ಊರು ಕೇರಿ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ
ಒಮ್ಮೊಮ್ಮೆ ಈ ನೆಲದ ಋಣದ ಕುರಿತು ಯೋಚಿಸುತ್ತೇನೆ. ಅಷ್ಟು ಗಾಢವಾದ ಋಣವೇ ಅದು? ಎಲ್ಲಿದ್ದರೂ ಊರಿನತ್ತ ಕೈಬೀಸಿ ಕರೆಯುವ ಮೋಹನ ಮುರಳಿಯ ಸೆಳೆತ ನಿಜವಾಗಿಯೂ ತೀವ್ರವಾದದ್ದೇ ಹೌದು. ಅದಲ್ಲದಿದ್ದರೆ ಹೋಗುವ ಯಾವುದೇ ಪರಿಸ್ಥಿತಿಯಲ್ಲಿ ಇಲ್ಲದಿದ್ದರೂ ಮನೆಗೆ ಹೋಗ್ಬೇಕು, ನನ್ನನ್ನು ಊರಿಗೆ ಬಿಟ್ಟು ಬಾ ಅಂತ ಮತ್ತೆ ಮತ್ತೆ ಅಪ್ಪ ಹೇಳುತ್ತಿರಲಿಲ್ಲ. ನನಗಂತೂ ಬಾಲ್ಯಕ್ಕೆ ಜಿಗಿಯಬೇಕು ಅಂತ ಅನ್ನಿಸಿದ ಕೂಡಲೇ ನನ್ನೆಲ್ಲಾ ಕೆಲಸವನ್ನು ಬಿಟ್ಟು ಇಲ್ಲಿಗೆ ಬಂಡುಬಿಡುವುದು ಇತ್ತೀಚಿನ ನನ್ನಿಷ್ಟದ ಕೆಲಸಗಳಲ್ಲಿ ಒಂದಾಗಿ ಹೋಗಿದೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಹತ್ತನೆಯ ಬರಹ

