Advertisement

ಅಂಕಣ

ಜೀವಕ್ಕಿಂತ ದೊಡ್ದು ಯಾವ್ದು?: ಸುಧಾ ಆಡುಕಳ ಅಂಕಣ

ಜೀವಕ್ಕಿಂತ ದೊಡ್ದು ಯಾವ್ದು?: ಸುಧಾ ಆಡುಕಳ ಅಂಕಣ

ಗುಲಾಬಿಯ ಸಾವಿನಿಂದಾಗಿ ಡಾಕ್ಟರಮ್ಮನಿಗೆ ಹೊಳೆಸಾಲಿನ ಸ್ಥಿತಿಗತಿಯ ಬಗ್ಗೆ ಒಂದಿಷ್ಟು ಅರ್ಥವಾಗಿತ್ತು. ಅವರಲ್ಲಿ ಅರಿವನ್ನು ಮೂಡಿಸುವುದು ರೋಗಿಗಳಿಗೆ ಚಿಕಿತ್ಸೆ ನೀಡುವಷ್ಟೇ ಮಹತ್ವದ ಕಾರ್ಯವೆಂದು ತಿಳಿದ ಅವರು ಮಾಸ್ರ‍್ರು ಕರೆದಾಗ ದೂಸರಾ ಮಾತನಾಡದೇ ಬರಲೊಪ್ಪಿದ್ದರು. ಸೇರಿದ್ದ ಎಲ್ಲ ಅಮ್ಮಂದಿರಿಗೆ ಅರ್ಥವಾಗುವ ಭಾಷೆಯಲ್ಲಿ ಮುಟ್ಟು, ಕಿಟ್ಟುಗಳ ಒಳಗುಟ್ಟುಗಳನ್ನು ಬಿಡಿಸಿ ಹೇಳಿದರು. ಮುಟ್ಟೆಂದು ಮುಟ್ಟದೇ ಮೀನಮೇಷ ಎಣಿಸಿ ಆಸ್ಪತ್ರೆಗೆ ತರಲು ತಡವಾಗಿ ಅಸುನೀಗಿದ ಗುಲಾಬಿಯ ನೆನಪಿನಲ್ಲಿ ಒಂದಿಷ್ಟು ಹೊತ್ತು ಮೌನಪ್ರಾರ್ಥನೆ ಮಾಡಿಸಿ ಅಗಲಿದ ಜೀವದ ಘನತೆಯನ್ನು ಎತ್ತಿಹಿಡಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

read more
ಇಲ್ಲಿ ಎಲ್ಲ ಥರದವರೂ ಇದ್ದಾರೆ…: ಎಸ್ ನಾಗಶ್ರೀ ಅಜಯ್ ಅಂಕಣ

ಇಲ್ಲಿ ಎಲ್ಲ ಥರದವರೂ ಇದ್ದಾರೆ…: ಎಸ್ ನಾಗಶ್ರೀ ಅಜಯ್ ಅಂಕಣ

ಇದು ಸರಿತಪ್ಪಿನ ತಕ್ಕಡಿಯಲ್ಲಿ ತೂಗಲಾರದ, ತೂಗಬಾರದ ವಿಷಯ. ವಿಧಿ ಒಬ್ಬೊಬ್ಬರ ಪಾಲಿಗೆ ನೀಡಿದ ಷಡ್ರಸಗಳ ಭೋಜನ. ಅವರುಂಡ ಸಿಹಿ-ಕಹಿ-ಹುಳಿ- ಒಗರು ಅವರಿಗಷ್ಟೇ ವೇದ್ಯ. ಬಹಳಷ್ಟು ಸಲ ನಾವು ದೂರ ನಿಂತು ಕಂಡಿದ್ದರ ಬಗ್ಗೆ, ಅನಿಸಿದ್ದರ ಬಗ್ಗೆ ಆತ್ಮವಿಶ್ವಾಸದಿಂದ ನಿರ್ಣಯಗಳನ್ನು ಹೊರಡಿಸುತ್ತೇವೆ. ದುಡ್ಡು ದುಡ್ಡು ಅಂತ ಸಾಯ್ತಾನೆ‌. ಹೋಗುವಾಗ ಹೊತ್ಕೊಂಡು ಹೋಗುವ ಹಾಗಿದ್ದರೆ ಇನ್ನು ಹೇಗಾಡ್ತಿದ್ದನೋ ಅಂದವರೆ ಚಿಲ್ಲರೆಗಾಗಿ ತಳ್ಳುಗಾಡಿಯವನ ಬಳಿ ಗುದ್ದಾಡುತ್ತಾರೆ. ಮಕ್ಕಳಿಗೆ ಸಂಸ್ಕಾರ ಕಲಿಸಿಲ್ಲ ಎಂದ ಮಹಾಮಾತೆಯ ಮಕ್ಕಳು ಬಂದವರೆದುರೇ ಕಾಲುಚಾಚಿ ಕೂತು, ಮೂತಿ ತಿರುವುತ್ತಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

read more
ಅನಿವಾಸಿಗಳಿಗೆ “ಇಳೆಯ” ಸಂಗೀತದ ಹಿತ: ಡಾ. ವಿನತೆ ಶರ್ಮಾ ಅಂಕಣ

ಅನಿವಾಸಿಗಳಿಗೆ “ಇಳೆಯ” ಸಂಗೀತದ ಹಿತ: ಡಾ. ವಿನತೆ ಶರ್ಮಾ ಅಂಕಣ

ಬ್ಯಾಂಡ್ ಹೊಂದಿರುವ ಸಂಗೀತ ವಾದ್ಯಗಳ ವೈವಿಧ್ಯತೆ, ತಬಲಾ ಬಾರಿಸುವ ನಿಪುಣತೆ, ಕೊಳಲು ಊದುವ ಮಾಧುರ್ಯ, ವಯಲಿನ್ ನುಡಿಸುವ ತನ್ಮಯತೆ, ಕೀಬೋರ್ಡ್ ಮೇಲೆ ನಲಿದಾಡುವ ಬೆರಳುಗಳ ಚಾಕಚಕ್ಯತೆ, ಎಲ್ಲವೂ ಚೊಕ್ಕವಾಗಿ ಚೆಂದೆನಿಸಿತ್ತು. ನಾನು ಇದೆ ಮೊದಲ ಬಾರಿ ಎಲೆಕ್ಟ್ರಿಕ್ ತಬಲಾ ನೋಡಿದ್ದು, ಬೆರಗಾಗಿದ್ದು. ಅದನ್ನು ಬಾರಿಸುತ್ತಿದ್ದ ಯುವಕ ಕಾರ್ಯಕ್ರಮವನ್ನು ನಿರ್ದೇಶಿಸುತ್ತಿದ್ದ ಕೂಡ. ಅವಲ್ಲದೆ, ಇನ್ನಿಬ್ಬರು ಎರಡು ಶಾಸ್ತ್ರೀಯ ತಬಲಾಗಳನ್ನೂ ಬಾರಿಸುತ್ತಿದ್ದರು. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಕನ್ನಡ ಭಾಷೆಗೆ ಗೆಜ್ಜೆಯ ದಾರಿ… ಭಾವನೃತ್ಯದ ಸುಂದರ ಪರಿ: ಎಲ್.ಜಿ.ಮೀರಾ ಅಂಕಣ

ಕನ್ನಡ ಭಾಷೆಗೆ ಗೆಜ್ಜೆಯ ದಾರಿ… ಭಾವನೃತ್ಯದ ಸುಂದರ ಪರಿ: ಎಲ್.ಜಿ.ಮೀರಾ ಅಂಕಣ

ಭಾವಗೀತೆಯು ಕನ್ನಡ ನವೋದಯ ಸಾಹಿತ್ಯದ(1870-1940) ಸಂದರ್ಭದಲ್ಲಿ ಹುಟ್ಟಿತಲ್ಲವೇ. ಆ ಕಲಾಪ್ರಕಾರವು ಅನೇಕ ಕವಿಗಳ ಸಾಹಿತ್ಯವನ್ನು ಗೀತೆಗಳ ಮೂಲಕ, ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲ, ಸಾಹಿತ್ಯಕ್ಷೇತ್ರದ ಆಚೆಗಿನ ದೊಡ್ಡ, ಅದರಲ್ಲೂ ಅನಕ್ಷರಸ್ಥ ಜನಸಮುದಾಯಕ್ಕೂ ತಲುಪಿಸುವ ಕೆಲಸ ಮಾಡಿತು. ನಮ್ಮ ಸಂಸ್ಕೃತಿಯು ಸಾಹಿತ್ಯಪ್ರಸರಣದಲ್ಲಿ ಭಾವಗೀತೆಯನ್ನು ದುಡಿಸಿಕೊಂಡಂತೆ ಭಾವನೃತ್ಯವನ್ನು ಸಹ ದುಡಿಸಿಕೊಳ್ಳಬಹುದು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

read more
ಮೂಳೆ ಮಾಂಸದ ತಡಿಕೆ: ಸುಧಾ ಆಡುಕಳ ಅಂಕಣ

ಮೂಳೆ ಮಾಂಸದ ತಡಿಕೆ: ಸುಧಾ ಆಡುಕಳ ಅಂಕಣ

ಇವಳ ಜತೆಯಲ್ಲಿ ನಡೆಯುವ ಗೆಳತಿಯರು ಮೈ ಕೈ ತಾಗಿಸಿಕೊಳ್ಳದೇ ದೂರದೂರವೇ ನಡೆಯುವಾಗ ನೀಲಿಗೆ ಅಳುವೇ ಬಂದಂತಾಗಿತ್ತು. “ನಾ ಹೇಳದಿದ್ರೆ ನಿಮಗೆಲ್ಲ ನಾ ಮುಟ್ಟು ಅಂತ ಗೊತ್ತಾಗ್ತಾನೇ ಇರಲಿಲ್ಲ. ದಿನಾ ಶಾಲೇಲಿ ಅದೆಷ್ಟು ಹುಡುಗಿರು ಮುಟ್ಟಾಗಿ ಬರ್ತಾರೋ ಗೊತ್ತಿದ್ಯಾ?” ಎಂದು ಅವರನ್ನು ತಿದ್ದಲು ನೋಡಿದಳು. ಅದಕ್ಕವರು ಜಗ್ಗದೇ, “ಗೊತ್ತಾಗದಿದ್ರೆ ದೋಷ ಇಲ್ಲಾಂತ ನಮ್ಮಜ್ಜಿ ಹೇಳಿದಾರೆ. ಗೊತ್ತಾಗಿಯೂ ಮೈಲಿಗೆಯಾದ್ರೆ ಅದು ನಮ್ಮ ತಪ್ಪು.” ಎಂದು ಬೇರೆಯದೇ ವಾದ ಹೂಡಿದರು. ಬಸ್ ಹತ್ತಿದಾಗಲೂ ತನ್ನ ಸೀಟಿನಲ್ಲಿ ಪರಚಯದವರ‍್ಯಾರೂ ಕುಳಿತುಕೊಳ್ಳದಿದ್ದಾಗ ನೀಲಿ ಈ ಹುಡುಗಿಯರೆಲ್ಲ ಇಡಿಯ ಶಾಲೆಗೆ ಈ ವಿಷಯವನ್ನು ಡಂಗೂರ ಸಾರದಿದ್ದರೆ ಸಾಕೆಂದುಕೊಂಡಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

read more
ನವರಾತ್ರಿಗೆ ಒಂದಿಷ್ಟು ಆಸ್ಟ್ರೇಲಿಯಾ ಕಥೆಗಳು:  ಡಾ. ವಿನತೆ ಶರ್ಮಾ ಅಂಕಣ

ನವರಾತ್ರಿಗೆ ಒಂದಿಷ್ಟು ಆಸ್ಟ್ರೇಲಿಯಾ ಕಥೆಗಳು: ಡಾ. ವಿನತೆ ಶರ್ಮಾ ಅಂಕಣ

ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರಿದ್ದು ಅವರು ಹಿಂದೂ ಧರ್ಮವನ್ನು ಆಚರಿಸುವುದಾಗಿ ಜನಗಣತಿಯಲ್ಲಿ ಹೇಳಿದ್ದರೆ, ಅವರ ಹಕ್ಕುಮಾನ್ಯತೆಯನ್ನು ಪರಿಗಣಿಸಿ ದೇವಸ್ಥಾನಕ್ಕೆ ಒಪ್ಪಿಗೆ ಕೊಡಬಹುದು. ಇದಾದ ಮೇಲೆ ದೇವಾಲಯ ಕಟ್ಟಡದ ನಿರ್ಮಾಣಕ್ಕೆ ಹಣ ಹೊಂದಿಸಬೇಕು. ದೇವಸ್ಥಾನ ಸ್ಥಾಪನೆಯ ಕನಸು ಕಂಡವರು ಹಗಲುರಾತ್ರಿ ಶ್ರಮವಹಿಸಿ ನಿಧಿಸಂಗ್ರಹಣೆ ಮಾಡಬೇಕು. ಕೆಲವರಿಗಂತೂ ಇದೇ ಅವರ ನಿತ್ಯಜೀವನವಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಗೂಗಲ್ ಜಮಾನಾದಲ್ಲಿ ಗುರು ಯಾರು..!: ಡಾ. ಎಲ್.ಜಿ. ಮೀರಾ ಅಂಕಣ

ಗೂಗಲ್ ಜಮಾನಾದಲ್ಲಿ ಗುರು ಯಾರು..!: ಡಾ. ಎಲ್.ಜಿ. ಮೀರಾ ಅಂಕಣ

ಏನು ಕಲಿಯಬೇಕು ಎಂಬುದನ್ನು ಮಾತ್ರವಲ್ಲ ಅದನ್ನು ಏಕೆ ಮತ್ತು ಹೇಗೆ ಕಲಿಯಬೇಕು ಎಂಬುದನ್ನು ಕೂಡ ವಿದ್ಯಾರ್ಥಿಗಳಿಗೆ ಕಲಿಸಬಲ್ಲರು. ತಾವು ಕಲಿಸುತ್ತಿರುವ ಇಂಗ್ಲಿಷ್, ವಿಜ್ಞಾನ ಅಥವಾ ಸಮಾಜ ಪಾಠವು ತಾವು ಹೇಳುತ್ತಿರುವ ಭಾಷೆಯಲ್ಲಿ ಮಕ್ಕಳಿಗೆ ಅರ್ಥ ಆಗುತ್ತಿಲ್ಲ ಎಂದು ಅನ್ನಿಸಿದಾಗ ತಕ್ಷಣ ಅದನ್ನು ಮಕ್ಕಳ ಮಾತೃಭಾಷೆಯಲ್ಲಿ ಹೇಳಿ ಮಕ್ಕಳಿಗೆ ಅದನ್ನು ತಲುಪಿಸಬಲ್ಲರು. ಶಿಕ್ಷಕ ಅಂದರೆ ಎರಡನೆಯ ಪೋಷಕ ಎಂಬ ಮಾತಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂರನೆಯ ಬರಹ

read more
ಜೇನ್ನೊಣದ ಬಿಲಿಯನ್ ಡಾಲರ್ ಕೊಡುಗೆ: ಡಾ. ವಿನತೆ ಶರ್ಮಾ ಅಂಕಣ

ಜೇನ್ನೊಣದ ಬಿಲಿಯನ್ ಡಾಲರ್ ಕೊಡುಗೆ: ಡಾ. ವಿನತೆ ಶರ್ಮಾ ಅಂಕಣ

ನಮ್ಮ ಹವ್ಯಾಸಿ ಕೈತೋಟ ಸದಸ್ಯರಲ್ಲಿ ಒಂದು ನಿಯಮವಿದೆ – ತಾವು ಬೆಳೆಯುವ ತರಕಾರಿ ಹಣ್ಣುಗಳಿಗೆ ಯಾವುದೇ ರಾಸಾಯನಿಕ ಪದಾರ್ಥಗಳನ್ನು ಬಳಸುವಂತಿಲ್ಲ. ಹಾಗೇನಾದರೂ ಬಳಸಿದರೆ ಅಂತಹ ಆಹಾರವನ್ನು ಸದಸ್ಯರಲ್ಲಿ ಹಂಚಿಕೊಳ್ಳಬಾರದು. ಈ ನಿಯಮದಿಂದ ಸದಸ್ಯರಲ್ಲಿ ಪ್ರಕೃತಿಯ ಬಗ್ಗೆ ಕಾಳಜಿ ಹೆಚ್ಚುತ್ತದೆ. ತಮ್ಮ ತರಕಾರಿ ಹಣ್ಣು ಗಿಡಗಳನ್ನು ಕ್ರಿಮಿಕೀಟಗಳು ಭಾದಿಸುತ್ತಿವೆ ಎಂದಾದರೆ ಅವನ್ನು ತೊಲಗಿಸಲು ಸದಸ್ಯರು ತಮಗೆ ಗೊತ್ತಿರುವ ನೈಸರ್ಗಿಕ ವಿಧಾನಗಳನ್ನು ಸೂಚಿಸುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಗಾರ್ಮೆಂಟ್ ಗಾಮಿನಿಯರು, ಕಿಟ್ಟಿಪಾರ್ಟಿ ಕಿನ್ನರಿಯರು: ಡಾ. ಎಲ್.ಜಿ. ಮೀರಾ ಅಂಕಣ

ಗಾರ್ಮೆಂಟ್ ಗಾಮಿನಿಯರು, ಕಿಟ್ಟಿಪಾರ್ಟಿ ಕಿನ್ನರಿಯರು: ಡಾ. ಎಲ್.ಜಿ. ಮೀರಾ ಅಂಕಣ

ಅದೃಷ್ಟದ ಮೇಲೆ ಯಾವ ಭರವಸೆಯನ್ನೂ ಇಟ್ಟುಕೊಳ್ಳದೆ `ಮನುಷ್ಯ ತನ್ನ ಅದೃಷ್ಟವನ್ನು ತಾನೇ ರೂಪಿಸಿಕೊಳ್ಳುತ್ತಾನೆʼ ಎನ್ನುವ ವಿಚಾರವಾದಿಗಳೂ ಇದ್ದಾರಲ್ಲವೇ? ಮನುಷ್ಯನ ಯಶಸ್ಸಿನಲ್ಲಿ ಪುರುಷಪ್ರಯತ್ನ, ಪರಿಶ್ರಮಗಳ ಪಾಲು ಇರುವುದು ನಿಜವಾದರೂ, ಒಟ್ಟು ಬದುಕು ಕೊನೆತನಕ ನೆಮ್ಮದಿಯಿಂದ ಸುಖಮಯವಾಗಿ ದೊಡ್ಡ ಕೊರಗಿಲ್ಲದೆ ಕಳೆಯುವುದು ಮನುಷ್ಯನ ಕೈಯಲ್ಲಿದೆಯೇ? “ಅಯ್ಯೋ, ತನ್ನ ನಾಳೆ ಹೇಗಿರುತ್ತದೆ ಎಂದು ಗೊತ್ತಿರದ ಮನುಷ್ಯನ ದುರ್ವಿಧಿಯೇ!!!..”
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎರಡನೆಯ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ