ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…
ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್ ತಳಕಲ್ ಬರೆಯುವ “ತಳಕಲ್ ಡೈರಿ”
ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್
ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’
ಹಳ್ಳಿಯ ಸಹವಾಸವೇ ಬೇಡ…!
ಕಾರ್ಪೊರೇಟ್ ಜಗತ್ತಿನಲ್ಲಿ ನಡೆಯುವ ರಾಜಕೀಯಗಳಿಂದ ರೋಸಿ ಹೋಗಿ ಕೆಲಸ ಬಿಟ್ಟು ಬಂದು ಹಳ್ಳಿಯಲ್ಲಿ ನೆಮ್ಮದಿ ಕಾಣಬೇಕು ಅಂದರೆ ಇಲ್ಲಿ ಇನ್ನೂ ಹದಗೆಟ್ಟ ಪರಿಸ್ಥಿತಿ ಇದೆ ಅನಿಸಿತು. ಸುಳ್ಳುಗಳು, ಜಾತಿ, ಕಳುವು ಇನ್ನೂ ಏನೇನು ನೋಡೋದು ಇದೆಯೋ ಇಲ್ಲಿ ಅನಿಸಿತು. ಅತ್ತೆ ಮಾವ ನಮ್ಮ ಸಂಬಂಧಿಯೇ ಆಗಿದ್ದರೂ ಅವರು ನಮ್ಮ ಪರವಾಗಿ ನಿಲ್ಲಲಾರರು ಎಂಬ ಕಟು ಸತ್ಯದ ಅರಿವು ಆಗಿತ್ತು. ಎಷ್ಟೇ ಅಂದರೂ ಅಲ್ಲಿನ ಜನರ ಜೊತೆಗೆ ಬದುಕುವ ಅವರು, ಎಲ್ಲಿಂದಲೋ ಬಂದ ಯಾವಾಗಲೋ ಒಮ್ಮೆ ಬಂದು ಹೋಗುವ ನನ್ನ ಪರವಾಗಿ ಹೇಗೆ ತಾನೇ ನಿಂತಾರು?
ಗುರುಪ್ರಸಾದ್ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 18ನೇ ಕಂತು
ದ್ರಾವಿಡ್ ಮತ್ತು ಗಂಗೂಲಿ: ಒಂದು ಅಪೂರ್ವ ಜೋಡಿ
ಅವರ ಕ್ರಿಕೆಟ್ಟನ್ನು ಸದಾಕಾಲ ಸ್ಮರಿಸಲು ಕರ್ನಾಟಕದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ‘ದ ವಾಲ್ʼಗೆ ಒಂದು ಗೋಡೆ ಮೀಸಲಿಟ್ಟು ಅವರ ಚಿತ್ರವನ್ನು ಮಾಡಿಸಿದ್ದಾರೆ. ಇದು ಒಂದು ರೀತಿ ಜನಗಳು, ಕ್ರೀಡಾಭಿಮಾನಿಗಳು, ಮುಂದಿನ ಪೀಳಿಗೆಯವರು ರಾಹುಲ್ ದ್ರಾವಿಡ್ರ ಆಟವನ್ನು ಇಲ್ಲಿ ಬಂದು ನೋಡಿ ಅವರ ಆಟವನ್ನು ಸ್ಮರಿಸುವುದಕ್ಕೆ ಅವಕಾಶ. ಅದರ ಮೇಲೆ ಕನ್ಸಿಸ್ಟೆನ್ಸಿ, ಕಮಿಟ್ಮೆಂಟ್, ಕ್ಲಾಸ್ ಎಂದು ಬರೆಸಿದ್ದಾರೆ. ಅರ್ಥಾತ್ ಸ್ಥಿರತೆ, ಭದ್ಧತೆ ಮತ್ತು ಆಡುವ ಶಿಸ್ತು ಅನ್ನುವ ಅರ್ಥ ಕೊಡುತ್ತೆ. ಇದೆಲ್ಲವೂ ಅವರ ಆಟಗಾರಿಕೆಯಲ್ಲಿ ನೋಡಬಹುದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ
ಆಡಿಕೊಳ್ಳುವ ಬಾಯಿಗೊಂದು ಬೀಗ…
ಯಾವ ಯಾವ ಕಾರಣಕ್ಕೆ ದಾಂಪತ್ಯಗಳು ಮುರಿದು ಬೀಳ್ತಿವೆ ಎಂಬುದು ಚರ್ಚೆಗೆ ನಿಲುಕುವ ವಿಷಯವೇ ಅಲ್ಲ. ಈಗ ಪ್ರತಿಮನೆಯಲ್ಲೂ ವಿಚ್ಚೇದನದ ಕೇಸ್ಗಳು, ಹೆಣ್ಣು-ಗಂಡಿನ ವರ್ತನೆ, ಮನಃಸ್ಥಿತಿಯ ಕುರಿತಾದ ದೂರುಗಳು, ಸ್ತ್ರೀವಾದ, ನೊಂದಗಂಡಂದಿರ ಸಂಘದ ಅಳಲುಗಳು ಯಥೇಚ್ಛವಾಗಿವೆ. ಯಾರ ಪರವೂ, ವಿರುದ್ಧವೂ ನಿಲ್ಲಲಾಗದ, ನಿಂತು ಸಾಧಿಸಲಾಗದ ಸಿಕ್ಕಾಗಿ ಉಳಿದಿವೆ. ಆದರೆ ಮಕ್ಕಳು ಬೇಕು ಅಥವಾ ಬೇಡ ಎಂಬ ಕಾರಣಕ್ಕಾಗಿ ನಡೆಯುತ್ತಿರುವ ದಾಂಪತ್ಯ ಸಮರಗಳ ಬಗ್ಗೆ ಸ್ವಲ್ಪ ಗಮನಹರಿಸಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ ನಿಮ್ಮ ಓದಿಗೆ
ಸಿಹಿ ಕೊಟ್ಟರೆ ಅಳುತ್ತಿದ್ದ ಮಂದಿ…
ಸುತ್ತ ಎತ್ತ ನೋಡಿದರೂ ರಾಕ್ಷಸಾಕಾರದ ಗುಡ್ಡಗಳು, ತುಂಬಿ ಹರಿಯುತ್ತಿದ್ದ ನದಿಗಳು. ಅಲ್ಲಿ ನಮ್ಮಂತೆ ಗುಂಪು ಗುಂಪು ಮನೆಗಳಾಗಲಿ ಹಳ್ಳಿಗಳಾಗಲಿ ಇಲ್ಲ. ಗುಡ್ಡಗಳಲ್ಲಿಯೇ ಹಳ್ಳಿಗಳು. ಅರ್ಧ ಕಿಲೋಮೀಟರ್ ಒಂದು, ಕಿಲೋಮೀಟರ್ ಅಂತರದಲ್ಲಿ ಒಂದೊಂದು ಮನೆಗಳು. ವಾಹನಗಳಿಗಿಂತ ಕುದುರೆಗಳೆ ಸಂಚಾರಕ್ಕೆ ಆಸರೆಗಳು. ನಮ್ಮ ತಂಡ ಮೊದಲೆ ತಯಾರಿಸಿ ಇಟ್ಟ ಅಡುಗೆ ಸಾಮಗ್ರಿಗಳ, ಬಟ್ಟೆ, ಹಾಸಿಗೆ ಹೊದಿಕೆಗಳ ಕಿಟ್ಟನ್ನು ಪ್ರತಿ ಮನೆಗೂ ತಲುಪಿಸಿ ಅವರಿಗೊಂದಿಷ್ಟು ಸಾಂತ್ವಾನ ಹೇಳಿ ಬರುತ್ತಿತ್ತು. ಶಾಲೆಗೆ, ದುಡಿಯಲು, ಕೊಂಡಕೊಳ್ಳಲು ಹೊರಗೆ ಹೋದವರು ಮರಳಿ ಹೆಣವಾಗಿ ಸಿಗುತ್ತಿದ್ದರು.
ಇಸ್ಮಾಯಿಲ್ ತಳಕಲ್ ಬರೆಯುವ ‘ತಳಕಲ್ ಡೈರಿ’ಯಲ್ಲಿ ಹೊಸ ಬರಹ ನಿಮ್ಮ ಓದಿಗೆ
ರೂಪಾತೀತ, ಗಾತ್ರಾತೀತ, ಕಾಲಾತೀತ ಶಿವ….
ಮಧ್ಯಪ್ರದೇಶದ ಭೋಜಪುರದಲ್ಲಿರುವ ಭೋಜೇಶ್ವರ, ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ಲಿಂಗ ನೆನಪಾಗುತ್ತದೆ. ಕೆಲವು ಮನೆತನಗಳ ಸಂಪ್ರದಾಯದಲ್ಲಿ ನದಿ ಮತ್ತು ಸಮುದ್ರ ತೀರದಲ್ಲಿ ವಾಸಿಸುವ ಜನರು ಪ್ರತಿದಿವಸ ಅದೇ ನೀರಿನಲ್ಲಿ ಸ್ನಾನ ಮಾಡಿ ಅಲ್ಲಿ ಸಿಗುವ ಮರಳಿನಲ್ಲಿ ಒಂದು ಲಿಂಗವನ್ನು ರಚಿಸಿ ಪೂಜಿಸಿ ಮತ್ತೆ ಅದನ್ನು ನೀರಿನಲ್ಲಿ ಅಂದೇ ವಿಸರ್ಜಿಸಿ ಮನೆಗೆ ಬರುವುದೂ ಉಂಟು. ಇದನ್ನು ವಿದ್ಯಾನಿವಾಸ್ ಮಿಶ್ರಾ ಒಂದು ಕಡೆ ಬರೆಯುತ್ತಾರೆ. ಮನುಷ್ಯ ಕಟ್ಟಿರುವ ಲಿಂಗಗಳಲ್ಲದೆ ಅನೇಕ ಕಡೆಗಳಲ್ಲಿ ಉದ್ಭವ ಲಿಂಗಗಳು ಸಿಗುತ್ತವೆ.
‘ದೇವಸನ್ನಿಧಿ’ ಅಂಕಣದಲ್ಲಿ ಶಿವನ ಹಲವು ರೂಪ, ರೂಪಕಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ
ಮೂಡ್ನಾಕೂಡು ಚಿನ್ನಸ್ವಾಮಿ ಅವರ ಕೊರೊನಾ ಕವಿತೆಗಳು
ದಾರಿ ತಪ್ಪಬಾರದೆಂದು ರೈಲು ಹಳಿಯ ಹಿಡಿದು ಹೊರಟ ಮುಗ್ಧ ಜನಗಳು ದೇಶದೆಲ್ಲೆಡೆ ಸಾರ್ವಜನಿಕ ಸಮಚಾರ ನಿರ್ಬಂಧವಾಗಿರುವಾಗ ಈ ಹಳಿಯಮೇಲೆ ಒಂದಿಷ್ಟು ಹೊತ್ತು ವಿರಮಿಸೋಣವೆಂದು ಮಲಗಿರುತ್ತಾರೆ. ದುರಾದೃಷ್ಟವಶಾತ್ ಗೂಡ್ಸ್ ರೈಲು ಹರಿದು ಹಳಿಯ ಮೇಲೆ ಮಲಗಿದ್ದವರು ಶವಗಳಾಗುತ್ತಾರೆ. ಅವರ ಪಕ್ಕವೇ ಬಿದ್ದಿದ್ದ ರೊಟ್ಟಿ ಚೂರುಗಳು, ರಕ್ತಸಿಕ್ತ ಮಾಂಸದ ತುಂಡುಗಳಾದ ಅಮಾಯಕ ಹೆಂಗಸರು ಮಕ್ಕಳು ಇಡೀ ದೇಶವನ್ನು ಮರುಗುವಂತೆ ಮಾಡುತ್ತವೆ.
ಅಭಿಷೇಕ್ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಮೂಡ್ನಾಕೂಡು ಚಿನ್ನಸ್ವಾಮಿಯವರ “ಕೊರೊನಾ” ಕವನ ಸಂಕಲನದ ಕುರಿತ ಬರಹ ಇಲ್ಲಿದೆ
ಆಸ್ಟ್ರೇಲಿಯಾದ ‘ಬಿಗ್ ಥಿಂಗ್ಸ್’ ಆಕರ್ಷಣೆಗಳು
ಏನಿದು ‘ಬಿಗ್ ಥಿಂಗ್ಸ್’ ಎಂದು ಮೊದಲ ಬಾರಿ ಕೇಳಿದಾಗ ನನ್ನ ಆಸ್ಟ್ರೇಲಿಯನ್ ಸ್ನೇಹಿತೆಯ ಗಂಡ ಬಲು ಸೊಗಸಾಗಿ ವಿವರಿಸಿದ್ದರು. ಒಂದೂರಿನ ಜನರು ಸೇರಿ ತಮಗೆ ಆಪ್ತವೆನಿಸಿದ ಹಣ್ಣು, ಆಹಾರ, ಪ್ರಾಣಿ, ಪಕ್ಷಿ, ಮರ ಇತ್ಯಾದಿಗಳಲ್ಲಿ ಒಂದನ್ನು ಆರಿಸಿಕೊಂಡು ಅದನ್ನು ದೊಡ್ಡ ಗಾತ್ರದ ಶಿಲ್ಪ ಕೃತಿಯಾಗೋ, ಲೋಹ ಕಲಾ ಕೃತಿಯಾಗಿಯೋ ನಿರ್ಮಿಸಿ ಹೆಮ್ಮೆಯಿಂದ ಆ ಪ್ರತಿಮೆಯನ್ನು ತಮ್ಮೂರಲ್ಲಿ ಸ್ಥಾಪಿಸುವುದು. ಕ್ರಮೇಣ ಅದಕ್ಕೆ ಪ್ರಚಾರ ಕೊಟ್ಟು ಅದನ್ನು ದೇಶದ ‘ಬಿಗ್ ಥಿಂಗ್ಸ್’ ಪಟ್ಟಿಗೆ ಸೇರುವಂತೆ ಮಾಡುವುದು. ಇದರಿಂದ ಆ ಊರಿಗೆ ಅದೇನೋ ವಿಶೇಷ ಗುರುತು ಸಿಕ್ಕಿದಂತಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”










