ಕೋಟಿ ಯೋಜನವಿರಲಿ, ದಾಟಿ ಬರುವೆನು… ಬಿಳಿಮಲೆಗೆ: ಸುಕನ್ಯಾ ಕನಾರಳ್ಳಿ ಅಂಕಣ
ಸುಖವಾದ ಊಟವಾದ ಮೇಲೆ ಸುಮಾರು ಎರಡು ರಾತ್ರಿಗಳಿಂದ ನಿದ್ದೆಯಿಲ್ಲದೇ ಬಳಲಿದ್ದ ನನ್ನ ಕಣ್ಣುಗಳನ್ನು ಇನ್ನಿಲ್ಲದಂತೆ ಅಗಲವಾಗಿ ತೆರೆದು ಇರಿಸಿದ್ದು ‘ಕೃಷ್ಣಸಂಧಾನ’ ಪ್ರಸಂಗದ ತಾಳಮದ್ದಳೆ ಕಾರ್ಯಕ್ರಮ. ಸುಮಾರು ಎರಡು ಗಂಟೆಗಳ ಕಾಲ ಆ ಭಾಷೆ, ವಾಗ್ವೈಖರಿ, ಹಾಸ್ಯ, ಅಭಿನಯಗಳು ಅದೆಂತಹ ಬೌದ್ಧಿಕ ಸಾಂತ್ವನವನ್ನು ನೀಡಿದವೆಂದರೆ ಅಮೆರಿಕಾದ ವಿಶ್ವವಿದ್ಯಾಲಯದಲ್ಲಿ ಸತತವಾಗಿ ಮೂರು ಗಂಟೆಗಳ ಉಪನ್ಯಾಸವನ್ನು ತಲ್ಲೀನಳಾಗಿ ಕೇಳಿಸಿಕೊಂಡು ನಂತರ ಅದನ್ನು ಅರಗಿಸಿಕೊಳ್ಳಲು ಮುಂದಿನ ಒಂದು ವಾರದ ಮಟ್ಟಿಗೆ ಹೆಣಗುತ್ತಿದ್ದೆನಲ್ಲ, ಇದು ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಇನ್ನೊಂದು ಹತ್ತು ದಿನವಾದರೂ ನಿನ್ನ ತಲೆಗೆ ಬಿಡುವಿರುವುದಿಲ್ಲ, ಬಿಡು ಎಂದು ಕಣ್ಣು ಹೊಡೆಯುತ್ತಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹದಿನೇಳನೆಯ ಬರಹ

