ದುಬಾರಿ ಲೋಕದಲ್ಲಿ ರಂಗಪ್ರದರ್ಶನಗಳ ಪೂರ್ವಾಪರ
ಧೈರ್ಯ ಮಾಡಿ ರಂಗಮಂದಿರದ ಬಾಡಿಗೆ ಕಟ್ಟಿ ನಾಟಕ ಮಾಡಲು ಮುಂದಾಗುತ್ತೇವೆ ಅಂತಿಟ್ಟುಕೊಳ್ಳಿ. ಜನ ಬರಬೇಕಲ್ಲ ? ಪೆಟ್ರೋಲ್ ದರ ಯಾವ ಶಿಖರವನ್ನ ಗುರಿಯಾಗಿಟ್ಟುಕೊಂಡಿದೆ ಎನ್ನುವುದು ತಿಳಿಯುತ್ತಿಲ್ಲ. ಅಡುಗೆ ಅನಿಲ ದರ ಕೇಳಿದರೆ ಎದೆ ಸ್ಫೋಟಗೊಳ್ಳುತ್ತದೆ. ಅಡುಗೆಗೆ ಬಳಸುವ ಎಣ್ಣೆ ತನಗೆ ಬೆಲೆ ಬರುತ್ತಿರುವುದಕ್ಕೆ ವ್ಯರ್ಥವಾಗಿ ಹಿಗ್ಗುತ್ತಿದೆ. ನೀವು ರಂಗಮಂದಿರಗಳ ಬಾಡಿಗೆ ದರ ಏರಿಸಿದರೆ ನಾವು ರಂಗತಂಡಗಳವರು ಏನು ಮಾಡಬೇಕು? ಎನ್. ಸಿ. ಮಹೇಶ್. ಬರಹ
ಒಳ್ಳೆಯ ಮತ್ತು ಕೆಟ್ಟ ಸಮಾಚಾರಗಳ ಬೇವುಬೆಲ್ಲ
ಶುಭಕೃತ್ ಸಂವತ್ಸರವು ಅಡಿಯಿಟ್ಟಿದೆ. ಆದರೆ ಕಾಲವು ಅದೇ ಪ್ರಕಾರ ಒಳಿತುಕೆಡುಕುಗಳನ್ನು ಒಟ್ಟಿಗೆ ಕಟ್ಟಿಕೊಂಡು ಸಾಗುತ್ತಿದೆ. ಪ್ರಕೃತಿ ವಿಕೋಪವೆಂಬ ಬೇವು, ಮಾನವೀಯತೆ ಎಂಬ ಬೆಲ್ಲವನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಬೇಕಾಗಿದೆ. ಆಸ್ಟ್ರೇಲಿಯಾದಲ್ಲಿ ಟೆನಿಸ್ ಪಟು ಆಶ್ ಬಾರ್ಟಿ ನಿವೃತ್ತಿಯ ಬೇಸರ. ಆದರೆ ಅವರ ಮುಂದಿನ ನಿರ್ಧಾರ ಖುಷಿ ಕೊಡುವುದು. ಪ್ರವಾಹವು ನೋವು ಕೊಡುವುದು. ಡಾ. ವಿನತೆ ಶರ್ಮ ಬರೆದ ಆಸ್ಟ್ರೇಲಿಯಾ ಪತ್ರದಲ್ಲಿ ಅಲ್ಲಿನ ಕ್ಷೇಮ ಸಮಾಚಾರಗಳನ್ನು ತಿಳಿಯೋಣ.
ಚೂಟಿ ಹುಡುಗನ ಸೃಜನಶೀಲತೆ ಹೇಳಿದ ಪಾಠ
ಯಾವಾಗ ಅಧ್ಯಾಪಕನಾಗಿ ಶಾಲೆ ಸೇರಿ, ನಾನೇ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾಡಲು ಪ್ರಾರಂಭ ಮಾಡಿದೆನೋ, ಮಕ್ಕಳಿಗೆ ಪರೀಕ್ಷೆಯ ತಯಾರಿಯ ಬಗ್ಗೆ ಹೇಳಬೇಕಾಗಿ ಬಂತೋ ಆಗ ಪೇಚಿಗೆ ಸಿಲುಕುತ್ತಿದ್ದೆ. ಮಕ್ಕಳಿಗೆ ಪರೀಕ್ಷಾ ತಯಾರಿಯ ಉಪದೇಶ ಮಾಡುವಾಗ ನಾನು ಕೇಳಿದ ನನ್ನಪ್ಪನ ಮತ್ತು ನನ್ನ ಗುರುಗಳ ಮಾತುಗಳು ನನಗೆ ಅರಿವಿಲ್ಲದಂತೆ ಬಾಯಿಗೆ ಬಂದು ಬಿಡುತ್ತಿತ್ತು. ಉಪದೇಶವನ್ನು ಮಾಡಿದ ಬಳಿಕವೂ ಮಕ್ಕಳು ಉತ್ತರಪತ್ರಿಕೆಯಲ್ಲಿ ಬಿಟ್ಟ ಖಾಲಿ ಜಾಗಗಳನ್ನು ನೋಡಿದಾಗ ನನ್ನ ಉಪದೇಶಗಳು ಪ್ರಯೋಜನಕ್ಕೆ ಬಾರದೇ ಇರುವುದು ಸ್ಪಷ್ಟವಾಗಿ ತಿಳಿಯುತ್ತಿತ್ತು.
‘ಗಣಿತ ಮೇಷ್ಟರ ಶಾಲಾ ಡೈರಿ’ಯಲ್ಲಿ ಅರವಿಂದ ಕುಡ್ಲ ಬರಹ
ನಾಲ್ಕು ರಾಜ್ಯಗಳ ಏಳಿಗೆಯ ಅವಲೋಕನ
ಕೃತಿಯು ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಸೂಚ್ಯಂಕಗಳನ್ನು ಆದರ್ಶವಾಗಿರಿಸಿಕೊಂಡು ಕಳೆದ ನೂರು ವರ್ಷಗಳಿಂದ ಆದ ಬದಲಾವಣೆಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನೂರು ವರ್ಷಗಳ ಮುಂಚೆ ಪರಿಗಣನೆಗೆ ತೆಗೆದುಕೊಂಡ ನಾಲ್ಕೂ ರಾಜ್ಯಗಳು ಹೆಚ್ಚುಕಮ್ಮಿ ಒಂದೇ ಪರಿಸ್ಥಿತಿಯಲ್ಲಿದ್ದವು. ಆದರೆ ಉಪರಾಷ್ಟ್ರೀಯತೆಯ ಪ್ರಜ್ಞೆ ಬೆಳೆಸಿಕೊಂಡ ತಮಿಳುನಾಡು ಮತ್ತು ಕೇರಳ ಪ್ರಗತಿ ಹೊಂದಿದರೆ ಆ ಪ್ರಜ್ಞೆ ಬೆಳೆಸಿಕೊಳ್ಳಲು ವಿಫಲವಾದ ರಾಜ್ಯಗಳು ಹೇಗೆ ಹಿಂದುಳಿದಿವೆ ಅನ್ನುವುದನ್ನು ವಿವರಿಸಲಾಗಿದೆ.
ರುಚಿಯ ದಾರಿ ಹಿಡಿದವರ ಕಥೆ
ಕೋವಿಡ್ ಮೊದಲನೇ ಅಲೆಯ ಕಾರಣದಿಂದ ಹಲವರು ಕೆಲಸ ಕಳೆದುಕೊಳ್ಳುತ್ತಿದ್ದರು. ಮತ್ತೊಂದಿಷ್ಟು ಕಡೆ ಪರ್ಸಂಟೇಜ್ ಸ್ಯಾಲರಿಗೆ ಬಂದು ನಿಂತಿತ್ತು. ಸಂಯೋಜಕರಾಗಿ ಕೆಲಸ ಮಾಡುತ್ತಿದ್ದ ಮಿಸಸ್ ಪ್ರೆಸಿಲ್ಲಾ ಅವರನ್ನು ಹೆಚ್ಚುವರಿ ಹುದ್ದೆಗಳನ್ನು ವಜಾ ಮಾಡುವ ನೆಪ ಹೇಳಿ ಕೆಲಸದಿಂದ ತೆಗೆದು ಹಾಕಿದ್ದರು. ಅವರೇ ರೆಫರ್ ಮಾಡಿದ್ದ, ನಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಇಂಗ್ಲಿಷ್ ಭಾಷಾ ಅಧ್ಯಾಪಕರಾಗಿ ಸೇರಿಕೊಂಡರು. ನಾವೀಗ ಸಹೋದ್ಯೋಗಿಗಳಾಗಿದ್ದೆವು. ಜಂಕ್ಷನ್ ಪಾಯಿಂಟ್ ಅಂಕಣದಲ್ಲಿ ದಾದಾಪೀರ್ ಜೈಮನ್ ಬರಹ
ಸೇವೆಯನ್ನು ಕಲಿಯುವ ಉತ್ಸಾಹಿ ಮಕ್ಕಳು
ಕೆನಡಾದಲ್ಲಿ ಹೈ ಸ್ಕೂಲ್ ಓದುವ ಮಕ್ಕಳು 40 ಗಂಟೆಗಳ ಸೇವಾ ಕಾರ್ಯಗಳನ್ನು ಮಾಡಬೇಕು. ಆದನ್ನು ಮುಗಿಸಿದರೆ ಮಾತ್ರ ಅವರಿಗೆ ಹೈ ಸ್ಕೂಲ್ ಮುಗಿಸಿದ ಪ್ರಮಾಣ ಪತ್ರವನ್ನು ಕೊಡುತ್ತಾರೆ. ಯಾವ ಸಂಸ್ಥೆಗೆ ಸೇವೆ ಮಾಡುತ್ತೇವೆ, ಎಷ್ಟು ಗಂಟೆಗಳು ಮಾಡುತ್ತೇವೆ ಎಂದು ನಮೂದಿಸಿ, ಸೇವಾ ಸಂಸ್ಥೆಗಳ ವಿವರ ಮತ್ತು ಅಲ್ಲಿನ ಪರಿಚಾರಕರ ಸಹಿಯ ಜೊತೆಗೆ ಅವರ ವಿವರಗಳನ್ನು ನಮೂದಿಸಬೇಕು. ಎಲ್ಲಾ ಮಕ್ಕಳು ಇದನ್ನು ಬಹಳ ನ್ಯಾಯಯುತವಾಗಿ ಮತ್ತು ನಿಖರ ಮಾಹಿತಿಯೊಂದಿಗೆ ಪೂರ್ಣ ಮಾಡುತ್ತಾರೆ. ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಕೊಡುವುದಿಲ್ಲ.
ಪ್ರಶಾಂತ್ ಬೀಚಿ ಅಂಕಣ
ನ್ಯಾಯದ ವಿವಿಧ ಮುಖಗಳ ಕತೆಗಳು
ಇದ್ಯಾಕೆ ಹೀಗೆ ಎಂದು ಪ್ರಶ್ನಿಸಿಕೊಂಡರೆ ಆಸ್ಟ್ರೇಲಿಯಾದ ಪಾಳೆಗಾರಿಕೆ ಮತ್ತು ವಸಾಹತುಶಾಹಿ ಚರಿತ್ರೆ ಬಿಚ್ಚಿಕೊಳ್ಳುತ್ತದೆ. ನಡೆದು ಹೋದ ಕರಾಳ ಚಾರಿತ್ರಿಕ ಘಟನೆಗಳು, ಅಬೊರಿಜಿನಲ್ ಜನರ ಮಾರಣಹೋಮ, ಅವರನ್ನು ಗುಲಾಮಗಿರಿಗೆ ಒಳಪಡಿಸಿದ್ದು, ಅವರ ಮಕ್ಕಳನ್ನು ಕದ್ದು ಬಲವಂತವಾಗಿ ಅವರಿಗೆ ‘ಸಂಸ್ಕೃತಿ ಪಾಠ’ ಕಲಿಸಿದ್ದು, ಬಿಳಿಯರ ಆಳ್ವಿಕೆ, ಆಡಳಿತ, ‘ವೈಟ್ ಆಸ್ಟ್ರೇಲಿಯಾ’ ಕಾಯಿದೆ/ಕಾನೂನು ಪಾಲನೆ, ಸಮಾಜದಲ್ಲಿ ಆಳವಾಗಿ…
ಬರವಣಿಗೆ ಎಂಬ ಅಫೀಮು
ಎಲ್ಲರಿಗೂ ಸಮನಾಗಿ ಸಿಗುವ ಇಪ್ಪತ್ನಾಲ್ಕೇ ಘಂಟೆಗಳನ್ನು ಇವರೆಲ್ಲ ತಡೆದು ನಿಲ್ಲಿಸಿದರು ಹೇಗೆ? ಜೀವನಕ್ಕೆ ಬೇಕಾದ ಹಣ ಸಂಪಾದಿಸಿದರು ಹೇಗೆ? ಮನೆಯನ್ನು ತೂಗಿಸಿದರು ಹೇಗೆ? ಅರೆ ಹೊಟ್ಟೆ ಉಂಡೇ ಎಷ್ಟು ರಾತ್ರಿ ಕಳೆದರು? ಅಷ್ಟಾಗಿಯೂ ಒಂದೊಳ್ಳೆಯ ಪುಟ ಬರೆದ ಮೇಲೆ ಅವರ ತುಟಿಯ ಮೇಲೆ ಮೂಡಿದ ಮುಗುಳೆಂಥದು? ಅಪಹಾಸ್ಯಕ್ಕೊಳಗಾದರೇ? ಪ್ರೀತಿಸುವವರಿಂದ ದೂರವಾದರೇ? ಅವರು ತಮ್ಮ ಬರವಣಿಗೆಗಾಗಿ ತೆತ್ತ ಬೆಲೆಯೆಂಥದು? ಕಲೆಯಿಂದ ಸಿಗುವ ಸುಖ ಈ ಎಲ್ಲವನ್ನೂ ಮೀರಿದ್ದೇ?
ಮಹಿಳಾ ಯುದ್ಧಸ್ಮಾರಕಗಳ ಹುಡುಕುತ್ತಾ ಕಂಡ ಸತ್ಯಗಳು
ಯುದ್ಧಗಳೇಕೆ ನಡೆಯುತ್ತವೆ ಎಂದು ಯೋಚಿಸುತ್ತಾ, ಸ್ಕಾಟ್ ಲ್ಯಾಂಡ್ನಲ್ಲಿ ಯಾಂತ್ರಿಕವಾಗಿ ಆ ವಸ್ತು ಸಂಗ್ರಹಾಲಯವನ್ನು ನೋಡುತ್ತಿದ್ದಾಗ ‘ಹಾಲ್ ಆಫ್ ಆನರ್’ ಎನ್ನುವ ಇಪ್ಪತ್ತು ಅಡಿ ಉದ್ದ ಅಗಲವಿದ್ದ ಕೋಣೆಯಲ್ಲಿ ಕೆಂಪು ಬಣ್ನದ ಲೆದರ್ ಬೈಂಡಿಂಗ್ ಹೊಂದಿದ್ದ ವಿಪರೀತ ದಪ್ಪವಾದ ಒಂದು ಪುಸ್ತಕ ಕಂಡಿತು. ಅದರ ಹಿಂದೆಯೇ ಅದಕ್ಕೇ ಆತುಕೊಂಡಿದ್ದಂತೆ ನಿಂತಿದ್ದ ಗಾಜಿನ ಗೋಡೆ ಕಣ್ಣಿಗೆ ಬಿತ್ತು. ಹತ್ತಿರ ಹೋಗಿ ನೋಡಿದರೆ ಅದರಲ್ಲಿದ್ದ ಅಕ್ಷರಗಳನ್ನು ಓದಿ ಒಂದು ಕ್ಷಣ ದಂಗುಬಿಡಿದೆ.










