Advertisement

ಅಂಕಣ

ನಗರ-ಬೆಟ್ಟಗಳ ಕಿರು ಕತೆಗಳು

ನಗರ-ಬೆಟ್ಟಗಳ ಕಿರು ಕತೆಗಳು

ಬೆಟ್ಟ ಹತ್ತೋದು ಎಂದರೆ ರಾಷ್ಟ್ರೀಯ ರಕ್ಷಿತ ವನಗಳಲ್ಲಿ ಅರಣ್ಯ ಇಲಾಖೆಯ ರೇಂಜರುಗಳು ಸೊಗಸಾದ ದಾರಿ ಮಾಡಿರುತ್ತಾರೆ. ಅದೇ ದಾರಿಯಲ್ಲೆ ನಾವು ನಡೆದು, ಬೆಟ್ಟದ ಮೇಲಿರುವ ವ್ಯೂ ಪಾಯಿಂಟ್ ತಲುಪಿ ಸುತ್ತಮುತ್ತಲಿನ ಪ್ರದೇಶಗಳನ್ನು ಪಕ್ಷಿನೋಟದಲ್ಲಿ ನೋಡುವುದು. ದಾರಿ ಬಿಟ್ಟು ಅಕ್ಕಪಕ್ಕ ಇರುವ ಕಾಡಿನಲ್ಲಿ ತಿರುಗಾಡುವಂತಿಲ್ಲ. ರಕ್ಷಿತ ವನ ಅಥವಾ ಕಾಡು ಎನ್ನುವ ಎಚ್ಚರಿಕೆಯನ್ನು ಪಾಲಿಸಿಯೇ ಮುಂದುವರೆಯಬೇಕು. ಇದರಿಂದ ಪರಿಸರಕ್ಕೆ ಒಳ್ಳೆಯದು. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

read more
ಆನೆ ಸಾಕಲು ಹೊರಟವಳ ಕಥೆ

ಆನೆ ಸಾಕಲು ಹೊರಟವಳ ಕಥೆ

ಸುಲಲಿತವಾದ ಪ್ರಬಂಧಗಳಿಗೆ ಅವರು ಆಯ್ದುಕೊಳ್ಳುವ ವಿಷಯಗಳೇನೂ ಅಸಾಮಾನ್ಯವಾದುದಲ್ಲ. ಹೆಚ್ಚಿನವು ದಿನನಿತ್ಯ ಜರುಗುವ ಸಂಗತಿಗಳೇ. ಆದರೆ ಅದನ್ನು ಹೇಳುವ ಶೈಲಿ ಇದೆಯಲ್ಲಾ, ಅದು ಮಾತ್ರ ನಿಜಕ್ಕೂ ಅದ್ಭುತ. ಅತ್ಯಂತ ಚಿಕ್ಕದಾಗಿ, ಚೊಕ್ಕದಾಗಿ ಮತ್ತು ಸರಳವಾಗಿ ನಿರೂಪಣೆ‌ ಮಾಡುತ್ತಾರೆ. ಮಧ್ಯಾಹ್ನ ಮಾಡುವ ಅಡುಗೆಗೆ ಸಂಬಂಧಿತ ಲಹರಿ ಬಂದರೆ ಅದುವೇ ಒಂದು ಪ್ರಬಂಧವಾಗುತ್ತದೆ. ‘ಓದುವ ಸುಖ’ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

read more
ಮಳೆ ನಕ್ಷತ್ರಗಳ ಲೆಕ್ಕಾಚಾರದ ನಡುವೆ

ಮಳೆ ನಕ್ಷತ್ರಗಳ ಲೆಕ್ಕಾಚಾರದ ನಡುವೆ

ಹಳ್ಳಿಗರು ನಮಗಿಂತ ಬೆಸ್ಟ್. ಅವರಲ್ಲೂ ನಾಟಕ ಮಾಡುವ ಉಮೇದು ಇದೆ. ಹಾಗೆ ನೋಡಿದರೆ ನಮಗಿಂತ ಹೆಚ್ಚು ಇದೆ. ಆದರೆ ಅವರಿಗೆ ನಾಟಕ ಎನ್ನುವುದು ತಮ್ಮ ಬಿಡುವಿನ ದಿನಗಳ ಒಂದು ದಿವ್ಯ ಬಾಬ್ತು. ಮಳೆಗಾಲ ಆರಂಭವಾಗಿ ಬೇಸಾಯ ಆರಂಭಿಸಿ ಉತ್ತುಬಿತ್ತು ಫಸಲು ಕೈಗೆ ಬರುತ್ತದೆ ಅನಿಸಿದಾಗ ಅವರು ನಾಟಕದ ಪ್ರಾಕ್ಟೀಸ್ ಮಾಡಿ ಬಣ್ಣ ಹಚ್ಚಿ ಸಂಭ್ರಮಿಸುತ್ತಾರೆ.
ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

read more
ಬದುಕಿನ ಪ್ರಶ್ನೆಗಳು..ಪರೀಕ್ಷೆಗಳು

ಬದುಕಿನ ಪ್ರಶ್ನೆಗಳು..ಪರೀಕ್ಷೆಗಳು

ಅವನಿಗೆ ಮೊದಲಿನಿಂದಾನು ಮನೆಕಡೆಯಿಂದ ಸಮಸ್ಯೆ ಇತ್ತು. ಅಮ್ಮ, ಅಪ್ಪ, ವಿಕಲ ಚೇತನ ಅಣ್ಣ, ಮನೆಯಲ್ಲಿ ಸದಾ ಇರುವ ಜಗಳಗಳು ನೆನಪಾದವು. ನನಗೆ ನನ್ನ ಮನೆಯಲ್ಲಿರುವ ಬಡತನ, ರಿಸರ್ವಶನ್ ಕೊಟ್ಟರೂ ಇವಕ್ಕೆ ಮುಂದೆ ಬರೋದಕ್ಕೆ ಗೊತ್ತಿಲ್ಲ ಎಂಬ ಕುಹಕಗಳು ಕುದಿಯುತ್ತಿದ್ದವು. ಎರಡು ಮಗ್ಗಿನಲ್ಲಿ ಚಾ ಬಗ್ಗಿಸಿಕೊಂಡು ಕೋಣೆಗೆ ಬಂದರೆ ಅವನು ಹಾಸಿಗೆಯಿಂದೆದ್ದು ಗೋಡೆಗಾತು ಯಾವುದೋ ಮ್ಯಾಗಜಿನ್ ಹಿಡಿದು ಕೂತಿದ್ದ. ಮೊಬೈಲು, ಬ್ಯಾಟರಿ ದಿಕ್ಕಿಗೊಂದೊಂದು ಬಿದ್ದಿದ್ದವು.
ದಾದಾಪೀರ್‌ ಜೈಮನ್ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

read more
ಸಾಮಾನ್ಯ ಪ್ರಜೆಯ ಅರ್ಧಸತ್ಯಗಳು

ಸಾಮಾನ್ಯ ಪ್ರಜೆಯ ಅರ್ಧಸತ್ಯಗಳು

ಯಾವುದೇ ಸರಕಾರ ಬರಲಿ ಅಥವಾ ಇರಲಿ, ಕೋವಿಡ್ ಮಾರಿ ಬರಲಿ ಹೋಗಲಿ, ಯುಕ್ರೇನಿನಲ್ಲಿ ಯುದ್ಧವಾಗುತ್ತಿರಲಿ ಬಿಡಲಿ, ದಿನನಿತ್ಯದ ಸಾಮಾನ್ಯಪ್ರಜೆಯ ಪರಿಸ್ಥಿತಿ ಯಥಾಪ್ರಕಾರ ಅಯೋಮಯವಾಗಿದೆ. ಆಸ್ಟ್ರೇಲಿಯವು ಪ್ರಪಂಚದ ಅತ್ಯಂತ ದುಬಾರಿ ದೇಶಗಳಲ್ಲಿ ಒಂದು. ಇಲ್ಲಿನ ದಿನನಿತ್ಯ ಜೀವನದ ಅಂದಾಜು ಖರ್ಚುವೆಚ್ಚವು ಸದಾ ದುಬಾರಿಯಾಗಿಯೇ ಇರುತ್ತದೆ. ಇದರೊಂದಿಗೆ ಇತ್ತೀಚಿನ ವರ್ಷಗಳಲ್ಲಿ ವಸತಿ ಸಮಸ್ಯೆ ವಿಪರೀತವಾಗಿದೆ.
ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಕವಿಜೋಡಿಯ ದುರಂತಗೀತ

ಕವಿಜೋಡಿಯ ದುರಂತಗೀತ

ಕವಿಜೋಡಿಯ ದುರಂತ ಅಂತ್ಯವೂ ಬಹಳ ಪರಿಣಾಮಕಾರಿಯಾಗಿ ನಿರೂಪಿತವಾಗಿದೆ. ಕಾವ್ಯದೇವಿಯೇ ಹೇಳಿ ಮಾಡಿಸಿದಂಥ ಜೋಡಿಯೊಂದು ಪರಸ್ಪರರ ವಿಶ್ವಾಸ ನಂಬಿಕೆಗಳನ್ನು ಉಳಿಸಿಕೊಳ್ಳಲಾಗುವುದಿಲ್ಲ. ತನ್ನ ಗಂಡ ಆಸಿಯಾ ಎಂಬುವವಳ ಜೊತೆ ಸಲಿಗೆಯಿಂದ ಇರುವುದನ್ನು ಸಹಿಸಲಾಗದೆ ತಮ್ಮಿಬ್ಬರ ಪ್ರೇಮದ ಕುರುಹಾಗಿದ್ದ ಕವಿಕುಟೀರದಿಂದ ಅವನ ಕವಿತೆ-ಟಿಪ್ಪಣಿಗಳ ಪುಸ್ತಕವನ್ನು ಸುಟ್ಟು ಟೆಡ್ ನನ್ನು ಹೊರಹಾಕುವುದು..
ಎಸ್. ಸಿರಾಜ್‌ ಅಹಮದ್‌ ಬರೆಯುವ ಅಂಕಣ

read more
ಸುಳಿಯ ಸೆಳವಿಗೆ ಸಿಲುಕದೇ…

ಸುಳಿಯ ಸೆಳವಿಗೆ ಸಿಲುಕದೇ…

ಮನುಷ್ಯ ಮುಕ್ತವಾಗಿ ಮತ್ತು ಸ್ವಚ್ಛಂದವಾಗಿ ಬೇರೆಯವರ ಜೊತೆ ಕಲೆಯಲು ರಂಗಭೂಮಿಗೆ ಬರಬೇಕು. ಅಲ್ಲಿ ಇರುವ ಮಜವೇ ಬೇರೆ. ಪ್ರೀತಿಯಲ್ಲಿ, ಸಲಿಗೆಯಲ್ಲಿ ಮತ್ತು ಸ್ನೇಹದಲ್ಲಿ ಕಾಲೆಳೆಯುವ ಬಗೆಗಳು ಇಲ್ಲಿ ಪಡೆದುಕೊಳ್ಳುವ ಆಯಾಮವೇ ಬೇರೆ. ಮೇಕಪ್‍ಗೆ ಕೂತರೆ ಮತ್ತು ರಂಗಕ್ಕೆ ಬಂದರೆ ಅಲ್ಲಿ ಅವರ ಚಹರೆ ಬೇರೆ. ಈ ಎಲ್ಲ ತಿಳಿದು ಮತ್ತು ಸಮುದ್ರದ ಬಗೆಗೆ ನನ್ನಲ್ಲಿ ಮೊದಲಿಂದ ಇರುವ ಸೆಳೆತದಿಂದ ಹೊರಟೆ. ಟಿಟಿಯಲ್ಲಿ ಹುಡುಗರ ಗೇಲಿ. ಪರಸ್ಪರ ಕಾಲೆಳೆಯುವ ಗುಣ ನಗು ತರಿಸುತ್ತಿತ್ತು.
ಎನ್.ಸಿ. ಮಹೇಶ್‌ ಬರೆಯುವ “ರಂಗ ವಠಾರ” ಅಂಕಣ

read more
ಟಿಶ್ಯೂಮಾರುವ ಹುಡುಗ ಸುಳ್ಳು ಹೇಳಲಿ ಬಿಡಿ

ಟಿಶ್ಯೂಮಾರುವ ಹುಡುಗ ಸುಳ್ಳು ಹೇಳಲಿ ಬಿಡಿ

ಕೊನೆಗೂ ಉಷಾ ಇದ್ದ ಅಪಾರ್ಟ್ಮೆಂಟ್ ಬಂತು. ಲಿಫ್ಟ್ ಕಾರ್ನರ್ ಪ್ರವೇಶ ಮಾಡುವ ಮೊದಲೇ ಒಂದು ಮಂಟಪದಂತಹ ಜಾಗದಲ್ಲಿ ನಿಂತು ಅದರ ನಾಲ್ಕೂ ಮೂಲೆಗೂ ಹಬ್ಬಿದ್ದ ಮಲ್ಲಿಗೆ ಬಳ್ಳಿಯನ್ನು ನೋಡುತ್ತಾ ಅದರ ಸುಗಂಧವನ್ನು ಅಘ್ರಾಣಿಸಲು ನಿಂತರು. ಇಹದಲ್ಲಿ ನಿಂತು ಪರಲೋಕಕ್ಕೆ ಕೈಚಾಚಿ ನಿಂತ ಘಳಿಗೆಯಾಗಿ ನನಗದು ಕಂಡಿತು. ಆ ಕ್ಷಣದಲ್ಲಿ ನನಗವರ ಮೇಲೆ ಕ್ಯಾಬಲ್ಲಿ ಉಕ್ಕಿದ್ದ ಕೋಪವೆಲ್ಲಾ ಮಾಯವಾಯಿತು. ಉಷಾಳ ಗಂಡ ಅನಿಕೇತ್ ನೋಡುವುದಕ್ಕೆ ನಿಜಕ್ಕೂ ಚೆನ್ನಾಗಿದ್ದ.
ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

read more
ಆಶ್ರಯ ಕೊಡು-ಕೊಳ್ಳುವಿಕೆಯ ಕಹಿ ಸತ್ಯ

ಆಶ್ರಯ ಕೊಡು-ಕೊಳ್ಳುವಿಕೆಯ ಕಹಿ ಸತ್ಯ

ತಮ್ಮ ದೇಶದಲ್ಲಿ ನಡೆಯುತ್ತಿರುವ ಆಂತರಿಕ ಯುದ್ಧ, ಗಲಾಟೆ, ಹಿಂಸೆ, ಸಾವು, ಮಿಲಿಟರಿ ಆಡಳಿತ ಎಂಬಂತೆ ಜೀವಹಾನಿಕಾರಕ ಪರಿಸ್ಥಿತಿಯಿದ್ದು ಜೀವ ರಕ್ಷಿಸಿಕೊಳ್ಳಲು ದೇಶ ಬಿಟ್ಟು ಬರುವ ಜನರು ಇತ್ತೀಚಿನ ದಶಕಗಳಲ್ಲಿ ಹೆಚ್ಚುತ್ತಿದ್ದಾರೆ. ಅಲ್ಲದೆ ಮಾನವ ಹಕ್ಕುಗಳ ಉಲ್ಲಂಘನೆ ಎಂಬ ಕಾರಣವನ್ನು ಮುಂದೆ ಮಾಡಿಕೊಂಡು ಕೂಡ ಸಾವಿರಾರು ಜನರು ದೇಶ ತೊರೆದು ಬೇರೆ ಕಡೆ ಆಶ್ರಯವನ್ನು ಬೇಡಿಕೊಂಡು ಹೋಗುತ್ತಾರೆ. ಇವರು ‘ಅಸೈಲಮ್ ಸೀಕರ್’ ಎಂದು ಕರೆಸಿಕೊಳ್ಳುತ್ತಾರೆ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ