Advertisement

ಅಂಕಣ

ಅಂಗೈ ಗೆರೆಗಳಾಗುವುದಿಲ್ಲ ಭವಿಷ್ಯದ ಹೆದ್ದಾರಿಗಳು

ಅಂಗೈ ಗೆರೆಗಳಾಗುವುದಿಲ್ಲ ಭವಿಷ್ಯದ ಹೆದ್ದಾರಿಗಳು

ನನಗೆ ನನ್ನ ಭವಿಷ್ಯದ ಬಗ್ಗೆ ತಿಳಿಯುವ ಕುತೂಹಲವುಂಟಾಗಿ ನನ್ನ ಅಂಗೈಯನ್ನು ಅವನ ಮುಂದೆ ಮಾಡಿದೆ. ಆ ಭವಿಷ್ಯಗಾರ ಇಡಿ ನನ್ನ ಅಂಗೈ ಜಾಲಾಡಿ ‘ನಿನ್ನ ವಿದ್ಯಾಭ್ಯಾಸ ಇಲ್ಲಿಗೆ ಕೊನೆ ಆಗತೈತಿ. ಇನ್ ಮುಂದಾ ಓದಾಕ ಹೋಗಬ್ಯಾಡ. ಓದಿದ್ರೂ ತಲಿಗೆ ಹತ್ತಾಂಗಿಲ್ಲ. ಈ ಲಾರಿನ ನಿನಗ ಗತಿ ಆಗ್ತೇತಿ’ ಅಂತ ಹೇಳಿ ಇಳಿದು ಹೋಗಿಬಿಟ್ಟ. ಅಂಗೈ ಮೇಲಿನ ಭವಿಷ್ಯ ನಿಜಾನೋ ಸುಳ್ಳೋ ಒಂದು ತಿಳಿಯದ ವಯಸ್ಸದು. ಯಾರಾದ್ರೂ ಏನಾದ್ರೂ ಹೇಳಿಬಿಟ್ಟರೆ ನಂಬಿಬಿಡುವ ಮುಗ್ಧತೆಯೋ ದಡ್ಡತನವೋ ಆಗ ನನ್ನಲ್ಲಿತ್ತು. ಇಸ್ಮಾಯಿಲ್‌ ತಳಕಲ್‌ ಅಂಕಣ

read more
ಯಕ್ಷಗಾನ ಸಂಘಟಕರ ಸಂದರ್ಶನ…

ಯಕ್ಷಗಾನ ಸಂಘಟಕರ ಸಂದರ್ಶನ…

ನಿಜವಾಗಿ ಹೇಳೊದಂದ್ರೆ ನಮಗೆ ಯಕ್ಷಗಾನದ ಮೇಲಿರೊ ಪ್ರೀತಿನೆ ಯಕ್ಷಗಾನ ಮಾಡಿಸೋಕೆ ಇರೊ ಕಾರಣ. ಇಲ್ಲಿ ಪ್ರತಿ ದಿನ ಒಂದಿಪ್ಪತ್ತು ಜನ ಇಲ್ಲಿ ಸೇರ್ತೇವಲ್ಲ, 365 ದಿನನೂ ಯಕ್ಷಗಾನದ ಏನಾದ್ರು ಒಂದು ಸುದ್ದಿ ಮಾತಾಡೇ ಆಡ್ತಿವಿ. ಮಳೆಗಾಲದಲ್ಲಿ ತಾಳಮದ್ದಲೆ ನೋಡ್ತಿವಿ. ಇಲ್ಲಿ ಈ ತರ ಅರ್ಥ ಹೇಳಿದರು. ಅಲ್ಲೊಂದು ಆಟ ನೋಡಿಕೊಂಡು ಬಂದೆ, ಹಿಂಗಾಯಿತು, ಹಂಗಾಯಿತು ಅಂತ ಏನೊ ಒಂದು ಮಾತು ಇರತ್ತೆ.
“ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಕೃತಿ ಆರ್ ಪುರಪ್ಪೇಮನೆ ಬರಹ

read more
ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

read more
ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 1

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 1

ವೆಸ್ಟ್ ಇಂಡೀಸ್‌ಗೆ ಹೋಗಿ ಅವರು ಅಲ್ಲೂ ಸುಮ್ಮನೆ ಕೂರಲಿಲ್ಲ! ಪ್ರಪ್ರಥಮವಾಗಿ ಟೆಸ್ಟ್‌ಗೆ ಇಳಿದ ಸುನಿಲ್‌ರ ಆರ್ಭಟ ಎಷ್ಟರ ಮಟ್ಟಿಗೆ ಇತ್ತೆಂದರೆ ಅವರು ಮಾಡಿದ ಭಾರತದ ದಾಖಲೆ ಇನ್ನೂ ಯಾರೂ ಮುರಿದಿಲ್ಲ! ಐದರಲ್ಲಿ, ನಾಲ್ಕು ಟೆಸ್ಟ್ ಅಡಿದ ಸುನಿಲ್ ಗವಾಸ್ಕರ್ ಮೊಟ್ಟ ಮೊದಲನೇಯ ಸರಣಿಯಲ್ಲಿ 774ರನ್ ಹೊಡೆದು ಇಂದಿಗೂ ಆ ವಿಶ್ವದಾಖಲೆ ಜೀವಂತವಾಗಿ ಉಳಿದಿದೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಸುನಿಲ್‌ ಗವಾಸ್ಕರ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

read more
ಇಂಟರ್‌ನೆಟ್‌ ಸೃಷ್ಟಿಸುತ್ತಿರುವ ಆಧುನಿಕ ಪುರಾಣಗಳು

ಇಂಟರ್‌ನೆಟ್‌ ಸೃಷ್ಟಿಸುತ್ತಿರುವ ಆಧುನಿಕ ಪುರಾಣಗಳು

ಭೂಲೋಕದಲ್ಲಿರುವ ಬೆರಗು ಹುಟ್ಟಿಸುವ ಎಲ್ಲ ಕೆಲಸಗಳನ್ನು ಅನ್ಯಲೋಕದ ಜೀವಿಗಳು ಬಂದು ಮಾಡಿದ್ದಾರೆ ಅಂತ ಎಲ್ಲವನ್ನೂ ಏಲಿಯನ್‌ ಟೆಕ್ನಾಲಜಿಗೆ ಒಪ್ಪಿಸುವ ಅಸಂಬದ್ಧತೆ ಈಗ ಎಲ್ಲಾ ಕಡೆಗಳಲ್ಲಿ ಢಾಳಾಗಿ ಕಾಣಿಸುತ್ತಿದೆ. ಅದು ಎಷ್ಟರ ಮಟ್ಟಿಗೆ ಜನರನ್ನು ನಂಬಿಸಿದೆ ಅಂದರೆ ಇತ್ತೀಚೆಗೆ ಒಬ್ಬರು ನನ್ನೊಂದಿಗೆ ಯಾರಾದರೂ ಮನುಷ್ಯರು ಅಷ್ಟು ಚೆನ್ನಾಗಿ ಕೆತ್ತಲು ಸಾಧ್ಯವೇ ಇಲ್ಲ ಅಂತ ವಾದಿಸುತ್ತಿದ್ದರು. ಅವರಿಗೆ ಈಗಲೂ ಕೆತ್ತನೆ ಮಾಡುವ ಸ್ಥಪತಿಗಳಿರುವುದು ತಿಳಿದಂತಿಲ್ಲ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

read more
ಅಭಿಷೇಕ್‌ ವೈ.ಎಸ್‌. ಹೊಸ ಅಂಕಣ “ಕಾವ್ಯದ ಹೊಸ ಕಾಲ” ಆರಂಭ

ಅಭಿಷೇಕ್‌ ವೈ.ಎಸ್‌. ಹೊಸ ಅಂಕಣ “ಕಾವ್ಯದ ಹೊಸ ಕಾಲ” ಆರಂಭ

ಕನ್ನಡದ ವಿಶಿಷ್ಟ ಸಾಹಿತ್ಯ ಪ್ರಕಾರವಾದ ‘ವಚನ ಸಾಹಿತ್ಯ’ ಕವಯತ್ರಿಯಮೇಲೆ ಗಾಢ ಪ್ರಭಾವವನ್ನು ಬೀರಿವೆ ಎನ್ನುವುದು ಕೆಲ ಕವಿತೆಗಳಿಂದಲೇ ತಿಳಿಯುತ್ತದೆ. ಅಲ್ಲಮ, ಬಸವಾದಿ ಶರಣರ ನೆರಳಿನ ಛಾಯೆಯಿದೆ. ಅದರಲ್ಲೂ ಅಕ್ಕಮಹಾದೇವಿಯವರ ವಚನಗಳು ಹೆಚ್ಚು ಪ್ರಭಾವಿಸಿವೆ.
ಅಭಿಷೇಕ್‌ ವೈ.ಎಸ್. ಬರೆಯುವ ಹೊಸ ಅಂಕಣ “ಕಾವ್ಯದ ಹೊಸ ಕಾಲ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

read more
ಚುರುಮುರಿ, ಕೋಸಂಬರಿಯಾದ ‘ಆಸ್ಟ್ರೇಲಿಯಾ ಪತ್ರ’

ಚುರುಮುರಿ, ಕೋಸಂಬರಿಯಾದ ‘ಆಸ್ಟ್ರೇಲಿಯಾ ಪತ್ರ’

ದೇಶವಿಡೀ ಇನ್ನೇನು ಬರಲಿರುವ ಕ್ರಿಸ್ಮಸ್ ಹಬ್ಬದ ಮೋಡಿಗೆ ಸಿಲುಕಿ ಸಜ್ಜಾಗುತ್ತಿದೆ. ಬಣ್ಣಬಣ್ಣಗಳ ಅಲಂಕಾರಗಳು, ಕ್ರಿಸ್ಮಸ್ ಮಾರ್ಕೆಟ್, ಜನಸಂದಣಿ, ನಗರ ಕೇಂದ್ರದಲ್ಲಿರುವ ಬೃಹತ್ ಅಲಂಕೃತ ಕ್ರಿಸ್ಮಸ್ ಮರ ಎಲ್ಲವೂ ಜನರನ್ನು ಕುಣಿದಾಡಿಸುತ್ತಿವೆ. ಕ್ರಿಸ್ಮಸ್ ದಿನದ ವಿಶೇಷ ಆಹಾರವಾದ ಟರ್ಕಿ ಕೋಳಿ ಮತ್ತು ಸಾಮನ್ ಮೀನು ಮಿಂಚಿನ ವೇಗದಲ್ಲಿ ಮಾರಾಟವಾಗುತ್ತಿವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

read more
ನಿರ್ಜೀವವೊಂದು ಉಸಿರು ಪಡೆದುಕೊಳ್ಳುವ ಪರಿ…..

ನಿರ್ಜೀವವೊಂದು ಉಸಿರು ಪಡೆದುಕೊಳ್ಳುವ ಪರಿ…..

ಭೂಮಿಯ ಗರ್ಭಕ್ಕಿಳಿದ ಬೀಜಗಳು ಮೊಳಕೆಯೊಡೆದು ಸಸಿಯಾಗಿ, ಹೂಬಿಟ್ಟು ನೂರಾರು ಕಾಯಿಗಳಾಗಿ, ಹಣ್ಣಾಗಿ, ತೆನೆಗಳಾಗಿ ಹಸಿದ ಹೊಟ್ಟೆಗಳನ್ನು ತಣಿಸುವುದು ಇದೆಯಲ್ಲ, ಇದಕ್ಕಿಂತ ಸೃಜನಾತ್ಮಕವಾದದ್ದು ಪ್ರಪಂಚದಲ್ಲಿ ಬೇರೆ ಯಾವುದೂ ನನ್ನ ಕಣ್ಣಿಗೆ ಕಾಣುವುದಿಲ್ಲ. ಈ ಮಣ್ಣಿನ ಅಂತಃಕರಣವಾದರೂ ಎಂತಹದ್ದು?
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

read more
ಡಾನ್ ಬ್ರಾಡ್ಮನ್, ಸಚಿನ್ ಟೆಂಡೂಲ್ಕರ್ ಮತ್ತು ಶೇನ್ ವಾರ್ನ್‌

ಡಾನ್ ಬ್ರಾಡ್ಮನ್, ಸಚಿನ್ ಟೆಂಡೂಲ್ಕರ್ ಮತ್ತು ಶೇನ್ ವಾರ್ನ್‌

ಡಾನ್ ಬ್ರಾಡ್ಮನ್ ಎಂತಹ ಬ್ಯಾಟ್ಸ್ಮನ್ ಆಗಿದ್ದರೆಂದರೆ ಅವರನ್ನು ಔಟ್ ಮಾಡುವುದಕ್ಕೆ ದೇವರೇ, ಅಥವ ನಮ್ಮ ಭಾಷೆಯಲ್ಲಿ ಹೇಳಬೇಕೆಂದರೆ ಬ್ರಹ್ಮನೇ ಬರಬೇಕು ಅನ್ನುವ ಹಾಗೆ ಆಗಿತ್ತು. ಇದನ್ನು ಹೇಗಾದರೂ ಮುರಿಯಬೇಕು ಎಂದು ಇಂಗ್ಲೆಂಡ್ ತಂಡ ಒಂದು ತೀರ್ಮಾನಕ್ಕೆ ಬಂದು 1934ರಲ್ಲಿ ತಂಡದ ನಾಯಕ ಜಾರ್ಡಿನ್ ಒಂದು ಪ್ಲಾನ್ ಹಾಕಿದರು.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ