Advertisement

ಅಂಕಣ

ಲೋಕದೃಷ್ಟಿಯೂ ಲೋಕಾ ರೂಢಿಗಳು: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಲೋಕದೃಷ್ಟಿಯೂ ಲೋಕಾ ರೂಢಿಗಳು: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಸಿಕ್ಕೊಂಡು ಸೀರಿ ಉಟ್ಕಂಡಿಯವೂ ಹುಷಾರು..: ಮನೆಯ ಹಿರಿಯ ಹೆಂಗಸರು ಹಿರಿಯರಿಗೆ ಹೇಳಿ ಕಳಿಸುವ ಅತಿ ಎಚ್ಚರಿಕೆಯ ಮಾತು ಇದು. ಹಲವು ನೆರಿಗೆಗಳನ್ನು ಸೀರೆಗೆ ಆಧ್ಯಾರೋಪಿಸಿದಂತಹ ಕಟು ಎಚ್ಚರ ಇಲ್ಲಿ ಸಂಕೇತದಂತೆ ಇದೆ. ಎಡವದಿರುವ ಜಾರದಿರುವ ಎಚ್ಚರ ಹೆಜ್ಜೆ ಹೆಜ್ಜೆಗೂ ಗಂಟೆ ಹೊಡೆಯುತ್ತಿರುತ್ತದೆ. ಜನಪದ ಧಾರೆಯಲ್ಲಿ ಇಂಥದೊಂದು ಸ್ತ್ರೀ ಕೇಂದ್ರಿತ ಎಚ್ಚರದ ಮಾತುಗಳು ಉದ್ದಕ್ಕೂ ಸಿಗುತ್ತವೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣದ ಎರಡನೆಯ ಬರಹ

read more
ಕಡಲಿನಗಲದ ಕಣ್ಣುಗಳೊಳಗಿನ ಸುನಾಮಿ…: ಆಶಾ ಜಗದೀಶ್ ಅಂಕಣ

ಕಡಲಿನಗಲದ ಕಣ್ಣುಗಳೊಳಗಿನ ಸುನಾಮಿ…: ಆಶಾ ಜಗದೀಶ್ ಅಂಕಣ

ನಾವು ಅದೆಷ್ಟು ತೀವ್ರವಾಗಿ ಅತ್ತಿದ್ದೇವೆ, ಒಬ್ಬರನ್ನೊಬ್ಬರು ಹಂಬಲಿಸಿದ್ದೇವೆ, ಬಿಟ್ಟು ಬದುಕಲು ಸಾಧ್ಯವೇ ಇಲ್ಲ ಎನಿಸುವಷ್ಟು ಹಚ್ಚಿಕೊಂಡಿದ್ದೇವೆ. ಜೊತೆಯಲ್ಲಿರುವಂತೆ ಭ್ರಮಿಸಿದ್ದೇವೆ. ಭ್ರಮೆಯಿಂದ ತಿಳಿದೆದ್ದು ವಿಹ್ವಲಗೊಂಡಿದ್ದೇವೆ. ಅದೊಂದು ದಿನ ನಡುರಾತ್ರಿ, ಒಂದು ಕನಸು ಅರಳತೊಡಗಿತ್ತು; ನೈಜವೆನಿಸುವಷ್ಟೇ ಸಹಜವಾಗಿ. ನಾವಿಬ್ಬರೂ ಎರೆಡು ಪುಟ್ಟ ಗಿಳಿಗಳಂತೆ ಒಟ್ಟೊಟ್ಟಾಗಿ ಒತ್ತಿಕೊಂಡು ಕೂತು, ನಿಂತು, ಮಲಗಿ ಆಟವಾಡುತ್ತಿದ್ದೆವು. ಮುದ ಮತ್ತು ಮುಗ್ಧ… ಯಾರ ಸಂಚೋ ತಿಳಿಯದು. ಕನಸು ಒಡೆಯಿತು. ಕಣ್ಣು ತೆರೆದಾಗ ನೀನಿಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

read more
ಮಿಶ್ರಭಾವಗಳ ಮೂರ್ತರೂಪ ‘ಆಸ್ಟ್ರೇಲಿಯಾ ಡೇʼ : ವಿನತೆ ಶರ್ಮ ಅಂಕಣ

ಮಿಶ್ರಭಾವಗಳ ಮೂರ್ತರೂಪ ‘ಆಸ್ಟ್ರೇಲಿಯಾ ಡೇʼ : ವಿನತೆ ಶರ್ಮ ಅಂಕಣ

ಮೂಲನಿವಾಸಿ ಜನಸಮುದಾಯಗಳ ಬೆಂಬಿಡದ ಪ್ರಯತ್ನಗಳಿಂದ ಅವರ ಸಂಸ್ಕೃತಿಗಳು, ಭಾಷೆಗಳ ಬಗ್ಗೆ ಗೌರವ ಹೆಚ್ಚುತ್ತಿದೆ. ಇದರ ಜೊತೆಗೆ ಆಸ್ಟ್ರೇಲಿಯಾದಲ್ಲಿ ಬೆಳೆಯುತ್ತಿರುವ ಬಹುಸಂಸ್ಕೃತಿಗಳ ಪ್ರಭಾವ, ವಲಸಿಗರ ಸಂಖ್ಯೆ ಜನರ ಮನೋಭಾವನೆಯನ್ನು ಬದಲಿಸುತ್ತಿದೆಯೇನೋ. ಇವರುಗಳ ಬಹುಸಂಸ್ಕೃತಿ ಆಚಾರ-ವಿಚಾರಗಳ, ಆಹಾರಪದ್ಧತಿಗಳ ವೈವಿಧ್ಯತೆಗಳಿಂದ, ಸಾಮ್ಯತೆಗಳಿಂದ ಪರಸ್ಪರರನ್ನು ಒಪ್ಪಿಕೊಳ್ಳುವ ಸಾಧ್ಯತೆಗಳು ವಿಸ್ತರಿಸುತ್ತಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಶಾಲೆಗೆ ಹೋದರೂ ನೀಲಿಗೆ ಹುಲಿಯದೇ ಮುಖ ನೆನಪಿಗೆ ಬರುತ್ತಿತ್ತು. ತನ್ನ ಸಹಪಾಟಿಗಳಿಗೂ ಹುಲಿಯನ್ನು ತೋರಿಸಬೇಕು ಅನಿಸತೊಡಗಿತು. ಮಾಸ್ತ್ರು ಪಾಠ ಮಾಡುತ್ತಿರುವಂತೆಯೇ ಪಿಸಪಿಸನೆ ಆಚೀಚೆಗೆ ಕುಳಿತವರಿಗೆ ವಿಷಯ ಮುಟ್ಟಿಸಿದಳು. ಇಂದೇನು? ಯಾವ ಮಕ್ಕಳೂ ಪಾಠದೆಡೆಗೆ ಗಮನವನ್ನೇ ನೀಡುತ್ತಿಲ್ಲವೆಂದು ಕ್ಷಣಕಾಲ ದಿಟ್ಟಿಸಿದ ಗೌಡಾ ಮಾಸ್ತ್ರು ಸುದ್ದಿಮೂಲವನ್ನು ಪತ್ತೆ ಹಚ್ಚಿಯೇಬಿಟ್ಟರು. ನೀಲಿಯನ್ನು ನಿಲ್ಲಿಸಿ ವಿಷಯ ಕೇಳಿದ್ದೇ ತಡ ಪಟಪಟನೆ ಪಟಾಕಿ ಸರಕ್ಕೆ ಬೆಂಕಿ ಕೊಟ್ಟಂತೆ ಎಲ್ಲ ಕತೆಯನ್ನು ಹೇಳಿಬಿಟ್ಟಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

read more
“ಕರ್ನಾಟಕದ ಕಸ್ತೂರಬಾ”: ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಂಕಣ

“ಕರ್ನಾಟಕದ ಕಸ್ತೂರಬಾ”: ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಂಕಣ

ಅಸ್ಪೃಶ್ಯತೆ ನಿವಾರಣೆಯನ್ನು ತಿಳಿಸಿಕೊಟ್ಟ ಮಹಾತ್ಮ ಗಾಂಧೀಜಿ ಅವರು ದೀನ, ದಲಿತ, ದುರ್ಬಲರ ಒಳಿತಿಗಾಗಿ ಮಾಡುವ ನಿಸ್ವಾರ್ಥ ಸೇವೆ ಅತ್ಯಂತ ಪವಿತ್ರವಾದದ್ದು ಹಾಗೂ ಅದು ದೇವರನ್ನು ಪೂಜಿಸಿದಷ್ಟೇ ಫಲ ದೊರೆಯುವ ಸೇವಾ ಕಾರ್ಯ, ಅಸ್ಪೃಶ್ಯರನ್ನು ಈ ಕಾರಣದಿಂದಲೇ ಗಾಂಧೀಜಿಯವರು ದಲಿತರು ಎಂದು ಕರೆಯುವ ಮೂಲಕ ಅವರ ಉದ್ಧಾರವೇ ಜನಾರ್ಧನನ ಸೇವೆ ಎಂಬುದನ್ನು ದೃಢವಾಗಿ ನಂಬಿದ್ದರಲ್ಲದೆ ಗಾಂಧಿಜೀಯವರ ಅನುಯಾಯಿಗಳೆಲ್ಲ ಕೇರಿಯ ಜನರಗಳಿಗಾಗಿ ಸೇವೆ ಮಾಡುವಂತಹ ವಾತಾವರಣವನ್ನು ನಿರ್ಮಿಸಿದರು.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ “ಹೊಸ ಓದು” ಹೊಸ ಓದು ಅಂಕಣ

read more
ಲಿಂಗರಾಜ ಸೊಟ್ಟಪ್ಪನವರ್‌ ಹೊಸ ಅಂಕಣ “ಉತ್ತರದ ಕತೆಗಳು” ಶುರು..

ಲಿಂಗರಾಜ ಸೊಟ್ಟಪ್ಪನವರ್‌ ಹೊಸ ಅಂಕಣ “ಉತ್ತರದ ಕತೆಗಳು” ಶುರು..

ನಿತ್ಯ ಬದುಕಿನ ಜಂಜಡಗಳನ್ನು ಹಗುರಗೊಳಿಸಿಕೊಳ್ಳುವ ಸಾಧನ ಮಾರ್ಗಗಳಾಗಿ ಇವು ಬಳಕೆಯಲ್ಲಿವೆ. ಇವುಗಳು ವೈಯಕ್ತಿಕ ಬದುಕನ್ನು ರಂಜಿನೀಯಗೊಳಿಸುವಲ್ಲಿ ಮತ್ತು ಸಾಮಾಜಿಕವಾದ ಪರಸ್ಪರವಾದ ಒಂದು ಬಂಧವನ್ನು ಮನುಷ್ಯ ಮನುಷ್ಯರ ನಡುವೆ ರೂಪಿಸುವಲ್ಲಿ ಮಹತ್ವವಾದವು. ಇದನ್ನು ಜಾನಪದ ದಾರಿ ಸಾಬೀತುಪಡಿಸಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ ಉತ್ತರ ಕರ್ನಾಟಕದ ಬದುಕು ಮತ್ತು ಸಂಸ್ಕೃತಿಯ ಕುರಿತ ಅಂಕಣ “ಉತ್ತರದ ಕತೆಗಳು”

read more
ಹೊಸ ಹಾದಿಯಲ್ಲಿ ನಡಿಗೆಯ ಸವಾಲುಗಳು..: ಎಸ್ ನಾಗಶ್ರೀ ಅಜಯ್ ಅಂಕಣ

ಹೊಸ ಹಾದಿಯಲ್ಲಿ ನಡಿಗೆಯ ಸವಾಲುಗಳು..: ಎಸ್ ನಾಗಶ್ರೀ ಅಜಯ್ ಅಂಕಣ

ಕೇಳಿದವರಿಗೆ ಏನು ಮಹಾ ಎನ್ನಿಸುವ ಸಣ್ಣಪುಟ್ಟ ವಿಚಾರಗಳು ಹೊಸ ವಾತಾವರಣದಲ್ಲಿ ಚಪ್ಪಲಿಯೊಳಗೆ ಸೇರಿದ ಮರಳಿನ ಕಣದಂತೆ ಒತ್ತುತ್ತಿರುತ್ತವೆ. ಒಂದೇ ಜಾತಿ, ಉಪಜಾತಿ, ಪಂಗಡದಲ್ಲೇ ಮದುವೆಯಾದರೂ ಮನೆಯ ಪದ್ಧತಿ, ಸಂಪ್ರದಾಯ, ಇಷ್ಟಾನಿಷ್ಟಗಳಲ್ಲಿ ಹಲವು ವ್ಯತ್ಯಾಸಗಳು. ಬೆರಳು ಚುರಕ್ಕೆನ್ನುವಷ್ಟು ಸುಡುವ, ಹಬೆಯಾಡುವ ಊಟ ಇಷ್ಟಪಡುವ ಮನೆಯಿಂದ, ತಣ್ಣಗೆ ಆರಿ ಅಕ್ಷತೆಯಾದ ಅನ್ನ, ಉಗುರುಬೆಚ್ಚಗಿನ ಸಾರು ತಿನ್ನುವ ಮನೆಗೆ ಬಂದರೆ ತುತ್ತು ಗಂಟಲಿನಿಂದ ಕೆಳಗಿಳಿಯಲ್ಲ.
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

read more
ತಿಜೋರಿಯಿಂದ ತಪ್ಪಿಸಿಕೊಂಡ ಘಳಿಗೆಗಳೆಷ್ಟೋ…: ಆಶಾ ಜಗದೀಶ್ ಅಂಕಣ

ತಿಜೋರಿಯಿಂದ ತಪ್ಪಿಸಿಕೊಂಡ ಘಳಿಗೆಗಳೆಷ್ಟೋ…: ಆಶಾ ಜಗದೀಶ್ ಅಂಕಣ

ಸುಮ್ಮನೇ ತಟ್ಟೆಯ ಮುಂದೆ ಕುಳಿತು ಸಮಯ ಉರುಳದಂತೆ, ಈ ತುತ್ತು ಮತ್ತಾರದೋ ಚೀಲ ಸೇರಲಿ ಎಂದಷ್ಟೇ ಪ್ರಾರ್ಥಿಸುತ್ತಾ… ಇಷ್ಟೇ ಅಲ್ಲವಾ ಈ ಬದುಕು ಎನ್ನುವ ಅಂತಿಮ ಸತ್ಯದ ದರ್ಶನವಾದಾಗ ಯಾವುದೆಲ್ಲವನ್ನು ಬೇಕು ಎಂದುಕೊಳ್ಳುತ್ತಿದ್ದೇವೋ ಅದಾವುದೂ ನಮ್ಮ ಆತ್ಯಂತಿಕ ಜರೂರತ್ತಿನ ಪಟ್ಟಿಯಲ್ಲಿ ಇರಲೇ ಇಲ್ಲ ಎನ್ನುವುದನ್ನು ಪ್ರಯಾಸದಿಂದ ಮನಗಾಣುತ್ತಾ… ಯಾವುದೂ ಪೂರ್ಣವಲ್ಲ ಇಲ್ಲಿ… ಈ ರೈಲು ಬಂಡಿ, ನಾವು ಹತ್ತುವ ಮುಂಚೆಯೇ ಪಯಣ ಆರಂಭಿಸಿತ್ತು ಮತ್ತು ನಾವು ಇಳಿದ ನಂತರವೂ ಪಯಣಿಸುತ್ತಲೇ ಇರುತ್ತದೆ..
ಆಶಾ ಜಗದೀಶ್ ಅಂಕಣ “ಆಶಾ ಲಹರಿ”

read more
ಕಾಲಕ್ಕೆ ಶರಣು ಎನ್ನೋಣ: ವಿನತೆ ಶರ್ಮ ಅಂಕಣ

ಕಾಲಕ್ಕೆ ಶರಣು ಎನ್ನೋಣ: ವಿನತೆ ಶರ್ಮ ಅಂಕಣ

ವಾರಾಂತ್ಯಗಳಲ್ಲಿ ದೇಶದ ರಾಜಧಾನಿ ನಗರಗಳಲ್ಲಿ ನಡೆಸುವ ಸಾರ್ವಜನಿಕ ಪ್ರದರ್ಶನಗಳು, ಬಹುಸಂಸ್ಕೃತಿಗಳವರ ಕಾರ್ಯಕ್ರಮಗಳು ಹೆಚ್ಚಾಗಿವೆ. ೨೦೨೩ ರ ಕೊನೆಯಲ್ಲಿ ನಾವು ಮೂರು, ನಾಲ್ಕು ಬಾರಿ ಇಸ್ರೇಲ್, ಪ್ಯಾಲೆಸ್ಟೈನ್-ಗಾಝಾ, ಯೂಕ್ರೇನ್ ಮೂಲಗಳ ಜನರು ನಡೆಸುತ್ತಿದ್ದ ಪ್ರದರ್ಶನಗಳ ಪರಿಣಾಮಕ್ಕೆ ಸಿಲುಕಿದ್ದೆವು. ಅದೇನೂ ದೊಡ್ಡ ವಿಷಯವಲ್ಲ ಬಿಡಿ. ಪ್ರದರ್ಶನದಲ್ಲಿ ಭಾಗವಹಿಸಿದ್ದ ಪ್ರತಿರೋಧಿಗಳು ಘೋಷಣೆಗಳನ್ನು ಕೂಗುತ್ತಾ ರಸ್ತೆಗಿಳಿದಾಗ ಪೊಲೀಸರು ರಸ್ತೆ ಬಂದ್ ಮಾಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ