ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”
ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್ ಗುಂಜಗೋಡು ಅಂಕಣ
ಭಾರತದ ಕ್ರಿಕೆಟ್ನ ಸ್ಪಿನ್ನರ್ಸ್ಗಳು – 2
ನಿಧಾನವಾಗಿ ನಡೆದು ಬಂದು ಬೋಲಿಂಗ್ ಮಾಡುತ್ತಿದ್ದ ಬೇಡಿ ಅವರ ಬೋಲಿಂಗ್ನಲ್ಲಿ ಬಹಳ ಚಾಣಾಕ್ಷರಾಗಿದ್ದರು ಮತ್ತು ನಿಸ್ಸೀಮರು. ಒಂದು ಬಾಲು ನಿಧಾನವಾಗಿ ಬಂದರೆ ಮತ್ತೊಂದು ರಭಸದಿಂದ ಬಂದು ವಿಕೆಟ್ ಉರುಳಿಸಿ ಹೋಗುವುದು! ಇಷ್ಟಾಗಿ ಅವರ ಬೋಲಿಂಗ್ ಶೈಲಿಯಲ್ಲಿ ಕಿಂಚಿತ್ತೂ ವ್ಯತ್ಯಾಸವಿರುತ್ತಿರಲಿಲ್ಲ! ಒಂದು ಓವರ್ನಲ್ಲಿ 6 ವಿಧವಾಗಿ ಬಾಲು ಮಾಡುವ ಪ್ರತಿಭೆ ಹೊಂದಿದ್ದ ಬೇಡಿಯವರ ಬೋಲಿಂಗ್ಅನ್ನು ಹೇಗೆ ಆಡುವುದಪ್ಪ ಎಂದು ಬ್ಯಾಟ್ಮನ್ರನ್ನು ಕಾಡುತ್ತಿತ್ತು, ಯಾಕೆಂದರೆ ಏನು ಮಾಡಿದರೂ ಅವರು ನಡೆಯುವ ಶೈಲಿ, ರೀತಿ, ಹಾವಭಾವ ಯಾವುದರಲ್ಲೂ ಬದಲಾವಣೆ ಇರುತ್ತಿರಲಿಲ್ಲ.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ
‘ಒಂದು ಅಂಕ ಮುಗಿದು’ ಧ್ಯಾನಿಸುತ್ತಾ….
‘ತುಂಬೆಗಿಡ ಮತ್ತು ಹುಡುಗಿ’ ಸತ್ತು ಮಣ್ಣಾದ ಹುಡುಗಿಯೊಬ್ಬಳ ಸಮಾಧಿಮೇಲೆ ನೆಟ್ಟ ತುಂಬೆ ಗಿಡದ ವಿಷಯವಿರುವ ಕವಿತೆ. ಬದುಕಿನ ಉತ್ತರಗಳ ಹಂಗು ಹುಡುಗಿಗೂ, ತುಂಬೆಗಿಡಕ್ಕೂ ಇಲ್ಲ. ಬದುಕಿನ ನಶ್ವರತೆಗಳು, ಹುಟ್ಟು, ಸಾವಿನ ಕುರಿತು ಏಳುವ ಜಿಜ್ಞಾಸೆಗಳು ಕವಯತ್ರಿಯ ಭಾವಾತ್ಮಕತೆಯ ತೀವ್ರತರ ಹುಡುಕಾಟವನ್ನು ದರ್ಶಿಸುತ್ತವೆ. ‘ನೀನೆ ಒಂದು ಅಪೂರ್ಣ ಚಿತ್ರ’ ಕವಿತೆಯೂ ಬದುಕಿನ ಎಲ್ಲಾ ಕ್ಷಣಗಳಿಗೆ ಮುಖಾಮುಖಿಯಾಗಿ ಮುಪ್ಪಿನಲ್ಲಿ ಹಿಂದಿನ ಪುಟಗಳನ್ನು ತಿರುವಿಹಾಕುವ ವ್ಯಕ್ತಿಯೊಬ್ಬನ ಕುರಿತು ಬರೆದ ಕವಿತೆ.
ಅಭಿಷೇಕ್ ವೈ.ಎಸ್. ಬರೆಯುವ ಅಂಕಣ “ಕಾವ್ಯದ ಹೊಸ ಕಾಲ”
ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು – ಭಾಗ ಎರಡು
ಹಾಗೆಂದು ನಮ್ಮೆಲ್ಲಾ ಅನುಭವಗಳು ಆನಂದತುಲಿತಮಯ, ಅದ್ಭುತರಮ್ಯ, ಲೋಕಾತೀತವಾದವೇನಲ್ಲ. ಹೆಚ್ಚಿನ ಬಾರಿ ಖುಷಿಖುಷಿಯಿಂದ ಕೂಡಿದ್ದರೂ, ಒಮ್ಮೊಮ್ಮೆ ಗೊಳೋ ಎಂದು ಅತ್ತಿರುವುದೂ ನಿಜ. ಇಂತಹ ಕ್ಯಾಂಪಿಂಗ್ ಸಾಹಸಗಳಲ್ಲಿ ಕೆಲವು ಬಾರಿ ಅಪರಿಚಿತ ದೇಶಗಳಲ್ಲಿ, ಸ್ಥಳಗಳಲ್ಲಿ ಪರಿಸ್ಥಿತಿ ಕೈಕೊಟ್ಟು ಕ್ಯಾಂಪಿಂಗ್ ಪಟು ಜೀಬೀ ಪೇಚಿಗೆ ಸಿಲುಕಿ, ನಾನು ನಮ್ಮ ಮಕ್ಕಳ ಮೈದಡವುತ್ತಾ ಕಂಗಾಲಾಗಿ ಕಣ್ಣೀರಿಟ್ಟಿದ್ದೂ ನಿಜ. ಆದರೂವೆ… ಧೈರ್ಯಗೆಡದೆ ಜರ್ಮನ್ ಪೊಲೀಸರಿಗೆ ಇಂಗ್ಲೀಷಿನಲ್ಲಿ ಉತ್ತರಿಸಿದ್ದಿದೆ.
ಡಾ. ವಿನತೆ ಶರ್ಮ ಬರೆಯವ “ಆಸ್ಟ್ರೇಲಿಯಾ ಪತ್ರ”
ಅಯ್ಯೋ ಸರ್ ಇಲ್ಲಿ ಹಲ್ಲಿಗಳು ಇವೆ!
ನನ್ನ ಬೆಂಗಳೂರಿನ ತರಬೇತಿಗಳು ಮುಗಿದ ತಕ್ಷಣ ನಾನು ರಾಮ್ ಇಬ್ಬರೂ ಕಾರಿನಲ್ಲಿ ಹಳ್ಳಿಗೆ ಹೊರಟೆವು. ಅದೇ ವಾರಾಂತ್ಯದಲ್ಲಿ ವಿನೋದ ಅವರಿಗೂ ಕೂಡ ಬರಲು ಹೇಳಿದ್ದೆ. ಅವರೂ ಹಳ್ಳಿಯಲ್ಲಿ ನಾವು ಸಧ್ಯ ವಾಸಕ್ಕಿದ್ದ ಹೊಸ ಮನೆಯನ್ನು ಇನ್ನೂ ನೋಡಿರಲಿಲ್ಲ. ಅದೂ ಅಲ್ಲದೆ ರಾಮನನ್ನು ಅವರಿಗೆ ಪರಿಚಯಿಸಿದಂತಾಗುತ್ತದೆ ಎಂಬುದು ನನ್ನ ಯೋಚನೆ. ಬೆಂಗಳೂರಿನಿಂದ ನಮ್ಮ ಹಳ್ಳಿಗೆ ಹೋಗಲು ಹೆಚ್ಚು ಕಡಿಮೆ ಏಳು ಗಂಟೆಗಳು ಬೇಕು. ರಾಮನಿಗೆ ಅದು ಮೊದಲ ಆಘಾತ!
ಗುರುಪ್ರಸಾದ್ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ
‘ಅವಧೇಶ್ವರಿ’ ನನ್ನ ಸೆಳೆದ ಕಥೆಯೂ…
ಕಥಾನಾಯಕಿಯಾದ ನರ್ಮದಾ ಪುರುಕುತ್ಸಾನಿಯ ಪಾತ್ರ ಅತ್ಯಂತ ಸಶಕ್ತವಾಗಿದೆ. ಕನ್ನಡ ಕಾದಂಬರಿ ಲೋಕದಲ್ಲಿ ಶಕ್ತಿಯುತವಾದ ನಾಯಕಿ ಮುಖ್ಯ ಪಾತ್ರದಲ್ಲಿರುವುದು ಸ್ವಲ್ಪ ಅಪರೂಪವೇ. ಪುರುಕುತ್ಸಾನಿಯ ಪಾತ್ರವನ್ನು ಪುಣೇಕರ್ ಅವರು ಕಟ್ಟಿಕೊಟ್ಟಿರುವ ಬಗೆ ಬಹಳ ಚನ್ನಾಗಿದೆ. ಸುತ್ತಮುತ್ತಲಿನ ರಾಜರಂತೆ ವಿಸ್ತರಣಾ ದಾಹವನ್ನು ಹೊಂದದೇ ತನ್ನ ರಾಜ್ಯವನ್ನು ಇರುವಷ್ಟು ಉಳಿಸಿಕೊಂಡು ಅಲ್ಲೇ ದಕ್ಷವಾಗಿ ಆಡಳಿತವನ್ನು ಮಾಡುತ್ತಾಳೆ. ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ
ಭಾರತದ ಕ್ರಿಕೆಟ್ನ ಸ್ಪಿನ್ನರ್ಸಗಳು – 1
ಪ್ರಸನ್ನ ಬೋಲಿಂಗ್ನಲ್ಲಿ ಎಷ್ಟು ಪ್ರಭಾವಶಾಲಿಯಾಗಿದ್ದರೆಂದರೆ ಅವರು ಬೋಲರ್ಗಿಂತ ಒಬ್ಬ ಬಾಲ್ ಹಿಡಿದ ಚೆಸ್ ಆಟಗಾರ ಎಂದು ಆಫ್ ಸ್ಪಿನ್ನರ್ ಮ್ಯಾಲೆಟ್ ಹೇಳುತ್ತಾರೆ. ಅವರ ಎದುರಿಗೆ ಆಡಿದ ಮಾಜಿ ಆಸ್ಟ್ರೇಲಿಯಾದ ನಾಯಕ ಇಯನ್ ಛಾಪೆಲ್ ಪ್ರಸನ್ನರನ್ನು ಪ್ರಪಂಚದ ಅತ್ಯಂತ ಸುಪ್ರಸಿದ್ಧಿ ನಂಬರ್ 1 ಬೋಲರ್ ಎಂದು ಘೋಷಿಸಿದರು. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ
ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ
ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ
ದೇವಾಲಯಗಳಲ್ಲಿ ಮಿಥುನ ಶಿಲ್ಪಗಳು
ಇನ್ನೊಂದು ಕುತೂಹಲಕರ ವಿಷಯ ಅಂದರೆ, ಆ ಕಾಲದ ಸಾಮಾಜಿಕ ಜೀವನದ ಮೇಲೆ ಬೆಳಕು ಚೆಲ್ಲುವ ಕೃತಿಗಳನ್ನು ರಚಿಸಿರುವ, ತಮ್ಮ ಪ್ರವಾಸದ ಕಥೆ ಹೇಳುತ್ತ ಅಂದಿನ ಜೀವನದ ಬಗ್ಗೆ ತಿಳಿಸುವ ಕಲಣ, ಬಿಲ್ಲಣ ಮುಂತಾದವರ ಕೃತಿಗಳಲ್ಲೂ ಕೂಡ ಯಾವ ಕಾರಣಕ್ಕೆ ದೇವಾಲಯಗಳಲ್ಲಿ ಮಿಥುನ ಶಿಲ್ಪಗಳನ್ನು ಕೆತ್ತುತ್ತಾರೆ ಎನ್ನುವುದರ ಬಗ್ಗೆ ಏನೂ ಮಾಹಿತಿ ಸಿಗುವುದಿಲ್ಲ. ಹಾಗಾಗಿ ಇದು ಅಂದಿನ ಸಾಮಾಜಿಕ ಜೀವನದಲ್ಲಿ ತುಂಬಾ ಸಹಜವಾದ ಭಾಗವಾಗಿರಬಹುದು.
‘ದೇವಸನ್ನಿಧಿ’ ಅಂಕಣದಲ್ಲಿ ಪುರಾತನ ದೇವಸ್ಥಾನಗಳಲ್ಲಿ ಕಾಣಸಿಗುವ ಮಿಥುನ ಶಿಲ್ಪಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ










