Advertisement

ಅಂಕಣ

ಎರಡು-ನಾಲಿಗೆಗಳ ನಡುವೆ ನಾನು!: ಸುಕನ್ಯಾ ಕನಾರಳ್ಳಿ ಅಂಕಣ

ಕರ್ನಾಟಕದಲ್ಲಿ ಕಲಿಯುವ ಮಕ್ಕಳ ಜೊತೆ ಒಂದು ಭಾವನಾತ್ಮಕ ಸಂಬಂಧವನ್ನು ಕಟ್ಟಿಕೊಳ್ಳುವುದಕ್ಕೆ ನನ್ನ ಕನ್ನಡ ಇನ್ನಿಲ್ಲದಂತೆ ಸಹಾಯ ಮಾಡಿದೆ. ಕೆಲವೊಮ್ಮೆ ಪರಿಕಲ್ಪನೆಗಳನ್ನ ಅರ್ಥಮಾಡಿಸುವಾಗ ಬಳಸಿಕೊಳ್ಳುತ್ತಿದ್ದ ದಿನನಿತ್ಯದ ಉದಾಹರಣೆಗಳಿಗೆ ಮತ್ತು ಹಾಸ್ಯಕ್ಕೆ ಕನ್ನಡವೇ ಜೀವವಾಗಿರುತ್ತಿತ್ತು. ಅದನ್ನೇ ಇಂಗ್ಲೀಷಿನಲ್ಲಿ ಹೇಳಿದ್ದಿದ್ದರೆ ಮಕ್ಕಳು ನಗುವುದಿರಲಿ, ನನಗೇ ಅಳು ಬರುತ್ತಿತ್ತೋ ಏನೋ. ಆದರೂ ಹೊರನಾಡಿನಿಂದ ಬಂದಿದ್ದ ಕೆಲವು ಮಕ್ಕಳಿಗೆ ಇಂಗ್ಲೀಷಿನಲ್ಲೂ ಹೇಳುವ ಪ್ರಯತ್ನ ಮಾಡುತ್ತಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹನ್ನೊಂದನೆಯ ಬರಹ

read more

ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು” ಇಂದಿನಿಂದ

ಕೇವಲ ಕೆಲ ಬೇಸಿಗೆ ಶಿಬಿರಗಳು, ಅರೆ ವಾರ್ಷಿಕ ಕೋರ್ಸುಗಳು, ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳು ಆಡುವ ನಾಟಕಗಳು ಮಾತ್ರವಿದ್ದರೆ ಸಾಲದು. ಇದನ್ನೂ ಮೀರಿ ಮಕ್ಕಳ ರಂಗಭೂಮಿ ಬೆಳೆಯಬೇಕಿದೆ. ಕೇವಲ ಕಲೆಯ ದೃಷ್ಟಿಯಿಂದ ಮಾತ್ರವಲ್ಲ, ಮಕ್ಕಳೊಳಗಿನ ಆತ್ಮವಿಶ್ವಾಸ ಹೆಚ್ಚಾಗಲು, ಭಾಷಾ ಕಲಿಕೆಗೆ, ಸ್ಪಷ್ಟ ಉಚ್ಚಾರಣೆಗೆ, ಪಾತ್ರಗಳ ಮೂಲಕ ಭಿನ್ನ ವ್ಯಕ್ತಿತ್ವಗಳನ್ನು ಅರಿಯುವುದಕ್ಕೆ, ನಾಲ್ಕು ಜನರೊಂದಿಗೆ ಬೆರೆಯುವುದಕ್ಕೆ, ಆರೋಗ್ಯಕರ ಮನಸ್ಥಿತಿ ಬೆಳೆಸಿಕೊಳ್ಳುವುದಕ್ಕೆ ಮಕ್ಕಳ ರಂಗಭೂಮಿ ಪೂರಕವಾಗಬಲ್ಲದು. ಬಣ್ಣ ಮತ್ತು ಬೆಳಕಿನ ಜೋಡಿಯ ಮೋಡಿ ಸಮಸ್ತ ಪ್ರಜೆಗಳ ಮೇಲಾಗಲಿ.
ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು”

read more

‘ಹೊಸ’ ಅಲೆ  ಮತ್ತು ‘ಹಗರಣ’: ಸುಕನ್ಯಾ ಕನಾರಳ್ಳಿ ಅಂಕಣ

‘ಸಂಸ್ಕಾರ’ ಕಾದಂಬರಿಯ ಕರ್ತೃ ಯು ಆರ್ ಅನಂತಮೂರ್ತಿ ಚಿತ್ರಕಥೆಯಲ್ಲಿ ಮಾಡಿಕೊಂಡಿದ್ದ ಬದಲಾವಣೆಗಳ ಬಗ್ಗೆ ಹೇಳಿದ್ದ ಮಾತುಗಳನ್ನು ಗಮನಿಸಿದರೆ ‘ಸ್ವ-ಸೆನ್ಸಾರಿಕರಣ’ ಅಲ್ಲಿಯೂ ಸಹ ಕೆಲಸ ಮಾಡಿದ್ದನ್ನು ಗಮನಿಸಬಹುದು. ನಾರಣಪ್ಪನ ಸಂಸ್ಕಾರ ಕಾದಂಬರಿಯ ಅರ್ಧದಲ್ಲಿಯೇ ಒಬ್ಬ ಮುಸ್ಲಿಮ್ ವ್ಯಕ್ತಿಯಿಂದ ನಡೆದು ಹೋಗಿರುತ್ತದೆ. ಆದರೆ ಚಿತ್ರ ಅದರ ಬಗ್ಗೆ ಮೌನ ತಳೆಯುತ್ತದೆ. ಈ ‘ದಿವ್ಯಮೌನ’ ಪ್ರಾಣೇಶಾಚಾರ್ಯರ ತುಮುಲಕ್ಕೆ ಇನ್ನೊಂದು ಆಯಾಮ ನೀಡುವುದರ ಜೊತೆಗೆ ಹಾಗೇನಾದರೂ ಚಿತ್ರದಲ್ಲಿ ತೋರಿಸಿದ್ದಿದ್ದರೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯೇ ಇರುತ್ತಿರಲಿಲ್ಲ ಎನ್ನುವುದೂ ನಿಜ ತಾನೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

read more

ಬದಲಾಗಿದ್ದು ಕ್ಯಾಲೆಂಡರ್ ಮಾತ್ರವೇನಾ?:  ವಿನಾಯಕ ಅರಳಸುರಳಿ ಅಂಕಣ

ಫಸ್ಟ್ ಬರುವ ನಿರೀಕ್ಷೆಯಲ್ಲಿ ಶಾಲೆ-ಕಾಲೇಜುಗಳೇ ಮುಗಿದವು. ಏಳು, ಎಂಟಕ್ಕೆ ಏಳೇಳುತ್ತ ಹಗಲುಗಳೇ ಸವೆದವು. ಕೊನೆಯ ಬೆಂಚಿನ ಹುಡುಗಿಯ ಬದುಕಿನಲ್ಲಿ ಹೊಸ ವರ್ಷ, ಗಂಡ, ಮಕ್ಕಳೂ ಬಂದಿದ್ದಾಯಿತು. ಬೈಸಿಕೊಳ್ಳುತ್ತಲೇ ಅಮ್ಮ ಎದ್ದು ಹೋದಳು. ಕೆಲಸ ಮಾಡಿಸಿಕೊಳ್ಳದೆಯೇ ಅಪ್ಪ ಹೊರಟು ಹೋದ. ಬಂಕ್ ಮಾಡುತ್ತಿರುವಾಗಲೇ ಕಾಲೇಜಿನ ಕೊನೆಯ ದಿನ ತಲುಪಿದೆವು. ಹೊಸ ಕ್ಯಾಲೆಂಡರಿನ ಮೊದಲ ಪುಟ ತಿರುವುವ ಮೊದಲೇ ಗಂಡ/ಹೆಂಡತಿಯ ಜೊತೆ ಆಗಲೇ ಮೂರು ಬಾರಿ ಜಗಳವಾಡಿಯಾಗಿದೆ. ಅದೇ ಸೋಮಾರಿತನ, ಅದೇ ಅಶ್ರದ್ಧೆ, ಅದೇ ಸುಮ್ಮನೆ ವ್ಯಯವಾಗುವ ಮುನ್ನೂರರವತೈದು ದಿನಗಳ ಮತ್ತೊಂದು ಆವರಣಕ್ಕೆ ‘ಹೊಸ ವರ್ಷ’ ಎನ್ನುವ ಹೆಸರು ಕೊಟ್ಟು ಕುಣಿಯುತ್ತ, ಕುಡಿಯುತ್ತ, ಕೇಕೆ ಹಾಕುತ್ತ ಪ್ರವೇಶಿಸಿದೆವು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

read more

ಹೊಸ, ಹಳೇ ಕಥೆಗಳಾಗುವ ನಾವು: ವಿನತೆ ಶರ್ಮ ಅಂಕಣ

ಹೊಸ ವರ್ಷದ ಮೊದಲ ದಿನದಂದು ಸಿಡ್ನಿ ಆಕಾಶದಲ್ಲಿ ಮೋಡಗಳು, ಸಣ್ಣನೆ ಮಳೆ, ಚಳಿ. ಸಮುದ್ರ ಭುಸುಗುಡುತ್ತಿತ್ತು. ಅಲೆಗಳ ರಭಸವನ್ನು ನೋಡಿದಾಗ ಮನುಷ್ಯರು ಮಾಡಿಕೊಂಡಿದ್ದ ಹಿಂದಿನ ದಿನದ ಪಾರ್ಟಿಯ ಗಮ್ಮತ್ತು ಅವಕ್ಕೆ ಇಷ್ಟವಾಗಲಿಲ್ಲವೇನೋ ಎಂಬಂತಿತ್ತು. ಅಲೆಗಳ ಹೊರಳಾಟ ಯಾಕೋ ನನ್ನಲ್ಲಿ ದುಃಖ ಉಕ್ಕಿಸಿತ್ತು. ನಗರದ ಪೂರ್ವ ತೀರದಲ್ಲಿರುವ ಸುಂದರ ಸಮುದ್ರತೀರದ ಸುಮಾರು ಮೂವತ್ತಕ್ಕೂ ಹೆಚ್ಚು ಬೀಚ್‌ಗಳನ್ನ ಮುಚ್ಚಿದ್ದರು. ಹೊಸವರ್ಷದ ಆಗಮನವನ್ನು ಅತಿಯಾಗೆ ಆಚರಿಸಲು ಹೋಗಿ ಹಲವಾರು ಕಡೆ ಸಮುದ್ರಕ್ಕಿಳಿದ್ದಿದ್ದ ಜನರು ಆಪತ್ತಿಗೀಡಾಗಿದ್ದು ವರದಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more

 ಲೋಕೋಭಿನ್ನ ರುಚಿಃ – ಲೋಕೋಭಿನ್ನ ಖುಷಿಃ!: ಎಲ್.ಜಿ. ಮೀರಾ ಅಂಕಣ

ಒಬ್ಬೊಬ್ಬರ ಖುಷಿಯ ನಿರ್ವಚನವೂ ಬೇರೆ ಬೇರೆ. ಒಬ್ಬರಿಗೆ ಮಾತಿನಲ್ಲಿ ಖುಷಿ, ಇನ್ನೊಬ್ಬರಿಗೆ ಮೌನದಲ್ಲಿ. ಒಬ್ಬರ ಖುಷಿ ಹಾಡು ಕೇಳುವುದರಲ್ಲಾದರೆ, ಇನ್ನೊಬ್ಬರ ಖುಷಿ ಪದಬಂಧ ಬಿಡಿಸುವುದರಲ್ಲಿ. ಒಬ್ಬರ ಖುಷಿ ಹೊಸರುಚಿಯ ಅಡುಗೆಗಳನ್ನು ಸವಿಯುವುದರಲ್ಲಾದರೆ ಇನ್ನೊಬ್ಬರ ಖುಷಿ ಹೊಸ ಅಡುಗೆಗಳನ್ನು ಕಲಿತು ಮಾಡುವುದರಲ್ಲಿ. ಒಬ್ಬರಿಗೆ ದೇಶವಿದೇಶ ತಿರುಗುವ ಪ್ರವಾಸ ಇಷ್ಟ, ಇನ್ನೊಬ್ಬರಿಗೆ ಮನೆಯ ಆರಾಮಕುರ್ಚಿಯಲ್ಲಿ ಕುಳಿತು ದೇಶವಿದೇಶಗಳ ಬಗ್ಗೆ ಓದುವುದು ಇಷ್ಟ! ಖುಷಿಗಳು ವೈವಿಧ್ಯಮಯ. ಆದರೆ ಇವೆಲ್ಲದರ ಮೂಲದಲ್ಲಿರುವ ಒಂದು ಪ್ರಧಾನ ಸಂಗತಿಯು ಬಹುತೇಕ ಜನರ ಗಮನಕ್ಕೆ ಬರುವುದಿಲ್ಲ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

read more

ಇಲ್ಲಿರಲಾರೆ… ಅಲ್ಲಿಗೆ ಹೋಗಲಾರೆ: ಸುಕನ್ಯಾ ಕನಾರಳ್ಳಿ ಅಂಕಣ

ಕಾಸರವಳ್ಳಿಯವರೇ ಹೇಳುವಂತೆ, ‘ಹಿಂದಿನ ಕಾಲದ ಗ್ರಾಮೀಣ ಬದುಕಲ್ಲಿ ಶಾಂತಿ ಇತ್ತು, ಸೌಹಾರ್ದತೆ ಇತ್ತು ಎನ್ನುವುದು ಒಂದು ರಮ್ಯ ಕಲ್ಪನೆ ಅಷ್ಟೇ. ಇವತ್ತಿನ ನಗರ ಕೇಂದ್ರದ ಬದುಕಿಗೆ ಹೋಲಿಸಿದಾಗ ಸ್ವಲ್ಪ ಮಟ್ಟಿನ ಸೌಹಾರ್ದತೆ ಇತ್ತು ಎನ್ನುವುದು ನಿಜವಾದರೂ ಜಾತಿ, ಅಂತಸ್ತು, ವೃತ್ತಿಯ ನೆಲೆಯಲ್ಲಿ ಅನ್ಯಾಯ, ದೌರ್ಜನ್ಯ, ಹಿಂಸೆ ನಡೆಯುತ್ತಲೇ ಇದ್ದವು.’ ಅದನ್ನೇ ನಾಗರಾಜನ ಹೆಂಡತಿ, ‘ಆ ದಿನಗಳಲ್ಲಿ ಸುಖ ಇರಲಿಲ್ಲ, ನೆಮ್ಮದಿ ಇತ್ತು. ಆದರೆ ಇವತ್ತು ಸುಖ ಇದೆ, ನೆಮ್ಮದಿ ಇಲ್ಲ’ ಎಂದು ಹೇಳುತ್ತಾಳೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಒಂಭತ್ತನೆಯ ಬರಹ

read more
ಸಾಟಿಯಿಲ್ಲದ ಬ್ಯೂಟಿ ನಿನ್ನದು, ಭೂತಾನ್!: ಸುಕನ್ಯಾ ಕನಾರಳ್ಳಿ ಅಂಕಣ

ಸಾಟಿಯಿಲ್ಲದ ಬ್ಯೂಟಿ ನಿನ್ನದು, ಭೂತಾನ್!: ಸುಕನ್ಯಾ ಕನಾರಳ್ಳಿ ಅಂಕಣ

ಭೂತಾನಿಯ ಮಂದಿಯನ್ನು ನಮ್ಮ ಗೈಡ್ ತಂಡದ ಮೂಲಕ ಸಾರಂಶೀಕರಿಸಬಹುದು ಅಂತನ್ನಿಸುತ್ತದೆ. ನಿರಾಳ ಮುಖ; ಮೆದುಮಾತು; ಸ್ತೂಪ ಕಂಡಾಗೆಲ್ಲ ಮಣಮಣ ಎಂದು ಹೇಳಿಕೊಳ್ಳುವ ಪ್ರಾರ್ಥನೆ; ಅಪಾರವಾದ ರಾಜಪ್ರೇಮ; ನಮ್ಮ ಬ್ಯಾಗುಗಳನ್ನೆಲ್ಲ ಹೊತ್ತು ಸೂಕ್ಷ್ಮವಾಗಿ ಗಮನಿಸುತ್ತಲೇ ಹಿಂದೆಯಿಂದ ಬರುವ ಆದರೆ ಸ್ವಲ್ಪ ದಣಿವಾದರೂ ದುತ್ತನೆ ಎದುರಿಗೆ ಅವತರಿಸಿ, ‘ನೀರು ಬೇಕಾ? ತಿನ್ನಲು ಏನಾದರೂ ಬೇಕಾ?’ ಎಂದು ಕೇಳುವ ಕರುಣೆ ತುಂಬಿದ ಕಣ್ಣುಗಳು… ಇತ್ಯಾದಿ ವೃತ್ತಿಪರತೆಯನ್ನೂ ಮೀರಿದ ಜನಪ್ರೀತಿ ಅಂತನ್ನಿಸಿತ್ತು. ಹೇಳಿಕೇಳಿದ್ದೆಲ್ಲದಕ್ಕೂ, ‘ಓಕೆ ಲಾ…’ ಎಂದು ಹೇಳುವ ಲಲಲಾ ರೀತಿ ಭೂತಾನ್ ಬಿಟ್ಟರೂ ನಮ್ಮನ್ನು ಹಿಂಬಾಲಿಸಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎಂಟನೆಯ ಬರಹ

read more
“ಏನು ಚಂದಮಾಮ ಕಥೆ ಹೇಳ್ತಿದೀಯಾ?”: ವಿನಾಯಕ ಅರಳಸುರಳಿ ಅಂಕಣ

“ಏನು ಚಂದಮಾಮ ಕಥೆ ಹೇಳ್ತಿದೀಯಾ?”: ವಿನಾಯಕ ಅರಳಸುರಳಿ ಅಂಕಣ

ಈ ಅವಾಂತರಗಳೆಲ್ಲಾ ಏನೇ ಆದರೂ ಬರೆಯಬೇಕು ಎಂಬ ಸ್ವಸ್ಥ ಹವ್ಯಾಸವನ್ನು ಮೊಟ್ಟಮೊದಲ ಬಾರಿಗೆ ಅದೆಷ್ಟೋ ಮಕ್ಕಳ ಎದೆಯಲ್ಲಿ ಬಿತ್ತಿದ, ಕೈ ಹಿಡಿದು ಬರೆಸಿದ, ಬರೆದಿದ್ದಕ್ಕೊಂದು ವೇದಿಕೆ ಕಲ್ಪಿಸಿದ ಶ್ರೇಯ ಈ ಎಲ್ಲ ಮಕ್ಕಳ ಪತ್ರಿಕೆಗಳಿಗೇ ಸಲ್ಲಬೇಕು. ಅವರಿಗೆ ಇಷ್ಟವಾದ ಪಾತ್ರಗಳನ್ನು ಸೃಷ್ಟಿಸಿ ಅವುಗಳ ಮುಖಾಂತರ ವಿನೋದಮಯವಾದ ಕಥೆಗಳನ್ನು ಹೆಣೆದು, ಅದರೊಳಗೇ ಕಾಣದಂತೆ ನೀತಿಗಳನ್ನು ಬೆರೆಸಿ ಉಣಬಡಿಸುತ್ತಿದ್ದ ಈ ಪತ್ರಿಕೆಗಳು ಓದಿದವರ ಮನಸ್ಸಿನಲ್ಲಿ ಇಂದಿಗೂ ಉಳಿದಿವೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ