ಸಾಸಿವೆ ತಂದವಳ ಅಕ್ಷರಗಳಲ್ಲಿ ಕಂಡ ಜೀವಚೈತನ್ಯ
ನೋವಿನಲ್ಲೂ ನಗುವನ್ನು ಹುಡುಕುವ, ಅಷ್ಟು ಯಾತನಾಮಯವಾದ ಬರಹಗಳನ್ನು ಬರೆಯುವಾಗಲೂ ನಮ್ಮನ್ನು ನಗಿಸಲು ಪ್ರಯತ್ನಿಸುವ ಅವರ ಬರಹಗಳ ಮೆಚ್ಚಲೇಬೇಕು. ಇದು ಅವರ ಯಾತನಾಮಯವಾದ ಒಂದು ವರ್ಷದ ವಿವರಣೆ ಮಾತ್ರವಲ್ಲ. ಹೇಗೆ ಅವರು ಅದನ್ನು ಎದುರಿಸಿ ಎದ್ದುನಿಂತರು, ಹೇಗೆ ಮನೋಬಲ ಬೆಳೆಸಿಕೊಂಡರು, ನಂತರ ಹೆದರಿ ಮನೆಯಲ್ಲಿ ಕೂರದೇ, ತಮ್ಮ ವೃತ್ತಿಗೆ ತೆರೆದುಕೊಂಡರು, ಬರೆಯಲಾರದಷ್ಟು ನಿಶ್ಯಕ್ತಿಯಿದ್ದರೂ ಕತೆ ಕವನಗಳ ಬರೆದರು, ತಮ್ಮ ಹವ್ಯಾಸಗಳನ್ನು ಕೂಡಾ…
ಆತ್ಮಾವಲೋಕನ ಎಂಬುದೊಂದು ಯುದ್ಧ
ಪ್ರಸಿದ್ಧ ರಂಗಶಾಲೆಗಳಲ್ಲಿ ಕಲಿತು ಹೊರಬರುವವರು ಮಿಕ್ಕವರಿಗಿಂತ ಒಂದು ಸ್ತರದ ಮೇಲೆ ಇರುತ್ತಾರೆ. ಯಾಕೆಂದರೆ ಅವರನ್ನು ಹಾಗೆ ತರಬೇತುಗೊಳಿಸಿರಲಾಗುತ್ತದೆ. ಅವರಿಗೆ ರಂಗಪಠ್ಯವನ್ನು ಅಭ್ಯಾಸ ಮಾಡಿಸುವ ಕ್ರಮವೇ ಬೇರೆ. ನಟನೆ ಮತ್ತು ನಟರ ಆಯ್ಕೆ ನಂತರದ ಕೆಲಸ. ಮೊದಲು ರಂಗಪಠ್ಯದ ಸಾರಸರ್ವದ ಬಗ್ಗೆ ಚರ್ಚೆಗಳು ಆರಂಭವಾಗುತ್ತವೆ. ಆ ರಂಗನಾಟಕ ರೂಪಕವಾಗಿ ಅರಳಿಕೊಂಡಿರುವ ಬಗೆಯನ್ನು ಬೆರಗಿನಲ್ಲಿ ಅರ್ಥೈಸಲಾಗುತ್ತದೆ. ನಂತರ ಪ್ರತಿಯೊಂದು ಪಾತ್ರ, ಅದರ ಅನನ್ಯತೆಯನ್ನು ವಿವರಿಸಲಾಗುತ್ತದೆ. ಚಿಕ್ಕ ಪಾತ್ರ ದೊಡ್ಡ ಪಾತ್ರದ ವರ್ಗೀಕರಣವನ್ನು ಮೊದಲು ಇಲ್ಲವಾಗಿಸುತ್ತಾರೆ.
ಎನ್.ಸಿ. ಮಹೇಶ್ ಬರೆಯುವ ರಂಗ ವಠಾರ ಅಂಕಣ
ಕ್ಷಮೆ ಎಂಬ ಕನ್ನಡಿ…
‘ಡು ಐ ಹೇಟ್ ಮೈಸೆಲ್ಫ್?’ ಎಂದೆಲ್ಲಾ ಅನ್ನಿಸಲು ಶುರುವಾದರೂ ಬಲವಂತವಾಗಿ ಇಂತಹ ಯೋಚನೆಗಳನ್ನು ಅದುಮಿಟ್ಟೆ. ಇದೆಲ್ಲದರಿಂದ ಹೊರಬರಲು ಸಿನಿಮಾ ನೋಡುವುದೇ ಸೂಕ್ತ ಎಂದುಕೊಂಡು ಅವಳಲ್ಲಿ ಪ್ರಸ್ತಾಪಿಸಿದರೆ ಅವಳು ಒಲ್ಲದ ಮನಸ್ಸಿನಿಂದಲೇ ಸಮ್ಮತಿಸಿದಳು. ಸಿನಿಮಾದಲ್ಲಿ ಪ್ರತಿ ಪಾತ್ರಕ್ಕೆ ಅವಳು ತನ್ನನ್ನು, ರಘು ಮತ್ತು ಪೀಟರನಿಗೆ ಹೋಲಿಸಿಕೊಂಡು ಅದು ತನ್ನದೇ ಕಥೆಯಂತೆ ಭಾವಿಸಿ ಒಂದು ಭ್ರಮಾತ್ಮಕ ಸ್ಥಿತಿಗೆ ತಲುಪಿದಂತೆ ಕಾಣುತ್ತಿದ್ದಳು. ಯಾಕೋ ನನಗೆ ಹಿಂಸೆಯಾಗತೊಡಗಿತು. ನನ್ನ ಮಾನಸಿಕ ಸ್ಥಿಮಿತವನ್ನೇ ತಾನು ಕಳೆದುಕೊಳ್ಳುತ್ತಿದ್ದೇನೆ ಎನ್ನಿಸಲು ಶುರುವಾಯಿತು.
ಎಮರ್ಜೆನ್ಸಿನಾ… ಎಲ್ಲಿ…?
ಕೆನಡಾದಿಂದ ಅಮೇರಿಕಾಗೆ ಓಡಾಡುವ ಟ್ರಕ್ ಗಳ ಸಂಖ್ಯೆ ದೊಡ್ಡದಿದೆ. ಆರ್ಥಿಕವಾಗಿ ಕೆನಡ ಮತ್ತು ಅಮೇರಿಕಾ ಮಧ್ಯೆ ಬಹಳ ದೊಡ್ಡ ಒಡನಾಟವಿದೆ. ಪ್ರಪಂಚಕ್ಕೆ ಗೊತ್ತಿರುವಂತೆ ಅತೀ ಹೆಚ್ಚು ಕೊರೋನ ಸೊಂಕಿತರನ್ನು ಕಂಡ ದೇಶ ಅಮೇರಿಕಾ. ಹಾಗಾಗಿ ಸುಮಾರು ಒಂದು ವರ್ಷಕ್ಕಿಂತ ಜಾಸ್ತಿ ಸಮಯ ಆಮೇರಿಕಾ ಮತ್ತು ಕೆನಡಾದ ರಸ್ತೆ ಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಕೇವಲ ಸರಕು ಸಾಗಾಣಿಕೆಗೆ ಸಣ್ಣ ಪ್ರಮಾಣದ ಓಡಾಟ ಇತ್ತು. ಇತ್ತೀಚಿಗೆ ಎರಡೂ ದೇಶಗಳ ಮಧ್ಯೆ ಓಡಾಟ ತೆರೆಯಲಾಗಿದ್ದ ಕಾರಣ, ಟ್ರಕ್ ಚಾಲಕರಿಗೆ ಒಂದು ನಿಯಮವನ್ನು ಮಾಡಿದರು.
ಪ್ರಶಾಂತ್ ಬೀಚಿ ಬರೆಯುವ ಅಂಕಣ
ಜಿಂಕೆಗಳು ಕೊಲೆ ಮಾಡಬಲ್ಲವೇ?
ಪೊಲೀಸರು ಊರಿನ ಎಲ್ಲರ ಜೊತೆಗೆ ಯನೀನಾಳನ್ನೂ ವಿಚಾರಣೆಗೆ ಒಳಪಡಿಸುತ್ತಾರೆ. ಯಾರ ಬಳಿಯೂ ಇರದ ಉತ್ತರಗಳು ಯನೀನಾಳ ಬಳಿ ದೊರೆಯುತ್ತವೆ. ಬಿಗ್ ಫೂಟ್ ಅಲ್ಲದೇ ಇತರರ ಕೊಲೆಯಾದ ಸ್ಥಳಗಳಲ್ಲಿಯೂ ಬೇರೆ ಬೇರೆ ತರಹದ ಪ್ರಾಣಿಗಳ ಹೆಜ್ಜೆ ಗುರುತುಗಳು ಕಂಡಿರುತ್ತವೆ. ನಾವೇ ಸಾಧು ಪ್ರಾಣಿಗಳ ಒಳಗಿನ ಕ್ರೌರ್ಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವೇನೋ, ಈ ಎಲ್ಲ ಸಾಧು ಪ್ರಾಣಿಗಳೇ ಒಂದಾಗಿ ಊರಿನ ಜನರನ್ನು ಸಾಯಿಸುತ್ತಿರಬಹುದು ಎಂಬ ವಾದವನ್ನು ಒಪ್ಪಿಸುವ ಯನೀನಾ ಪೊಲೀಸರ ಕುಹಕಕ್ಕೆ ಗುರಿಯಾಗುತ್ತಾಳೆ.
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ…
ಸ್ಥಿರವಲ್ಲದ ಕಾಯದ ಸುತ್ತ ‘ಕಾಯಾ’ದ ಕಥಾಹಂದರ
ಸಮಂತಾ ಬೆಳೆಯುತ್ತಾ ‘ಹನಿ’ ಎನ್ನುವ ಹೆಂಗಸಿನೊಡನೆ ಸಲಿಂಗ ಸಂಬಂಧದಲ್ಲಿ ಜೊತೆಯಾಗುತ್ತಾಳೆ. ತನ್ನ ಪ್ರಿಯತಮೆ ಹನಿಯ ಕಲೆಗಳನ್ನು ಹೋಗಲಾಡಿಸಲು ಪ್ಲಾಸ್ಟಿಕ್ ಸರ್ಜರಿಗೆಂದು ಮಲೀಕನ ಹತ್ತಿರ ಬರುತ್ತಾಳೆ. ಮಲೀಕ ಹನಿಗೆ ಪ್ಲಾಸ್ಟಿಕ್ ಸರ್ಜರಿ ಮಾಡುವಾಗ, ತಕ್ಕ ಮಟ್ಟಿಗೆ ಧಡೂತಿ ತೂಕದ ಸಮಂತಾಳಿಗೂ ಪ್ಲಾಸ್ಟಿಕ್ ಸರ್ಜರಿಗೆ ಪ್ರಚೋದಿಸಿ ಒಪ್ಪಿಸುತ್ತಾನೆ; ಸಮಂತಾಳಿಗೆ ಮೇಲಿನಿಂದ ಕೆಳಗಿನವರೆಗೂ ಕಾಸ್ಮೆಟಿಕ್ ಸರ್ಜರಿ ಮಾಡುತ್ತಾನೆ. ಸಮಂತಾಳ ಪ್ಲಾಸ್ಟಿಕ್ ಸರ್ಜರಿಯ ಹೊತ್ತಿಗೆ ಮಲೀಕ ಮತ್ತು ಸಮಂತಾ ಇಬ್ಬರೂ ಜೊತೆಗಿದ್ದು ಮದುವೆಯಾಗುತ್ತಾರೆ.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್ ಪತ್ರ’
ಕತ್ತಲಿಗೆ ಬೆಳಕಿನ ಬೊಟ್ಟು ಇಟ್ಟಂತೆ ಇರುವ ಚಂದ್ರ..
‘ಅಸಲಿಗೆ ಇದನ್ನೇ ನಾಟಕ ಅಂದುಕೊಂಡಿದ್ದೆ. ಅಕ್ಷರ ರೂಪದಲ್ಲಿ ಇರುವಷ್ಟು ಹೊತ್ತು ಅದು ನಾಟಕವೇ. ಕೃತಿಯೇ. ಚರ್ಚಿತ ವಸ್ತುವೇ. ಆದರೆ ನಾಟಕ ಅಂದರೆ ಅಷ್ಟೇ ಅಲ್ಲ. ನಮ್ಮ ನಡುವಿನ ಮನುಷ್ಯರ ಢಾಳಾದ ಚಿತ್ರಣ ಅಕ್ಷರಗಳಲ್ಲಿ ರೂಪು ತಳೆಯುತ್ತ ಒಂದು ರೂಪು ಪಡೆಯುವುದನ್ನು ಮೊದಮೊದಲು ನಾನೂ ನಾಟಕ ಅಂತಲೇ ಅಂದುಕೊಂಡಿದ್ದೆ. ಆದರೆ ನಂತರದಲ್ಲಿ ನಾನು ಅರಿತ ಸತ್ಯ ಅಂದರೆ ಈ ಅಕ್ಷರರೂಪದ ನಾಟಕ ರಂಗದ ಮೇಲೆ ರೂಪು ತಳೆಯಬೇಕಾದ ಪೂರ್ವದಲ್ಲಿ ಒಂದು ಮಹಾನ್ ನಾಟಕದ ಅನಾವರಣ ಆಗತೊಡಗುತ್ತದೆ.’
ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ
ದಾಂಪತ್ಯ ವ್ಯವಸ್ಥೆಯ ಕಟು ವಿಮರ್ಶೆ
ಹಾಗೆ ನೋಡಿದರೆ ಸ್ವಾತಂತ್ರ್ಯ ಚಳವಳಿ- ಮುಖ್ಯವಾಗಿ ರಾಷ್ಟ್ರೀಯತೆಯ ಉಚ್ಛ್ರಾಯದ ಸಂದರ್ಭದಲ್ಲಿ ಹೆಣ್ಣಿನ ಸ್ಥಾನಮಾನ, ಶಿಕ್ಷಣ ಮೊದಲಾದವುಗಳ ಬಗ್ಗೆ ಬಹಳ ದೊಡ್ಡ ಪ್ರಮಾಣದಲ್ಲಿ ಚರ್ಚೆ ನಡೆಯಿತು. ಕನ್ನಡದ ಮೊದಲ ಕಾದಂಬರಿಗಳಲ್ಲಿ ಮತ್ತು ಭಾರತದ ಇತರ ಭಾಷೆಗಳ ಆರಂಭದ ಕಾದಂಬರಿಗಳಲ್ಲೂ ಹೆಣ್ಣಿನ ಪ್ರಶ್ನೆ ಬಹಳ ಮುಖ್ಯವಾಗಿ ಚರ್ಚಿತವಾಯಿತು. ಹಾಗಿದ್ದರೂ ಹೆಣ್ಣಿನ ಸ್ಥಿತಿಯಲ್ಲಿ ನಿರ್ಣಾಯಕವಾದ ಬದಲಾವಾಣೆ ಯಾಕೆ ಸಾಧ್ಯವಾಗಲಿಲ್ಲ? ಸ್ವಾತಂತ್ರ್ಯ ಚಳವಳಿ ತನ್ನ ತೀವ್ರತೆಯನ್ನು ಮುಟ್ಟಿದರೂ, ರಾಷ್ಟ್ರೀಯವಾದಿ ಭಾವನೆಗಳು ಪರಾಕಾಷ್ಠೆಗೆ ತಲುಪುತ್ತಿದ್ದರೂ ಸ್ತ್ರೀ ಸ್ವಾತಂತ್ರ್ಯದ ಪ್ರಶ್ನೆ ಯಾಕೆ ಇದ್ದಕ್ಕಿದ್ದಂತೆ ಗೌಣವಾಯಿತು ಎಂಬ ಬಗ್ಗೆ ಪಾರ್ಥಾ ಚಟರ್ಜಿಯಂಥ ಚಿಂತಕರು ಆಳವಾದ ಚಿಂತನೆ ನಡೆಸಿದ್ದಾರೆ.
ಹೀಗೊಂದು ‘ಭಿನ್ನ ಸಾಮಾನ್ಯ’ರ ಪ್ರೇಮಚರಿತೆ
‘ಜೀವನದಲ್ಲೊಂದು ಘಳಿಗೆ ಬಂದಿತು. ನಾನೊಬ್ಬ ಗೇ ಎನ್ನುವುದೇ ನನ್ನ ಟ್ರು ಐಡೆಂಟಿಟಿ ಎಂದು ಅನಿಸೋಕೆ ಶುರುವಾಯಿತು. ಆಗ ನಾನು ನನ್ನ ತಂದೆ ತಾಯಿಗೆ ಹೇಳಲೇಬೇಕಾಯಿತು. ಅಪ್ಪ ಮೊದಲಿಗೆ ನೀನು ಮನೆಗೆ ವಾಪಸ್ ಬರಬೇಕೆಂದರೆ ಅದೆಲ್ಲ ಬಿಡಬೇಕು ಎಂದರು. ಬಿಡುವುದಕ್ಕೆ ಅದೇನದು? ನನ್ನನ್ನ ನಾನಿರುವ ಹಾಗೆ ಒಪ್ಪಿಕೊಳ್ಳದಿದ್ದರೆ ನಾನು ಬರುವುದಿಲ್ಲ ಎಂದಿದ್ದೆ. ಕೂಡಲೇ ಫೋನ್ ಕಟ್ ಮಾಡಿದ್ದರು. ಆಮೇಲೇನಾಯಿತೋ ಏನೋ ಮತ್ತೆ ಅವರಿಂದ ಫೋನ್ ಬಂದಿತು… ನಾವಿಬ್ಬರು ಬೆಂಗಳೂರಿನಲ್ಲಿ ಜೊತೆಗಿರಲು ಶುರುಮಾಡಿದಾಗ ನಿನಗೊಬ್ಬಳು ಹೆಂಗಸು ಬೇಕೇ ಬೇಕು ಅಂದ್ರು.’










