ಹೊಳೆಸಾಲಿನ ಮೊದಲ ಗ್ಯಾದರಿಂಗ್: ಸುಧಾ ಆಡುಕಳ ಅಂಕಣ
ಮರುದಿನ ಬೆಳಗಾಗುವ ಹೊತ್ತಿಗೆ ಮೈಕ್ ಮತ್ತದೇ ಮೂಷಿಕವಾಹನ ಹಾಡನ್ನು ಇನ್ನೂ ಮಧುರವಾಗಿ ಹಾಡತೊಡಗಿತು. ಯುವಕರ ದಂಡು ಒಂದಾಗಿ ಫಂಡಿನ ಬಂಟರನ್ನೆಲ್ಲ ಹೆಡೆಮುರಿ ಕಟ್ಟಿ ಒಂದು ದಿನದ ಮಟ್ಟಿಗೆ ಸದಾನಂದ ಹೆಗಡೆಯವರ ಉಪ್ಪರಿಗೆಯಲ್ಲಿ ಕೂಡಿಹಾಕಿತು. ಮಾಸ್ರ್ರ ಅಣತಿಯಂತೆ ಹೊಳೆಸಾಲಿನ ಲೈನ್ಮನ್ ರಾಮಪ್ಪ ಯಾರೂ ಕರೆಂಟಿನ ಡಬ್ಬಕ್ಕೆ ಕೈ ಹಾಕದಂತೆ ಟ್ರಾನ್ಸಫರ್ ಪೆಟ್ಟಿಗೆಯ ಹತ್ತಿರವೇ ಕಾವಲು ನಿಂತ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ
ಗಣೇಶ ತರುವ ಸುಖ, ಸಂತೋಷ…: ವಿನತೆ ಶರ್ಮಾ ಅಂಕಣ
ಈ ಪ್ರಪಂಚದ ಒಂದಷ್ಟು ದೇಶಗಳನ್ನು ಸುತ್ತುವಾಗ ಗಣೇಶನ ಖ್ಯಾತಿ ಅಚ್ಚರಿ ತಂದಿತ್ತು. ಯೂರೋಪ್, ಯುನೈಟೆಡ್ ಕಿಂಗ್ಡಮ್ ಅಲ್ಲಂತೂ ಗಣೇಶನ ಪರಿಚಯ ಸುಮಾರು ಜನರಿಗಿದೆ. ಅಂದಚೆಂದಕ್ಕೆಂದು ಅವನ ಮೂರ್ತಿಗಳನ್ನು ಇಟ್ಟಿರುವುದು ದಿಟ. ನಮ್ಮ ಆಸ್ಟ್ರೇಲಿಯದಲ್ಲೇಕೋ ಗಣಪನ ಹೆಸರು ಜನರಿಗೆ ಅಷ್ಟೊಂದು ಗೊತ್ತಿಲ್ಲ. ‘ಯು.ಕೆ. ಮತ್ತು ಅಮೇರಿಕಕ್ಕೆ ಹೋಲಿಸಿದರೆ ಆಸ್ಟ್ರೇಲಿಯಾ ಇಪ್ಪತ್ತು ವರ್ಷಗಳಷ್ಟು ಹಿಂದಿದೆ’ ಎನ್ನುವ ಜಾಣ್ಣುಡಿ ನಿಜವೇನೂ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ” ಆರಂಭ
ಯಾಕೆ ಹೀಗೆ ಮಾಡುತ್ತೇವೆ ನಾವು ಮನುಷ್ಯರು? ನಮ್ಮ ಬದುಕಿನ ನೆಮ್ಮದಿ, ಸಂತೃಪ್ತಿಗಳನ್ನು ದುಬಾರಿ ವಸ್ತುಗಳಲ್ಲಿ, ಅಥವಾ ನಾವು ಅವುಗಳನ್ನು ಕೊಂಡೆವೆಂದು ನಮಗೆ ಮಾನ್ಯತೆ ಕೊಡುವ ಜನರ ಸ್ಪಂದನೆಗಳಲ್ಲಿ, ಮೌಲ್ಯೀಕರಣಗಳಲ್ಲಿ ಯಾಕೆ ಹುಡುಕುತ್ತೇವೆ? ಸೂಫಿ ಕಥೆಯೊಂದರಲ್ಲಿ ಬರುವ ಮುದುಕಿಯಂತೆ ಮನೆಯಲ್ಲಿ ಕಳೆದುಹೋಗಿರುವ ಬೀಗದ ಕೈಯನ್ನು ರಸ್ತೆಯಲ್ಲಿ ಬೆಳಕಿದೆ ಎಂದು ಅಲ್ಲಿ ಹುಡುಕುತ್ತಿದ್ದೇವಾ?
ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ”
ಹೊಳೆಸಾಲಿಗೆ ಬಂದ ಕೆಂಪು ಬಸ್ಸು: ಸುಧಾ ಆಡುಕಳ ಅಂಕಣ
ಈ ವಾರ ಅಣ್ಣ ಬಂದಾಗ ನೀಲಿ ಅಣ್ಣನಲ್ಲಿ ತನ್ನ ದುಗುಡವನ್ನು ಹೇಳಿಕೊಂಡಳು. ಅಣ್ಣ ಅವಳಿಗೆ ಸಮಾಧಾನ ಹೇಳಿದ. “ನೋಡು, ನೀನು ಮುಂದೆ ಓದುವ ಸ್ಕೂಲು ಇಲ್ಲಿಂದ ಅಷ್ಟೇನೂ ದೂರವಿಲ್ಲ. ದಿನವೂ ನಡೆದು ಹೋಗುವುದೊಂದು ಕಷ್ಟ. ಬೆಳಿಗ್ಗೆ, ಸಂಜೆ ಒಂದು ಬಸ್ ಆಯಿತೆಂದರೆ ಮನೆಯಿಂದಲೇ ಮುಂದಿನ ಶಾಲೆಗೆ ಹೋಗಬಹುದು.”
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನಾರನೆಯ ಕಂತು ನಿಮ್ಮ ಓದಿಗೆ
ಮತ್ತೆ ಮಹಿಳಾ ದಿನಾಚರಣೆ ಬಂದಂತೆ…: ವಿನತೆ ಶರ್ಮಾ ಅಂಕಣ
ಇದೆ ಮೊದಲ ಬಾರಿ ಬಿಳಿಯರಲ್ಲದ ಒಬ್ಬ ಮಹಿಳೆ ಅಮೆರಿಕೆಯ ಅಧ್ಯಕ್ಷ ಚುನಾವಣೆಯನ್ನು ಎದುರಿಸುತ್ತಿರುವುದು ಬಹಳ ವಿಶೇಷ. ಈ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಎದುರಿಸುತ್ತಿರುವ ಎದುರಾಳಿ ಸಾಮಾನ್ಯರೇನಲ್ಲ. ಅವರು ಏನನ್ನು ಬೇಕಾದರೂ ಮಾಡುವ, ನ್ಯಾಯನೀತಿಗಳನ್ನು ನಗೆಪಾಟಲು ಮಾಡುವ ಸಾಮರ್ಥ್ಯವಿರುವ ಗಂಡು. ಈ ಗಂಡಿನ ಚಾಣಾಕ್ಷತೆಯನ್ನು ಕಮಲಾ ಹ್ಯಾರಿಸ್ ಹೇಗೆ ಸಂಭಾಳಿಸುತ್ತಾರೆ, ನಿಭಾಯಿಸುತ್ತಾರೆ, ಎದುರಿಸುತ್ತಾರೆ ಎನ್ನುವುದು ಅತ್ಯಂತ ಕುತೂಹಲಕಾರಿಯಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ದಾರಿ ಯಾವುದಯ್ಯಾ….?: ಸುಧಾ ಆಡುಕಳ ಅಂಕಣ
“ನಿಮ್ಮ ದೇವರ ಜಮೀನು ಕೇಳ್ತೇನೆ ಅಂತ ತಪ್ಪು ತಿಳಿಯಬೇಡಿ. ಒಂದು ಮನೆಗಾಗುವಷ್ಟು, ಜತೆಗೆ ರಸ್ತೆಗೊಂದು ದಾರಿಯಾಗುವಷ್ಟು ಜಾಗ ಬಿಟ್ಟುಕೊಟ್ಟರೆ ನಾವು ಮುಂದಿನ ಮಳೆಗಾಲದಲ್ಲಿ ಬದುಕ್ತೀವಿ. ಇಲ್ಲಾಂದ್ರೆ ಎಲ್ಲೋ ದೂರದಲ್ಲಿ ಮನೆಕಟ್ಟಿ ಈ ಜಮೀನಿಗೆ ಓಡಿಯಾಡೋದೆಲ್ಲ ಆಗಿಹೋಗುವ ಮಾತಲ್ಲ. ನೋಡಿ, ಒಂದು ಮನಸು ಮಾಡಿ. ಮತ್ತೆ ನಂಗೆ ನೀವು ಧರ್ಮಕ್ಕೆ ಕೊಡೂದೇನೂ ಬ್ಯಾಡ…..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೈದನೆಯ ಕಂತು ನಿಮ್ಮ ಓದಿಗೆ
ಅಮೆರಿಕಾದ ವೈದ್ಯಕೀಯ ಸೇವೆ: ಎಂ.ವಿ. ಶಶಿಭೂಷಣ ರಾಜು ಅಂಕಣ
ಅಮೇರಿಕನ್ನರು ಹೆಚ್ಚು ಔಷಧಗಳನ್ನು ತೆಗೆದುಕೊಂಡರೂ, ಅವರು ಅದಕ್ಕೆ ಹೆಚ್ಚು ಬೆಲೆ ಪಾವತಿಸುತ್ತಾರೆ. ಅಮೇರಿಕಾದಲ್ಲಿ ಔಷಧಿಗಳ ಬೆಲೆಗಳು ಫ್ರಾನ್ಸ್ಗಿಂತ 50 ರಿಂದ 60 ಪ್ರತಿಶತದಷ್ಟು ಹೆಚ್ಚು ಮತ್ತು ಇಂಗ್ಲೆಡ್ಗಿಂತ ಅಥವಾ ಆಸ್ಟ್ರೇಲಿಯಾಕ್ಕಿಂತ ಎರಡು ಪಟ್ಟು ಹೆಚ್ಚು. ಏಕೆಂದರೆ ಅನೇಕ ದೇಶಗಳಲ್ಲಿ, ಸರ್ಕಾರಗಳು ಮೂಲಭೂತವಾಗಿ ಔಷಧಿಗಳ ಬೆಲೆಗಳನ್ನು ನಿಯಂತ್ರಿಸುತ್ತವೆ ಮತ್ತು ಜನ ಪಾವತಿ ಮಾಡುವ ಮೊತ್ತಕ್ಕೆ ಮಿತಿಗಳನ್ನು ನಿಗದಿಪಡಿಸುತ್ತವೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
ಆಡೂ ಆಟ ಆಡೂ … ಒಲಿಂಪಿಕ್ಸ್ ! : ವಿನತೆ ಶರ್ಮಾ ಅಂಕಣ
ಪ್ಯಾರಿಸ್ ೨೦೨೪ ಒಲಿಂಪಿಕ್ಸ್ ವಿಶೇಷ ಏನೆಂದರೆ ಬ್ರೇಕ್ ಡಾನ್ಸ್ ಪಂದ್ಯ. ಇದನ್ನು ಘೋಷಿಸಿದಾಗ ಬ್ರೇಕ್ ಡಾನ್ಸ್ ಒಂದು ಕ್ರೀಡೆಯೇ, ಅದು ಹೇಗೆ ಆಟವಾಗುತ್ತದೆ? ಎಂದು ಪ್ರಶ್ನಿಸಿ, ಟೀಕಿಸಿ, ವಿರೋಧಿಸಿದವರು ಬಹಳ ಜನ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಹೊಳೆಸಾಲಿನಲ್ಲೊಂದು ಹೆಣವುರುಳಿತು!: ಸುಧಾ ಆಡುಕಳ ಅಂಕಣ
ದಿನದಿನವೂ ಪೋಲೀಸರು ಬರುವುದು, ಜೈಲಿನಲ್ಲಿ ವಿಚಾರಣೆಯ ನೆಪದಲ್ಲಿ ಹೊಡೆಯುವುದು, ಬಡಿಯುವುದು, ಅವರನ್ನು ಬಿಡಿಸಲು ಮನೆಮಂದಿಯೆಲ್ಲರೂ ಮನೆಯೊಳಗಿದ್ದ ಚೂರುಪಾರು ಭತ್ತ, ಅಕ್ಕಿ, ತೆಂಗಿನಕಾಯಿಗಳ ದಾಸ್ತಾನುಗಳನ್ನು ಬಿಡಿಗಾಸಿಗೆ ಮಾರಿ ದುಡ್ಡು ಹೊಂದಿಸುವುದು ಎಲ್ಲವೂ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರಿದ್ದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ










