Advertisement

ಅಂಕಣ

ಬದಲಾಗಿದ್ದು ಕ್ಯಾಲೆಂಡರ್ ಮಾತ್ರವೇನಾ?:  ವಿನಾಯಕ ಅರಳಸುರಳಿ ಅಂಕಣ

ಫಸ್ಟ್ ಬರುವ ನಿರೀಕ್ಷೆಯಲ್ಲಿ ಶಾಲೆ-ಕಾಲೇಜುಗಳೇ ಮುಗಿದವು. ಏಳು, ಎಂಟಕ್ಕೆ ಏಳೇಳುತ್ತ ಹಗಲುಗಳೇ ಸವೆದವು. ಕೊನೆಯ ಬೆಂಚಿನ ಹುಡುಗಿಯ ಬದುಕಿನಲ್ಲಿ ಹೊಸ ವರ್ಷ, ಗಂಡ, ಮಕ್ಕಳೂ ಬಂದಿದ್ದಾಯಿತು. ಬೈಸಿಕೊಳ್ಳುತ್ತಲೇ ಅಮ್ಮ ಎದ್ದು ಹೋದಳು. ಕೆಲಸ ಮಾಡಿಸಿಕೊಳ್ಳದೆಯೇ ಅಪ್ಪ ಹೊರಟು ಹೋದ. ಬಂಕ್ ಮಾಡುತ್ತಿರುವಾಗಲೇ ಕಾಲೇಜಿನ ಕೊನೆಯ ದಿನ ತಲುಪಿದೆವು. ಹೊಸ ಕ್ಯಾಲೆಂಡರಿನ ಮೊದಲ ಪುಟ ತಿರುವುವ ಮೊದಲೇ ಗಂಡ/ಹೆಂಡತಿಯ ಜೊತೆ ಆಗಲೇ ಮೂರು ಬಾರಿ ಜಗಳವಾಡಿಯಾಗಿದೆ. ಅದೇ ಸೋಮಾರಿತನ, ಅದೇ ಅಶ್ರದ್ಧೆ, ಅದೇ ಸುಮ್ಮನೆ ವ್ಯಯವಾಗುವ ಮುನ್ನೂರರವತೈದು ದಿನಗಳ ಮತ್ತೊಂದು ಆವರಣಕ್ಕೆ ‘ಹೊಸ ವರ್ಷ’ ಎನ್ನುವ ಹೆಸರು ಕೊಟ್ಟು ಕುಣಿಯುತ್ತ, ಕುಡಿಯುತ್ತ, ಕೇಕೆ ಹಾಕುತ್ತ ಪ್ರವೇಶಿಸಿದೆವು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

read more

ಹೊಸ, ಹಳೇ ಕಥೆಗಳಾಗುವ ನಾವು: ವಿನತೆ ಶರ್ಮ ಅಂಕಣ

ಹೊಸ ವರ್ಷದ ಮೊದಲ ದಿನದಂದು ಸಿಡ್ನಿ ಆಕಾಶದಲ್ಲಿ ಮೋಡಗಳು, ಸಣ್ಣನೆ ಮಳೆ, ಚಳಿ. ಸಮುದ್ರ ಭುಸುಗುಡುತ್ತಿತ್ತು. ಅಲೆಗಳ ರಭಸವನ್ನು ನೋಡಿದಾಗ ಮನುಷ್ಯರು ಮಾಡಿಕೊಂಡಿದ್ದ ಹಿಂದಿನ ದಿನದ ಪಾರ್ಟಿಯ ಗಮ್ಮತ್ತು ಅವಕ್ಕೆ ಇಷ್ಟವಾಗಲಿಲ್ಲವೇನೋ ಎಂಬಂತಿತ್ತು. ಅಲೆಗಳ ಹೊರಳಾಟ ಯಾಕೋ ನನ್ನಲ್ಲಿ ದುಃಖ ಉಕ್ಕಿಸಿತ್ತು. ನಗರದ ಪೂರ್ವ ತೀರದಲ್ಲಿರುವ ಸುಂದರ ಸಮುದ್ರತೀರದ ಸುಮಾರು ಮೂವತ್ತಕ್ಕೂ ಹೆಚ್ಚು ಬೀಚ್‌ಗಳನ್ನ ಮುಚ್ಚಿದ್ದರು. ಹೊಸವರ್ಷದ ಆಗಮನವನ್ನು ಅತಿಯಾಗೆ ಆಚರಿಸಲು ಹೋಗಿ ಹಲವಾರು ಕಡೆ ಸಮುದ್ರಕ್ಕಿಳಿದ್ದಿದ್ದ ಜನರು ಆಪತ್ತಿಗೀಡಾಗಿದ್ದು ವರದಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more

 ಲೋಕೋಭಿನ್ನ ರುಚಿಃ – ಲೋಕೋಭಿನ್ನ ಖುಷಿಃ!: ಎಲ್.ಜಿ. ಮೀರಾ ಅಂಕಣ

ಒಬ್ಬೊಬ್ಬರ ಖುಷಿಯ ನಿರ್ವಚನವೂ ಬೇರೆ ಬೇರೆ. ಒಬ್ಬರಿಗೆ ಮಾತಿನಲ್ಲಿ ಖುಷಿ, ಇನ್ನೊಬ್ಬರಿಗೆ ಮೌನದಲ್ಲಿ. ಒಬ್ಬರ ಖುಷಿ ಹಾಡು ಕೇಳುವುದರಲ್ಲಾದರೆ, ಇನ್ನೊಬ್ಬರ ಖುಷಿ ಪದಬಂಧ ಬಿಡಿಸುವುದರಲ್ಲಿ. ಒಬ್ಬರ ಖುಷಿ ಹೊಸರುಚಿಯ ಅಡುಗೆಗಳನ್ನು ಸವಿಯುವುದರಲ್ಲಾದರೆ ಇನ್ನೊಬ್ಬರ ಖುಷಿ ಹೊಸ ಅಡುಗೆಗಳನ್ನು ಕಲಿತು ಮಾಡುವುದರಲ್ಲಿ. ಒಬ್ಬರಿಗೆ ದೇಶವಿದೇಶ ತಿರುಗುವ ಪ್ರವಾಸ ಇಷ್ಟ, ಇನ್ನೊಬ್ಬರಿಗೆ ಮನೆಯ ಆರಾಮಕುರ್ಚಿಯಲ್ಲಿ ಕುಳಿತು ದೇಶವಿದೇಶಗಳ ಬಗ್ಗೆ ಓದುವುದು ಇಷ್ಟ! ಖುಷಿಗಳು ವೈವಿಧ್ಯಮಯ. ಆದರೆ ಇವೆಲ್ಲದರ ಮೂಲದಲ್ಲಿರುವ ಒಂದು ಪ್ರಧಾನ ಸಂಗತಿಯು ಬಹುತೇಕ ಜನರ ಗಮನಕ್ಕೆ ಬರುವುದಿಲ್ಲ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

read more

ಇಲ್ಲಿರಲಾರೆ… ಅಲ್ಲಿಗೆ ಹೋಗಲಾರೆ: ಸುಕನ್ಯಾ ಕನಾರಳ್ಳಿ ಅಂಕಣ

ಕಾಸರವಳ್ಳಿಯವರೇ ಹೇಳುವಂತೆ, ‘ಹಿಂದಿನ ಕಾಲದ ಗ್ರಾಮೀಣ ಬದುಕಲ್ಲಿ ಶಾಂತಿ ಇತ್ತು, ಸೌಹಾರ್ದತೆ ಇತ್ತು ಎನ್ನುವುದು ಒಂದು ರಮ್ಯ ಕಲ್ಪನೆ ಅಷ್ಟೇ. ಇವತ್ತಿನ ನಗರ ಕೇಂದ್ರದ ಬದುಕಿಗೆ ಹೋಲಿಸಿದಾಗ ಸ್ವಲ್ಪ ಮಟ್ಟಿನ ಸೌಹಾರ್ದತೆ ಇತ್ತು ಎನ್ನುವುದು ನಿಜವಾದರೂ ಜಾತಿ, ಅಂತಸ್ತು, ವೃತ್ತಿಯ ನೆಲೆಯಲ್ಲಿ ಅನ್ಯಾಯ, ದೌರ್ಜನ್ಯ, ಹಿಂಸೆ ನಡೆಯುತ್ತಲೇ ಇದ್ದವು.’ ಅದನ್ನೇ ನಾಗರಾಜನ ಹೆಂಡತಿ, ‘ಆ ದಿನಗಳಲ್ಲಿ ಸುಖ ಇರಲಿಲ್ಲ, ನೆಮ್ಮದಿ ಇತ್ತು. ಆದರೆ ಇವತ್ತು ಸುಖ ಇದೆ, ನೆಮ್ಮದಿ ಇಲ್ಲ’ ಎಂದು ಹೇಳುತ್ತಾಳೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಒಂಭತ್ತನೆಯ ಬರಹ

read more
ಸಾಟಿಯಿಲ್ಲದ ಬ್ಯೂಟಿ ನಿನ್ನದು, ಭೂತಾನ್!: ಸುಕನ್ಯಾ ಕನಾರಳ್ಳಿ ಅಂಕಣ

ಸಾಟಿಯಿಲ್ಲದ ಬ್ಯೂಟಿ ನಿನ್ನದು, ಭೂತಾನ್!: ಸುಕನ್ಯಾ ಕನಾರಳ್ಳಿ ಅಂಕಣ

ಭೂತಾನಿಯ ಮಂದಿಯನ್ನು ನಮ್ಮ ಗೈಡ್ ತಂಡದ ಮೂಲಕ ಸಾರಂಶೀಕರಿಸಬಹುದು ಅಂತನ್ನಿಸುತ್ತದೆ. ನಿರಾಳ ಮುಖ; ಮೆದುಮಾತು; ಸ್ತೂಪ ಕಂಡಾಗೆಲ್ಲ ಮಣಮಣ ಎಂದು ಹೇಳಿಕೊಳ್ಳುವ ಪ್ರಾರ್ಥನೆ; ಅಪಾರವಾದ ರಾಜಪ್ರೇಮ; ನಮ್ಮ ಬ್ಯಾಗುಗಳನ್ನೆಲ್ಲ ಹೊತ್ತು ಸೂಕ್ಷ್ಮವಾಗಿ ಗಮನಿಸುತ್ತಲೇ ಹಿಂದೆಯಿಂದ ಬರುವ ಆದರೆ ಸ್ವಲ್ಪ ದಣಿವಾದರೂ ದುತ್ತನೆ ಎದುರಿಗೆ ಅವತರಿಸಿ, ‘ನೀರು ಬೇಕಾ? ತಿನ್ನಲು ಏನಾದರೂ ಬೇಕಾ?’ ಎಂದು ಕೇಳುವ ಕರುಣೆ ತುಂಬಿದ ಕಣ್ಣುಗಳು… ಇತ್ಯಾದಿ ವೃತ್ತಿಪರತೆಯನ್ನೂ ಮೀರಿದ ಜನಪ್ರೀತಿ ಅಂತನ್ನಿಸಿತ್ತು. ಹೇಳಿಕೇಳಿದ್ದೆಲ್ಲದಕ್ಕೂ, ‘ಓಕೆ ಲಾ…’ ಎಂದು ಹೇಳುವ ಲಲಲಾ ರೀತಿ ಭೂತಾನ್ ಬಿಟ್ಟರೂ ನಮ್ಮನ್ನು ಹಿಂಬಾಲಿಸಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎಂಟನೆಯ ಬರಹ

read more
“ಏನು ಚಂದಮಾಮ ಕಥೆ ಹೇಳ್ತಿದೀಯಾ?”: ವಿನಾಯಕ ಅರಳಸುರಳಿ ಅಂಕಣ

“ಏನು ಚಂದಮಾಮ ಕಥೆ ಹೇಳ್ತಿದೀಯಾ?”: ವಿನಾಯಕ ಅರಳಸುರಳಿ ಅಂಕಣ

ಈ ಅವಾಂತರಗಳೆಲ್ಲಾ ಏನೇ ಆದರೂ ಬರೆಯಬೇಕು ಎಂಬ ಸ್ವಸ್ಥ ಹವ್ಯಾಸವನ್ನು ಮೊಟ್ಟಮೊದಲ ಬಾರಿಗೆ ಅದೆಷ್ಟೋ ಮಕ್ಕಳ ಎದೆಯಲ್ಲಿ ಬಿತ್ತಿದ, ಕೈ ಹಿಡಿದು ಬರೆಸಿದ, ಬರೆದಿದ್ದಕ್ಕೊಂದು ವೇದಿಕೆ ಕಲ್ಪಿಸಿದ ಶ್ರೇಯ ಈ ಎಲ್ಲ ಮಕ್ಕಳ ಪತ್ರಿಕೆಗಳಿಗೇ ಸಲ್ಲಬೇಕು. ಅವರಿಗೆ ಇಷ್ಟವಾದ ಪಾತ್ರಗಳನ್ನು ಸೃಷ್ಟಿಸಿ ಅವುಗಳ ಮುಖಾಂತರ ವಿನೋದಮಯವಾದ ಕಥೆಗಳನ್ನು ಹೆಣೆದು, ಅದರೊಳಗೇ ಕಾಣದಂತೆ ನೀತಿಗಳನ್ನು ಬೆರೆಸಿ ಉಣಬಡಿಸುತ್ತಿದ್ದ ಈ ಪತ್ರಿಕೆಗಳು ಓದಿದವರ ಮನಸ್ಸಿನಲ್ಲಿ ಇಂದಿಗೂ ಉಳಿದಿವೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

read more
ಸಾಮರಸ್ಯವೇ ಇಲ್ಲಿ ಸಲ್ಲುವುದು: ವಿನತೆ ಶರ್ಮ ಅಂಕಣ

ಸಾಮರಸ್ಯವೇ ಇಲ್ಲಿ ಸಲ್ಲುವುದು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಮುಂದಿನ ದಿನಗಳಲ್ಲಿ ಬಹಳಷ್ಟು ಬದಲಾವಣೆಗಳು ಬರಲಿವೆ. ಬಹುಸೂಕ್ಷ್ಮವಾಗಿ ಅವಲೋಕಿಸಿದರೆ ದಾಳಿಗೀಡಾದ ಧರ್ಮದ ಜನಸಮುದಾಯದ ದನಿಗೆ ಈಗಾಗಲೇ ಒಂದು ನಿರ್ದಿಷ್ಟ ಬಲ ಬಂದಿದೆ. ಇದು ಮತ್ತಷ್ಟು ಬೆಳೆಯುವ ಸೂಚನೆಗಳಿವೆ. ದೂರದ ಅಮೆರಿಕೆಯಲ್ಲಿ ಈ ಜನಸಮುದಾಯವು ಎಲ್ಲಾ ಮಟ್ಟಗಳಲ್ಲೂ ಆಳವಾದ ಪ್ರಭಾವ ಮತ್ತು ಹಿಡಿತವನ್ನು ಹೊಂದಿದೆ. ಮತ್ತೊಂದು ವಸಾಹತುಶಾಹಿ ಸಮಾಜವಾದ ಆಸ್ಟ್ರೇಲಿಯಾದಲ್ಲೂ ಹಾಗಾಗಬಹುದೆ? ದಾಳಿ ನಡೆಸಿದ ಅಪ್ಪ-ಮಗ ಜೋಡಿಯಲ್ಲಿ, ಅಪ್ಪನ ಬಳಿ ಇದ್ದದ್ದು ಭಾರತೀಯ ಪಾಸ್ಪೋರ್ಟ್. ಆತ ಭಾರತದ ಹೈದರಾಬಾದ್ ಮೂಲದವರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more
ಕುವೆಂಪು – ಕನ್ನಡದ ಭಾವಸೆಲೆ ಹಾಗೂ ವೈಚಾರಿಕ ದಿಕ್ಸೂಚಿ: ಎಲ್.ಜಿ.ಮೀರಾ ಅಂಕಣ

ಕುವೆಂಪು – ಕನ್ನಡದ ಭಾವಸೆಲೆ ಹಾಗೂ ವೈಚಾರಿಕ ದಿಕ್ಸೂಚಿ: ಎಲ್.ಜಿ.ಮೀರಾ ಅಂಕಣ

ಕವಿಯಲ್ಲದವರ ಮಟ್ಟಿಗೆ ಸಾಧಾರಣ ಬೆಟ್ಟಗುಡ್ಡ ಅನ್ನಿಸಿಬಿಡಬಹುದಿದ್ದ ಕುಪ್ಪಳ್ಳಿಯ ಒಂದು ಸ್ಥಳವು ಈ ರಸಋಷಿಯ ಕಣ್ಣಲ್ಲಿ ಅತ್ಯಂತ ಪ್ರೀತಿಯ `ಕವಿಶೈಲ’ವಾದದ್ದು ಅವರಿಗಿದ್ದ ಅಮಿತ ಪ್ರಕೃತಿಪ್ರೇಮಕ್ಕೆ ಸಾಕ್ಷಿ. ಅವರೆಲ್ಲೇ ಇದ್ದರೂ ಅವರ ಮನಸ್ಸು ಸದಾ ಕಾಲ ತಮ್ಮ ಪ್ರೀತಿಯ ಮಲೆನಾಡನ್ನು ಧ್ಯಾನಿಸುತ್ತಿತ್ತು. “ನಾನು ಭೌತಿಕವಾಗಿ ಮೈಸೂರಿನಲ್ಲಿದ್ದರೂ ಮಾನಸಿಕವಾಗಿ ಹಾಗೂ ಆಧ್ಯಾತ್ಮಿಕವಾಗಿ ಮಲೆನಾಡಿನಲ್ಲಿರುತ್ತೇನೆ. ಪ್ರತಿ ನಿತ್ಯ ಹಲವು ಸಾರಿ ನವಿಲುಕಲ್ಲಿಗೆ ಹೋಗಿ ಬರ್ತೀನಿ, ಕವಿಶೈಲದಲ್ಲಿ ಕುಳಿತು ಧ್ಯಾನ ಮಾಡ್ತೀನಿ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ಮೂರನೆಯ ಬರಹ

read more
ಸೀತಕ್ಕನ ವಠಾರ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಸೀತಕ್ಕನ ವಠಾರ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಸ್ವಲ್ಪ ಹೊತ್ತು ಮಸೆದ ನಂತರ ತನ್ನ ತೋರು ಬೆರಳನ್ನು ಕತ್ತಿಯ ಅಲಗಿಗೆ ತಾಗಿಸುತ್ತಾ “ಹಾಂ, ಈಗ ಹರಿತ ಆಯ್ತು. ಕತ್ತಿ ಹರಿತ ಇಲ್ಲಂದ್ರೆ ಯಾವುದಕ್ಕೂ ಉಪ್ಯೋಗಿಲ್ಲ ನೋಡು. ಒಂದು ರೀತಿಯಲ್ಲಿ ಈ ಬಿಸಿ ಚಾ ಇದ್ದ ಹಾಗೆ. ಬಿಸಿಬಿಸಿ ಇದ್ದಾಗ ಮಾತ್ರ ಕುಡಿಬಹುದು, ಆದ್ರೆ ತಣ್ಣಗಾದ್ರೆ ಕುಡಿಯೋಕೆ ಆಗಲ್ಲ ಅಲ್ವಾ? ಸ್ಥಿತಿ ಮುಖ್ಯ, ಬರೇ ಚಾ ಅಲ್ಲ…” ಅಂತ ಹೇಳಿ ನಮ್ಮ‌ಮನೆ ಹಿಂದಿನ ತೋಟಕ್ಕೆ ತಾಗಿ ಇದ್ದ ಅವರ ಗದ್ದೆಗೆ ಹೋದ್ರು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ನಾಲ್ಕನೆಯ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ