Advertisement

ಅಂಕಣ

ಇಂಗ್ಲೆಂಡ್ ನ ವಿಶ್ವವಿದ್ಯಾಲಯಗಳ ಪಡಸಾಲೆಯಲ್ಲಿ

ಇಂಗ್ಲೆಂಡ್ ನ ವಿಶ್ವವಿದ್ಯಾಲಯಗಳ ಪಡಸಾಲೆಯಲ್ಲಿ

ಚಾರ್ಲ್ಸ್ ಡಾರ್ವಿನ್ ಓದಿದ್ದಾನೆ ಎನ್ನಲಾದ ಕ್ರೈಸ್ಟ್ ಕಾಲೇಜಿಗನೊಳಗೆ ಪ್ರವೇಶಿಸಿದೆ. ಅಲ್ಲಿ ಆತನ ಹತ್ತಾರು ಅಡಿಯಷ್ಟು ದೊಡ್ಡ ಅಮೃತಶಿಲೆಯ ಮೂರ್ತಿ ಇದೆ. ಕಾಲೀಜಿನಲ್ಲಿ ಇದ್ದ ಮಗನನ್ನು ನೋಡಲು ಬಂದಿದ್ದ ಆತನ ತಾಯಿಯ ಎದೆಮಟ್ಟದ ಮೂರ್ತಿಯೊಂದನ್ನೂ ಅಲ್ಲಿ ಇರಿಸಿದ್ದಾರೆ. ಅಲ್ಲಿಗೆ ನಾನು ಹೋಗಿದ್ದಾಗ ಯಾರೂ ಅಂದರೆ ಯಾರೂ ಇರಲಿಲ್ಲ, ಆದರೂ ಯಾವ ಕೋಣೆಯ, ಕಾಲೇಜಿನ ಬಾಗಿಲು ಹಾಕಿರಲಿಲ್ಲ. ಮುಖ್ಯದ್ವಾರದ ಬಳಿ ಒಬ್ಬಾತ ಒಳಹೋಗಲು ಬಯಸುವವರಿಗೆ ಒಂದು ಸಣ್ಣ ಬ್ರೋಷರ್ ಕೊಟ್ಟು ಕಳುಹಿಸುತ್ತಿದ್. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ.

read more
ಇದು ನಿಮ್ಮ ಮನೆ…

ಇದು ನಿಮ್ಮ ಮನೆ…

ಜೀವನದಲ್ಲಿ ಆಗಾಗ ಬದಲಾವಣೆಗಳನ್ನು ತಂದಾಗ ಅದು ಖಂಡಿತ ಒಂದು ಹೊಸ ಚೈತನ್ಯವನ್ನು ಹುಟ್ಟುಹಾಕುತ್ತದೆ. ನನಗೆ ಜೀವನ ಒಂದೇ ಗತಿಯಲ್ಲಿ ಅಥವಾ ಲಯದಲ್ಲಿ ಹೋಗುತ್ತಿದ್ದರೆ ಏನೋ ಇರಿಸುಮುರುಸು! ಮತ್ತೊಂದು ಹೊಸ ಯೋಜನೆ ಶುರು ಮಾಡಿರುತ್ತೇನೆ. ಹಾಗಂತ ಏನೇನೋ ಮಾಡೋದು ಅಂತಲ್ಲ. ನನ್ನ ಗುರಿ ಮಾತ್ರ ಅದೇ ಇತ್ತು. ಆ ದಾರಿಯಲ್ಲೇ ಇದು ನನ್ನ ಮತ್ತೊಂದು ಹೆಜ್ಜೆಯಾಗಿತ್ತು. ಈ ಗ್ರಾಮ ವಾಸ್ತವ್ಯ ಎಂಬ ಬದಲಾವಣೆ ನನ್ನಲ್ಲಿ ಹೊಸ ಉತ್ಸಾಹ ತಂದಿತ್ತು. ನನ್ನ ಕಂಫರ್ಟ್ ಜೋನ್ ನಿಂದ ಎದ್ದು ಹೊರ ಬಂದಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

read more
ಅಳಿವಿನಂಚಿನಲ್ಲಿರುವ ಪದ್ಧತಿಗಳ ನೇಯ್ಗೆ

ಅಳಿವಿನಂಚಿನಲ್ಲಿರುವ ಪದ್ಧತಿಗಳ ನೇಯ್ಗೆ

ಇದು ಅನಿರೀಕ್ಷಿತ ತಿರುವುಗಳಿಲ್ಲದ, ಊಹಿಸಲಾಧ್ಯವಾದ ಸಂಗತಿಗಳಿರುವ ಕಾದಂಬರಿಯೂ ಅಲ್ಲ. ಪ್ರಧಾನ ಕತೆ ಒಂದು ಕಾದಂಬರಿಯಾಗಿ ಸಾಗಲು ಒಂದು ನೆಪವಷ್ಟೇ. ಮುಖ್ಯವಾಗಿ ಮಧ್ಯಘಟ್ಟ ಆ ಭಾಗದ ಮಲೆನಾಡಿನ ೭೦-೮೦ ವರ್ಷಗಳ‌ ಹಿಂದಿನ ಜೀವನ ಪದ್ಧತಿ, ನಿಸರ್ಗದ ಜೊತೆಗಿನ ಸಂಬಂಧ, ಆಹಾರ ಪದ್ಧತಿ, ಕಷ್ಟ ಸುಖಗಳು, ವಿವಿಧ ಸಮುದಾಯಗಳು‌ ಮತ್ತು ಆ ಸಮುದಾಯಗಳ‌ ನಡುವಣ ಅನುಬಂಧ, ವಿಶಿಷ್ಟವಾದ ನಾಟೀ ಔಷಧಿಗಳು ಇತ್ಯಾದಿಗಳ ಕುರಿತು ಬಹಳ ಆಪ್ತವಾಗಿ ಹೇಳುತ್ತಾ ಹೋಗುತ್ತದೆ‌.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

read more
ಒಂದು ಮುತ್ತು ನಿಮ್ಮನ್ನು ಅಷ್ಟು ಭಯ ಪಡಿಸಿತಾ?

ಒಂದು ಮುತ್ತು ನಿಮ್ಮನ್ನು ಅಷ್ಟು ಭಯ ಪಡಿಸಿತಾ?

ಜೀವನದಲ್ಲಿ ನಾನು ಯಾರನ್ನು ನೋಡುತ್ತೇನೆಯೋ ಅವರಂತೆ ಆಗಲು, ಅವರಲ್ಲಿ ತಾನು ಇಷ್ಟಪಟ್ಟದ್ದನ್ನು ತನ್ನ ಭಾಗವಾಗಿಸಿಕೊಳ್ಳುವ ತನ್ನ ಗುಣಕ್ಕೆ ಏನೆನ್ನಬೇಕು? ಆ ರೀತಿ ಎಲ್ಲರೊಳಗಿನಿಂದ ಒಂದೊಂದು ಹೆಕ್ಕುತ್ತಾ ಅರಗಿಸಿಕೊಂಡು ಬರುತ್ತಾ ಇದ್ದ ತನಗೆ ತನ್ನ ನಿಜವಾದ ಅಸ್ಮಿತೆ ಯಾವುದು? ಎಂದು ಪ್ರತಿಸಲ ಗೊಂದಲಕ್ಕೆ ಬೀಳುತ್ತಾನೆ. ಅದೇ ಹೊತ್ತಿಗೆ ಆ ಹುಡುಗ ಅವನು ಕೂತಿದ್ದ ಜಾಗದಿಂದಲೇ ”ಅಂಕಲ್, ನೀವು ರೈಟರ್ ಆಲ್ವಾ?” ಎಂದು ಜೋರಾಗಿ ಕೇಳಿದ. ಅವನು ಸುಮ್ಮನೆ ತಲೆ ಅಲ್ಲಾಡಿಸಿದ.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

read more
ಗೆಟ್ ಅಪ್, ಸ್ಟಾಂಡ್ ಅಪ್, ಶೋ ಅಪ್….

ಗೆಟ್ ಅಪ್, ಸ್ಟಾಂಡ್ ಅಪ್, ಶೋ ಅಪ್….

ಆಸ್ಟ್ರೇಲಿಯಾ ದೇಶದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೇಟ್ ದ್ವೀಪವಾಸಿ ಜನಪಂಗಡಗಳು ಎಷ್ಟೋ ಸಾವಿರ ವರ್ಷಗಳಿಂದ ಈ ನಾಡಿನಲ್ಲಿ ಬದುಕಿ ಬಾಳಿ, ನೆಲ-ಜಲ-ಪ್ರಕೃತಿಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಸುಮಾರು ಅರವತ್ತು ಸಾವಿರ ವರ್ಷಗಳಿಗೂ ಹೆಚ್ಚಿನ ಕಾಲದಿಂದ ಈ ಖಂಡದಲ್ಲಿ ಅಬೊರಿಜಿನಲ್ ಜನರ ಇರುವಿಕೆಯ ಬಗ್ಗೆ ಅಧಿಕೃತ ಪುರಾವೆಗಳಿವೆ. ಬ್ರಿಟಿಷರ ವಸಾಹತು ಸ್ಥಾಪನೆಯಿಂದ ಆರಂಭವಾಗಿ ಇಲ್ಲಿನ ಮೂಲನಿವಾಸಿಗಳ ನಿರ್ಮೂಲನೆಗೆ ನಡೆದ ಪ್ರಯತ್ನಗಳು, ಅವರ ಅತ್ಯಂತ ಕ್ರೂರ ಆಡಳಿತದೊಡನೆ ಮುಂದುವರೆದು ಅನ್ಯಾಯಗಳ ನಡುವೆಯೂ ಬದುಕುಳಿದ ಅಬೊರಿಜಿನಲ್ ಜನರ ಜೀವನಗಾಥೆ ಇನ್ನೂ ಜ್ವಲಂತವಾಗಿದೆ.
ಡಾ. ವಿನತೆ ಶರ್ಮಾ ಅಂಕಣ

read more
ಎರಡು ಕಣ್ಣುಗಳು… ಆರು ಕೈಗಳು…!

ಎರಡು ಕಣ್ಣುಗಳು… ಆರು ಕೈಗಳು…!

ಈ ಲಿಸ್ಟ್ ನಲ್ಲಿದ್ದ ಕೆಲವು ಪ್ರಶ್ನೆಗಳನ್ನು ನೋಡಿ ಗಾಬರಿಯಾಗಿದ್ದು ಹೌದು. ಈ ಹುಡುಗರನ್ನು ಕರೆದುಕೊಂಡು ಹೋಗಿ ಅಲ್ಲಿ ಇರುವುದು ಸಾಧ್ಯವೇ ಎಂಬ ಸಂಶಯ ನನ್ನಲ್ಲಿ ಮೂಡಲು ಶುರುವಾಯಿತು. ಇಲ್ಲಿನ ನಗರ ಜೀವನಕ್ಕೆ ಹೊಂದಿಕೊಂಡಿರುವ ಹುಡುಗರು (ನಾನೂ ಸೇರಿ!) ಹಳ್ಳಿಯಲ್ಲಿ ಹೊಂದಿಕೊಳ್ಳುವುದು ತುಸು ಕಷ್ಟಸಾಧ್ಯ ಅನಿಸಿತಾದರೂ ಈ ಎರಡು ಹುಡುಗರು ಬರಲು ತಯಾರಾಗಿದ್ದು ನನ್ನಲ್ಲಿ ಒಂದು ಹೊಸ ಹುರುಪು ಮೂಡಿಸಿತ್ತು. ಅದರಲ್ಲಿ ವಿನೋದ ಅವರು ಇನ್ನೂ ನೌಕರಿ ಮಾಡಿಕೊಂಡಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಯಾಯಣ ಅಂಕಣ

read more
ಕಬೂಲ್…..

ಕಬೂಲ್…..

ನಿಶ್ಚಿತಾರ್ಥಕ್ಕೆ ಮೂರು ದಿನ ಉಳಿದಿತ್ತು. ಅದೇನಾಯಿತೋ ಕಾಣೆ. ರಾತ್ರಿ ಮನೆಯಲ್ಲಿ ಮಲಗಿದ್ದವಳು ಬೆಳಗ್ಗಿಗೆ ಕಾಣಲಿಲ್ಲ. ಊರೆಲ್ಲಾ ಹುಡುಕಾಯಿತು. ಸುಳಿವಿಲ್ಲ, ಸುದ್ದಿಲ್ಲ. ಅಮ್ಮ ಪಕ್ಕದೂರಿನ ದರ್ಗಾಕ್ಕೆ ಹೋಗಿ ”ಎಲ್ಲಾರ ಇರ್ಲಿ ಸುಖವಾಗಿರ್ಲಿ” ಅಂತ ದುವಾ ಕೇಳಿಕೊಂಡು ಬಂದ್ಲು. ಬಾಬಾ ‘ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ’ ಅನ್ನೊ ಗಾದೆ ನಿಜವಾಗಬಾರದೆಂದು ಉಳಿದ ನಾವು ನಾಲ್ಕು ಹೆಣ್ಣು ಮಕ್ಕಳನ್ನ ಹೆಚ್ಚು ಹೆಚ್ಚು ಕಾಯಲು ಶುರುಮಾಡಿದ. ಸಹಜವಾಗಿಯೇ ಪಾತಿ ಮತ್ತು ಸಯೀದನ ಮದುವೆ ಮುರಿದುಬಿದ್ದಿತ್ತು. ದಾದಾಪೀರ್‌ ಜೈಮನ್‌ ಬರಹ

read more
ಆಸ್ಟ್ರೇಲಿಯಾದ ಪ್ರವಾಸಿಗರ ಕನಸು-ಕನವರಿಕೆಗಳು

ಆಸ್ಟ್ರೇಲಿಯಾದ ಪ್ರವಾಸಿಗರ ಕನಸು-ಕನವರಿಕೆಗಳು

 ಪ್ರವಾಸಿಗರಿಗೆ, ಕ್ಯಾಂಪಿಗರಿಗೆ, ಹೇಳಿ ಮಾಡಿಸಿದ ಚಳಿಗಾಲವಿದು. ಕಳೆದ ಕೆಲ ವರ್ಷಗಳಿಗಿಂತಲೂ ಈ ಬಾರಿ ಅಧಿಕ ಚಳಿಯಿದೆ. ಹಾಗಾಗಿ ಸಮುದ್ರತಟದಲ್ಲಿರಲು ಜನ ಹಾತೊರೆಯುತ್ತಾರೆ. ಅದು ನಿಜವೆಂಬಂತೆ ರಾಣಿರಾಜ್ಯದ ದಕ್ಷಿಣ-ಪೂರ್ವ ಭಾಗದ ಪ್ರತಿಯೊಂದು ನಗರಪಾಲಿಕೆಯೂ ತಮ್ಮಲ್ಲಿನ ಪ್ರವಾಸಿ ಸ್ಥಳಗಳನ್ನು ಪ್ರಚಾರ ಪಡಿಸಲು ಬಲು ಆಕರ್ಷಕವಾದ ಜಾಹಿರಾತುಗಳನ್ನು ಹಾಕುತ್ತಿದ್ದಾರೆ. ಶಾಲೆಗಳಿಗೆ ಟರ್ಮ್ ೨ ನಂತರದ ಎರಡು ವಾರಗಳ ರಜೆ ಆರಂಭವಾಗಿದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

read more
ಗುರುಪ್ರಸಾದ ಕುರ್ತಕೋಟಿ ಹೊಸ ಅಂಕಣ ‘ಗ್ರಾಮಡ್ರಾಮಾಯಣ’

ಗುರುಪ್ರಸಾದ ಕುರ್ತಕೋಟಿ ಹೊಸ ಅಂಕಣ ‘ಗ್ರಾಮಡ್ರಾಮಾಯಣ’

ಸಾಕಷ್ಟು ಸಂಬಳ ಒದಗುವ ಐಟಿ ವಲಯದಲ್ಲಿ ಉದ್ಯೋಗ ನಿರ್ವಹಿಸುವಾಗ, ಕಂಪ್ಯೂಟರ್ ಗಳ ಪರದೆ ಕಣ್ಣು ಕೀಲಿಸಿ ಕುಳಿತು ದಣಿವಾದಾಗ ಹಳ್ಳಿ ಮನೆಯ, ಹೊಲಗದ್ದೆಗಳ ಕಂಪು ಮನಸ್ಸನ್ನು ಕಾಡುವುದುಂಟು. ಹಾಗೆಯೇ ತಾನೂ ಕೃಷಿ ಮಾಡುವ ಅವಕಾಶವಿದ್ದಿದ್ದರೆ ಎಷ್ಟು ಚೆನ್ನಾಗಿತ್ತು ಎಂಬ ಕನಸೂ ಮೊಳಕೆಯೊಡೆಯುವುದು. ಹೀಗೆ ಕನಸುಗಳ ಬೆನ್ನತ್ತಿ ಕೃಷಿ ಕ್ಷೇತ್ರದತ್ತ ಮುಖ ಮಾಡಿದವರು ಗುರುಪ್ರಸಾದ ಕುರ್ತಕೋಟಿ. ತಮ್ಮ ಕನಸಿನ ಹಾದಿಯಲ್ಲಿ ಕಂಡ ವಿಚಾರಗಳನ್ನು, ತಮ್ಮ ಅನುಭವಗಳನ್ನು ಅವರು ‘ಗ್ರಾಮ ಡ್ರಾಮಾಯಣ’  ಎಂಬ ಈ ಅಂಕಣದಲ್ಲಿ ಬರೆಯಲಿದ್ದಾರೆ.  ಅವರ ಮೊದಲ ಬರಹ  ಇಲ್ಲಿದೆ. 

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ