ಮಲ್ಲಿಕಾ ಮತ್ತು ಸೌಭಾಗ್ಯಮ್ಮ … ಎರಡು ಪ್ರಸಂಗಗಳು
ಪ್ರತಿ ಅರ್ಧ ಗಂಟೆಗೊಮ್ಮೆ ಸಾವನ್ನು ಮಡಿಲಲ್ಲಿಟ್ಟುಕೊಂಡು ಸರಿದಾಡುವ ಆಂಬುಲೆನ್ಸ್ ಸದ್ದಿಗೆ ಸಂಕಟವಾಗುತ್ತಿದ್ದ ಹೊತ್ತದು. ಕೆಳಗಡೆ ಶುರುವಾದ ಗಿಜಿ ಗಿಜಿ ಕೇಳಿ ಕಿಟಕಿಯಿಂದ ನೋಡಿದಾಗ ಪೀಜಿ ಓನರ್ ಮತ್ತು ಅವನ ಹೆಂಡತಿ ಸುನೀತಕ್ಕ ಆಂಬುಲೆನ್ಸ್ ಹತ್ತುತ್ತಿದ್ದರು. ಕೂಡಲೇ ಕೆಳಗಡೆ ಓಡಿಹೋದೆ. ನಾನು ಹೋಗುವುದಕ್ಕೂ ಅಂಬುಲೆನ್ಸಿನ ಬಾಗಿಲು ಮುಚ್ಚುವುದಕ್ಕೂ ಸರಿ ಹೋಯಿತು. ಆ ಕ್ಷಣಭಂಗುರತೆಯ ಸಮಯದಲ್ಲೇ ನನಗೆ ಕಂಡಿದ್ದು ಕಣ್ಣೀರು ತುಂಬಿಕೊಂಡಿದ್ದ ಸುನೀತಕ್ಕನ ಕಣ್ಣುಗಳು…
ದಾದಾಪೀರ್ ಜೈಮನ್ ಅಂಕಣ
ಬಿಸಿಲ ಧಗೆ, ಚಳಿಯ ಹೊರೆಗಳ ನಡುವೆ ಅರಳುವ ಡಾಫೋಡಿಲ್ ಎಲ್ಲಿದೆ..
ಆಸ್ಟ್ರೇಲಿಯದ ಹೊಸ ಪ್ರಧಾನಿಗಳು ಚುನಾಯಿತರಾದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ನಾಲ್ಕು ವಾರಗಳಲ್ಲಿ ಊರೂರು, ಅಂದರೆ ವಿದೇಶಗಳನ್ನು, ಸುತ್ತಿದ್ದಕ್ಕೆ ದೇಶದ ಜನರ ಮತ್ತು ವಿರೋಧಪಕ್ಷದ ಟೀಕೆಗೆ ಗುರಿಯಾದರು. ಆದರೂ ಕೂಡ ತಮ್ಮ ಪರದೇಶ ಸುತ್ತಾಟವನ್ನು ಸಮರ್ಥಿಸಿಕೊಂಡು ‘ನೆರೆಹೊರೆಯವರೊಂದಿಗೆ ಆಸ್ಟ್ರೇಲಿಯದ ರಾಜಕೀಯ ಸಂಬಂಧ ಕುಂಟುತ್ತಿತ್ತು, ನಾವು ಆ ದೇಶದ ನಾಯಕರ ವಿಶ್ವಾಸವನ್ನು ಕಳೆದುಕೊಂಡಿದ್ದೆವು. ಹಾಗಾಗಿ ಅವರೊಂದಿಗಿನ ಸಂಬಂಧವನ್ನು ಕುದುರಿಸಿಕೊಳ್ಳುವುದೂ ಮುಖ್ಯವಾಗಿತ್ತು.
ಡಾ. ವಿನತೆ ಶರ್ಮಾ ಅಂಕಣ
ಇಂಗ್ಲೆಂಡ್ ನ ವಿಶ್ವವಿದ್ಯಾಲಯಗಳ ಪಡಸಾಲೆಯಲ್ಲಿ
ಚಾರ್ಲ್ಸ್ ಡಾರ್ವಿನ್ ಓದಿದ್ದಾನೆ ಎನ್ನಲಾದ ಕ್ರೈಸ್ಟ್ ಕಾಲೇಜಿಗನೊಳಗೆ ಪ್ರವೇಶಿಸಿದೆ. ಅಲ್ಲಿ ಆತನ ಹತ್ತಾರು ಅಡಿಯಷ್ಟು ದೊಡ್ಡ ಅಮೃತಶಿಲೆಯ ಮೂರ್ತಿ ಇದೆ. ಕಾಲೀಜಿನಲ್ಲಿ ಇದ್ದ ಮಗನನ್ನು ನೋಡಲು ಬಂದಿದ್ದ ಆತನ ತಾಯಿಯ ಎದೆಮಟ್ಟದ ಮೂರ್ತಿಯೊಂದನ್ನೂ ಅಲ್ಲಿ ಇರಿಸಿದ್ದಾರೆ. ಅಲ್ಲಿಗೆ ನಾನು ಹೋಗಿದ್ದಾಗ ಯಾರೂ ಅಂದರೆ ಯಾರೂ ಇರಲಿಲ್ಲ, ಆದರೂ ಯಾವ ಕೋಣೆಯ, ಕಾಲೇಜಿನ ಬಾಗಿಲು ಹಾಕಿರಲಿಲ್ಲ. ಮುಖ್ಯದ್ವಾರದ ಬಳಿ ಒಬ್ಬಾತ ಒಳಹೋಗಲು ಬಯಸುವವರಿಗೆ ಒಂದು ಸಣ್ಣ ಬ್ರೋಷರ್ ಕೊಟ್ಟು ಕಳುಹಿಸುತ್ತಿದ್. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ.
ಇದು ನಿಮ್ಮ ಮನೆ…
ಜೀವನದಲ್ಲಿ ಆಗಾಗ ಬದಲಾವಣೆಗಳನ್ನು ತಂದಾಗ ಅದು ಖಂಡಿತ ಒಂದು ಹೊಸ ಚೈತನ್ಯವನ್ನು ಹುಟ್ಟುಹಾಕುತ್ತದೆ. ನನಗೆ ಜೀವನ ಒಂದೇ ಗತಿಯಲ್ಲಿ ಅಥವಾ ಲಯದಲ್ಲಿ ಹೋಗುತ್ತಿದ್ದರೆ ಏನೋ ಇರಿಸುಮುರುಸು! ಮತ್ತೊಂದು ಹೊಸ ಯೋಜನೆ ಶುರು ಮಾಡಿರುತ್ತೇನೆ. ಹಾಗಂತ ಏನೇನೋ ಮಾಡೋದು ಅಂತಲ್ಲ. ನನ್ನ ಗುರಿ ಮಾತ್ರ ಅದೇ ಇತ್ತು. ಆ ದಾರಿಯಲ್ಲೇ ಇದು ನನ್ನ ಮತ್ತೊಂದು ಹೆಜ್ಜೆಯಾಗಿತ್ತು. ಈ ಗ್ರಾಮ ವಾಸ್ತವ್ಯ ಎಂಬ ಬದಲಾವಣೆ ನನ್ನಲ್ಲಿ ಹೊಸ ಉತ್ಸಾಹ ತಂದಿತ್ತು. ನನ್ನ ಕಂಫರ್ಟ್ ಜೋನ್ ನಿಂದ ಎದ್ದು ಹೊರ ಬಂದಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ
ಅಳಿವಿನಂಚಿನಲ್ಲಿರುವ ಪದ್ಧತಿಗಳ ನೇಯ್ಗೆ
ಇದು ಅನಿರೀಕ್ಷಿತ ತಿರುವುಗಳಿಲ್ಲದ, ಊಹಿಸಲಾಧ್ಯವಾದ ಸಂಗತಿಗಳಿರುವ ಕಾದಂಬರಿಯೂ ಅಲ್ಲ. ಪ್ರಧಾನ ಕತೆ ಒಂದು ಕಾದಂಬರಿಯಾಗಿ ಸಾಗಲು ಒಂದು ನೆಪವಷ್ಟೇ. ಮುಖ್ಯವಾಗಿ ಮಧ್ಯಘಟ್ಟ ಆ ಭಾಗದ ಮಲೆನಾಡಿನ ೭೦-೮೦ ವರ್ಷಗಳ ಹಿಂದಿನ ಜೀವನ ಪದ್ಧತಿ, ನಿಸರ್ಗದ ಜೊತೆಗಿನ ಸಂಬಂಧ, ಆಹಾರ ಪದ್ಧತಿ, ಕಷ್ಟ ಸುಖಗಳು, ವಿವಿಧ ಸಮುದಾಯಗಳು ಮತ್ತು ಆ ಸಮುದಾಯಗಳ ನಡುವಣ ಅನುಬಂಧ, ವಿಶಿಷ್ಟವಾದ ನಾಟೀ ಔಷಧಿಗಳು ಇತ್ಯಾದಿಗಳ ಕುರಿತು ಬಹಳ ಆಪ್ತವಾಗಿ ಹೇಳುತ್ತಾ ಹೋಗುತ್ತದೆ.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ
ಒಂದು ಮುತ್ತು ನಿಮ್ಮನ್ನು ಅಷ್ಟು ಭಯ ಪಡಿಸಿತಾ?
ಜೀವನದಲ್ಲಿ ನಾನು ಯಾರನ್ನು ನೋಡುತ್ತೇನೆಯೋ ಅವರಂತೆ ಆಗಲು, ಅವರಲ್ಲಿ ತಾನು ಇಷ್ಟಪಟ್ಟದ್ದನ್ನು ತನ್ನ ಭಾಗವಾಗಿಸಿಕೊಳ್ಳುವ ತನ್ನ ಗುಣಕ್ಕೆ ಏನೆನ್ನಬೇಕು? ಆ ರೀತಿ ಎಲ್ಲರೊಳಗಿನಿಂದ ಒಂದೊಂದು ಹೆಕ್ಕುತ್ತಾ ಅರಗಿಸಿಕೊಂಡು ಬರುತ್ತಾ ಇದ್ದ ತನಗೆ ತನ್ನ ನಿಜವಾದ ಅಸ್ಮಿತೆ ಯಾವುದು? ಎಂದು ಪ್ರತಿಸಲ ಗೊಂದಲಕ್ಕೆ ಬೀಳುತ್ತಾನೆ. ಅದೇ ಹೊತ್ತಿಗೆ ಆ ಹುಡುಗ ಅವನು ಕೂತಿದ್ದ ಜಾಗದಿಂದಲೇ ”ಅಂಕಲ್, ನೀವು ರೈಟರ್ ಆಲ್ವಾ?” ಎಂದು ಜೋರಾಗಿ ಕೇಳಿದ. ಅವನು ಸುಮ್ಮನೆ ತಲೆ ಅಲ್ಲಾಡಿಸಿದ.
ದಾದಾಪೀರ್ ಜೈಮನ್ ಬರೆಯುವ “ಜಂಕ್ಷನ್ ಪಾಯಿಂಟ್” ಅಂಕಣ
ಗೆಟ್ ಅಪ್, ಸ್ಟಾಂಡ್ ಅಪ್, ಶೋ ಅಪ್….
ಆಸ್ಟ್ರೇಲಿಯಾ ದೇಶದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೇಟ್ ದ್ವೀಪವಾಸಿ ಜನಪಂಗಡಗಳು ಎಷ್ಟೋ ಸಾವಿರ ವರ್ಷಗಳಿಂದ ಈ ನಾಡಿನಲ್ಲಿ ಬದುಕಿ ಬಾಳಿ, ನೆಲ-ಜಲ-ಪ್ರಕೃತಿಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಸುಮಾರು ಅರವತ್ತು ಸಾವಿರ ವರ್ಷಗಳಿಗೂ ಹೆಚ್ಚಿನ ಕಾಲದಿಂದ ಈ ಖಂಡದಲ್ಲಿ ಅಬೊರಿಜಿನಲ್ ಜನರ ಇರುವಿಕೆಯ ಬಗ್ಗೆ ಅಧಿಕೃತ ಪುರಾವೆಗಳಿವೆ. ಬ್ರಿಟಿಷರ ವಸಾಹತು ಸ್ಥಾಪನೆಯಿಂದ ಆರಂಭವಾಗಿ ಇಲ್ಲಿನ ಮೂಲನಿವಾಸಿಗಳ ನಿರ್ಮೂಲನೆಗೆ ನಡೆದ ಪ್ರಯತ್ನಗಳು, ಅವರ ಅತ್ಯಂತ ಕ್ರೂರ ಆಡಳಿತದೊಡನೆ ಮುಂದುವರೆದು ಅನ್ಯಾಯಗಳ ನಡುವೆಯೂ ಬದುಕುಳಿದ ಅಬೊರಿಜಿನಲ್ ಜನರ ಜೀವನಗಾಥೆ ಇನ್ನೂ ಜ್ವಲಂತವಾಗಿದೆ.
ಡಾ. ವಿನತೆ ಶರ್ಮಾ ಅಂಕಣ
ಎರಡು ಕಣ್ಣುಗಳು… ಆರು ಕೈಗಳು…!
ಈ ಲಿಸ್ಟ್ ನಲ್ಲಿದ್ದ ಕೆಲವು ಪ್ರಶ್ನೆಗಳನ್ನು ನೋಡಿ ಗಾಬರಿಯಾಗಿದ್ದು ಹೌದು. ಈ ಹುಡುಗರನ್ನು ಕರೆದುಕೊಂಡು ಹೋಗಿ ಅಲ್ಲಿ ಇರುವುದು ಸಾಧ್ಯವೇ ಎಂಬ ಸಂಶಯ ನನ್ನಲ್ಲಿ ಮೂಡಲು ಶುರುವಾಯಿತು. ಇಲ್ಲಿನ ನಗರ ಜೀವನಕ್ಕೆ ಹೊಂದಿಕೊಂಡಿರುವ ಹುಡುಗರು (ನಾನೂ ಸೇರಿ!) ಹಳ್ಳಿಯಲ್ಲಿ ಹೊಂದಿಕೊಳ್ಳುವುದು ತುಸು ಕಷ್ಟಸಾಧ್ಯ ಅನಿಸಿತಾದರೂ ಈ ಎರಡು ಹುಡುಗರು ಬರಲು ತಯಾರಾಗಿದ್ದು ನನ್ನಲ್ಲಿ ಒಂದು ಹೊಸ ಹುರುಪು ಮೂಡಿಸಿತ್ತು. ಅದರಲ್ಲಿ ವಿನೋದ ಅವರು ಇನ್ನೂ ನೌಕರಿ ಮಾಡಿಕೊಂಡಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಯಾಯಣ ಅಂಕಣ
ಕಬೂಲ್…..
ನಿಶ್ಚಿತಾರ್ಥಕ್ಕೆ ಮೂರು ದಿನ ಉಳಿದಿತ್ತು. ಅದೇನಾಯಿತೋ ಕಾಣೆ. ರಾತ್ರಿ ಮನೆಯಲ್ಲಿ ಮಲಗಿದ್ದವಳು ಬೆಳಗ್ಗಿಗೆ ಕಾಣಲಿಲ್ಲ. ಊರೆಲ್ಲಾ ಹುಡುಕಾಯಿತು. ಸುಳಿವಿಲ್ಲ, ಸುದ್ದಿಲ್ಲ. ಅಮ್ಮ ಪಕ್ಕದೂರಿನ ದರ್ಗಾಕ್ಕೆ ಹೋಗಿ ”ಎಲ್ಲಾರ ಇರ್ಲಿ ಸುಖವಾಗಿರ್ಲಿ” ಅಂತ ದುವಾ ಕೇಳಿಕೊಂಡು ಬಂದ್ಲು. ಬಾಬಾ ‘ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ’ ಅನ್ನೊ ಗಾದೆ ನಿಜವಾಗಬಾರದೆಂದು ಉಳಿದ ನಾವು ನಾಲ್ಕು ಹೆಣ್ಣು ಮಕ್ಕಳನ್ನ ಹೆಚ್ಚು ಹೆಚ್ಚು ಕಾಯಲು ಶುರುಮಾಡಿದ. ಸಹಜವಾಗಿಯೇ ಪಾತಿ ಮತ್ತು ಸಯೀದನ ಮದುವೆ ಮುರಿದುಬಿದ್ದಿತ್ತು. ದಾದಾಪೀರ್ ಜೈಮನ್ ಬರಹ









