ದೇವ್ರು ಶಾಣ್ಯಾ ಅದಾನ್ರೀ… : ವಿನಾಯಕ ಅರಳಸುರಳಿ ಅಂಕಣ
ಹೌದಲ್ಲವೇ? ಎಲ್ಲಾ ಸರಿಯಾಗಿರುವ ಹೊತ್ತಿನಲ್ಲೂ ಯಾವುದೋ ಒಂದು ಕೊರಗು ನಮ್ಮನ್ನು ಕಾಡುತ್ತಲೇ ಇರುತ್ತದೆ. ಮಧ್ಯಾಹ್ನದ ನೆರಳಿನಲ್ಲಿ ಯಾರದೋ ಹುಡುಕಾಟ… ಸಂಜೆಯ ತಂಪಲ್ಲಿ ಯಾವುದೋ ನೆನಪು.. ರಾತ್ರೆಯ ಕನವರಿಕೆಯಲ್ಲಂತೂ ಎಂಥದ್ದೋ ದುಃಖ… ಇವೆಲ್ಲಾ ಏಕೆ? ಕಳೆದ ನೆನ್ನೆಗಳೇ ಅದೇಕೋ ಚಂದ ಎನಿಸುತ್ತವೆ. ಇಂದು ಎನ್ನುವುದು ಯಾವಾಗಲೂ ಕಹಿ ಕಹಿ. ಈ ಕ್ಷಣಕ್ಕೆ ಮೈ ಚಾಚಿ ಮಲಗಿರುವ ಹಂಸತೂಲಿಕಾ ತಲ್ಪದಲ್ಲೂ ಹಿಂದೆಂದೋ ಅರೆನಿದಿರೆ ಹೊತ್ತು ತಂದಿದ್ದ ಗುಡಿಸಲಿನ ಒರಟು ನೆಲದ್ದೇ ಕನವರಿಕೆ. ಮನಸ್ಸು… ಅದು ಹೀಗೇಕೆ? ಕಳೆದ ಕ್ಷಣಗಳೆಲ್ಲಾ ಎದೆಯೊಳಗೆ ಉಳಿದು ಹೋಗುವುದೇಕೆ?
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

