Advertisement

ಅಂಕಣ

ಬದುಕಿನ ಪ್ರಶ್ನೆಗಳು..ಪರೀಕ್ಷೆಗಳು

ಬದುಕಿನ ಪ್ರಶ್ನೆಗಳು..ಪರೀಕ್ಷೆಗಳು

ಅವನಿಗೆ ಮೊದಲಿನಿಂದಾನು ಮನೆಕಡೆಯಿಂದ ಸಮಸ್ಯೆ ಇತ್ತು. ಅಮ್ಮ, ಅಪ್ಪ, ವಿಕಲ ಚೇತನ ಅಣ್ಣ, ಮನೆಯಲ್ಲಿ ಸದಾ ಇರುವ ಜಗಳಗಳು ನೆನಪಾದವು. ನನಗೆ ನನ್ನ ಮನೆಯಲ್ಲಿರುವ ಬಡತನ, ರಿಸರ್ವಶನ್ ಕೊಟ್ಟರೂ ಇವಕ್ಕೆ ಮುಂದೆ ಬರೋದಕ್ಕೆ ಗೊತ್ತಿಲ್ಲ ಎಂಬ ಕುಹಕಗಳು ಕುದಿಯುತ್ತಿದ್ದವು. ಎರಡು ಮಗ್ಗಿನಲ್ಲಿ ಚಾ ಬಗ್ಗಿಸಿಕೊಂಡು ಕೋಣೆಗೆ ಬಂದರೆ ಅವನು ಹಾಸಿಗೆಯಿಂದೆದ್ದು ಗೋಡೆಗಾತು ಯಾವುದೋ ಮ್ಯಾಗಜಿನ್ ಹಿಡಿದು ಕೂತಿದ್ದ. ಮೊಬೈಲು, ಬ್ಯಾಟರಿ ದಿಕ್ಕಿಗೊಂದೊಂದು ಬಿದ್ದಿದ್ದವು.
ದಾದಾಪೀರ್‌ ಜೈಮನ್ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

read more
ಸಾಮಾನ್ಯ ಪ್ರಜೆಯ ಅರ್ಧಸತ್ಯಗಳು

ಸಾಮಾನ್ಯ ಪ್ರಜೆಯ ಅರ್ಧಸತ್ಯಗಳು

ಯಾವುದೇ ಸರಕಾರ ಬರಲಿ ಅಥವಾ ಇರಲಿ, ಕೋವಿಡ್ ಮಾರಿ ಬರಲಿ ಹೋಗಲಿ, ಯುಕ್ರೇನಿನಲ್ಲಿ ಯುದ್ಧವಾಗುತ್ತಿರಲಿ ಬಿಡಲಿ, ದಿನನಿತ್ಯದ ಸಾಮಾನ್ಯಪ್ರಜೆಯ ಪರಿಸ್ಥಿತಿ ಯಥಾಪ್ರಕಾರ ಅಯೋಮಯವಾಗಿದೆ. ಆಸ್ಟ್ರೇಲಿಯವು ಪ್ರಪಂಚದ ಅತ್ಯಂತ ದುಬಾರಿ ದೇಶಗಳಲ್ಲಿ ಒಂದು. ಇಲ್ಲಿನ ದಿನನಿತ್ಯ ಜೀವನದ ಅಂದಾಜು ಖರ್ಚುವೆಚ್ಚವು ಸದಾ ದುಬಾರಿಯಾಗಿಯೇ ಇರುತ್ತದೆ. ಇದರೊಂದಿಗೆ ಇತ್ತೀಚಿನ ವರ್ಷಗಳಲ್ಲಿ ವಸತಿ ಸಮಸ್ಯೆ ವಿಪರೀತವಾಗಿದೆ.
ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ಕವಿಜೋಡಿಯ ದುರಂತಗೀತ

ಕವಿಜೋಡಿಯ ದುರಂತಗೀತ

ಕವಿಜೋಡಿಯ ದುರಂತ ಅಂತ್ಯವೂ ಬಹಳ ಪರಿಣಾಮಕಾರಿಯಾಗಿ ನಿರೂಪಿತವಾಗಿದೆ. ಕಾವ್ಯದೇವಿಯೇ ಹೇಳಿ ಮಾಡಿಸಿದಂಥ ಜೋಡಿಯೊಂದು ಪರಸ್ಪರರ ವಿಶ್ವಾಸ ನಂಬಿಕೆಗಳನ್ನು ಉಳಿಸಿಕೊಳ್ಳಲಾಗುವುದಿಲ್ಲ. ತನ್ನ ಗಂಡ ಆಸಿಯಾ ಎಂಬುವವಳ ಜೊತೆ ಸಲಿಗೆಯಿಂದ ಇರುವುದನ್ನು ಸಹಿಸಲಾಗದೆ ತಮ್ಮಿಬ್ಬರ ಪ್ರೇಮದ ಕುರುಹಾಗಿದ್ದ ಕವಿಕುಟೀರದಿಂದ ಅವನ ಕವಿತೆ-ಟಿಪ್ಪಣಿಗಳ ಪುಸ್ತಕವನ್ನು ಸುಟ್ಟು ಟೆಡ್ ನನ್ನು ಹೊರಹಾಕುವುದು..
ಎಸ್. ಸಿರಾಜ್‌ ಅಹಮದ್‌ ಬರೆಯುವ ಅಂಕಣ

read more
ಸುಳಿಯ ಸೆಳವಿಗೆ ಸಿಲುಕದೇ…

ಸುಳಿಯ ಸೆಳವಿಗೆ ಸಿಲುಕದೇ…

ಮನುಷ್ಯ ಮುಕ್ತವಾಗಿ ಮತ್ತು ಸ್ವಚ್ಛಂದವಾಗಿ ಬೇರೆಯವರ ಜೊತೆ ಕಲೆಯಲು ರಂಗಭೂಮಿಗೆ ಬರಬೇಕು. ಅಲ್ಲಿ ಇರುವ ಮಜವೇ ಬೇರೆ. ಪ್ರೀತಿಯಲ್ಲಿ, ಸಲಿಗೆಯಲ್ಲಿ ಮತ್ತು ಸ್ನೇಹದಲ್ಲಿ ಕಾಲೆಳೆಯುವ ಬಗೆಗಳು ಇಲ್ಲಿ ಪಡೆದುಕೊಳ್ಳುವ ಆಯಾಮವೇ ಬೇರೆ. ಮೇಕಪ್‍ಗೆ ಕೂತರೆ ಮತ್ತು ರಂಗಕ್ಕೆ ಬಂದರೆ ಅಲ್ಲಿ ಅವರ ಚಹರೆ ಬೇರೆ. ಈ ಎಲ್ಲ ತಿಳಿದು ಮತ್ತು ಸಮುದ್ರದ ಬಗೆಗೆ ನನ್ನಲ್ಲಿ ಮೊದಲಿಂದ ಇರುವ ಸೆಳೆತದಿಂದ ಹೊರಟೆ. ಟಿಟಿಯಲ್ಲಿ ಹುಡುಗರ ಗೇಲಿ. ಪರಸ್ಪರ ಕಾಲೆಳೆಯುವ ಗುಣ ನಗು ತರಿಸುತ್ತಿತ್ತು.
ಎನ್.ಸಿ. ಮಹೇಶ್‌ ಬರೆಯುವ “ರಂಗ ವಠಾರ” ಅಂಕಣ

read more
ಟಿಶ್ಯೂಮಾರುವ ಹುಡುಗ ಸುಳ್ಳು ಹೇಳಲಿ ಬಿಡಿ

ಟಿಶ್ಯೂಮಾರುವ ಹುಡುಗ ಸುಳ್ಳು ಹೇಳಲಿ ಬಿಡಿ

ಕೊನೆಗೂ ಉಷಾ ಇದ್ದ ಅಪಾರ್ಟ್ಮೆಂಟ್ ಬಂತು. ಲಿಫ್ಟ್ ಕಾರ್ನರ್ ಪ್ರವೇಶ ಮಾಡುವ ಮೊದಲೇ ಒಂದು ಮಂಟಪದಂತಹ ಜಾಗದಲ್ಲಿ ನಿಂತು ಅದರ ನಾಲ್ಕೂ ಮೂಲೆಗೂ ಹಬ್ಬಿದ್ದ ಮಲ್ಲಿಗೆ ಬಳ್ಳಿಯನ್ನು ನೋಡುತ್ತಾ ಅದರ ಸುಗಂಧವನ್ನು ಅಘ್ರಾಣಿಸಲು ನಿಂತರು. ಇಹದಲ್ಲಿ ನಿಂತು ಪರಲೋಕಕ್ಕೆ ಕೈಚಾಚಿ ನಿಂತ ಘಳಿಗೆಯಾಗಿ ನನಗದು ಕಂಡಿತು. ಆ ಕ್ಷಣದಲ್ಲಿ ನನಗವರ ಮೇಲೆ ಕ್ಯಾಬಲ್ಲಿ ಉಕ್ಕಿದ್ದ ಕೋಪವೆಲ್ಲಾ ಮಾಯವಾಯಿತು. ಉಷಾಳ ಗಂಡ ಅನಿಕೇತ್ ನೋಡುವುದಕ್ಕೆ ನಿಜಕ್ಕೂ ಚೆನ್ನಾಗಿದ್ದ.
ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

read more
ಆಶ್ರಯ ಕೊಡು-ಕೊಳ್ಳುವಿಕೆಯ ಕಹಿ ಸತ್ಯ

ಆಶ್ರಯ ಕೊಡು-ಕೊಳ್ಳುವಿಕೆಯ ಕಹಿ ಸತ್ಯ

ತಮ್ಮ ದೇಶದಲ್ಲಿ ನಡೆಯುತ್ತಿರುವ ಆಂತರಿಕ ಯುದ್ಧ, ಗಲಾಟೆ, ಹಿಂಸೆ, ಸಾವು, ಮಿಲಿಟರಿ ಆಡಳಿತ ಎಂಬಂತೆ ಜೀವಹಾನಿಕಾರಕ ಪರಿಸ್ಥಿತಿಯಿದ್ದು ಜೀವ ರಕ್ಷಿಸಿಕೊಳ್ಳಲು ದೇಶ ಬಿಟ್ಟು ಬರುವ ಜನರು ಇತ್ತೀಚಿನ ದಶಕಗಳಲ್ಲಿ ಹೆಚ್ಚುತ್ತಿದ್ದಾರೆ. ಅಲ್ಲದೆ ಮಾನವ ಹಕ್ಕುಗಳ ಉಲ್ಲಂಘನೆ ಎಂಬ ಕಾರಣವನ್ನು ಮುಂದೆ ಮಾಡಿಕೊಂಡು ಕೂಡ ಸಾವಿರಾರು ಜನರು ದೇಶ ತೊರೆದು ಬೇರೆ ಕಡೆ ಆಶ್ರಯವನ್ನು ಬೇಡಿಕೊಂಡು ಹೋಗುತ್ತಾರೆ. ಇವರು ‘ಅಸೈಲಮ್ ಸೀಕರ್’ ಎಂದು ಕರೆಸಿಕೊಳ್ಳುತ್ತಾರೆ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

read more
ದುಬಾರಿ ಲೋಕದಲ್ಲಿ ರಂಗಪ್ರದರ್ಶನಗಳ ಪೂರ್ವಾಪರ

ದುಬಾರಿ ಲೋಕದಲ್ಲಿ ರಂಗಪ್ರದರ್ಶನಗಳ ಪೂರ್ವಾಪರ

ಧೈರ್ಯ ಮಾಡಿ ರಂಗಮಂದಿರದ ಬಾಡಿಗೆ ಕಟ್ಟಿ ನಾಟಕ ಮಾಡಲು ಮುಂದಾಗುತ್ತೇವೆ ಅಂತಿಟ್ಟುಕೊಳ್ಳಿ. ಜನ ಬರಬೇಕಲ್ಲ ? ಪೆಟ್ರೋಲ್ ದರ ಯಾವ ಶಿಖರವನ್ನ ಗುರಿಯಾಗಿಟ್ಟುಕೊಂಡಿದೆ ಎನ್ನುವುದು ತಿಳಿಯುತ್ತಿಲ್ಲ. ಅಡುಗೆ ಅನಿಲ ದರ ಕೇಳಿದರೆ ಎದೆ ಸ್ಫೋಟಗೊಳ್ಳುತ್ತದೆ. ಅಡುಗೆಗೆ ಬಳಸುವ ಎಣ್ಣೆ ತನಗೆ ಬೆಲೆ ಬರುತ್ತಿರುವುದಕ್ಕೆ ವ್ಯರ್ಥವಾಗಿ ಹಿಗ್ಗುತ್ತಿದೆ. ನೀವು ರಂಗಮಂದಿರಗಳ ಬಾಡಿಗೆ ದರ ಏರಿಸಿದರೆ ನಾವು ರಂಗತಂಡಗಳವರು ಏನು ಮಾಡಬೇಕು? ಎನ್. ಸಿ. ಮಹೇಶ್.  ಬರಹ

read more
ಒಳ್ಳೆಯ ಮತ್ತು ಕೆಟ್ಟ ಸಮಾಚಾರಗಳ ಬೇವುಬೆಲ್ಲ

ಒಳ್ಳೆಯ ಮತ್ತು ಕೆಟ್ಟ ಸಮಾಚಾರಗಳ ಬೇವುಬೆಲ್ಲ

ಶುಭಕೃತ್ ಸಂವತ್ಸರವು ಅಡಿಯಿಟ್ಟಿದೆ. ಆದರೆ ಕಾಲವು ಅದೇ ಪ್ರಕಾರ ಒಳಿತುಕೆಡುಕುಗಳನ್ನು ಒಟ್ಟಿಗೆ ಕಟ್ಟಿಕೊಂಡು ಸಾಗುತ್ತಿದೆ.  ಪ್ರಕೃತಿ ವಿಕೋಪವೆಂಬ ಬೇವು, ಮಾನವೀಯತೆ ಎಂಬ  ಬೆಲ್ಲವನ್ನು  ಸಮಾನ ಮನಸ್ಸಿನಿಂದ ಸ್ವೀಕರಿಸಬೇಕಾಗಿದೆ. ಆಸ್ಟ್ರೇಲಿಯಾದಲ್ಲಿ  ಟೆನಿಸ್ ಪಟು ಆಶ್ ಬಾರ್ಟಿ ನಿವೃತ್ತಿಯ ಬೇಸರ. ಆದರೆ ಅವರ ಮುಂದಿನ ನಿರ್ಧಾರ ಖುಷಿ ಕೊಡುವುದು. ಪ್ರವಾಹವು ನೋವು ಕೊಡುವುದು. ಡಾ. ವಿನತೆ ಶರ್ಮ ಬರೆದ ಆಸ್ಟ್ರೇಲಿಯಾ ಪತ್ರದಲ್ಲಿ ಅಲ್ಲಿನ ಕ್ಷೇಮ ಸಮಾಚಾರಗಳನ್ನು ತಿಳಿಯೋಣ.

read more
ಚೂಟಿ ಹುಡುಗನ ಸೃಜನಶೀಲತೆ ಹೇಳಿದ ಪಾಠ

ಚೂಟಿ ಹುಡುಗನ ಸೃಜನಶೀಲತೆ ಹೇಳಿದ ಪಾಠ

ಯಾವಾಗ ಅಧ್ಯಾಪಕನಾಗಿ ಶಾಲೆ ಸೇರಿ, ನಾನೇ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾಡಲು ಪ್ರಾರಂಭ ಮಾಡಿದೆನೋ, ಮಕ್ಕಳಿಗೆ ಪರೀಕ್ಷೆಯ ತಯಾರಿಯ ಬಗ್ಗೆ ಹೇಳಬೇಕಾಗಿ ಬಂತೋ ಆಗ ಪೇಚಿಗೆ ಸಿಲುಕುತ್ತಿದ್ದೆ. ಮಕ್ಕಳಿಗೆ ಪರೀಕ್ಷಾ ತಯಾರಿಯ ಉಪದೇಶ ಮಾಡುವಾಗ ನಾನು ಕೇಳಿದ ನನ್ನಪ್ಪನ ಮತ್ತು ನನ್ನ ಗುರುಗಳ ಮಾತುಗಳು ನನಗೆ ಅರಿವಿಲ್ಲದಂತೆ ಬಾಯಿಗೆ ಬಂದು ಬಿಡುತ್ತಿತ್ತು. ಉಪದೇಶವನ್ನು ಮಾಡಿದ ಬಳಿಕವೂ ಮಕ್ಕಳು ಉತ್ತರಪತ್ರಿಕೆಯಲ್ಲಿ ಬಿಟ್ಟ ಖಾಲಿ ಜಾಗಗಳನ್ನು ನೋಡಿದಾಗ ನನ್ನ ಉಪದೇಶಗಳು ಪ್ರಯೋಜನಕ್ಕೆ ಬಾರದೇ ಇರುವುದು ಸ್ಪಷ್ಟವಾಗಿ ತಿಳಿಯುತ್ತಿತ್ತು.
‘ಗಣಿತ ಮೇಷ್ಟರ ಶಾಲಾ ಡೈರಿ’ಯಲ್ಲಿ ಅರವಿಂದ ಕುಡ್ಲ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ