ಕ್ರಿಕೆಟ್ಗೆ “ವಿಶ್ವನಾಥ”ರ ಕೊಡುಗೆ: ಇ.ಆರ್. ರಾಮಚಂದ್ರನ್ ಅಂಕಣ
ಸಚಿನ್ ಟೆಂಡೂಲ್ಕರ್ ಅವರು ಮುಂದೆ ಬರಲು ಅವರ ಕೋಚ್ ರಮಾಕಾಂತ ಅಚ್ರೇಕರ್ ಎಂದು ಎಲ್ಲರಿಗೂ ಗೊತ್ತು. ಮುಖ್ಯವಾಗಿ ಟೆಂಡೂಲ್ಕರ್ ಅವರೇ ಇದನ್ನು ಕೃತಜ್ಞತೆಯಿಂದ ಆಗಾಗ್ಗೆ ಜ್ಞಾಪಿಸಿಕೊಂಡು ಎಲ್ಲರ ಮುಂದೆ ಅವರ ಕೊಡುಗೆಯನ್ನು ಸಾರ್ವಜನಿಕವಾಗಿ ಸ್ಮರಿಸಿದ್ದಾರೆ. ಎಷ್ಟೋ ಕಡೆ ಆಟಗಾರನು ಮುಂದೆ ಮುಂದೆ ಬಂದು, ಹೆಸರುವಾಸಿಯಾದಂತೆ ಗುರು-ಶಿಷ್ಯರ ಬಾಂಧವ್ಯ ಕಡಿಮೆಯಾಗಿ ಎಷ್ಟೋಸಲ ಅದು ಮಾಸಿ ಹೋಗುವ ಸಂದರ್ಭಗಳು ಬರುತ್ತದೆ. ಆದರೆ ಒಂದು ಜ್ಞಾಪಕದಲ್ಲಿರಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ
ಆಸ್ಟ್ರೇಲಿಯಾದಲ್ಲಿ ಮಹಿಳಾ ಫುಟ್ಬಾಲ್ ವಿಶ್ವಕಪ್ 2023: ವಿನತೆ ಶರ್ಮ ಅಂಕಣ
ಪ್ರಾಪಂಚಿಕ ಮಟ್ಟದಲ್ಲಿ ನಡೆಯುವ ಮಹಿಳಾ ಫುಟ್ಬಾಲ್ ಈ ಬಾರಿ ಆಸ್ಟ್ರೇಲಿಯಾ ಮತ್ತು ನ್ಯೂಝಿಲ್ಯಾಂಡ್ ದೇಶಗಳ ಮಡಿಲು ಸೇರಿದೆ. ವಿಶ್ವ ಕಪ್ ಗೆಲ್ಲಲು ಬರೋಬ್ಬರಿ ೩೨ ತಂಡಗಳು ಸೆಣಸಾಡುತ್ತಿವೆ. ದೇಶದ ಮುಖ್ಯ ರಾಜಧಾನಿ ನಗರಗಳಾದ ಅಡಿಲೈಡ್, ಮೆಲ್ಬೋರ್ನ್, ಸಿಡ್ನಿ, ಬ್ರಿಸ್ಬೇನ್, ಪರ್ತ್ ಗಳಲ್ಲಿ ವಿವಿಧ ಗುಂಪುಗಳು ತಮ್ಮ ಕಾಲ್-ಚಳಕ ತೋರಲಿವೆ. ಇದಲ್ಲದೆ ನ್ಯೂಝಿಲ್ಯಾಂಡ್ ದೇಶದ ನಾಲ್ಕು ಕಡೆ ಪಂದ್ಯಗಳು ನಡೆಯಲಿವೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ
ಟ್ರ್ಯಾಕ್ಟರ್ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ
ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ
ಅನುಬಂಧವೊಂದು ಕೊರಳ ಉರುಳಾಗುವ ಹೊತ್ತು: ಮಾಲತಿ ಶಶಿಧರ್ ಅಂಕಣ
ಮಳೆ ನಿಂತ ಮಾರನೇ ದಿನದ ಸ್ವರ್ಗವೀಗ ಅಜ್ಜಿಯ ಕತೆಯಲ್ಲಿ ಬರುತ್ತಿದ್ದ ನರಕದಂತೆ ಭಾಸವಾಗುತ್ತಿದೆ. ಸೂರ್ಯ ಮುಳುಗಿದ ಮೇಲೆ ಹನಿ ಬೀಳುವ ಸದ್ದಿಗೆ ಪುಳಕಗೊಳ್ಳುತ್ತಿದ್ದ ಹೃದಯ ಅಕ್ಕ ಪಕ್ಕದವರಿಗೂ ಕೇಳಿಬಿಡುವಂತೆ ಒಡೆದುಕೊಳ್ಳಲು ಶುರು ಮಾಡಿದೆ. ನಿದ್ದೆಯೇ ಇಲ್ಲದ ಅವಳಿಗೀಗ ಅಲಾರಾಂ ಅವಶ್ಯಕತೆಯಿಲ್ಲ. ಹೊರಗೆ ಕಾಲಿಟ್ಟರೆ ಮುದ ಗೊಳಿಸುತ್ತಿದ್ದ ಚಳಿ ಈಗ ಬೆನ್ನ ಮೂಳೆಯನ್ನು ಕೊರೆಯುತ್ತದೆ.
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”ಯಲ್ಲಿ ಹೊಸ ಬರಹ
ಐವತ್ತರ ದಶಕದ ಕ್ರಿಕೆಟ್ನ ಧೀಮಂತರು: ಇ.ಆರ್. ರಾಮಚಂದ್ರನ್ ಅಂಕಣ
ಭಾರತ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆದಿಶೇಷರನ್ನು ಆಯ್ಕೆ ಮಾಡಲಾಗಿತ್ತು. ಆ ದಿನಗಳಲ್ಲಿ ಹೆಚ್ಚು ಕಡಿಮೆ ತಂಡದ ಸದಸ್ಯರೆಲ್ಲಾ ಬೊಂಬಾಯಿನವರಾಗಿದ್ದರು. ಬೇರೆ ರಾಜ್ಯಗಳಿಂದ ಒಬ್ಬರೋ ಇಬ್ಬರನ್ನೋ ಆಯ್ಕೆ ಮಾಡುತ್ತಿದ್ದರು. ಆಗ ತಂಡದಲ್ಲಿ ತಾರತಮ್ಯ ಮತ್ತು ಭೇದ ಭಾವನೆಗಳಿದ್ದು ಎಷ್ಟೋಸಲ ಬೇರೆ ರಾಜ್ಯದವರು ಟೀಮಿನ ಜೊತೆಗೆ ಪ್ರವಾಸಕ್ಕೆ ಹೋಗಲು ಹಿಂಜರಿಯುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಐವತ್ತರ ದಶಕದ ಕ್ರಿಕೆಟ್ನ ಧೀಮಂತರ ಕುರಿತ ಬರಹ ನಿಮ್ಮ ಓದಿಗೆ
ಲೋಕದ ಚಿಂತಿ ಯಾಕ ಮಾಡತಿ..?: ಎಸ್ ನಾಗಶ್ರೀ ಅಜಯ್ ಅಂಕಣ
ಹತ್ತು ಜನರ ನಡುವಿದ್ದೂ ಅವರಿವರಂತಾಗದೆ, ತಮ್ಮ ಮಿತಿಯಲ್ಲಿ ಆಗುವ ಸಕಲವನ್ನೂ ಸಂತೋಷ, ಸಮಾಧಾನದಿಂದ ಮಾಡುತ್ತಾ, ಮೆಚ್ಚುಗೆಗೂ ಹಾತೊರೆಯದೆ, ಯಾರನ್ನೂ ದೂರದೆ ಸಂತರಂತೆ ಬದುಕಿದವರಿದ್ದಾರೆ. ಮನೆಮನೆಗಳಲ್ಲಿ ಅಂತಹವರನ್ನು ಕಂಡಿರುತ್ತೇವೆ. ಸದಾ ಗಿಜಿಗುಡುವ ಮನೆ, ಬಂದು ಹೋಗುವವರು, ಓದಲೆಂದು, ಕೆಲಸಕ್ಕೆಂದು ಬಂದು ಉಳಿದ ಬಂಧುಗಳ ಮಕ್ಕಳು, ದೇವಸ್ಥಾನದ ಪ್ರಸಾದ, ಚರಪು ಮಾಡುವ ಜವಾಬ್ದಾರಿ, ರೋಗಿಗಳ ಆರೈಕೆ, ಹಿರಿಯರ ಕಾಳಜಿ, ದಿನಂಪ್ರತಿ ಹದಿನೈದು ಇಪ್ಪತ್ತು ಜನರಿಗೆ ಕಡಿಮೆಯಿಲ್ಲದಂತೆ ಊಟೋಪಚಾರ…
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ
ಗ್ಲೋಬಲ್-ಲೋಕಲ್ ಊರುಗಳ ಉಪಕಥೆಗಳು: ವಿನತೆ ಶರ್ಮ ಅಂಕಣ
ಇವೆಲ್ಲವನ್ನು ಹಿಂದಿನ, ಎಂದಿನ ಕುತೂಹಲದಿಂದ ನೋಡುತ್ತಾ ನಿಲ್ಲುವ ನನ್ನನ್ನು ಅನುಮಾನದಿಂದ ನೋಡುವ ಜನರು ಜಾಸ್ತಿಯಾಗಿರುವುದು ಗಮನಕ್ಕೆ ಬರುತ್ತದೆ. ಯಾರು ನೀವು, ಇಲ್ಲಿ ಯಾಕೆ ನಿಂತು ನಮ್ಮನ್ನು ನೋಡುತ್ತಿದ್ದೀರಿ, ನಿಮ್ಮಷ್ಟಕ್ಕೆ ನೀವು ನಿಮ್ಮ ಕೆಲಸ ನೋಡಿಕೊಂಡು ಮುಂದೆ ಸಾಗಿ, ಎಂದು ಕೆಲವರು ಕೇಳುವಾಗ ಜನಜೀವನದ ಮನಸ್ಸುಗಳ ಬೇರುಗಳಿಗೆ ಅಂಟಿಕೊಂಡಿರುವ ಮಣ್ಣು ಸಡಿಲವಾಗಿರುವುದು ಕಾಣುತ್ತದೆ. ನಮ್ಮಷ್ಟಕ್ಕೆ ನಾವು, ನಿಮ್ಮಷ್ಟಕ್ಕೆ ನೀವು ಎನ್ನುವ ಮಾತನ್ನು ಕೇಳಿದಾಗ ಯಾಕೋ ಮುಂದುವರೆದ ಪಾಶ್ಚಾತ್ಯ ದೇಶ-ಸಮಾಜಗಳ ಬಂಡವಾಳಶಾಹಿ ಧೋರಣೆ ನೆನಪಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಪೆಟ್ಟಿಗೆ ಅಂಗಡಿಯಲ್ಲಿ ಭದ್ರವಾದ ನೆನಪುಗಳು: ಮಾಲತಿ ಶಶಿಧರ್ ಅಂಕಣ
ಅವರು ದೂರ ಹೋಗುತ್ತಾ ಕಣ್ಮರೆಯಾಗುತ್ತಿದ್ದ ಹಾಗೆ ನನ್ನ ಕುಚುಕು ಗೆಳತಿಯರು ಒಗ್ಗಟ್ಟಿನಿಂದ ನನಗಿಂತಲೂ ಎತ್ತರದಲ್ಲಿದ್ದ ಬಾಗಿಲು ಹತ್ತಲು ಸಹಕರಿದ್ದರು. ಅದೇನಾಯಿತೋ ಏನೋ ಅಷ್ಟರಲ್ಲೇ ಹೋದ ತಾತ ಮಗ ಗಿರಿಯಣ್ಣನ ಜೊತೆ tvs ಲೂನಾದಲ್ಲಿ ಬರುವುದನ್ನು ಕಂಡ ನನ್ನ ಮಿತ್ರದ್ರೋಹಿಗಳು ನನ್ನನ್ನೊಬ್ಬಳನ್ನೇ ಬಿಟ್ಟು ಓಡಿ ಹೋಗಿ ಪಕ್ಕದಲ್ಲೇ ಇದ್ದ ತೃಪ್ತಿ ಕ್ಯಾಂಟೀನ್ ಕಟ್ಟಡದ ಮಹಡಿ ಹತ್ತಿ ಅವಿತುಕೊಂಡು ಬಿಟ್ಟರು. ಯಾರ ಸಹಾಯವು ಇಲ್ಲದೇ ಒಳಗಿಂದ ಹತ್ತಿ ಆಚೆ ನೆಗೆಯಲು ಬಾರದೆ ಪರದಾಡುತ್ತಿದ್ದ ನನ್ನನ್ನ ತಾತ ಒಂದೇ ಹಿಡಿತದಲ್ಲಿ ಎತ್ತಿ ಆಚೆ ಹಾಕಿದ್ದರು.
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ
ವರ್ಲ್ಡ್ ಟೆಸ್ಟ್ ಚಾಂಪಿಯನ್ಷಿಪ್: ಇ.ಆರ್. ರಾಮಚಂದ್ರನ್ ಅಂಕಣ
ಟೆಸ್ಟ್ ಕ್ರಿಕೆಟ್ ಚೆನ್ನಾಗಿ ಆಡದಿದ್ದರೆ, ಬಿಸಿಸಿಐಅನ್ನು ಬಹಳ ಭಾರತೀಯರೇ ದೂರುತ್ತಾರೆ. ಒಂದು ರೀತಿಯಲ್ಲಿ ಇದು ಸಹಜ. ಭಾರತ ಟೆಸ್ಟ್ ಮ್ಯಾಚ್ಗಳನ್ನು ಚೆನ್ನಾಗಿ ಆಡುತ್ತಿಲ್ಲ ಅದಕ್ಕೆ ಹಣದ ವಾಸನೆ ಬಂದಿದೆ, ಅಲ್ಲಿ ಆಡುವವರೆಲ್ಲಾ ಹಣದಾಸೆಯಿಂದ ಟೆಸ್ಟ್ ಚೆನ್ನಾಗಿ ಆಡುತ್ತಿಲ್ಲ ಎಂಬ ಮಾತೂ ಈಗೀಗ ಕೇಳಿಬರುತ್ತಿದೆ. ಈ ಮಧ್ಯೆ ಭಾರತ ಯಾವ ಕಪ್ /ಟ್ರೋಫಿ, ಅದರಲ್ಲೂ ಐಸಿಸಿ ಟ್ರೋಫಿಯನ್ನು ಕಳೆದ 10 ವರ್ಷದಿಂದ ಗೆದ್ದಿಲ್ಲ. ಅದಕ್ಕೆ ಎಷ್ಟೋ ಅಭಿಮಾನಿಗಳೂ ಐಪಿಎಲ್ನ ಜರಿಯುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ










