ಕಮರಿದ ಕನಸುಗಳು…: ಜುಲೇಖಾ ಬೇಗಂ ಜೀವನ ವೃತ್ತಾಂತ
ಅಂದಹಾಗೆ, ಮಾಂಡ್ರೆ ಕವಿಗಳ ಕಂಪೆನಿಯಲ್ಲಿ ಆಗ ಬೇಬಿ ಬರುತ್ತಾಳೆಂಬುದೇ ದೊಡ್ಡ ಸುದ್ದಿ. ನನ್ನ ಮಗಳು ಬೇಬಿ ಬರುತ್ತಾಳೆ ಎಂದು ಓಡಾಡುತ್ತಿದ್ದ ಬಿ.ಪಿ.ಸಣ್ಣಪ್ಪ ಅವರ ಕಾಲು ನಿಂತಲ್ಲಿ ನಿಂತಿದ್ದೇ ಸುಳ್ಳು. ನಮಗೆಲ್ಲ ಬೇಬಿ ಅವರ ನಿಜವಾದ ಮಗಳೆಂದೇ ಎಣಿಕೆ. ಅವಳು ಬಂದರೆ ನಮ್ಮ ಕಂಪೆನಿ ಹಾಗಾಗುತ್ತದೆ, ಹೀಗಾಗುತ್ತದೆ ಎಂದೆಲ್ಲ ಹೇಳುತ್ತಿದ್ದದ್ದು ನಮಗೆ ಬೇಬಿ ಎಂದರೆ ದೇವಲೋಕದಿಂದ ಥಟ್ಟನೆ ರಾಮದುರ್ಗಕ್ಕೆ ಬಂದಿಳಿವ ದೇವತೆಯ ರೂಪದಂತೆ ಭಾಸವಾಗುತ್ತಿತ್ತು. ಒಂದೊಂದು ವಿಷಯವನ್ನು ಕೇಳಿ ಹುಬ್ಬೇರಿಸಿದಾಗೆಲ್ಲ ಬೇಬಿ ಎಂಬ ದೇವತೆಯ ಪ್ರಭಾವಳಿಗೆ ಇನ್ನಷ್ಟು ಮಿನುಗು!
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹದಿನೆಂಟನೆಯ ಕಂತು


