ಗೂಗಲ್ ಜಮಾನಾದಲ್ಲಿ ಗುರು ಯಾರು..!: ಡಾ. ಎಲ್.ಜಿ. ಮೀರಾ ಅಂಕಣ
ಏನು ಕಲಿಯಬೇಕು ಎಂಬುದನ್ನು ಮಾತ್ರವಲ್ಲ ಅದನ್ನು ಏಕೆ ಮತ್ತು ಹೇಗೆ ಕಲಿಯಬೇಕು ಎಂಬುದನ್ನು ಕೂಡ ವಿದ್ಯಾರ್ಥಿಗಳಿಗೆ ಕಲಿಸಬಲ್ಲರು. ತಾವು ಕಲಿಸುತ್ತಿರುವ ಇಂಗ್ಲಿಷ್, ವಿಜ್ಞಾನ ಅಥವಾ ಸಮಾಜ ಪಾಠವು ತಾವು ಹೇಳುತ್ತಿರುವ ಭಾಷೆಯಲ್ಲಿ ಮಕ್ಕಳಿಗೆ ಅರ್ಥ ಆಗುತ್ತಿಲ್ಲ ಎಂದು ಅನ್ನಿಸಿದಾಗ ತಕ್ಷಣ ಅದನ್ನು ಮಕ್ಕಳ ಮಾತೃಭಾಷೆಯಲ್ಲಿ ಹೇಳಿ ಮಕ್ಕಳಿಗೆ ಅದನ್ನು ತಲುಪಿಸಬಲ್ಲರು. ಶಿಕ್ಷಕ ಅಂದರೆ ಎರಡನೆಯ ಪೋಷಕ ಎಂಬ ಮಾತಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂರನೆಯ ಬರಹ
ಜೇನ್ನೊಣದ ಬಿಲಿಯನ್ ಡಾಲರ್ ಕೊಡುಗೆ: ಡಾ. ವಿನತೆ ಶರ್ಮಾ ಅಂಕಣ
ನಮ್ಮ ಹವ್ಯಾಸಿ ಕೈತೋಟ ಸದಸ್ಯರಲ್ಲಿ ಒಂದು ನಿಯಮವಿದೆ – ತಾವು ಬೆಳೆಯುವ ತರಕಾರಿ ಹಣ್ಣುಗಳಿಗೆ ಯಾವುದೇ ರಾಸಾಯನಿಕ ಪದಾರ್ಥಗಳನ್ನು ಬಳಸುವಂತಿಲ್ಲ. ಹಾಗೇನಾದರೂ ಬಳಸಿದರೆ ಅಂತಹ ಆಹಾರವನ್ನು ಸದಸ್ಯರಲ್ಲಿ ಹಂಚಿಕೊಳ್ಳಬಾರದು. ಈ ನಿಯಮದಿಂದ ಸದಸ್ಯರಲ್ಲಿ ಪ್ರಕೃತಿಯ ಬಗ್ಗೆ ಕಾಳಜಿ ಹೆಚ್ಚುತ್ತದೆ. ತಮ್ಮ ತರಕಾರಿ ಹಣ್ಣು ಗಿಡಗಳನ್ನು ಕ್ರಿಮಿಕೀಟಗಳು ಭಾದಿಸುತ್ತಿವೆ ಎಂದಾದರೆ ಅವನ್ನು ತೊಲಗಿಸಲು ಸದಸ್ಯರು ತಮಗೆ ಗೊತ್ತಿರುವ ನೈಸರ್ಗಿಕ ವಿಧಾನಗಳನ್ನು ಸೂಚಿಸುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಗಾರ್ಮೆಂಟ್ ಗಾಮಿನಿಯರು, ಕಿಟ್ಟಿಪಾರ್ಟಿ ಕಿನ್ನರಿಯರು: ಡಾ. ಎಲ್.ಜಿ. ಮೀರಾ ಅಂಕಣ
ಅದೃಷ್ಟದ ಮೇಲೆ ಯಾವ ಭರವಸೆಯನ್ನೂ ಇಟ್ಟುಕೊಳ್ಳದೆ `ಮನುಷ್ಯ ತನ್ನ ಅದೃಷ್ಟವನ್ನು ತಾನೇ ರೂಪಿಸಿಕೊಳ್ಳುತ್ತಾನೆʼ ಎನ್ನುವ ವಿಚಾರವಾದಿಗಳೂ ಇದ್ದಾರಲ್ಲವೇ? ಮನುಷ್ಯನ ಯಶಸ್ಸಿನಲ್ಲಿ ಪುರುಷಪ್ರಯತ್ನ, ಪರಿಶ್ರಮಗಳ ಪಾಲು ಇರುವುದು ನಿಜವಾದರೂ, ಒಟ್ಟು ಬದುಕು ಕೊನೆತನಕ ನೆಮ್ಮದಿಯಿಂದ ಸುಖಮಯವಾಗಿ ದೊಡ್ಡ ಕೊರಗಿಲ್ಲದೆ ಕಳೆಯುವುದು ಮನುಷ್ಯನ ಕೈಯಲ್ಲಿದೆಯೇ? “ಅಯ್ಯೋ, ತನ್ನ ನಾಳೆ ಹೇಗಿರುತ್ತದೆ ಎಂದು ಗೊತ್ತಿರದ ಮನುಷ್ಯನ ದುರ್ವಿಧಿಯೇ!!!..”
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎರಡನೆಯ ಬರಹ
ಹೊಳೆಸಾಲಿನ ಮೊದಲ ಗ್ಯಾದರಿಂಗ್: ಸುಧಾ ಆಡುಕಳ ಅಂಕಣ
ಮರುದಿನ ಬೆಳಗಾಗುವ ಹೊತ್ತಿಗೆ ಮೈಕ್ ಮತ್ತದೇ ಮೂಷಿಕವಾಹನ ಹಾಡನ್ನು ಇನ್ನೂ ಮಧುರವಾಗಿ ಹಾಡತೊಡಗಿತು. ಯುವಕರ ದಂಡು ಒಂದಾಗಿ ಫಂಡಿನ ಬಂಟರನ್ನೆಲ್ಲ ಹೆಡೆಮುರಿ ಕಟ್ಟಿ ಒಂದು ದಿನದ ಮಟ್ಟಿಗೆ ಸದಾನಂದ ಹೆಗಡೆಯವರ ಉಪ್ಪರಿಗೆಯಲ್ಲಿ ಕೂಡಿಹಾಕಿತು. ಮಾಸ್ರ್ರ ಅಣತಿಯಂತೆ ಹೊಳೆಸಾಲಿನ ಲೈನ್ಮನ್ ರಾಮಪ್ಪ ಯಾರೂ ಕರೆಂಟಿನ ಡಬ್ಬಕ್ಕೆ ಕೈ ಹಾಕದಂತೆ ಟ್ರಾನ್ಸಫರ್ ಪೆಟ್ಟಿಗೆಯ ಹತ್ತಿರವೇ ಕಾವಲು ನಿಂತ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ
ಗಣೇಶ ತರುವ ಸುಖ, ಸಂತೋಷ…: ವಿನತೆ ಶರ್ಮಾ ಅಂಕಣ
ಈ ಪ್ರಪಂಚದ ಒಂದಷ್ಟು ದೇಶಗಳನ್ನು ಸುತ್ತುವಾಗ ಗಣೇಶನ ಖ್ಯಾತಿ ಅಚ್ಚರಿ ತಂದಿತ್ತು. ಯೂರೋಪ್, ಯುನೈಟೆಡ್ ಕಿಂಗ್ಡಮ್ ಅಲ್ಲಂತೂ ಗಣೇಶನ ಪರಿಚಯ ಸುಮಾರು ಜನರಿಗಿದೆ. ಅಂದಚೆಂದಕ್ಕೆಂದು ಅವನ ಮೂರ್ತಿಗಳನ್ನು ಇಟ್ಟಿರುವುದು ದಿಟ. ನಮ್ಮ ಆಸ್ಟ್ರೇಲಿಯದಲ್ಲೇಕೋ ಗಣಪನ ಹೆಸರು ಜನರಿಗೆ ಅಷ್ಟೊಂದು ಗೊತ್ತಿಲ್ಲ. ‘ಯು.ಕೆ. ಮತ್ತು ಅಮೇರಿಕಕ್ಕೆ ಹೋಲಿಸಿದರೆ ಆಸ್ಟ್ರೇಲಿಯಾ ಇಪ್ಪತ್ತು ವರ್ಷಗಳಷ್ಟು ಹಿಂದಿದೆ’ ಎನ್ನುವ ಜಾಣ್ಣುಡಿ ನಿಜವೇನೂ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ” ಆರಂಭ
ಯಾಕೆ ಹೀಗೆ ಮಾಡುತ್ತೇವೆ ನಾವು ಮನುಷ್ಯರು? ನಮ್ಮ ಬದುಕಿನ ನೆಮ್ಮದಿ, ಸಂತೃಪ್ತಿಗಳನ್ನು ದುಬಾರಿ ವಸ್ತುಗಳಲ್ಲಿ, ಅಥವಾ ನಾವು ಅವುಗಳನ್ನು ಕೊಂಡೆವೆಂದು ನಮಗೆ ಮಾನ್ಯತೆ ಕೊಡುವ ಜನರ ಸ್ಪಂದನೆಗಳಲ್ಲಿ, ಮೌಲ್ಯೀಕರಣಗಳಲ್ಲಿ ಯಾಕೆ ಹುಡುಕುತ್ತೇವೆ? ಸೂಫಿ ಕಥೆಯೊಂದರಲ್ಲಿ ಬರುವ ಮುದುಕಿಯಂತೆ ಮನೆಯಲ್ಲಿ ಕಳೆದುಹೋಗಿರುವ ಬೀಗದ ಕೈಯನ್ನು ರಸ್ತೆಯಲ್ಲಿ ಬೆಳಕಿದೆ ಎಂದು ಅಲ್ಲಿ ಹುಡುಕುತ್ತಿದ್ದೇವಾ?
ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ”
ಹೊಳೆಸಾಲಿಗೆ ಬಂದ ಕೆಂಪು ಬಸ್ಸು: ಸುಧಾ ಆಡುಕಳ ಅಂಕಣ
ಈ ವಾರ ಅಣ್ಣ ಬಂದಾಗ ನೀಲಿ ಅಣ್ಣನಲ್ಲಿ ತನ್ನ ದುಗುಡವನ್ನು ಹೇಳಿಕೊಂಡಳು. ಅಣ್ಣ ಅವಳಿಗೆ ಸಮಾಧಾನ ಹೇಳಿದ. “ನೋಡು, ನೀನು ಮುಂದೆ ಓದುವ ಸ್ಕೂಲು ಇಲ್ಲಿಂದ ಅಷ್ಟೇನೂ ದೂರವಿಲ್ಲ. ದಿನವೂ ನಡೆದು ಹೋಗುವುದೊಂದು ಕಷ್ಟ. ಬೆಳಿಗ್ಗೆ, ಸಂಜೆ ಒಂದು ಬಸ್ ಆಯಿತೆಂದರೆ ಮನೆಯಿಂದಲೇ ಮುಂದಿನ ಶಾಲೆಗೆ ಹೋಗಬಹುದು.”
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನಾರನೆಯ ಕಂತು ನಿಮ್ಮ ಓದಿಗೆ
ಮತ್ತೆ ಮಹಿಳಾ ದಿನಾಚರಣೆ ಬಂದಂತೆ…: ವಿನತೆ ಶರ್ಮಾ ಅಂಕಣ
ಇದೆ ಮೊದಲ ಬಾರಿ ಬಿಳಿಯರಲ್ಲದ ಒಬ್ಬ ಮಹಿಳೆ ಅಮೆರಿಕೆಯ ಅಧ್ಯಕ್ಷ ಚುನಾವಣೆಯನ್ನು ಎದುರಿಸುತ್ತಿರುವುದು ಬಹಳ ವಿಶೇಷ. ಈ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಎದುರಿಸುತ್ತಿರುವ ಎದುರಾಳಿ ಸಾಮಾನ್ಯರೇನಲ್ಲ. ಅವರು ಏನನ್ನು ಬೇಕಾದರೂ ಮಾಡುವ, ನ್ಯಾಯನೀತಿಗಳನ್ನು ನಗೆಪಾಟಲು ಮಾಡುವ ಸಾಮರ್ಥ್ಯವಿರುವ ಗಂಡು. ಈ ಗಂಡಿನ ಚಾಣಾಕ್ಷತೆಯನ್ನು ಕಮಲಾ ಹ್ಯಾರಿಸ್ ಹೇಗೆ ಸಂಭಾಳಿಸುತ್ತಾರೆ, ನಿಭಾಯಿಸುತ್ತಾರೆ, ಎದುರಿಸುತ್ತಾರೆ ಎನ್ನುವುದು ಅತ್ಯಂತ ಕುತೂಹಲಕಾರಿಯಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ದಾರಿ ಯಾವುದಯ್ಯಾ….?: ಸುಧಾ ಆಡುಕಳ ಅಂಕಣ
“ನಿಮ್ಮ ದೇವರ ಜಮೀನು ಕೇಳ್ತೇನೆ ಅಂತ ತಪ್ಪು ತಿಳಿಯಬೇಡಿ. ಒಂದು ಮನೆಗಾಗುವಷ್ಟು, ಜತೆಗೆ ರಸ್ತೆಗೊಂದು ದಾರಿಯಾಗುವಷ್ಟು ಜಾಗ ಬಿಟ್ಟುಕೊಟ್ಟರೆ ನಾವು ಮುಂದಿನ ಮಳೆಗಾಲದಲ್ಲಿ ಬದುಕ್ತೀವಿ. ಇಲ್ಲಾಂದ್ರೆ ಎಲ್ಲೋ ದೂರದಲ್ಲಿ ಮನೆಕಟ್ಟಿ ಈ ಜಮೀನಿಗೆ ಓಡಿಯಾಡೋದೆಲ್ಲ ಆಗಿಹೋಗುವ ಮಾತಲ್ಲ. ನೋಡಿ, ಒಂದು ಮನಸು ಮಾಡಿ. ಮತ್ತೆ ನಂಗೆ ನೀವು ಧರ್ಮಕ್ಕೆ ಕೊಡೂದೇನೂ ಬ್ಯಾಡ…..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೈದನೆಯ ಕಂತು ನಿಮ್ಮ ಓದಿಗೆ










