Advertisement

ಅಂಕಣ

ಒಂದಿಷ್ಟು ಜವಾಬ್ದಾರಿಯನೂ ಕಲಿಸೋಣ: ಎಸ್. ನಾಗಶ್ರೀ ಅಜಯ್ ಅಂಕಣ

ಒಂದಿಷ್ಟು ಜವಾಬ್ದಾರಿಯನೂ ಕಲಿಸೋಣ: ಎಸ್. ನಾಗಶ್ರೀ ಅಜಯ್ ಅಂಕಣ

ಬೆಳೆಯುವ ಕಾಲದಲ್ಲಿ ಮಕ್ಕಳಿಗೆ ಕಷ್ಟ ಗೊತ್ತಾಗಬಾರದು. ನಾವು ಪಟ್ಟ ಕಷ್ಟ ಅವರಿಗೆ ಸೋಕಬಾರದು ಎಂದು ಶ್ರಮಿಸಿದ ತಂದೆತಾಯಿಯರಿಗೆ ಈ ಬಗೆಯ ಸವಾಲುಗಳು ಹೆಚ್ಚು. ಚೆನ್ನಾಗಿ ಓದಿಸಬೇಕು. ಒಳ್ಳೆಯ ಊಟ, ಬಟ್ಟೆ, ಗಾಡಿ ಕೊಡಿಸಬೇಕು. ಅನುರೂಪ ಜೋಡಿಯನ್ನು ಹುಡುಕಬೇಕು. ಅವರ ಬಾಳು ಬಂಗಾರವಾಗಬೇಕು. ಎಂಬ ವಿಷಯಗಳೇ ಪ್ರಾಧಾನ್ಯತೆ ಪಡೆದು, ಮಕ್ಕಳಿಗೆ ತಮ್ಮ ಹೆತ್ತವರ ಹಿನ್ನೆಲೆ, ಕಷ್ಟ, ಅವಮಾನ, ಅಸಹಾಯಕತೆಗಳ ಪರಿಚಯವೇ ಇರುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ

read more
ಪ್ರೀತಿಯ ಅರ್ಥವಾದರೂ ಏನು ಹೇಳು?: ಆಶಾ ಜಗದೀಶ್ ಅಂಕಣ

ಪ್ರೀತಿಯ ಅರ್ಥವಾದರೂ ಏನು ಹೇಳು?: ಆಶಾ ಜಗದೀಶ್ ಅಂಕಣ

ಏನೆಲ್ಲಾ ನಮ್ಮ ಆಕಾಂಕ್ಷೆಗಳನ್ನು ನಮ್ಮ ಮಕ್ಕಳ ತಲೆ ಮೇಲೆ ಹೇರಿ ಬೆಳೆಸುತ್ತಾ ಹೋಗುತ್ತೇವೆ. ಆದರೆ ಮುಖ್ಯವಾಗಿ ಏನನ್ನು ಕಲಿಸಬೇಕಿತ್ತೋ ಅದನ್ನೇ ಕಲಿಸದೆ ಹೋಗುತ್ತೇವೆ. ನಾವು ಕಲಿಸಲೇ ಬೇಕಾದದ್ದು ಎನ್ನುವ ಎಷ್ಟೋ ಇದೆ. ನಮ್ಮನ್ನು ಜೋಪಾನ ಮಾಡುವ ಅದಷ್ಟೋ ಗುಣಗಳಿವೆ. ಒಬ್ಬರನ್ನು ನಿಷ್ಕಲ್ಮಷವಾಗಿ ಇಷ್ಟಪಡುವುದನ್ನು, ಪ್ರೀತಿಸುವುದನ್ನು ಕಲಿಸುವುದೇ ಇಲ್ಲ ಯಾಕೆ… ಹುಟ್ಟಂದಿನಿಂದ ಬಂದ ಮುಗ್ಧತೆಯನ್ನ ಕೊಂದು ಅಲ್ಲಿ ಸ್ವಾರ್ಥ ಮತ್ತು ಲೋಭವನ್ನ ಮಾತ್ರ ತುಂಬಿ ನೀರೆರೆದು ಬೆಳೆಸುತ್ತಾ ಹೋಗುತ್ತೇವೆ ಯಾಕೆ…
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

read more
ಸಿಡ್ನಿಯಲ್ಲಿ ಕದಡಿದ ಶಾಂತಿ, ಮಾನಸಿಕ ಆರೋಗ್ಯ: ವಿನತೆ ಶರ್ಮ ಅಂಕಣ

ಸಿಡ್ನಿಯಲ್ಲಿ ಕದಡಿದ ಶಾಂತಿ, ಮಾನಸಿಕ ಆರೋಗ್ಯ: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಇಂತಹ ಸಮುದಾಯ ಶಾಂತಿ ಕದಡುವ ಘಟನೆಗಳು ನಡೆಯುವುದು ಅಪರೂಪ. ಕನಿಷ್ಟ ಶಿಕ್ಷಣ, ಮಧ್ಯಮ ವರ್ಗ ಸಮಾಜದ ಹೆಚ್ಚು ಜನರು ದುಡಿದು ಗಳಿಸಿ ಸಾಮಾನ್ಯ ಜೀವನ ನಡೆಸುವ ಮೌಲ್ಯವನ್ನಿಟ್ಟುಕೊಂಡು ಬದುಕುವವರು. ಒಂದು ರೀತಿಯಲ್ಲಿ ಹೇಳುವುದಾದರೆ ಏಕತಾನದಲ್ಲಿ ಚಲಿಸುವ ಸಮಾಜದ ಸ್ತರಕ್ಕೆ ಕುಂದು ಬಂದರೆ ಎಲ್ಲರಿಗೂ ತಬ್ಬಿಬ್ಬಾಗಿ ಬಿಡುತ್ತದೆ. ಸಿಡ್ನಿಯಲ್ಲಿ ನಡೆದ ಕಳೆದ ವಾರಾಂತ್ಯದ ಘಟನೆಯಿಂದ ಜನರು ವಿಚಲಿತರಾಗಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

read more
ಕೊಡು ಶಿವನೆ ಕುಡುಕನಲ್ಲದ ಗಂಡನ: ಸುಧಾ ಆಡುಕಳ ಅಂಕಣ

ಕೊಡು ಶಿವನೆ ಕುಡುಕನಲ್ಲದ ಗಂಡನ: ಸುಧಾ ಆಡುಕಳ ಅಂಕಣ

ಮಗುವನ್ನು ನೋಡಿದ ಮಾದೇವಿ ತನ್ನ ಬ್ಯಾಗಿನಲ್ಲಿದ್ದ ಅದೆಂಥದ್ದೋ ಪುಡಿಯನ್ನು ನೀರಿನಲ್ಲಿ ಕರಗಿಸಿ, ಇಷ್ಟಿಷ್ಟೇ ಮಗುವಿನ ಬಾಯಿಗೆ ಹಾಕುತ್ತ ಅವಳು ಎಚ್ಚರಗೊಳ್ಳುವಂತೆ ಮಾಡಿದ್ದಳು. ಅದೇನೋ ಮಾಯಕವಿತ್ತೋ ಆ ಬಿಳಿಯ ಪುಡಿಯಲ್ಲಿ! ಕಮಲಿಯ ಮಗನಿಗೆ ಇದ್ದಕ್ಕಿದ್ದಂತೆ ರಾತ್ರಿ ಜ್ವರ ಬಂದು ತಲೆಗೇರಿ ಏನೇನೋ ಬಡಬಡಾಯಿಸುತ್ತಿರುವಾಗಲೂ ಹಾಗೆ, ಅದೇನೋ ಮಾತ್ರೆಯ ತುಂಡೊಂದನ್ನು ಕುಡಿಸಿ, ರಾತ್ರಿಯಿಡೀ ತಲೆಗೆ ತಣ್ಣೀರ ಪಟ್ಟಿಯಿಟ್ಟು ಜ್ವರವನ್ನು ಓಡಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

read more
ಗ್ರೀನ್ ಕಾರ್ಡ್ ಎನ್ನುವ ದೇವರು: ಎಂ.ವಿ. ಶಶಿಭೂಷಣ ರಾಜು ಅಂಕಣ

ಗ್ರೀನ್ ಕಾರ್ಡ್ ಎನ್ನುವ ದೇವರು: ಎಂ.ವಿ. ಶಶಿಭೂಷಣ ರಾಜು ಅಂಕಣ

ಎಷ್ಟೋ ಸಲ ಸ್ವದೇಶಕ್ಕೆ ಹಿಂತಿರುಗುವ ಎನ್ನುವ ಅನಿಸಿಕೆ ಮೂಡುತ್ತದೆ, ಅದೊಂದು ಅನಿಸಿಕೆ ಅಷ್ಟೆ. ಅಮೇರಿಕಾದ ಜೀವನ ಶೈಲಿ, ಉತ್ತಮ ಜೀವನ, ತಮ್ಮ ಪಾಡಿಗೆ ತಾವು ಜೀವಿಸಲು ಇರುವ ಪ್ರಾಮುಖ್ಯತೆ, ಸರ್ಕಾರಿ ಕಚೇರಿಗಳಲ್ಲಿ ಇರದ ಲಂಚದ ಹಾವಳಿ, ಗುಣಮಟ್ಟದ ಆಹಾರ, ಎಲ್ಲಕಿಂತ ಹೆಚ್ಚಾಗಿ ತವರಲ್ಲಿ ಸಿಗುವ ಗೌರವ ಮುಂತಾದುವುಗಳನ್ನು ಬಿಡಲು ಮನಸಾಗದೆ ಅಮೆರಿಕೆಯಲ್ಲಿಯೇ ಕೊನೆಯವರೆಗೂ ಜೀವನ ಸಾಗುವುದು.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

read more
ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ನಾವೆಲ್ಲಾ ನೀರಿನಲ್ಲಿ ನುಣುಪಾದ ಕಲುಗಳನ್ನು ಎಸೆಯುತ್ತಾ ಆಡುತ್ತೇವೆ. ಚಪ್ಪಟೆಯಾದ ನುಣುಪುಗಲ್ಲುಗಳನ್ನು ಒಂದರ ಮೇಲೆ ಒಂದರಂತೆ ಜೋಡಿಸಿ, ಅದಕ್ಕೇನೋ ಶಕ್ತಿ ಬಂತೆಂದು ಭಾವಿಸಿ, ‘ನಾವು ಆದಷ್ಟು ಬೇಗ ತಲೆ ಮೇಲೊಂದು ಸೂರು ಮಾಡಿಕೊಳ್ಳುವಂತಾಗಲಿ ಶಕ್ತಿಯೇ’ ಎಂದು ಬೇಡಿ, “ಮತ್ತೊಮ್ಮೆ ಬರುವವರೆಗೂ ಹೀಗೆ ಇರಲಿ” ಎಂದು ಕೇಳಿಕೊಂಡು ಪ್ರಾರ್ಥನೆಯನ್ನು ಕೊನೆಗೊಳ್ಳಿಸಿಕೊಳ್ಳುತ್ತೇವೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

read more
ಯುಗಾದಿ ಹಬ್ಬ; ಶರತ್ಕಾಲದ ಚುಂಬಕ: ವಿನತೆ ಶರ್ಮ ಅಂಕಣ

ಯುಗಾದಿ ಹಬ್ಬ; ಶರತ್ಕಾಲದ ಚುಂಬಕ: ವಿನತೆ ಶರ್ಮ ಅಂಕಣ

ಅಮೆರಿಕಕ್ಕೆ ಹೋಲಿಸಿದರೆ ಅಷ್ಟೊಂದು ಸಂಪತ್ತು, ಸಿರಿತನವಿಲ್ಲದಿದ್ದರೂ ಅದೇ ಮಟ್ಟದ ಶ್ರದ್ಧೆ ಮತ್ತು ಆಸಕ್ತಿಗಳನ್ನು ಇಟ್ಟುಕೊಂಡೆ ಬ್ರಿಟನ್ನಿನ ಕನ್ನಡ ಸಂಘಗಳು ಭಾರತೀಯ ಹಬ್ಬಗಳ ಜೊತೆ ಭಾಷೆ-ಸಂಸ್ಕೃತಿಯನ್ನೂ ಸೇರಿಸಿಕೊಂಡು ಕಾರ್ಯಕ್ರಮಗಳನ್ನು ನಡೆಸಿ ಮಿಂಚುತ್ತವೆ. ಈ ಹಿರಿಯಕ್ಕಂದಿರ ಹಿಂದೆ ಸೇರುವುದು ಮತ್ತೆಲ್ಲಾ ದೇಶಗಳ ಕನ್ನಡ ಸಂಘಗಳು ಮತ್ತು ಅವುಗಳ ಆಚರಣೆಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

read more
ಅಮೃತವಾಹಿನಿಯೊಂದು ಹರಿಯುತಿದೆ: ಸುಧಾ ಆಡುಕಳ ಅಂಕಣ

ಅಮೃತವಾಹಿನಿಯೊಂದು ಹರಿಯುತಿದೆ: ಸುಧಾ ಆಡುಕಳ ಅಂಕಣ

ಅಮ್ಮನ ಮಾತು ಕೇಳಿ ಭಾವುಕಳಾದ ಅವಳು, “ಕಷ್ಟ ಬಂದಾಗಲೇ ನಮ್ಮೋರು, ತಮ್ಮೋರು ಯಾರಂತ ಗೊತ್ತಾಗೂದು ಅಮ್ಮಾ. ತನ್ನ ದಣಿ ಮಾತು ಅಂದ್ರೆ ಶಾಸ್ನ ಅಂತ ಹೇಳ್ತಾನೇ ಇವ್ರು ಜೈಲಿಗೋದ್ರು. ದಣಿ ಈಗ ಗುರುತೇ ಇಲ್ಲದೋರ ಹಾಗೆ ಕಾರಲ್ಲಿ ಬರ‍್ರ ಹೋಯ್ತರೆ. ಬದುಕೇ ಮುಗದೋಯ್ತು ಅಂದ್ಕಂಡು ಹೊಳೆದಾಟಿ ಬಂದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಏಳನೆಯ ಕಂತು ನಿಮ್ಮ ಓದಿಗೆ

read more
ದುಡಿದಷ್ಟೂ ಖರ್ಚು…: ಶಶಿಭೂಷಣ ರಾಜು ಅಂಕಣ

ದುಡಿದಷ್ಟೂ ಖರ್ಚು…: ಶಶಿಭೂಷಣ ರಾಜು ಅಂಕಣ

ಭಾರತೀಯರಿಗೆ ಹೆಚ್ಚು ಕಾಟ ಕೊಡುವುದು ಇಲ್ಲಿನ ಹವಾಮಾನ. ತಂಪಿನ ರಾಜ್ಯಗಳಲ್ಲಿ ನೆಲೆಸುವವರಿಗೆ ಹೆಚ್ಚು ಹಿಂಸೆ. ಬೇಸಿಗೆಯಲ್ಲಿ ಬಿಸಿ ಹೆಚ್ಚಿದ್ದರೂ ತಾಳಬಹದು, ಆದರೆ ಚಳಿಗಾಲದಲ್ಲಿ ಅತೀ ಹೆಚ್ಚಿನ ಚಳಿ ಇರುತ್ತದೆ. ಕೆಲವು ರಾಜ್ಯಗಳಲ್ಲಿ ಹಿಮ ಸುರಿಯುತ್ತದೆ. ಮನೆಯಲ್ಲಿ, ಕಾರಿನಲ್ಲಿ, ಅಂಗಡಿಗಳಲ್ಲಿ, ಕಚೇರಿಗಳಲ್ಲಿ ಹೀಟರ್ ಇರುವುದರಿಂದ ಪರ್ವಾಗಿಲ್ಲ, ಆದರೆ ಹೊರಗಡೆ ಹೆಚ್ಚಿನ ಸಮಯ ಕಳೆಯುವುದು ಕಷ್ಟ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ