ದೆವ್ವದ ಭಯ ಮತ್ತು ಬೋಂಡಾದ ರುಚಿ…: ಬಸವನಗೌಡ ಹೆಬ್ಬಳಗೆರೆ ಸರಣಿ
ಆಗ ಹಳ್ಳಿಗಳಲ್ಲಿ ಅದ್ಯಾರು ಈ ಸುದ್ದಿ ಹರಿಸಿದರೋ ಗೊತ್ತಿಲ್ಲ. ರಾತ್ರಿ ವೇಳೆ ದೆವ್ವಗಳು ಬರುತ್ತವೆ, ಅದಕ್ಕೆ ಅವುಗಳ ಕಾಟದಿಂದ ಪಾರಾಗಲು ‘ನಾಳೆ ಬಾ’ ಎಂದು ಮನೆಯ ಮುಂಬಾಗಿಲ ಮೇಲೆ ನೀರಿನಲ್ಲಿ ಅದ್ದಿದ ಚಾಕ್ ಪೀಸ್ನಲ್ಲಿ ಬರೆದಿದ್ದರು. ನಾನೂ ಸಹ ನಮ್ಮ ಮನೆಯ ಮೇಲೂ ಹೀಗೆ ಬರೆದು ದೆವ್ವದ ಕಾಟದಿಂದ ಪಾರಾದೆ ಎಂದು ಖುಷಿಪಟ್ಟಿದ್ದೆ!!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ
ಮಹಿಳಾ ಚೈತನ್ಯ, ಆರ್ಥಿಕ ರಂಗದಲ್ಲಿ ಒಳಗೊಳ್ಳುವಿಕೆ… : ವಿನತೆ ಶರ್ಮ ಅಂಕಣ
ಅವಳು ‘ಕೇರ್ ಗಿವರ್’ ಸ್ಥಾನದಲ್ಲಿದ್ದಾಗ ಕುಟುಂಬದ ಇತರರು ಗಂಡಸು ಕುಟುಂಬದ ಹಿರಿಯ/ಮುಖ್ಯಸ್ಥ ಎನ್ನುವ ನಂಬಿಕೆಯನ್ನು ಮುಂದುವರೆಸುತ್ತಾರೆ. ಮುಂದೊಮ್ಮೆ ಅವಳು ಉದ್ಯೋಗಕ್ಕೆ ವಾಪಸ್ಸಾಗಿ ತಿಂಗಳ ಸಂಬಳ ಪಡೆದರೂ ಅಷ್ಟರಲ್ಲಿ ಮನೆ ಸಾಲ ತೀರಿಸುವುದು ಗಂಡಸು, ತಿಂಗಳ ಖರ್ಚಿಗೆ ದುಡಿಯುವುದು ಗಂಡಸು ಎನ್ನುವುದು ಆಳವಾಗಿ ಬೇರೂರಿರುತ್ತದೆ. ಕಡೆಗೆ ಹೆಂಗಸಿನ ಗಳಿಕೆ ‘ಸೆಕೆಂಡರಿ’ ಆಗಿಯೇ ಉಳಿಯುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಸತ್ತವರೆಲ್ಲ ಮತ್ತೆ ಬಂದಾಗ: ಸುಧಾ ಆಡುಕಳ ಅಂಕಣ
ಅದು ಅಜ್ಜಿಗೆ ಮೀಸಲಿಡುವ ದಿನವಾಗಿತ್ತು. ಮಕ್ಕಳೆಲ್ಲರೂ ಒಟ್ಟಿಗೆ ಸೇರುವುದು ವಾಡಿಕೆಯಾಗಿತ್ತು. ಅಜ್ಜಿಗೆ ಪರಮ ಪ್ರಿಯಳಾಗಿದ್ದ ಕೊನೆಯ ಮಗಳು ಮಾತ್ರ ಗಂಡನ ಮನೆಯಿಂದ ಬಂದಿರಲಿಲ್ಲ. ಅಣ್ಣಂದಿರು ಒತ್ತಾಯ ಮಾಡಿ ಕರೆದಿದ್ದರೂ ಅವಳ ಗಂಡ ಅದೇನೋ ಹಳೆಯ ಮುನಿಸಿನಿಂದಾಗಿ ಹೆಂಡತಿಯನ್ನು ತವರಿಗೆ ಕಳಿಸಿರಲಿಲ್ಲ. ಅಕ್ಕಂದಿರೆಲ್ಲ ಅವಳನ್ನು ನೆನೆಸಿಕೊಂಡು ಕಣ್ಣೀರಿಡುತ್ತಲೇ ಅಮ್ಮನಿಗೆ ಮೀಸಲಿಟ್ಟಿದ್ದರು. ಆ ರಾತ್ರಿ ಎಲ್ಲರೂ ಮಲಗಿದಾಗ ನಡುರಾತ್ರಿಯಲಿ ನೀಲಿಯ ದೊಡ್ಡಮ್ಮ ಇದ್ದಕ್ಕಿದ್ದಂತೆ ಕುಣಿದು ಕುಪ್ಪಳಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ
ಎಂ.ವಿ. ಶಶಿಭೂಷಣ ರಾಜು ಹೊಸ ಅಂಕಣ “ಅನೇಕ ಅಮೆರಿಕಾ” ಆರಂಭ
ಮೊದಮೊದಲು ಬಂದ ಜನ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಓದಲು ಬಂದವರಿಗಂತೂ ರಾತ್ರಿ ಯಾವುದು, ಹಗಲು ಯಾವುದು ಎನ್ನುವುದು ಗೊತ್ತಾಗುವುದಿಲ್ಲ. ಮುಂಜಾನೆ ಹೊರ ಹೊರಟರೆ ಮನೆಗೆ ಬರುವುದು ಮಧ್ಯರಾತ್ರಿ ನಂತರವೇ. ಯಾವುದಾದರೂ ಕೆಫೆಯಲ್ಲೋ, ಡೈನರ್ಗಳಲ್ಲೋ ಕೆಲಸಮಾಡಬೇಕಾಗುತ್ತದೆ.
ವಿದೇಶಿ ನೆಲದಲ್ಲಿ ವಲಸಿಗರ ಬದುಕಿನ ಹಾಡು-ಪಾಡು ಕುರಿತ ಎಂ.ವಿ. ಶಶಿಭೂಷಣ ರಾಜು ಹೊಸ ಅಂಕಣ “ಅನೇಕ ಅಮೆರಿಕಾ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ
ಅವನ ಸಂಗೀತದ ಸರಪಳಿಯಲ್ಲಿ…: ಆಶಾ ಜಗದೀಶ್ ಅಂಕಣ
ಒಂದು ತಾನ್ ನಿಂದ ಮತ್ತೊಂದಕ್ಕೆ ಸಂಚರಿಸುವಾಗ ಒಂದು ಸೆಕೆಂಡ್ ಮಾತ್ರದಲ್ಲಿ ನಿನ್ನ ಧ್ವನಿ ಹೊರಳುತ್ತದಲ್ಲ ಆ ನಾದ ಅದೆಷ್ಟು ಚಂದ… ಅದಕ್ಕೆ ಮುಲಾಮಿನ ಗುಣವಿದೆ. ಕ್ಷಣ ಮಾತ್ರದಲ್ಲಿ ಭಾರವಾದ ಎದೆಯನ್ನು ಹಾರಿ ನಲಿಯುವಂತೆ ಮಾಡಿಬಿಡಬಲ್ಲ ಶಕ್ತಿಯಿದೆ ಅಂತಲೇ ನನಗೆ ಬಲವಾಗಿ ಅನಿಸುತ್ತದೆ. ಆ ಕ್ಷಣ ನಾನು ಯಾರು ಎನ್ನುವುದು ನನಗೆ ಮರೆತು ಹೋಗುತ್ತದೆ. ಯಾವ ವಿಳಾಸ, ನಾಮಧೇಯವಿರದ ಶಕ್ತಿಯ ಸಣ್ಣದೊಂದು ಚೂರಿನಂತೆ ಹೊಳೆಯುತ್ತಿದ್ದೇನೆ ಎಂದು ಭಾಸವಾಗುತ್ತದೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ
ಮಹಿಳಾ ಸಾಮರ್ಥ್ಯ ಮತ್ತು ಸಬಲೀಕರಣ…: ವಿನತೆ ಶರ್ಮ ಅಂಕಣ
ಜಸಿಂಡಾ ಆರ್ಡೆರ್ನ್ ತಮ್ಮ ಹೈಸ್ಕೂಲ್ ದಿನಗಳಿಂದ ಸ್ವಂತ ಸಾಮರ್ಥ್ಯ, ಬುದ್ಧಿವಂತಿಕೆ, ಕಠಿಣ ಶ್ರಮದಿಂದ ರಾಜಕೀಯ ವಲಯದಲ್ಲಿ ಬೆಳೆದವರು. ಮಗುವಿಗೆ ಜನ್ಮ ಕೊಟ್ಟು, ಬಾಣಂತಿಯಾಗಿದ್ದೂ ತಮ್ಮ ಕೆಲಸವನ್ನು ಶಿಸ್ತಿನಿಂದ ನಿರ್ವಹಿಸಿದ ಹೆಮ್ಮೆಯ ಹೆಣ್ಣು ಇವರು. ಹಾಗೆ ನೋಡಿದರೆ ಪ್ರಪಂಚದ ಬೇರೆಬೇರೆ ದೇಶಗಳಲ್ಲಿ ಮಹಿಳಾ ರಾಜಕೀಯ ನಾಯಕರು, ಪ್ರಧಾನಿಗಳು, ಅಧ್ಯಕ್ಷರು, ಚಾನ್ಸಲರ್ ಮುಂತಾದವರ ಉದಾಹರಣೆಗಳು ಇವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಕೆಂಪಾದವೋ ಎಲ್ಲ ಕೆಂಪಾದವೋ: ಸುಧಾ ಆಡುಕಳ ಅಂಕಣ
ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ
ಉರಿದು ಮುಗಿದುಬಿಡುವುದಲ್ಲ ಪ್ರೀತಿ: ಎಸ್. ನಾಗಶ್ರೀ ಅಜಯ್ ಅಂಕಣ
ಓದಿ, ಬರೆದು, ಕಣ್ತೆರೆದು ಪ್ರಪಂಚ ನೋಡಿ, ತಿಳಿದು, ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದ ವಯಸ್ಸಿನಲ್ಲಿ ಪ್ರೇಮದ ಹೆಸರಿನಲ್ಲಿ ಹುಚ್ಚಾಟಗಳಿಗೆ ಪಕ್ಕಾಗಿ, ನಮ್ಮನ್ನೇ ನಿಭಾಯಿಸಿಕೊಳ್ಳಲು ಬಾರದ ವಯಸ್ಸಿನಲ್ಲಿ ಇನ್ನೊಂದು ಜೀವವನ್ನು ನಿಭಾಯಿಸುವ, ಸಂಬಂಧ ಬೆಸೆಯುವ ಸಾಹಸ ಬೇಕಿದೆಯೆ?
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ
ಗರತಿಯ ಹಾಡು ಮತ್ತು ಸ್ತ್ರೀ ದೃಷ್ಟಿಕೋನ: ಲಿಂಗರಾಜ ಸೊಟ್ಟಪ್ಪನವರ್ ಅಂಕಣ
ಜನಪದ ಎನ್ನುವದು ಸ್ತ್ರೀ ಕೇಂದ್ರಿತವಾದ ಭಾವುಕ ನೆಲೆ. ಅವಳ ಹಂಬಲ, ಹತಾಶೆ, ಸಡಗರ ಸಂಕಟಗಳು, ಹಾತೊರಿಕೆ, ಕನವರಿಕೆ ಹಾಗೂ ಪ್ರತಿರೋಧಗಳಿಗೆ ಒಂದು ಅಭಿವ್ಯಕ್ತಿ ಮಾಧ್ಯಮವಾಗಿ ಅದು ರೂಪಗೊಂಡಿರುವಂತದ್ದಾಗಿದೆ. ಜನಪದ ಧಾರೆಯುದ್ದಕ್ಕೂ ಹೆಣ್ಣನ್ನು ಉತ್ತಮರ ಮಗಳು ಆಗಿಸುವ ಅಭೀಪ್ಸೆ ಒಂದು ಪುರುಷ ಪ್ರಣೀತವಾದ ಅನುಕೂಲಸಿಂಧು ಗರತಿ ಧರ್ಮವನ್ನು ರೂಪಿಸಿದೆ ಮತ್ತೆ ಅದು ಒಂದು ಹೆಣ್ಣಿನ ಮೂಲಕವೆ ಇನ್ನೊಂದು ಹೆಣ್ಣಿಗೆ ಧಾರೆಯೆರೆಯುವಂತೆ ಸಂಯೋಜಿಸಲಾಗಿದೆ.
ಲಿಂಗರಾಜ ಸೊಟ್ಟಪ್ಪನವರ್ ಬರೆಯುವ “ಉತ್ತರದ ಕತೆಗಳು” ಅಂಕಣ