ಸೆರಗ ಬಿಡು ಮರುಳೆ: ಜಯಲಕ್ಷ್ಮಿ ಪಾಟೀಲ್ ಅಂಕಣ
ಅಗತ್ಯವಿಲ್ಲದಿದ್ದರೂ, ಇಷ್ಟವಿಲ್ಲದಿದ್ದರೂ, ಪಾಲಿಸಲೇಬೇಕು ಎನ್ನುವುದು ಹೇರಿಕೆಯಾದಾಗ ಸಂಪ್ರದಾಯಗಳು ಸಂಕೋಲೆಗಳಾಗಿ ಹಿಂಸಿಸತೊಡಗುತ್ತದೆ. ಈ ಹೇರಿಕೆ ಕೇವಲ ಸಮಾಜದ್ದಲ್ಲ ನಮ್ಮೊಳಗಿನದೂ ಸಹ! ‘ಸಂಪ್ರದಾಯವನ್ನು ಬಿಟ್ಟು ನಡೆದಲ್ಲಿ ಏನಾದರೂ ಅವಘಡ ಸಂಭವಿಸಿದರೆ ಗತಿ ಏನು ಮುಂದೆ?!’ ಎನ್ನುವ ನಮ್ಮೊಳಗಿನ ಭೀತಿಯೇ ಅರ್ಧ ಮನುಷ್ಯರನ್ನು, ‘ಬಿಟ್ಟರೂ ಬಿಡಲಾರದೀ ಮಾಯೆ’ ಎಂದು ತ್ರಿಶಂಕು ಸ್ಥಿತಿಯಲ್ಲಿ ನೇತಾಡುವಂತೆ ಮಾಡುತ್ತದೆ. ಕಾಲಾಂತರದಲ್ಲಿ ಅಕ್ಷರ, ಹಣ, ಸಾರಿಗೆ ಮತ್ತು ಮಾಧ್ಯಮ ಇತ್ಯಾದಿ ಅನುಕೂಲತೆ ಎಲ್ಲರಿಗೂ ಎಟುಕತೊಡಗಿದಂತೆ, ಅಷ್ಟಿಷ್ಟು ಮೌಢ್ಯಗಳು, ಸಂಪ್ರದಾಯದ ಸಂಕೋಲೆಗಳು ಸಡಿಲಗೊಂಡರೂ, ತ್ರಿಶಂಕು ಸ್ಥಿತಿಯಿಂದ ಅಷ್ಟು ಸುಲಭದಲ್ಲಿ ಬಿಡುಗಡೆ ಸಿಗುವುದಿಲ್ಲ.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣದ ಎಂಟನೆಯ ಬರಹ

