ತೇಜಸ್ವಿ ನಮ್ಮನ್ನಗಲಿದ ತಿಂಗಳಲ್ಲಿ, ಅವರಿದ್ದ ಊರಿನಲ್ಲಿ…: ಸುಕನ್ಯಾ ಕನಾರಳ್ಳಿ ಅಂಕಣ
ಭಾಷೆ ಅರ್ಥ ಮಾಡಿಸುವುದಕ್ಕಿಂತ ಅಪಾರ್ಥಕ್ಕೆ ಹಾದಿಯನ್ನು ಬಿಚ್ಚುತ್ತದೆ ಎನ್ನುವುದು ನನಗೆ ಗೊತ್ತು. ಕಲೆಯ ಸೃಷ್ಟಿಗೆ ಗ್ರಾಮೀಣ ಮತ್ತು ಪ್ರಕೃತಿ ತೆರೆದುಕೊಂಡಷ್ಟು ನಗರ ಮತ್ತು ಆಧುನಿಕ ತೆರೆದುಕೊಳ್ಳುವುದಿಲ್ಲವೊ ಏನೊ ಅಂತಷ್ಟೇ ಹೇಳಬೇಕಿತ್ತು. ಯಾಕೆಂದರೆ ಗ್ರಾಮೀಣ ಮತ್ತು ಪ್ರಕೃತಿಗಳಲ್ಲಿ ಸೌಂದರ್ಯ ಇರುತ್ತದೆ. ನಾವು ಕ್ಲಿಕ್ಕಿಸಲು ಮಾಲ್ಗೆ ಹೇಗೆ ಹೋಗುವುದಿಲ್ಲವೋ ಹಾಗೆಯೇ ಸ್ಲಮ್ಮಿಗೂ ಹೋಗುವುದಿಲ್ಲ. ಅದು ಫೋಟೋಗ್ರಾಫಿಕ್ ಸೌಂದರ್ಯವನ್ನು ಶುದ್ಧನೆಲೆಯಲ್ಲಿ ಅರ್ಥ ಮಾಡಿಕೊಳ್ಳುವ ಪರಿಣಿತರಿಗೆ ಮಾತ್ರ ಸಾಧ್ಯವೋ ಏನೋ. ಯಾಕೆಂದರೆ ಫೋಟೋಗ್ರಫಿ ಕೇವಲ ಹವ್ಯಾಸವಾದಾಗ ಕಣ್ಣಿಗೆ ಹಿತವಾದದ್ದನ್ನು ಮಾತ್ರ ಆರಿಸಿಕೊಳ್ಳುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ
ವಚನಗಳಲ್ಲಿ ಮೌಢ್ಯಗಳ ನಿರಾಕರಣೆ: ಜಯಲಕ್ಷ್ಮಿ ಪಾಟೀಲ್ ಅಂಕಣ
ಸಾಕಷ್ಟು ಜನ ಉದಹರಿಸುವ ಜೇಡರ ದಾಸಿಮಯ್ಯನವರ, ‘ಮೊಲೆ ಮೂಡಿ ಬಂದರೆ ಹೆಣ್ಣೆಂಬರುʼ, ಅಲ್ಲಮಪ್ರಭುದೇವರ, ‘ಹೊನ್ನು ಮಾಯೆ ಎಂಬರು’ ವಚನಗಳಲ್ಲದೇ ಇನ್ನೂ ಕೆಲವು ವಚನಗಳಿವೆ. ಕೇವಲ ಶರಣರ ವಚನಗಳಲ್ಲಿ ಮಾತ್ರವಲ್ಲ, ಶರಣೆಯರ ವಚನಗಳಲ್ಲೂ ನೋಡಬೇಕಿರುವುದು ಅವಶ್ಯಕ. ಶರಣೆಯರ ಅಂಥ ವಚನಗಳನ್ನು ಓದುತ್ತಿದ್ದರೆ ಅಬ್ಬಾ ಎನಿಸುತ್ತದೆ! ಕ್ರಾಂತಿಯ ದೊಂದಿಯನ್ನು ನಂದಿಸಲು ದುಷ್ಟ ವ್ಯವಸ್ಥೆ ಯಾಕೆ ಹಪಹಪಿಸಿತು ಎನ್ನುವುದು ನಿಚ್ಚಳವಾಗುತ್ತದೆ. ಕೇವಲ ಗಂಡಸರು ಮಾತ್ರ ಬಂಡೇಳಲಿಲ್ಲ ಆಗ, ಹೆಂಗಸರೂ ವ್ಯವಸ್ಥೆಯನ್ನು ಮುಲಾಜಿಲ್ಲದೆ ಪ್ರಶ್ನಿಸಿದ್ದು, ಗಂಡು ಹೆಣ್ಣೆಂಬುದರಾಚೆ ನಿಂತು ಮಾತಾಡಿದ್ದು, ತಮ್ಮ ಅಸ್ಮಿತೆಯನ್ನು ಸ್ಪಷ್ಟಪಡಿಸಿದ್ದು ನುಂಗಲಾರದ ತುತ್ತಾಗಿರಬೇಕು.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ
ಅಪ್ಪಂತನದ ವ್ಯವಸ್ಥೆಗೆ ಬೆತ್ತಲೆಯ ಗೀಳು!: ಸುಕನ್ಯಾ ಕನಾರಳ್ಳಿ ಅಂಕಣ
ನಮ್ಮ ಮಟ್ಟಿಗೆ ಹೇಳುವುದಾದರೆ ಇಂದೊಂದು ತೀರಾ ಅಸಂಭಾವ್ಯವೂ, ಅಸಂಬದ್ಧವೂ ಆದ ಕಲ್ಪನೆಯಾಗಿದೆ. ಹನ್ನೆರಡನೆಯ ಶತಮಾನದಷ್ಟು ಹಿಂದಿನ ಆ ಪರಿಸರದಲ್ಲಿ ಹೆಣ್ಣೊಬ್ಬಳು ಅವಳೆಂಥ ಅನುಭಾವಿಯಾಗಿದ್ದರೂ, ಬೆತ್ತಲೆಯಾಗಿ, ಕೂದಲನ್ನು ಮರೆಮಾಡಿಕೊಂಡು ಸಂಚರಿಸಿದಳೆಂಬುದು ಅತ್ಯಂತ ಅಸಂಗತವೂ, ಅನುಚಿತವೂ ಆದ ಭ್ರಮಾಕಲ್ಪನೆಯಾಗಿ ಮಾತ್ರ ತೋರುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೆರಡನೆಯ ಬರಹ
ನಿಮಿಷಗಳನ್ನು ಕಡೆಗಣಿಸಿದವರು…: ವಿನಾಯಕ ಅರಳಸುರಳಿ ಅಂಕಣ
ಬಿಡುವಿನ ನಿಮಿಷಗಳಲ್ಲಿ ನಾವು ಕೈಗೊಳ್ಳುವ ಚಿಕ್ಕ ಚಿಕ್ಕ ವ್ಯವಸ್ಥಿತ ಕಾರ್ಯಗಳು ನಮ್ಮ ಒಳಗನ್ನು ರೂಪಿಸುತ್ತವೆ. ಮಲಗಿ ಎದ್ದ ದಿಂಬನ್ನು ಹಾಸಿಗೆಯ ತುದಿಯಲ್ಲಿ ಒಪ್ಪವಾಗಿ ಇಡುವುದಕ್ಕೂ, ಕೊಂಚ ಕೆಳಗೆ ಹಾಗೇ ಬಿಡುವುದಕ್ಕೂ ನಡುವಿನ ಅಂತರ ಕೆಲವೇ ಸೆಂಟೀಮೀಟರುಗಳಷ್ಟಾದರೂ ಅದನ್ನು ಆ ಎರಡು ಬೇರೆ ಬೇರೆ ಜಾಗಗಳಲ್ಲಿಟ್ಟ ವ್ಯಕ್ತಿಯ ವ್ಯಕ್ತಿತ್ವದ ನಡುವಿನ ವ್ಯತ್ಯಾಸ ಮೈಲಿಗಳಷ್ಟು! ಇನ್ನು ನಮ್ಮ ಇನ್ನೊಂದು ಸಮಸ್ಯೆಯೆಂದರೆ ಹೆಚ್ಚಿನ ಸಲ ನಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡಿದ್ದರೂ ಆದಾಯವಲ್ಲದ ಕಾರ್ಯಗಳ ಆಳಕ್ಕೆ ನಾವು ಇಳಿಯುವುದೇ ಇಲ್ಲ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ
ಯುದ್ಧ, ಇಂಧನಗಳ ತಕ್ಕಡಿಯಲ್ಲಿ ನಾವು: ಡಾ. ವಿನತೆ ಶರ್ಮ ಅಂಕಣ
ಪೆಟ್ರೋಲ್ ಕಾರ್ ಓಡಿಸುವ ನನ್ನ ಮುಖದಲ್ಲಿ ಚಿಂತೆಯ ಗೆರೆಗಳು ಹೆಚ್ಚಾಗಿವೆ. ಹಾಗೆಯೆ ಟ್ರಂಪಣ್ಣನನ್ನು ಬಯ್ಯುವುದೂ ಜಾಸ್ತಿಯಾಗಿದೆ. ಅವರಿಗೆ ತಮ್ಮ ಮತಕೊಟ್ಟು, ಸರ್ಕಾರದ ಯಂತ್ರವನ್ನು ದುರುಪಯೋಗ ಮಾಡಲು ಅಧಿಕಾರ ಕೊಟ್ಟ ಅಮೆರಿಕನ್ನರಿಗೂ ಒಂದಷ್ಟು ಬಯ್ಗುಳ. ಕೇವಲ ಒಂದು ದೇಶವು ಇಡೀ ಪ್ರಪಂಚದ ಮೇಲೆ ವಜ್ರಮುಷ್ಠಿ ಹತೋಟಿಯನ್ನು ಇಟ್ಟುಕೊಂಡಿರುವುದು ಆಶ್ಚರ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ
ಬದುಕಿನ ರಾಗದ ಅವರೋಹಣ – ವೃದ್ಧಾಪ್ಯವೆಂಬ ಜೀವನಪದವಿ!: ಡಾ. ಎಲ್.ಜಿ. ಮೀರಾ ಅಂಕಣ
ಸಾಮಾನ್ಯವಾಗಿ, ಬದುಕಿನ ಈ ಹಂತದ ಸಕಾರಾತ್ಮಕ ಚಿತ್ರಣವು ಅದೃಶ್ಯವಾಗಿರುತ್ತೆ ಅಥವಾ ನಕಾರಾತ್ಮಕವಾಗಿರುತ್ತೆ. ಇದರಿಂದಾಗಿ ಈ ಜೀವನದ ಬಗ್ಗೆ ಯೋಜನೆ, ಯೋಚನೆ, ಪೂರ್ವಚಿಂತನೆಗಳು ಸರಿಯಾಗಿ ನಡೆಯುವುದಿಲ್ಲ. ಆದರೆ, ವೈದ್ಯಕೀಯ ಕ್ಷೇತ್ರದಲ್ಲಿ ಆದ ಅದ್ಭುತ ಮುನ್ನಡೆಗಳಿಂದಾಗಿ ಮಾರಾಣಾಂತಿಕ ರೋಗಗಳಿಂದ ಮನುಕುಲವು ಮುಕ್ತಿ ಪಡೆದುಕೊಂಡು, ಮನುಷ್ಯನ ಸರಾಸರಿ ಆಯುಸ್ಸು ಹೆಚ್ಚಿ, ತಮ್ಮ 60ನೇ ವಯಸ್ಸಿನಲ್ಲಿ ವೃತ್ತಿಯಿಂದ ನಿವೃತ್ತಿಗೊಂಡ ಮೇಲೂ ಜನರು ಸುಮಾರು 20ರಿಂದ 40 ವರ್ಷಗಳ ತನಕ ಬದುಕುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತನೆಯ ಬರಹ
ಕನ್ನಡ ಸಿನಿಮಾದ ನಿಜವಾದ ‘ಹೊಸ ಹೆಣ್ಣು’ ಹುಟ್ಟಿದ್ದು ತ್ರಿವೇಣಿಯ ‘ಬೆಳ್ಳಿಮೋಡ’ದಲ್ಲಿ: ಸುಕನ್ಯಾ ಕನಾರಳ್ಳಿ ಅಂಕಣ
ಲೀಲಾಳ ಅಣ್ಣ ಈಗ ಮಧ್ಯ ಪ್ರವೇಶಿಸಿ ಕುಟುಂಬವೆಂಬ ಸಂಸ್ಥೆಯ ‘ಸಹಜತೆ’ಯನ್ನು ಮರಳಿಸುವ ಪ್ರಯತ್ನ ಮಾಡುತ್ತಾನೆ. ಎಲ್ಲದಕ್ಕೂ ತನ್ನ ಅಪ್ಪನೇ ಕಾರಣ ಎಂದು ದೂರುತ್ತಾನೆ. ಸಾಯುವ ಮುನ್ನ ಲೀಲಾ ತನ್ನ ತಾಯಿಯನ್ನು ಕಾಣುವ ಹಂಬಲದಲ್ಲಿ ಕೊರಗುತ್ತಾಳೆ. ಅಪ್ಪ ತಾನು ಮಾಡಿದ ತಪ್ಪಿನ ಅರಿವಾಗಿ ಹುಚ್ಚು ಹಿಡಿದು ಬೀದಿ ಬೀದಿ ಅಲೆಯುತ್ತಾ ಕೊನೆಯ ಉಸಿರೆಳೆಯುತ್ತಾನೆ. ಲೀಲಾಳ ಅಣ್ಣ ಅತ್ತಿಗೆ ಮಕ್ಕಳೆಲ್ಲರೂ ‘ಒಳ್ಳೆಯ’ ಕುಟುಂಬದಲ್ಲಿ ಬದುಕಬೇಕು ಎಂದು ನೀತಿಪಾಠ ಹೇಳುವುದರೊಂದಿಗೆ ಚಿತ್ರ ಮುಗಿಯುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೊಂದನೆ ಬರಹ
ಎಲ್.ಎನ್. ಮುಕುಂದರಾಜ್ ಕವಿತೆ ಮತ್ತು ಸಮಾಜ: ಜಯಲಕ್ಷ್ಮಿ ಪಾಟೀಲ್ ಅಂಕಣ
ಮುಕುಂದರಾಜ್ ಅವರು ಈ ಕವನವನ್ನು ಬರೆದು ದಶಕಗಳೇ ಕಳೆದಿರಬಹುದು. ಆದರೆ ಸಮಾಜ, ಮನುಷ್ಯನ ಬುದ್ಧಿ, ಸ್ವಭಾವ ಮಾತ್ರ ಅವತ್ತಿಗೂ ಇವತ್ತಿಗೂ ಯಾವತ್ತಿಗೂ ಬದಲಾಗದು ಎನ್ನುವುದನ್ನು ‘ದಾರಿಯುದ್ದಕ್ಕು’ ಕವನ ತುಂಬಾ ಸಮರ್ಥವಾಗಿ ಬಿಂಬಿಸುತ್ತದೆ. ಈ ಕವಿತೆಯನ್ನು ಓದಿದ ಕೂಡಲೇ ಮುಂದಿನ ಕವಿತೆ ಓದುತ್ತೇನೆ ಎಂದರೆ ಅದು ಸಾಧ್ಯವಾಗದು. ಇದರೊಳಗೆ ಅಡಗಿದ ಅಸಹಾಯಕತೆ, ಮಾರ್ಮಿಕತೆ ಮತ್ತೆ ಮತ್ತೆ ಓದುವಂತೆ ಮಾಡುತ್ತದೆ. ಇಡೀ ಕವಿತೆ ಸರ್ರಿಯಲಿಸಂನ ಜೊತೆಗೆ ತುಸು ಗಜಲ್ ಛಾಯೆಯನ್ನೂ ಹೊತ್ತಿರುವುದು ವಿಶೇಷ. ಅಸ್ತಿತ್ವವಾದದ ನೆಲೆಯಲ್ಲಿ ನಾನು ಈ ನವ್ಯ ಕವನವನ್ನು ನೋಡುತ್ತಿದ್ದೇನೆ.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ
ಒಳಗೆ-ಹೊರಗೆ: ಸುಕನ್ಯಾ ಕನಾರಳ್ಳಿ ಅಂಕಣ
ಮೇಲೆ ಹತ್ತುವ ಪ್ರಯತ್ನದಲ್ಲಿಯೇ ಅದೇನನ್ನು ಹತ್ತಿ ಮೀರಿದರೋ, ಅಂತೂ ಎಲ್ಲ ಕೈದಿಗಳೂ ಕೆಳಗಿಳಿದು ಬಂದರು! ಕೆಳಗಿದ್ದ ಪೊಲೀಸರು ಅಷ್ಟೊತ್ತಿಗೆ ಕಾಫಿ, ನೀರು, ಜ್ಯೂಸ್, ಸಿಗರೇಟು ಇತ್ಯಾದಿಗಳಿಗೆ ಅಲ್ಲಿಲ್ಲಿ ಚೆದುರಿದ್ದರು. ಕೊನೆಗೆ ಕೈದಿಗಳೇ ಹೋಗಿ ಅಲ್ಲಿಲ್ಲಿ ಹುಡುಕಿ ಎಲ್ಲ ಪೊಲೀಸರನ್ನೂ ಕರೆದುತಂದರಂತೆ! ತಪ್ಪಿಸಿಕೊಳ್ಳುವುದಲ್ಲ, ನಮಗೆ ಬಿಡುಗಡೆ ಆದೇಶ ಬಂದಿದ್ದರೂ ಬೇಸರವಾಗುತ್ತಿತ್ತು. ಇನ್ನೆರಡು ದಿನದಲ್ಲಿ ನಮ್ಮ ನಾಟಕದ ಪ್ರದರ್ಶನವಿತ್ತು, ಎಂದು ಆ ಕೈದಿ ಕಥೆಯನ್ನು ಮುಗಿಸಿದರು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತನೆ ಬರಹ









