುದಕ್ಕೆ ಜಕ್ಲಿ ಈಶ್ವರನೇ ಬರಬೇಕಿತ್ತು. ಅಕ್ಷರವಂತೂ ಅದ್ಭುತವಾಗಿತ್ತು. ‘ಕವಿಗಳಿಗೆ ವಿಷಯ ಗೊತ್ತಾ?’ ಎಂದು ಕೇಳಿದೆ. ಜಕ್ಲಿ ಈಶ್ವರ ‘ಇಲ್ಲ’ ಎಂದ. ‘ಅವರ ಮಗಳಿಗೆ, ಆ ಹುಡುಗಿಗೆ?’ ಎಂದೆ. ತಲೆಯಲ್ಲಾಡಿಸಿದ. ಅಂದರೆ ಅವಳಿಗೆ ಗೊತ್ತಿಲ್ಲದೆ ಅವಳನ್ನು ಪ್ರೀತಿಸುವುದು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೇಳನೆಯ ಕಂತು

ಸಂಪಿಗೆ ಸ್ಪೆಷಲ್

ಆಲದ  ಮರವೆಂಬ ಆಲಯದಲ್ಲಿ: ದೇವಿಕಾ ನಾಗೇಶ್‌ ಬರಹ

ವೈಜ್ಞಾನಿಕ, ಧಾರ್ಮಿಕ ಕಾರಣಗಳು ಏನೇ ಇರಲಿ. ಈ ಭೂಮಿಯಲ್ಲಿ ಇರುವ ಪ್ರತಿಯೊಂದು ಕ್ರಿಮಿಕೀಟ, ಮರ ಗಿಡ, ಪ್ರಾಣಿ ಪಕ್ಷಿಗಳು ಮನುಷ್ಯರಷ್ಟೇ ಪ್ರಮುಖರು. ಪ್ರಕೃತಿಯ ಸಮತೋಲನಕ್ಕಾಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲು ಕಾಡು ಬೇಕು ಎನ್ನುವ ಸತ್ಯ ಮನಗಂಡರೆ ಗಿಡ ಮರಗಳನ್ನು ನಾವು ಪ್ರೀತಿಸುತ್ತೇವೆ. ಹೀಗಾಗಿ ದೇವರ ಕಾಡುಗಳು, ನಾಗ ಬನಗಳು ಈ ಭೂಮಿಯಲ್ಲಿ ನಂಬಿಕೆಯ ಹೆಸರಿನಲ್ಲಿ ಬಹುಕಾಲ ಬಾಳಿ ಬಂದವು. ಆದರೆ ಇಂದು ಇವಿಷ್ಟು ಕಾಂಕ್ರೀಟ್ ಕಾಡುಗಳಾಗಿರುವುದು ನಾವು ಕಂಡ ದುರಂತ. ಆಲದ ಮರದ ಕುರಿತು ದೇವಿಕಾ ನಾಗೇಶ್‌ ಬರಹ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಸ್ಲಾ..ಟ್!”

ಹನ್ನೆರಡರ ಸುಮಾರಿಗೆ ಎಲ್ಲರೂ ಒಟ್ಟಾದರು. ಸೀನಪ್ಪ ಎಲ್ಲ ರೆಡಿ ಮಾಡಿಟ್ಟಿದ್ದ; ಇನ್ನೊಂದು ಅರ್ಧ ಗಂಟೆ ಒಳಗೆ ಎಲ್ಲಾ ಮುಗಿಸಿ ಬಿಡುವ ಸೂಚನೆ ಇತ್ತು. ಆಗ ಶುರುವಾಯಿತು ಏನೋ ಗಲಿಬಿಲಿ. ಸೀನಪ್ಪ ಬಂದ “ಸಾರ್ ನಾನು ಹೊರಗಿರುತ್ತೇನೆ ನಾನಾಗಲೇ ತೋರಿಸಿದ್ದೆನಲ್ಲ ಕೌಂಟರ್ ಎರಡರಲ್ಲಿ ದೇವರಾಜ ಅನ್ನುವವರನ್ನ, ಅವರೆಲ್ಲ ಮಾಡಿಕೊಡುತ್ತಾರೆ” ಎಂದ. ಬಾಯಿಗೆ ಕೈ ಅಡ್ಡ ಇಟ್ಟು “ಲೋಕಾಯುಕ್ತರು ಬಂದಿದ್ದಾರೆ ಹಾಗಾಗಿ ಸ್ವಲ್ಪ ತಡ ಆಗಬಹುದು, ಒಂದು ಮೂತ್ತರಿಂದ ಎರಡೂ ಮೂವತ್ತು ಊಟದ ಸಮಯ. ಅದು ಕೂಡ ಸ್ವಲ್ಪ ಹಿಂದೆ ಮುಂದೆ ಆಗಬಹುದು." ವಸಂತಕುಮಾರ್ ಕಲ್ಯಾಣಿ ಬರೆದ ಕತೆ "ಸ್ಲಾ..ಟ್!" ನಿಮ್ಮ ಈ ಭಾನುವಾರದ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ