ಮಿಂಚುಳಗಳು ಮತ್ತು ಕಲ್ಬಾವಿ: ಎಸ್. ಗಂಗಾಧರಯ್ಯ ಅನುಭವ ಕಥನ
ಇವರು ಯಾರೊಬ್ಬರನ್ನು ಬೈದದ್ದಾಗಲಿ, ಯಾರ ಮೇಲೆ ಆಗಲಿ ಸಿಟ್ಟು ಮಾಡಿಕೊಂಡಿದ್ದನ್ನಾಗಲಿ ನಾನು ಯಾವತ್ತೂ ಕಂಡಿರಲಿಲ್ಲ. ಚಂದದ ನಗು ಹಾಗೂ ಮೌನ ಇವರ ಬಲು ದೊಡ್ಡ ಶಕ್ತಿಗಳಾಗಿದ್ದವು. ಇನ್ನೊಬ್ಬರಿಗೆ ಭಾರವಾಗದಂತೆ ಬದುಕಬೇಕು ಅಂತ ಯಾವಾಗಲೂ ಹೇಳುತ್ತಿದ್ದ ಗೋವಿಂದಪ್ಪ ತನ್ನ ಕೈಲಾದ ಕೆಲಸವನ್ನು ಮಾಡುತ್ತಿದ್ದರು. ಅಂತೆಯೇ ಯಾರಾದರೂ ಯಾವುದಾದರೂ ಕೆಲಸವನ್ನು ಹೇಳಿದರೆ ಒಂಚೂರೂ ಬೇಸರವಿಲ್ಲದೆ ಪಾಲಿಸುತ್ತಿದ್ದರು. ಒಂಥರಾ ನಿರುಮ್ಮಳ ಜೀವಿ. ಆದರೆ ಇಂಥ ಗೋವಿಂದಪ್ಪ ನಿದ್ದೆಗೆ ಜಾರಿದಾಗ ಮಾತ್ರ ಸಹಿಸಲಸಾಧ್ಯದ ವ್ಯಕ್ತಿಯಾಗಿಬಿಡುತ್ತಿದ್ದರು. ಏಕೆಂದರೆ ಇವರು ಹೊಡೆಯುತ್ತಿದ್ದ ಗೊರಕೆಯ ಸದ್ದು ಅವರು ಮಲಗಿದ್ದ ಮನೆಯವರಿಗೆ ಮಾತ್ರವಲ್ಲ ಸುತ್ತಲ ಯಾವ ಜೀವಿಯನ್ನೂ ಬಡಪಟ್ಟಿಗೆ ಬಿಡುತ್ತಿರಲಿಲ್ಲ.
ಎಸ್. ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಏಳನೆಯ ಕಂತು


