ಎಸ್. ಗಂಗಾಧರಯ್ಯ ಅನುಭವ ಕಥಾನಕ “ಕಾಡ ಕಕ್ಕೆ” ಇಂದಿನಿಂದ…
ನಾನು ಸೋಮ್ಲಾನಾಯಕ್ರನ್ನು ಎಷ್ಟು ಹಚ್ಚಿಕೊಂಡಿದ್ದೆ ಅಂದರೆ ಅವರೊಂದಿಗೆ ಕೆಲವೊಮ್ಮೆ ಅವರುಗಳು ಮಲಗುತ್ತಿದ್ದ ಆ ಹೊಂಗೆಯ ಮರದಡಿಯಲ್ಲೇ ಮಲಗುತ್ತಿದ್ದೆ. ಬೇಸಿಗೆಯ ಬೆಳದಿಂಗಳಿನಲ್ಲಿ ಆ ಏಕಾಂತ, ಆ ಹಾಲು ಚೆಲ್ಲಿದಂತ ಬೆಳದಿಂಗಳು, ಹೊಂಗೆ ಸೀಗೆ ಹೂಗಳ ಆಹ್ಲಾದಕರ ಘಮಲು ಇಂದಿಗೂ ಮಾಸಿಲ್ಲ. ಆ ತಂಗಾಳಿ, ಅದರೊಂದಿಗೆ ಅಡ್ಡಾಡುತ್ತಿದ್ದ ಯಾರದೋ ಹೊಲದಲ್ಲಿ ಹಾಕಿರುತ್ತಿದ್ದ ಮಂದೆಯಿಂದ ಕುರಿ, ಮೇಕೆಗಳ ಕೂಗು, ನಾಯಿಗಳ ಬೊಬ್ಬಿರಿಯುವಿಕೆ, ಕುರಿಗಾಹಿಗಳು ಹಾಡುತ್ತಿದ್ದ ಹಾಡುಗಳು, ಜಲ್ಲೆ ಗಾಡಿಯವರ ಅರ್ಥವಾಗದ ಭಾಷೆಯ ಮಾತುಗಳ ಸಂಗೀತ ಮಾಧುರ್ಯ ಇಂದಿಗೂ ಮರೆಯಾಗಿಲ್ಲ.
ಕನ್ನಡದ ಕತೆಗಾರ ಎಸ್. ಗಂಗಾಧರಯ್ಯ ಬರೆಯುವ ಅನುಭವ ಕಥನ “ಕಾಡ ಕಕ್ಕೆ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

