ಒಣಎಲೆ ಗೊಬ್ಬರದ ಕಿರು ಕಥೆಗಳು
ಸುಮಾರು ಹತ್ತು ಎಕರೆ ಪ್ರದೇಶದಲ್ಲಿರುವ ನಗರಪಾಲಿಕೆ ಮರುಬಳಕೆ ಘಟಕದ ಒಂದು ಭಾಗದಲ್ಲಿ ಒಣ ಎಲೆಗೊಬ್ಬರ ವಿತರಣೆ ವ್ಯವಸ್ಥೆಯಿದೆ. ವಾರಾಂತ್ಯದಲ್ಲಿ ಮಧ್ಯಾಹ್ನ ಹನ್ನೆರಡರ ನಂತರ ಹೋದಾಗ ಕಂಡಿದ್ದು ಒಂದೆಡೆ ಒಂದಷ್ಟು ಜನರು ತಾವು ತಂದ ತ್ಯಾಜ್ಯ ಮತ್ತು ಹಸಿರು ಗಿಡಮರಗಳ ಭಾಗಗಳನ್ನು ಸುರಿಯುತ್ತಿದ್ದರು. ಬೆಳಗಿನ ಸಮಯದಲ್ಲಿ ಅಲ್ಲಿ ಹೋಗಲು ಸಾರ್ವಜನಿಕರಿಗೆ ಅನುಮತಿಯಿಲ್ಲ. ಆಗ ನಗರಪಾಲಿಕೆಯ ಯಂತ್ರಗಳು ಈ ಗಿಡಮರ ಭಾಗಗಳನ್ನು ಕತ್ತರಿಸಿ, ಅರೆದು ಅವನ್ನು ಒಯ್ದು ಒಂದು ಮೂಲೆಯಲ್ಲಿ ರಾಶಿ ಮಾಡುತ್ತಿರುತ್ತವೆ. ಡಾ. ವಿನತೆ ಶರ್ಮ ಅಂಕಣ
ಕಾಡುವ ಕತೆಗಳ ರೂವಾರಿ….
ಆ ಕಾಲಘಟ್ಟ ಬಂಗಾಳದ ಮಟ್ಟಿಗೆ ಅದೊಂಥರಾ ವಿಚಿತ್ರ ಪರಿಸ್ಥಿತಿ. ಅತ್ಯಂತ ವಿದ್ಯಾವಂತ, ಬುದ್ಧಿವಂತರಾದ ಜನಸಮುದಾಯ. ಆದರೆ ಅಷ್ಟೇ ಕರ್ಮಠ ಆಚರಣೆಗಳಿಂದ ಜರ್ಜರಿತವಾಗುತ್ತಾ ಇದ್ದ ಸಮುದಾಯ. ಅತ್ತ ಶ್ರೀಮಂತ ಜಮೀನುದಾರರು ಮತ್ತು ಬಡ ಕೂಲಿ ಕಾರ್ಮಿಕರು ಹಾಗೂ ಗೇಣಿದಾರರು. ಧನಾತ್ಮಕ ಮತ್ತು ಋಣಾತ್ಮಕ ಎರಡೂ ಅಂಶಗಳಲ್ಲಿ ಅತಿರೇಕದ ತುದಿಗಳಲ್ಲಿದ್ದ ಸಮಾಜ. ಇದನ್ನು ಸುಧಾರಿಸಲು ದೊಡ್ಡ ಸಂಖ್ಯೆಯಲ್ಲೇ ಹುಟ್ಟಿಬಂದ ಸುಧಾರಣಾವಾದಿಗಳು. ಆಂಗ್ಲ ಶಿಕ್ಷಣದಿಂದ ಬಹಳ ಕ್ಷಿಪ್ರವಾಗಿ ಪ್ರಸರಣಗೊಂಡ ಪಾಶ್ಚಾತ್ಯ ಜ್ಞಾನ. ಆಂಗ್ಲರು ಕೂಡಾ ಪ್ರಭಾವಿತಗೊಳ್ಳುವಷ್ಟರ ಮಟ್ಟಿಗಿನ ಬುದ್ಧಿಮತ್ತೆ.
ಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈ
ನಾವಿದ್ದ ಅಪಾರ್ಟ್ಮೆಂಟಿನ ಮನೆಯನ್ನು ಸ್ವಚ್ಛ ಮಾಡಲು ಬರುತ್ತಿದ್ದ ಹದಿನೈದೋ ಹದಿನಾರೋ ಪ್ರಾಯದ ಬೆಂಗಾಲಿ ಹುಡುಗಿಯ ಬದುಕುವ ದರ್ದಿಗೆ ನಾನು ಬೆರಗಾಗಿದ್ದೆ. ಮಾತನಾಡಿಸಿದರೆ ಏನೊಂದೂ ಮಾತನಾಡದ, ಏನಾದರೂ ಪ್ರಶ್ನೆ ಕೇಳಿದರೆ ಸುಮ್ಮನೆ ನಕ್ಕುಬಿಡುತ್ತಿದ್ದ ಆ ಹುಡುಗಿ ತನ್ನ ತಾಯಿಯ ಜೊತೆಗೆ ಇಬ್ಬರು ತಂಗಿಯರನ್ನೂ ಬಂಗಾಳದ ಯಾವುದೋ ಹಳ್ಳಿಯಿಂದ ಕರೆದುಕೊಂಡು ಬಂದು ತಾನೊಬ್ಬಳೇ ದುಡಿಯುತ್ತಾ ಅವರನ್ನೆಲ್ಲಾ ಸಾಕುತ್ತಿದ್ದ ಪರಿ ನನ್ನಲ್ಲಿ ಸೋಜಿಗ ಹುಟ್ಟಿಸುತ್ತಿತ್ತು. ಮುಂಬೈಯಂತಹ ನಗರಗಳಲ್ಲಿ ಒಂಟಿ ಮಹಿಳೆಯರು ಒಂಟಿ ಹುಡುಗಿಯರು ಜೀವ ಕೈಯಲ್ಲಿ ಹಿಡಿದೆ ದುಡಿಯುತ್ತಿರುತ್ತಾರೆ.
ʻತಳಕಲ್ ಡೈರಿʼಯಲ್ಲಿ ಮುಂಬೈ ಮಹಾನಗರಿಯ ಬೆರಗಿನ ದಿನಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್ ತಳಕಲ್
ಬೋರ್ವೆಲ್ ಮತ್ತು ʻನೀರʼಕ್ಷರಿಗಳು
ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ
ಹೆಸರಿಲ್ಲದ ಬಂಧಗಳ ಬಾಹುಗಳಲ್ಲಿ…
ಕೆಲವು ಕೆಟ್ಟ ಸನ್ನಿವೇಶಗಳಲ್ಲಿ ಈ ಪ್ರಪಂಚವೇ ನಮ್ಮ ವಿರುದ್ಧ ನಿಂತಿದೆಯೇನೋ ಎನ್ನಿಸುವ ಹೊತ್ತಿನಲ್ಲಿ ಇಂತಹ ಹಚ್ಚನೆಯ ಹಿತವನ್ನು ಸವರಿದ ಸಂದರ್ಭಗಳನ್ನು ಮೆಲುಕು ಹಾಕಬೇಕು. ಬಹುಶಃ ಈ ಪ್ರಪಂಚ ನಡೆಯುತ್ತಿರುವುದೇ ಇಂತಹ ಅಜ್ಞಾತ ಕೈಗಳ ಅಭಯದಿಂದ. ಪ್ರತಿದಿನವೂ ಸಿಗುವ ಅವಕಾಶ ಇರುವ, ಸಂಬಂಧಗಳಿಂದ ಅಂಟಿಕೊಂಡ, ಸ್ನೇಹ-ವ್ಯವಹಾರ-ವಿಶ್ವಾಸ- ಪರಿಚಯದ ಮುಸುಕು ಹೊದ್ದ ದಿನನಿತ್ಯದ ಕೊಡು-ಕೊಳ್ಳುವಿಕೆಗೆ ಒಂದು ತೂಕವಾದರೆ, ಮತ್ತೊಮ್ಮೆ ಸಿಗುವ ಸಾಧ್ಯತೆಯೇ ಕ್ಷೀಣವಾಗಿರುವ ಅಪ್ಪಟ ಮನುಷ್ಯಸಂಬಂಧವಾಗಿ ಎದುರಾಗುವ ಉಪಕಾರಗಳದ್ದು ಮತ್ತೊಂದು ವಜನು.
ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು
ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್ ಜೈಮನ್ ಬರೆಯುವ “ಜಂಕ್ಷನ್ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ
ಆಸ್ಟ್ರೇಲಿಯಾದ ಹೊಸ ರಾಜ, ಹೊಸ ಭವಿಷ್ಯದ ಕನಸುಗಳು
ತನ್ನದೇ ಆದ ‘ಸೂರ್ಯ ಮುಳುಗದ’ ನಾಡು ಯುನೈಟೆಡ್ ಕಿಂಗ್ಡಮ್ ಸಾಮ್ರಾಜ್ಯದ ಅಧಿಪತಿಯಾಗಿದ್ದ, ಅದರ ಜೊತೆಗೆ ಐವತ್ತಾರು ಕಾಮನ್ವೆಲ್ತ್ ರಾಷ್ಟ್ರಗಳ ನಾಯಕಿಯಾಗಿದ್ದ ರಾಣಿ ಎರಡನೆ ಎಲಿಝಬೆತ್ ಕೂಡ ಹೀಗೆಯೆ ಎಪ್ಪತ್ತು ವರ್ಷಗಳ ಸುದೀರ್ಘ ಕಾಲದಲ್ಲಿ ‘ಮುಳುಗದ’ ಸೂರ್ಯನಂತೆ ರಾರಾಜಿಸುತ್ತ ಸಾಮ್ರಾಜ್ಞಿಯಾಗಿದ್ದರು. ‘ನನ್ನ ಜೀವನವನ್ನು ನಿಮ್ಮ ಸೇವೆಗಾಗಿ ಮುಡಿಪಿಟ್ಟಿದ್ದೀನಿ’ ಎನ್ನುತ್ತಾ ಸದಾಕಾಲ ತಮ್ಮ ಕಾರ್ಯಕ್ಷಮತೆ ತೋರಿದರು ಎನ್ನುವುದೀಗ ಇಡೀ ಪ್ರಪಂಚದ ಜನರಿಗೆ ಅತ್ಯುತ್ತಮ ಉದಾಹರಣೆಯಾಗಿದೆ. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’
ನವಿರು ಹಾಸ್ಯದ ನುಡಿತೋರಣ
ಈ ಪುಸ್ತಕದ ನಿಜವಾದ ಸತ್ವ ಇರುವುದು ಅಮೆರಿಕಾದ ಜಾಗಗಳ ವರ್ಣನೆಯಲ್ಲಲ್ಲ. ಅವರು ಅಮೆರಿಕಾ ಮತ್ತು ಕೆನಡಾ ಪ್ರವಾಸವನ್ನು ಹೇಗೆ ಅರ್ಥಪೂರ್ಣವಾಗಿ ಬಳಸಿಕೊಂಡರು ಅನ್ನುವುದರಲ್ಲಿ. ಅವರ ಪ್ರತಿ ನಡೆ ನುಡಿಯಲ್ಲೂ ಅವರ ವ್ಯಕ್ತಿತ್ವದ ದರ್ಶನವಾಗುತ್ತದೆ. ಹಾಗಂತ ಎಲ್ಲವೂ ಗಂಭೀರವಾಗಿಯೇ ಸಾಗುತ್ತದೆ ಅಂತ ಅಲ್ಲ, ತಪ್ಪಿ ಅವರು ಕೆಎಫ್ಸಿ ಚಿಕನ್ ತಿನ್ನಲು ಹೋದ ಪ್ರಸಂಗ, ಆಮೇಲೆ ಡೋನಟ್ ಪರಿಚಯವಿಲ್ಲದ ಅವರು ಅನುಮಾನವೇ ಬೇಡವೆಂದು ತಿನ್ನದಿರುವುದು .. ಹೀಗೆ ಅಲ್ಲಿನ ಅನೇಕ ಘಟನೆಗಳನ್ನು ನವಿರು ಹಾಸ್ಯದಿಂದ ವರ್ಣಿಸುತ್ತಾರೆ.
ಕುದ್ರಿ ಕುದ್ರಿನ…ಕತ್ತಿ ಕತ್ತಿನ….!
ಬೀಜಗಣಿತವನ್ನು ಕಲಿಸುತ್ತಿದ್ದಾಗ ಮೇಷ್ಟ್ರು 4x ಗೆ 3y ಸೇರಿಸಿದರೆ ಎಷ್ಟಾಗುತ್ತದೆ ಎನ್ನುವುದನ್ನು ಅವರೆಷ್ಟು ಬಾರಿ ಅರ್ಥ ಮಾಡಿಸಲು ಪ್ರಯತ್ನಿಸಿದ್ದರು. ಆದರೆ ನಿಷ್ಕ್ರಿಯಗೊಂಡಂತಿದ್ದ ನಮ್ಮ ಮೆದುಳೊಳಗೆ ಇಳಿಯದೆ ನಮ್ಮೆಲ್ಲರ ಉತ್ತರ ‘ಏಳು’ ಎಂದೇ ಇರುತ್ತಿತ್ತು. ಅವರಿಗೆ ಕೊನೆ ಕೊನೆಗೆ ಕೋಪ ಬಂದರೂ ಅದನ್ನು ತೋರಿಸಿಕೊಳ್ಳದೇ ಭಿನ್ನವಾದ ಉದಾಹರಣೆಯನ್ನು ನೀಡುತ್ತಾ “ಹೆಲೊ ಜೆಂಟಲ್ಮೆನ್ಸ್, ನಾಲ್ಕು ಕುದ್ರಿಗಳೊಳಗ ಮೂರು ಕತ್ತಿಗಳನ್ನ ಕುಡಿಸಿದ್ರ ಎಷ್ಟ್ ಆಗ್ತೆತಿ” ಅಂದಾಗಲೂ ನಾವು ಏಳು ಅಂತಲೇ ಒದರಿಬಿಡುತ್ತಿದ್ದೆವು. ನಮ್ಮ ದಡ್ಡತನಕ್ಕೆ ಅವರು ಹಣಿ ಹಣಿ ಜಜ್ಜಿಕೊಂಡು ಮರುಕಪಟ್ಟು “ನಾಲ್ಕು ಕುದ್ರಿಗೆ ಮೂರು ಕತ್ತಿ ಸೇರಿದ್ರ ಏಳು ಆಗಲ್ಲ ಕಣ್ರಲೇ, ಕುದ್ರಿ ಕುದ್ರಿನ… ಕತ್ತಿ ಕತ್ತಿನ…. ಅವು ಯಾವತ್ತು ಒಂದ ಅಲ್ಲ ಎನ್ನುತ್ತಿದ್ದರು. ʻತಳಕಲ್ ಡೈರಿʼಯಲ್ಲಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್ ತಳಕಲ್










