ರಷ್ಯಾದ ಭೌಗೋಳಿಕ ಕಥನ…
ಒಂದುವೇಳೆ ಬೆಂಗಳೂರು ಸಮುದ್ರಮಟ್ಟಕ್ಕಿಂತ ಒಂದು ಮುನ್ನೂರು ಮೀಟರ್ ಕೆಳಗಿದ್ದಿದ್ದರೆ? ಅರಬ್ಬೀ ಸಮುದ್ರದ ಮೂಲಕ ಬಂದ ಗಾಳಿ ಪಾಲ್ಘಾಟ್ ಗ್ಯಾಪಿನ ಕಾರಣ ಪಶ್ಚಿಮ ಘಟ್ಟಗಳಿಗೆ ಅಪ್ಪಳಿಸದೇ ಊಟಿ ತಲುಪಿ ಅಲ್ಲಿ ತಂಪುಗೊಂಡು ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿ ಈಗಿನ ಎತ್ತರಕ್ಕೆ ತಡೆಯಿರದ ಕಾರಣ ಮುಂದೆ ಹೋಗಿಬಿಡುತ್ತಿತ್ತು. ಈಗಿನ ಅತ್ಯುತ್ತಮ ಹವಾಮಾನ ಇರುತ್ತಲೇ ಇರಲಿಲ್ಲ. ಹೈದರಾಲಿ ಮತ್ತು ಟಿಪ್ಪು ಲಾಲ್ಬಾಗ್ ನಿರ್ಮಿಸುತ್ತಲೇ ಇರಲಿಲ್ಲ. ಮೈಸೂರು ಅರಸರಿಗೆ ಪ್ರಿಯವಾದ ಜಾಗವಾಗುತ್ತಲೇ ಇರಲಿಲ್ಲ. ಬ್ರಿಟಿಷರಿತೆ ತಮ್ಮ ಊರನ್ನು ನೆನಪಿಸುವ ಪ್ರದೇಶವೂ ಆಗುತ್ತಿರಲಿಲ್ಲ.
ಗಿರಿಧರ್ ಗುಂಜಗೋಡು ಬರೆಯುವ ಓದುವ ಸುಖ ಅಂಕಣ
ಕ್ರಿಕೆಟ್ನ ‘ಲಿಟಲ್ ಮಾಸ್ಟರ್ಸ್’ – 2
ಪಾಕಿಸ್ತಾನದ ಶೊಯೆಬ್ ಅಖ್ತರ್ ಮೊದಲ ಬಾರಿ ಬೋಲಿಂಗ್ ಮಾಡಿದಾಗ ಅವರ ವೇಗವನ್ನು ನೋಡಿ ಜಗತ್ತೇ ತತ್ತರಿಸಿ ಹೋಗಿತ್ತು. ಜೊತೆಗೆ ಶೋಯೆಬ್ರ ಹಾವಭಾವ, ತನ್ನನ್ನು ಬಿಟ್ಟರಿಲ್ಲ ಎಲ್ಲಾರನ್ನೂ ಮುಗಿಸಿ ಬಿಡ್ತಿನಿ ಅನ್ನುವ ಮನೋಭಾವ ಎಲ್ಲರಲ್ಲೂ ಸ್ವಲ್ಪ ದಿಗಿಲು ಹುಟ್ಟಿಸಿತ್ತು. ವಿಶ್ವ ಕಪ್ಗೆ ಮೊದಲಬಾರಿ ಅವರು ಆಡಿದಾಗ ಸಚಿನ್ ಇವರ ಬೋಲಿಂಗನ್ನು ಥಳಿಸಲು ಪಣ ತೊಟ್ಟರು. ಇವರ ಬೋಲಿಂಗನ್ನು ಹಿಗ್ಗಾ ಮುಗ್ಗಾ ಬಾರಿಸಿ ಇವರು ಹುಲಿಯಲ್ಲ, ಹುಲಿ ವೇಶ ಹಾಕಿದ ಸಾಧು ಪ್ರಾಣಿ ಕುರಿ ಅಷ್ಟೇ, ಇವರಿಂದ ಏನೂ ಭಯಪಡಬೇಕಾಗಿಲ್ಲ ಎಂದು ತೋರಿಸಿ ಕೊಟ್ಟರು ಸಚಿನ್!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ
ಕರಿಯಣ್ಣ ಕೆಂಚಣ್ಣರೆಂಬ ಜಾನಪದ ದೈವಗಳು
ನಿಧಾನವಾಗಿ ಜನ ಆಗ ತಾನೆ ಸ್ನಾನ ಮಾಡಿ, ಒಪ್ಪ ಓರಣ ಮಾಡಿಕೊಂಡು ಬರಲಾರಂಭಿಸಿದ್ದರು. ಭಜನೆಯ ವೇಳೆಯಲ್ಲಿ ಗುಡಿಗೆ ಬರುವಾಗ ಸ್ನಾನ ಮಾಡಿ ಬರುವ ಪದ್ಧತಿಯೂ ಗಮನಾರ್ಹ. ದಿನವಿಡೀ ಹೊಲಗದ್ದೆಗಳಲ್ಲಿ ದುಡಿಯುವ ವರ್ಗ ದುಡಿಮೆ ಮುಗಿಸಿಕೊಂಡು ಮನೆಗೆ ಬಂದು ಸ್ನಾನ ಮಾಡಿ ದೇವಾಲಯಕ್ಕೆ ಬರಲು ಸಂಜೆ ೭.೩೦ ಕಡಿಮೆ ಆಗುವುದಿಲ್ಲ ಅಂತ. ಅದಕ್ಕೇ ಇಡೀ ದೇವಾಲಯ ಗಲಗಲ ಅನ್ನಲು ೮ ಗಂಟೆ ತನಕ ಬೇಕಾಯಿತು. ನನ್ನ ವಾಪಸ್ ಊರಿಗೆ ಹೋಗುವ ಆತುರಕ್ಕೆ ಅರ್ಥವಿಲ್ಲ ಅಂತ ತಿಳಿದು ಮುಗಿದಾಗ ಹೊರಡೋದು ಅಂತ ತೀರ್ಮಾನಿಸಿ ವಾಚ್ ನೋಡಿಕೊಳ್ಳುವುದನ್ನು ಬಿಟ್ಟು ತೆಪ್ಪಗೆ ಕುಳಿತುಕೊಂಡೆ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ
ಮಾನವೀಯತೆಗಾಗಿಯೇ ಜೀವ ತೇದವರ ನೆನೆಯುತ್ತಾ…
‘ವರ್ಣ’ ಅಪ್ಪಟ ದಲಿತ ಜಗತ್ತಿನ ಪ್ರಾತಿನಿಧಿಕ ಕವಿತೆ. ಕವಿ ಸುಮ್ಮನೆ ಎಲೆಮರೆಯ ಕಾಯಿಯಂತಿದ್ದರೂ ಬಿಡದೆ ಪ್ರಚೋದಿಸಿ ಅಖಾಡಕ್ಕೆ ಕರೆದು ಕೊನೆಗೆ ಮಣ್ಣುಮುಕ್ಕುವ ಉಢಾಳರಿಗೆ ಎಚ್ಚರಿಕೆಯಂತಿದೆ ಈ ಕವಿತೆ. “ಹಸಿರು, ಕೆಂಪು, ಕಪ್ಪು, ಬಣ್ಣಗಳೊಳಗೆ ಕರಗಿಹೋದ ದಲಿತರ ನೆತ್ತರು ಮತ್ತು ಬೆವರು ಉಳ್ಳವರನ್ನು ಉಸಿರುಗಟ್ಟಿ ಸಾಯಿಸಿದರೆ ಆಶ್ಚರ್ಯಪಡಬೇಕಿಲ್ಲ”. ‘ಹಸಿವು’ ಕವಿತೆ ಅವ್ವನ ಉದಾರತನವನ್ನೂ ಆಕೆಯ ಸಂಸ್ಕಾರವನ್ನೂ ದರ್ಶಿಸಿ ದಂಗುಬಡಿಸುತ್ತದೆ. ಹಸಿವು ಎಂದು ಬಂದವರಿಗೆ ತನ್ನ ಪಾಲಿನ ತಟ್ಟೆಯಲ್ಲಿದ್ದ ಹಿಟ್ಟನ್ನು ಕೊಟ್ಟುಬಿಡುತ್ತಾಳೆ. ಅಭಿಷೇಕ್ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣ
ಸಾಂಘಿಕವಾದ ಕ್ರಿಸ್ಮಸ್ ಸೀಸನ್ ಶುಭಾಶಯಗಳು
ಬಹುಶಃ ಪ್ರಪಂಚದಾದ್ಯಂತ ಕೋಟ್ಯಾಂತರ ಮಕ್ಕಳು ಎದುರು ನೋಡುವ, ಹಾಗೆ ಗಪ್ ಚಿಪ್ ಆಗಿ ಚಿಮಿಣಿಯಲ್ಲಿ ಸಾಂಟಾ ಬಂದು ಕೊಡುವ ಉಡುಗೊರೆಗಾಗಿ ಕಾಯುವ ಯಾವೊಂದು ಮಗುವಿಗೂ ನಿರಾಸೆಯಾಗದ ಸಂದರ್ಭ ಈ ಕ್ರಿಸ್ಮಸ್ ಸೀಸನ್. ಇದು ‘giving’ ಸೀಸನ್. ಅಂದರೆ ನಾವು ಮನಃಪೂರ್ವಕವಾಗಿ ಕೈಲಾದಷ್ಟು ದಾನ ಮಾಡುವ ಕಾಲ. ನಾವು ಕೊಡುವ ದಾನವು ಹಣದಿಂದ ಹಿಡಿದು ಬಟ್ಟೆ, ಉಡುಗೆತೊಡುಗೆ, ಮನೆವಸ್ತುಗಳು, ಪೀಠೋಪಕರಣಗಳು, ಪುಸ್ತಕಗಳು, ಆಹಾರ ಪದಾರ್ಥ, ಎಂಬಂತೆ ನಾನಾತರಹವಾಗಿ ನಾವು ದಾನವೀಯಬಹುದು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”
ರೈತನ ಮಿತ್ರ ಎರೆಹುಳು ಆದರೆ ಅದರ ವೈರಿ…?
ಮಾನವನ ಪ್ರಕೃತಿಯ ಮೇಲಿನ ದಬ್ಬಾಳಿಕೆಗೆ ಇದೊಂದು ಸಣ್ಣ ಉದಾಹರಣೆ ಅಷ್ಟೆ. ಟ್ರಾಕ್ಟರ್ನಂತಹ ಯಂತ್ರ ಎಲ್ಲರಂತೆಯೇ ಜೀವಿಸುವ ಹಕ್ಕಿರುವ ಹಾವಿನ ಜೀವಕ್ಕೆ ಕುತ್ತು ತಂದಿತ್ತು. ಹಾವು ಕಣ್ಣಿಗೆ ಕಾಣುವ ಜೀವ. ಇನ್ನೂ ಸೂಕ್ಷ್ಮವಾಗಿರುವ ಕಣ್ಣಿಗೆ ಕಾಣದ ಎಷ್ಟೋ ಜೀವಗಳು ಮಣ್ಣಿನಲ್ಲಿ ಬೆರೆತು ವಾಸ ಮಾಡುತ್ತವೆ. ಅವುಗಳನ್ನೆಲ್ಲ ಬುಡಮೇಲು ಮಾಡಿ ಕತ್ತರಿಸಿ ಹಾಕಲು ನಮಗೆ ಹಕ್ಕಿದೆಯೆ? ಅಲ್ಲೊಂದು ನಮಗರಿವಿಲ್ಲದೆ ಉಸಿರಾಡುತ್ತಿರುವ ಜಗತ್ತು ಇದೆ. ಅವುಗಳಿಂದ ನಮ್ಮ ಗಿಡ ಮರಗಳಿಗೆ ಪೋಷಣೆಯೂ ನಿರಂತರವಾಗಿ ಸಿಗುತ್ತಿದೆ.
ಗುರುಪ್ರಸಾದ್ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ
ಅಂಗೈ ಗೆರೆಗಳಾಗುವುದಿಲ್ಲ ಭವಿಷ್ಯದ ಹೆದ್ದಾರಿಗಳು
ನನಗೆ ನನ್ನ ಭವಿಷ್ಯದ ಬಗ್ಗೆ ತಿಳಿಯುವ ಕುತೂಹಲವುಂಟಾಗಿ ನನ್ನ ಅಂಗೈಯನ್ನು ಅವನ ಮುಂದೆ ಮಾಡಿದೆ. ಆ ಭವಿಷ್ಯಗಾರ ಇಡಿ ನನ್ನ ಅಂಗೈ ಜಾಲಾಡಿ ‘ನಿನ್ನ ವಿದ್ಯಾಭ್ಯಾಸ ಇಲ್ಲಿಗೆ ಕೊನೆ ಆಗತೈತಿ. ಇನ್ ಮುಂದಾ ಓದಾಕ ಹೋಗಬ್ಯಾಡ. ಓದಿದ್ರೂ ತಲಿಗೆ ಹತ್ತಾಂಗಿಲ್ಲ. ಈ ಲಾರಿನ ನಿನಗ ಗತಿ ಆಗ್ತೇತಿ’ ಅಂತ ಹೇಳಿ ಇಳಿದು ಹೋಗಿಬಿಟ್ಟ. ಅಂಗೈ ಮೇಲಿನ ಭವಿಷ್ಯ ನಿಜಾನೋ ಸುಳ್ಳೋ ಒಂದು ತಿಳಿಯದ ವಯಸ್ಸದು. ಯಾರಾದ್ರೂ ಏನಾದ್ರೂ ಹೇಳಿಬಿಟ್ಟರೆ ನಂಬಿಬಿಡುವ ಮುಗ್ಧತೆಯೋ ದಡ್ಡತನವೋ ಆಗ ನನ್ನಲ್ಲಿತ್ತು. ಇಸ್ಮಾಯಿಲ್ ತಳಕಲ್ ಅಂಕಣ
ಯಕ್ಷಗಾನ ಸಂಘಟಕರ ಸಂದರ್ಶನ…
ನಿಜವಾಗಿ ಹೇಳೊದಂದ್ರೆ ನಮಗೆ ಯಕ್ಷಗಾನದ ಮೇಲಿರೊ ಪ್ರೀತಿನೆ ಯಕ್ಷಗಾನ ಮಾಡಿಸೋಕೆ ಇರೊ ಕಾರಣ. ಇಲ್ಲಿ ಪ್ರತಿ ದಿನ ಒಂದಿಪ್ಪತ್ತು ಜನ ಇಲ್ಲಿ ಸೇರ್ತೇವಲ್ಲ, 365 ದಿನನೂ ಯಕ್ಷಗಾನದ ಏನಾದ್ರು ಒಂದು ಸುದ್ದಿ ಮಾತಾಡೇ ಆಡ್ತಿವಿ. ಮಳೆಗಾಲದಲ್ಲಿ ತಾಳಮದ್ದಲೆ ನೋಡ್ತಿವಿ. ಇಲ್ಲಿ ಈ ತರ ಅರ್ಥ ಹೇಳಿದರು. ಅಲ್ಲೊಂದು ಆಟ ನೋಡಿಕೊಂಡು ಬಂದೆ, ಹಿಂಗಾಯಿತು, ಹಂಗಾಯಿತು ಅಂತ ಏನೊ ಒಂದು ಮಾತು ಇರತ್ತೆ.
“ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಕೃತಿ ಆರ್ ಪುರಪ್ಪೇಮನೆ ಬರಹ
ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!
ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ









