ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ
ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೊಸ ಅಂಕಣ “ಹೊಸ ಓದು” ಆರಂಭ
ಶತಮಾನಗಳ ಹಿಂದಿನ ಕಥೆಗಳ ಆಶಯಕ್ಕೆ ಈ ಕಾಲಘಟ್ಟದ ಉತ್ತರಗಳ ಮಾದರಿಯ ಕಥೆಗಳನ್ನು ಬಯಲು ಮತ್ತು ಬೆಳಕು ಎಂಬರ್ಥದಲ್ಲಿ ಕತೆಗಾರ ನಿರೂಪಣೆಯ ಕ್ಯೂರೆಟರ್ ಮತ್ತು ದೃಷ್ಟಿಕೋನದ ಗ್ರಾಫರ್ ಆಗಿರಬೇಕೆನ್ನುವ ಪೊನ್ನಾಚಿ ಅವರ ಕಥೆಗಳು ಪ್ರತಿಪಾದಿತ ಮತ್ತು ಸಾಧಿತ ಕಥೆಗಳು ಪ್ರತಿನಿಧಿಸುವ ವಸ್ತು ಹಳೆಯದಾದರೂ ಕಥೆಗಳ ಅಂತ್ಯ ಪ್ರಗತಿಪರತೆಯನ್ನು ಎತ್ತಿ ಹಿಡಿದಿವೆ.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆಯುವ ಹೊಸ ಕೃತಿಗಳ ಪರಿಚಯಿಸುವ ಹೊಸ ಅಂಕಣ
ದಕ್ಕಿದ್ದಕ್ಕೆ ಕೃತಜ್ಞತೆ ಇರಲಿ : ಎಸ್ ನಾಗಶ್ರೀ ಅಜಯ್ ಅಂಕಣ
ತಮಗೆ ಬೇಕಾದ ಕೋರ್ಸಿಗೆ ಪ್ರವೇಶ ದೊರೆಯಲಿಲ್ಲ, ಅಂದುಕೊಂಡಷ್ಟು ಅಂಕ ಬರಲಿಲ್ಲ, ಪ್ರೀತಿಸಿದ ಹುಡುಗಿ ಕರೆ ಸ್ವೀಕರಿಸಲಿಲ್ಲ, ಮದುವೆಗೆ ಮನೆಯಲ್ಲಿ ಒಪ್ಪಿಗೆಯಿಲ್ಲ, ವರ್ಷದೊಳಗೆ ಮಕ್ಕಳಾಗಲಿಲ್ಲ ಎಂಬ ‘ಇಲ್ಲ’ಗಳಿಗೆ ಜೀವತೆರುವ, ಬದುಕಿದ್ದರೂ ಉತ್ಸಾಹ, ಆಶಾವಾದವನ್ನೇ ಕಳೆದುಕೊಳ್ಳುವವರಿದ್ದಾರೆ. ಮುಂದೇನು? ಮುಂದೇನು?
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ
ಆಶಾ ಜಗದೀಶ್ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ…
ಪ್ರೀತಿ ಮಾತ್ರ ಪೂರ್ಣ ಸತ್ಯ. ಮೋಸ ಎಂಬುದು ಅರ್ಧ ಸತ್ಯ. ನಾವು ಯಾರನ್ನೂ ಮೋಸಗೊಳಿಸಲು ಸಾಧ್ಯವಿಲ್ಲ. ನಮ್ಮಿಂದ ನಾವೇ ಪದೇ ಪದೇ ಮೋಸಹೋಗುತ್ತೇವೆ. ಅದೂ ಹೃದಯವಿದ್ರಾವಕವಾಗಿ. ನಮ್ಮನ್ನು ನಾವೇ ನೋಯಿಸಿಕೊಂಡು ಇತರರನ್ನು ದೂರುತ್ತೇವೆ… ನಿನ್ನನ್ನು ಪ್ರೀತಿಸದಿರಲು ಸಾಧ್ಯವಾಗುವುದಾ…
ಆಶಾ ಜಗದೀಶ್ ಬರೆಯುವ ಬದುಕೆಂಬ ಭಾವಗೀತೆಯ ಕುರಿತ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ ಮಂಗಳವಾರಗಳಂದು ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ
ಬೇಸಿಗೆ ರಜೆಯೆಂದರೆ …: ವಿನತೆ ಶರ್ಮ ಅಂಕಣ
ಆಸ್ಟ್ರೇಲಿಯಾದ ಬೇಸಿಗೆಯ ಕಡುಬಿಸಿಯನ್ನು ತಪ್ಪಿಸಿಕೊಳ್ಳಲು ಕೆಲವರು ತಂಪು ಪ್ರದೇಶಗಳನ್ನು ಆಯ್ದುಕೊಳ್ಳುತ್ತಾರೆ. ಆದರೆ ಮುಂಚಿತವಾಗಿಯೇ ಬೇಸಿಗೆಯ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡೇ ಅನೇಕ ಆಸ್ಟ್ರೇಲಿಯನ್ ಸಂಸ್ಥೆಗಳು, ಸರಕಾರದ ಪ್ರವಾಸೀ ಇಲಾಖೆಗಳು ದೇಶದ ಉದ್ದಗಲಕ್ಕೂ ಹಾಸಿ ಹರಡಿರುವ ನೂರಾರು ಪ್ರವಾಸಸ್ಥಳಗಳ ಬಗ್ಗೆ ಆಕರ್ಷಕ ಜಾಹಿರಾತುಗಳನ್ನು ಕೊಡುತ್ತಾ, ಹಲವಾರು ತರಹದ ರಿಯಾಯ್ತಿಗಳು, ಸೌಲಭ್ಯಗಳ ಆಮಿಷವೊಡ್ಡುತ್ತಾರೆ. ಇವು ಮಧ್ಯಮ ವರಮಾನದ ಕುಟುಂಬಗಳನ್ನು ಕೈಬೀಸಿ ಕರೆಯುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಡೌನ್ ಅಂಡರ್ ಕ್ರಿಸ್ಮಸ್ ಕಲಾಪಗಳು: ವಿನತೆ ಶರ್ಮ ಅಂಕಣ
ಪ್ರತಿವರ್ಷ ಅಕ್ಟೋಬರ್ ಕಡೆಗೆ ಅಥವಾ ನವೆಂಬರ್ ಶುರುವಿನಲ್ಲಿ ಆಯಾ ಸ್ಥಳೀಯ ನಗರಪಾಲಿಕೆಗಳು ಸಾರ್ವಜನಿಕ ಉದ್ಯಾನವನಗಳಲ್ಲಿರುವ ನೀರಿನ ಕಾರಂಜಿಗಳು, ಮರಗಳು, ಕಮಾನುಗಳು, ಸೇತುವೆಗಳು, ರಸ್ತೆಗಳ ಕಮಾನುಗಳು ಇತ್ಯಾದಿಗಳಿಗೆ ಈ ರೀತಿ ಅಲಂಕಾರಗಳನ್ನು ತೊಡಿಸುತ್ತಾರೆ. ಹೊಸವರ್ಷದ ಆರಂಭದಲ್ಲಿ ತೆಗೆದು ಪುನಃ ಪೆಟ್ಟಿಗೆಗೆ ಸೇರಿಸಿ ಭದ್ರಪಡಿಸುತ್ತಾರೆ. ಕತ್ತಲಾಗುತ್ತಿರುವಂತೆ ಈ ಚಿತ್ತಾಕರ್ಷಕ ಅಲಂಕಾರಗಳನ್ನು ನೋಡಲು ಜನರು ಹೊರಡುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ನಮ್ಮ ಆಹಾರ ನಮ್ಮ ಸಮುದಾಯದ ಹಸಿರುಕಣ್ಣು!: ವಿನತೆ ಶರ್ಮ ಅಂಕಣ
ಎಲ್ಲರ ಜಗಳದಲ್ಲಿ ಬಡವಾಗಿರುವುದು ನಾವೇ ನಾವು, ಸಾಮಾನ್ಯರು. ಏಕೆಂದರೆ ನಾವು ಪ್ರಕೃತಿಯ ಭಾಗವಲ್ಲವೇ! ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಬೆಳೆಯುವ ಮಣ್ಣಿಗೆ ಅನಾರೋಗ್ಯವುಂಟಾದರೆ ನಮ್ಮ ಆರೋಗ್ಯವೂ ಕೆಡುತ್ತದೆ ಎಂದು ಕಳೆದ ‘ಆಸ್ಟ್ರೇಲಿಯಾ ಪತ್ರ’ದಲ್ಲಿ ಬರೆದಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
ವಿಶ್ವ ಕಪ್ 2023ನ ಕೊನೆಯ ಹಂತ: ಇ.ಆರ್. ರಾಮಚಂದ್ರನ್ ಅಂಕಣ
ಭಾರತದ ಇನಿಂಗ್ಸ್ ಚೆನ್ನಾಗಿಯೇ ಶುರುವಾಯಿತು. ಎಂದಿನಂತೆ ರೋಹಿತ್ ಶರ್ಮ ರಭಸದ ಹೊಡೆತದಿಂದ ಶುರು ಮಾಡಿದರು. ಒಂದು ಸಿಕ್ಸರ್ ಮತ್ತು ಬೌಂಡರಿ ಹೊಡೆದ ಮೇಲೆ ಮತ್ತೆ ಸಿಕ್ಸರ್ ಹೊಡೆಯಲು ಯತ್ನಿಸಿದಾಗ ಬಾಲ್ ಸ್ವಲ್ಪ ಸ್ಪಿನ್ ಆದ ಕಾರಣ ಅದು ಬೌಂಡರಿಗೆ ಹೋಗಲಿಲ್ಲ. ಅದನ್ನು ಬೆನ್ನಟ್ಟಿಕೊಂಡು ಹೋದ ಟ್ರಾವಿಸ್ ಹೆಡ್ ಅತ್ಯಂತ ಕಠಿಣವಾದ ಕ್ಯಾಚನ್ನು ಕೆಳಗೆ ಬೀಳುತ್ತಲೇ ಹಿಡಿದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ
ಭೂಮಿಯ ಆರೋಗ್ಯ ನಮ್ಮ ಆರೋಗ್ಯವೆಂದ ಮಕ್ಕಳು : ಡಾ. ವಿನತೆ ಶರ್ಮ ಅಂಕಣ
ಈ ಪತ್ರವನ್ನು ಬರೆಯುತ್ತಿರುವಾಗ ಬಂದ ಸುದ್ದಿ ಪ್ರಕಾರ ಗೋಲ್ಡ್ ಕೋಸ್ಟ್ ಪ್ರದೇಶದಲ್ಲಿ ಕೋಲ್ಮಿಂಚಿನ ಭಾರಿ ಮಳೆ ಬಿದ್ದು ಮುಷ್ಟಿಗಾತ್ರದ ಆಲಿಕಲ್ಲು ಸುರಿದಿದೆ. ಭಾರಿಮಳೆ ಸೂಚನೆ ಸಿಕ್ಕಿದ ಕೂಡಲೇ ಹವಾಮಾನ ಸಿಬ್ಬಂದಿ ಅದನ್ನು ಸಾರ್ವಜನಿಕರಿಗೆ ತಿಳಿಸಿದರೂ ಅನೇಕರು ಮಳೆಗೆ ಸಿಲುಕಿ ಪರಿಸ್ಥಿತಿ ಏರುಪೇರಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ










