ಸಾವಿರ ಕಥೆಗಳ ಸಂಸಾರ: ಎಸ್. ನಾಗಶ್ರೀ ಅಜಯ್ ಅಂಕಣ
ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ
ಬ್ರಿಸ್ಬೇನ್ – ಬೆಂಗಳೂರು ಕೊಂಡಿ ಕಥೆಗಳು: ವಿನತೆ ಶರ್ಮ ಅಂಕಣ
ಇಲ್ಲಿ ಕಾಣುವುದು ಹಳತೊಂದು ಸಮಾಜದ ಹೆಗ್ಗುರುತಾದ ಕಸುಬುಗಾರಿಕೆಗಳ ಮುಂದುವರಿಕೆ. ಇಪ್ಪತ್ತೊಂದನೇ ಶತಮಾನದ ಮಾಲ್, ಸೂಪರ್ ಮಾರ್ಕೆಟ್ ಮತ್ತು ಮೆಟ್ರೋಗಳ ಪ್ರಪಂಚದಲ್ಲಿ ಐಟಿ ಮತ್ತು ಗ್ಲೋಬಲ್ ಕಾರ್ಪೊರೇಟ್ ಪೈಪೋಟಿಗಳ ನಡುವೆ ಬದುಕುತ್ತಾ ಇನ್ನೂ ಕಂಗೊಳಿಸುತ್ತಿರುವ ಅಂಕುಡೊಂಕು ಪೇಟೆ ಬೀದಿಗಳಲ್ಲಿ ಕಾರ್ಯತತ್ಪರರಾಗಿರುವ ಸಾವಿರಾರು ಕಸುಬುದಾರರನ್ನು ನೋಡಿದರೆ ಕ್ಯಾಪಿಟಲಿಸ್ಟ್ ಪ್ರಪಂಚದ ಟೊಳ್ಳು, ಭ್ರಮೆ ಮನಸ್ಸಿಗೆ ತಟ್ಟುತ್ತದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ
ಯಾರು ಹಿತವರು ನಮಗೆ?: ಗುರುಪ್ರಸಾದ ಕುರ್ತಕೋಟಿ ಅಂಕಣ
ಪಟ್ಟಣಗಳಲ್ಲಿ ಹಲವು ವರ್ಷಗಳು ಇದ್ದು ರೂಢಿಯಾದವರಿಗೆ ಹಳ್ಳಿಗೆ ಹೋಗಿ ಇರುವುದು ಅಷ್ಟು ಸುಲಭ ಅಲ್ಲ.. ಸೌಲಭ್ಯಗಳು ಅಲ್ಲಿ ಸುಧಾರಿಸಿವೆ, ಸಿಗ್ನಲ್ನಿಂದ ಹಿಡಿದು ಹಲವಾರು ವ್ಯವಸ್ಥೆಗಳು ಈಗ ಅಲ್ಲಿವೆಯಾದರೂ ಜನರ ಮನಸ್ಥಿತಿ ಹಾಗೂ ಕೆಲವು ಪ್ರಶ್ನೆಗಳು ಹೈರಾಣು ಮಾಡುತ್ತವೆ! ಆದರೆ ಕ್ರಮೇಣ ಅದನ್ನು ತಮಾಷೆಯಾಗಿ ತೆಗೆದುಕೊಂಡರೆ ನಮ್ಮ ತಲೆ ಹಾಳು ಮಾಡಿಕೊಳ್ಳುವುದು ತಪ್ಪುತ್ತದೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣದ ಹೊಸ ಬರಹ ನಿಮ್ಮ ಓದಿಗೆ
ಇರುವುದನ್ನು ಕೈ ಬಿಟ್ಟು….: ಮಾಲತಿ ಶಶಿಧರ್ ಅಂಕಣ
ಎರಡು ಧ್ರುವಗಳಂತಿದ್ದ ನಮ್ಮ ಮಧ್ಯೆ ಇದ್ದ ಅದೃಶ್ಯ ಸೆಳೆತವೆಂದರೆ ನಮ್ಮಿಬ್ಬರ ಆದರ್ಶಗಳು ಮತ್ತು ಜೀವನ ಬಗ್ಗೆ ಇದ್ದ ನಿಲುವು ಮತ್ತು ಅವನಲ್ಲಿರುವ ಹಾಗು ನನ್ನಲ್ಲಿಲ್ಲದ ಪ್ರಬುದ್ಧತೆ. ಅದಷ್ಟನ್ನೇ ಇಟ್ಟುಕೊಂಡು ಎಷ್ಟು ತಾನೇ ಸಹಿಸಿಕೊಂಡಾನು. ಒಂದು ದಿನ ಅನತಿ ದೂರದಲ್ಲಿ ನಮ್ಮಿಬ್ಬರ ನಡುವೆ ದೊಡ್ಡ ಗೋಡೆಯೊಂದ ಏಳಿಸಿಯೇ ಬಿಟ್ಟ. ಗೋಡೆಯಾಚೆಯಿಂದ ಅವನು ಈಚೆಯಿಂದ ನಾನು. ಬರೀ ಔಪಚಾರಿಕವಾಗಿ ಮಾತುಕತೆ ನಡೆಸುತ್ತಿದ್ದೆವೆ ಹೊರೆತು ಮನಸ್ಸಿನಾಳದಿಂದೇನಲ್ಲ. ಅದು ನನ್ನಿಂದ ಕೆಡವಲಾಗದಂತ ಗೋಡೆ ಏನಲ್ಲ…
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ
ಐಪಿಎಲ್-2023: ಇ.ಆರ್. ರಾಮಚಂದ್ರನ್ ಅಂಕಣ
ಚೆನ್ನೈ ಸೂಪರ್ ಕಿಂಗ್ಸ್ – ಸಿಎಸ್ಕೆ ಟೀಮಿನ ನಾಯಕ ಮಹೇಂದ್ರ ಸಿಂಘ್ ಧೋನಿಯವರ ಕೊಡುಗೆ ಅವರ ಟೀಮಿಗೆ ಈ ಸಲ ಬಹಳ ಅಪಾರವಾದದ್ದು. ಕಾಲಿಗೆ ಏಟು ಬಿದ್ದು ಅವರು ಕೊನೆಯ ತನಕ ಕುಂಟಿಕೊಂಡೇ ಆಡಬೇಕಾಯಿತು. ಅವರಿಗೆ ರವೀಂದ್ರ ಜಡೇಜ ಮತ್ತು ಮೊಯಿನ್ ಆಲಿಯಲ್ಲಿ ಇಬ್ಬರು ಒಳ್ಳೇ ಸ್ಪಿನ್ನರ್ಗಳಿದ್ದರು. ಜೊತೆಗೆ ಶ್ರೀಲಂಕಾದ ತೀಕ್ಷಣ, ಪಥಿರಾಣ ಎಂಬ ಯುವಕ ಬೋಲರ್ಗಳಿದ್ದರು. ಬ್ಯಾಟಿಂಗ್ನಲ್ಲಿ ರುತುರಾಜ್ ಗಾಯ್ಕ್ವಾಡ್, ಕಾನ್ವೆ, ರಾಯುಡು, ಶುಭಂ ದೂಬೆ ಮುಂತಾದ ಒಳ್ಳೆ ಆಟಗಾರರಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ
ಹಣದುಬ್ಬರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಥೆಗಳು: ವಿನತೆ ಶರ್ಮ ಅಂಕಣ
ಒಂದು ರೀತಿಯಲ್ಲಿ ನೋಡುವುದಾದರೆ, ಈ ಶಿಕ್ಷಣ ಸಾಲವನ್ನು ನೇರವಾಗಿ ವಿದ್ಯಾರ್ಥಿಯೇ ಮುಂದೆ ಉದ್ಯೋಗಸ್ಥನಾದ ಮೇಲೆ ಕಟ್ಟುವುದರಿಂದ ಪೋಷಕರಿಗೆ ಅವನ ಶಿಕ್ಷಣದ ಶುಲ್ಕದ ಹೊರೆ ತಗುಲುವುದಿಲ್ಲ. ಇನ್ನೊಂದು ರೀತಿಯಲ್ಲಿ ನೋಡಿದರೆ, ಅಯ್ಯೋ ಪಾಪ ಕೇವಲ 18 ವರ್ಷ ವಯಸ್ಸಿನಿಂದಲೇ ಈ ಕಿರಿಯರು ಸಾಲಕ್ಕೆ ಸಿಲುಕುತ್ತಾರಲ್ಲಾ ಎಂದು ಬೇಸರವಾಗುತ್ತದೆ. ಹಾಗೆ ವ್ಯಥೆ ಪಡದೆ ಪೋಷಕರೇ ತಮ್ಮ ವಿದ್ಯಾರ್ಥಿಗಳ ಶಿಕ್ಷಣಶುಲ್ಕವನ್ನು ಕಟ್ಟಬಹುದು, ಆದರೆ ಸರಾಸರಿ ತಿಂಗಳ ಸಂಬಳಕ್ಕೆ ಹೋಲಿಸಿದರೆ ಶಿಕ್ಷಣದ ಫೀಸ್ ಬಲು ದುಬಾರಿ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಕೈ ಕೆಸರಾಗಿ ಬಾಯಿ ಮೊಸರು: ಗುರುಪ್ರಸಾದ್ ಕುರ್ತಕೋಟಿ ಅಂಕಣ
ಕೃಷಿಯನ್ನು ಕಲಿಯುವುದರ ಜೊತೆ ಜೊತೆಗೆ, ಉತ್ಪನ್ನಗಳನ್ನು ಹೇಗೆ ಮಾರಬೇಕು ಎಂಬುದನ್ನು ಕೂಡ ರೈತನಾಗುವವನು ಕಲಿಯಬೇಕು. ಹಿಂದೊಮ್ಮೆ ಬೆಂಗಳೂರನ್ನು ಬಿಟ್ಟು ಹಳ್ಳಿಗೆ ಖಾಯಂ ಆಗಿ ಬಂದು ಬಿಡಲೇ ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿನ ಸ್ನೇಹಿತರೊಬ್ಬರಿಗೆ ಹಳ್ಳಿಯಲ್ಲಿ ನಾನು ಸಂಪಾದನೆ ಮಾಡಲು ಏನು ಮಾಡಬಹುದು ಅಂತ ಕೇಳಿದಾಗ, ಅವರು ಬಿಳೆ (ಭತ್ತದ) ಹುಲ್ಲಿನ business ಮಾಡಿ ಅಂತ ನಕ್ಕಿದ್ದರು. ಆದರೆ ಅವರು ಹೇಳಿದ್ದು ತುಂಬಾ ಸತ್ಯ ಅಂತ ಈಗ ಅರಿವಾಗಿತ್ತು. ಭತ್ತದ ಹುಲ್ಲಿಗೆ ತುಂಬಾ ಬೆಲೆ ಹಾಗೂ ಬೇಡಿಕೆ ಇದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ
ಸಸ್ಯ ನೆಡುವವರ ಸಂತಸದ ಘಳಿಗೆಗಳು: ವಿನತೆ ಶರ್ಮ ಅಂಕಣ
ಚಕ್ರಮುನಿ ಸೊಪ್ಪಿನ ಗಿಡ ಖರೀದಿಗಿದ್ದದ್ದು ನೋಡಿ ನನ್ನ ಕಣ್ಣರಳಿತು! ಬೆಂಗಳೂರು, ಮೈಸೂರಿನಲ್ಲಿ ಈ ಚಕ್ರಮುನಿ ಎಲೆಗಳನ್ನು ತಿನ್ನುವ ಅಭ್ಯಾಸವಿತ್ತು. ಬ್ರಿಸ್ಬೇನ್ನಿನಲ್ಲಿ ಅಪರೂಪಕ್ಕೆ ವಾರಾಂತ್ಯ ತರಕಾರಿ-ಹಣ್ಣು ಮಾರ್ಕೆಟ್ಟಿನಲ್ಲಿ ವಿಯೆಟ್ನಮೀಸ್ ಮಾರಾಟಗಾರರು ತರುತ್ತಿದ್ದ ಚಕ್ರಮುನಿ ಸೊಪ್ಪನ್ನು ಕಂಡು ಸಂಭ್ರಮಿಸಿದ್ದೆ. ಅದನ್ನು ಕೊಂಡು ಅದರ ಕೊಂಬೆಗಳನ್ನು ನೆಟ್ಟು ಎರಡು ಬಾರಿ ಇದನ್ನು ಬೆಳೆಯಲು ಪ್ರಯತ್ನಿಸಿ ಸೋತಿದ್ದೆ. ಜೆರ್ರಿ ಅವರ ಸ್ವಾವಲಂಬಿ ಕೈತೋಟದಲ್ಲಿ ಚೆನ್ನಾಗಿ ಬೆಳೆದಿದ್ದ ಗಿಡವನ್ನು ನೋಡಿ ಸಂತೋಷವಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ
ಇದೊಂಥರ ವೈರುಧ್ಯ. ಚೆನ್ನಾಗಿದೆ ಆದರೂ ತಿನ್ನೋಲ್ಲ! ಯಾಕಿರಬಹುದು? ಬಹುಶಃ ಬೆಳ್ಳಗೆ ಪಾಲಿಶ್ ಮಾಡಿದ ರೇಷನ್ ಅಕ್ಕಿಯನ್ನು ತಿಂದು ತಿಂದು ಅವರಿಗೆ ರೂಡಿ ಆಗಿಬಿಟ್ಟಿದೆಯೋ ಏನೋ. ತವಡನ್ನು ತೆಗೆದು ಅದರಲ್ಲಿ ಏನೂ ಇರದಂತೆ ಮಾಡಿ ಪಾಲಿಶ್ ಮಾಡಿ ಕೊಡುವ ಅಕ್ಕಿಯೇ ಎಲ್ಲರಿಗೂ ಪ್ರಿಯ. ಶ್ರೀಮಂತರು ಅಷ್ಟೇ ಯಾಕೆ ತಿನ್ನಬೇಕು ಎಲ್ಲರೂ ತಿನ್ನೋಣ ಅಂತ ಇವರೂ ಪಾಲಿಶ್ ಅಕ್ಕಿಯ ಮೊರೆ ಹೋದರೆ? ಇದೆ ಕಾರಣಕ್ಕೆ ಶ್ರೀಮಂತರಿಗೆ ಬರುವ ಸಕ್ಕರೆ ಕಾಯಿಲೆ, ಹೃದಯ ರೋಗ ಈಗ ಎಲ್ಲರಿಗೂ ಬರುತ್ತಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ








