Advertisement

ಅಂಕಣ

ನಾಲ್ಕು ರಾಜ್ಯಗಳ ಏಳಿಗೆಯ ಅವಲೋಕನ

ನಾಲ್ಕು ರಾಜ್ಯಗಳ ಏಳಿಗೆಯ ಅವಲೋಕನ

ಕೃತಿಯು ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಸೂಚ್ಯಂಕಗಳನ್ನು ಆದರ್ಶವಾಗಿರಿಸಿಕೊಂಡು ಕಳೆದ ನೂರು ವರ್ಷಗಳಿಂದ ಆದ ಬದಲಾವಣೆಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನೂರು ವರ್ಷಗಳ ಮುಂಚೆ ಪರಿಗಣನೆಗೆ ತೆಗೆದುಕೊಂಡ ನಾಲ್ಕೂ ರಾಜ್ಯಗಳು ಹೆಚ್ಚುಕಮ್ಮಿ ಒಂದೇ ಪರಿಸ್ಥಿತಿಯಲ್ಲಿದ್ದವು. ಆದರೆ ಉಪರಾಷ್ಟ್ರೀಯತೆಯ ಪ್ರಜ್ಞೆ ಬೆಳೆಸಿಕೊಂಡ ತಮಿಳುನಾಡು ಮತ್ತು ಕೇರಳ ಪ್ರಗತಿ ಹೊಂದಿದರೆ ಆ ಪ್ರಜ್ಞೆ ಬೆಳೆಸಿಕೊಳ್ಳಲು ವಿಫಲವಾದ ರಾಜ್ಯಗಳು ಹೇಗೆ ಹಿಂದುಳಿದಿವೆ ಅನ್ನುವುದನ್ನು ವಿವರಿಸಲಾಗಿದೆ.

read more
ರುಚಿಯ ದಾರಿ ಹಿಡಿದವರ ಕಥೆ

ರುಚಿಯ ದಾರಿ ಹಿಡಿದವರ ಕಥೆ

ಕೋವಿಡ್ ಮೊದಲನೇ ಅಲೆಯ ಕಾರಣದಿಂದ ಹಲವರು ಕೆಲಸ ಕಳೆದುಕೊಳ್ಳುತ್ತಿದ್ದರು. ಮತ್ತೊಂದಿಷ್ಟು ಕಡೆ ಪರ್ಸಂಟೇಜ್ ಸ್ಯಾಲರಿಗೆ ಬಂದು ನಿಂತಿತ್ತು. ಸಂಯೋಜಕರಾಗಿ ಕೆಲಸ ಮಾಡುತ್ತಿದ್ದ ಮಿಸಸ್ ಪ್ರೆಸಿಲ್ಲಾ ಅವರನ್ನು ಹೆಚ್ಚುವರಿ ಹುದ್ದೆಗಳನ್ನು ವಜಾ ಮಾಡುವ ನೆಪ ಹೇಳಿ ಕೆಲಸದಿಂದ ತೆಗೆದು ಹಾಕಿದ್ದರು. ಅವರೇ ರೆಫರ್ ಮಾಡಿದ್ದ, ನಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಇಂಗ್ಲಿಷ್ ಭಾಷಾ ಅಧ್ಯಾಪಕರಾಗಿ ಸೇರಿಕೊಂಡರು. ನಾವೀಗ ಸಹೋದ್ಯೋಗಿಗಳಾಗಿದ್ದೆವು. ಜಂಕ್ಷನ್ ಪಾಯಿಂಟ್ ಅಂಕಣದಲ್ಲಿ ದಾದಾಪೀರ್ ಜೈಮನ್ ಬರಹ

read more
ಸೇವೆಯನ್ನು ಕಲಿಯುವ ಉತ್ಸಾಹಿ ಮಕ್ಕಳು

ಸೇವೆಯನ್ನು ಕಲಿಯುವ ಉತ್ಸಾಹಿ ಮಕ್ಕಳು

ಕೆನಡಾದಲ್ಲಿ ಹೈ ಸ್ಕೂಲ್ ಓದುವ ಮಕ್ಕಳು 40 ಗಂಟೆಗಳ ಸೇವಾ ಕಾರ್ಯಗಳನ್ನು ಮಾಡಬೇಕು. ಆದನ್ನು ಮುಗಿಸಿದರೆ ಮಾತ್ರ ಅವರಿಗೆ ಹೈ ಸ್ಕೂಲ್ ಮುಗಿಸಿದ ಪ್ರಮಾಣ ಪತ್ರವನ್ನು ಕೊಡುತ್ತಾರೆ. ಯಾವ ಸಂಸ್ಥೆಗೆ ಸೇವೆ ಮಾಡುತ್ತೇವೆ, ಎಷ್ಟು ಗಂಟೆಗಳು ಮಾಡುತ್ತೇವೆ ಎಂದು ನಮೂದಿಸಿ, ಸೇವಾ ಸಂಸ್ಥೆಗಳ ವಿವರ ಮತ್ತು ಅಲ್ಲಿನ ಪರಿಚಾರಕರ ಸಹಿಯ ಜೊತೆಗೆ ಅವರ ವಿವರಗಳನ್ನು ನಮೂದಿಸಬೇಕು. ಎಲ್ಲಾ ಮಕ್ಕಳು ಇದನ್ನು ಬಹಳ ನ್ಯಾಯಯುತವಾಗಿ ಮತ್ತು ನಿಖರ ಮಾಹಿತಿಯೊಂದಿಗೆ ಪೂರ್ಣ ಮಾಡುತ್ತಾರೆ. ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಕೊಡುವುದಿಲ್ಲ.
ಪ್ರಶಾಂತ್‌ ಬೀಚಿ ಅಂಕಣ

read more
ನ್ಯಾಯದ ವಿವಿಧ ಮುಖಗಳ ಕತೆಗಳು

ನ್ಯಾಯದ ವಿವಿಧ ಮುಖಗಳ ಕತೆಗಳು

ಇದ್ಯಾಕೆ ಹೀಗೆ ಎಂದು ಪ್ರಶ್ನಿಸಿಕೊಂಡರೆ ಆಸ್ಟ್ರೇಲಿಯಾದ ಪಾಳೆಗಾರಿಕೆ ಮತ್ತು ವಸಾಹತುಶಾಹಿ ಚರಿತ್ರೆ ಬಿಚ್ಚಿಕೊಳ್ಳುತ್ತದೆ. ನಡೆದು ಹೋದ ಕರಾಳ ಚಾರಿತ್ರಿಕ ಘಟನೆಗಳು, ಅಬೊರಿಜಿನಲ್ ಜನರ ಮಾರಣಹೋಮ, ಅವರನ್ನು ಗುಲಾಮಗಿರಿಗೆ ಒಳಪಡಿಸಿದ್ದು, ಅವರ ಮಕ್ಕಳನ್ನು ಕದ್ದು ಬಲವಂತವಾಗಿ ಅವರಿಗೆ ‘ಸಂಸ್ಕೃತಿ ಪಾಠ’ ಕಲಿಸಿದ್ದು, ಬಿಳಿಯರ ಆಳ್ವಿಕೆ, ಆಡಳಿತ, ‘ವೈಟ್ ಆಸ್ಟ್ರೇಲಿಯಾ’ ಕಾಯಿದೆ/ಕಾನೂನು ಪಾಲನೆ, ಸಮಾಜದಲ್ಲಿ ಆಳವಾಗಿ…

read more
ಬರವಣಿಗೆ ಎಂಬ ಅಫೀಮು

ಬರವಣಿಗೆ ಎಂಬ ಅಫೀಮು

ಎಲ್ಲರಿಗೂ ಸಮನಾಗಿ ಸಿಗುವ ಇಪ್ಪತ್ನಾಲ್ಕೇ ಘಂಟೆಗಳನ್ನು ಇವರೆಲ್ಲ ತಡೆದು ನಿಲ್ಲಿಸಿದರು ಹೇಗೆ? ಜೀವನಕ್ಕೆ ಬೇಕಾದ ಹಣ ಸಂಪಾದಿಸಿದರು ಹೇಗೆ? ಮನೆಯನ್ನು ತೂಗಿಸಿದರು ಹೇಗೆ? ಅರೆ ಹೊಟ್ಟೆ ಉಂಡೇ ಎಷ್ಟು ರಾತ್ರಿ ಕಳೆದರು? ಅಷ್ಟಾಗಿಯೂ ಒಂದೊಳ್ಳೆಯ ಪುಟ ಬರೆದ ಮೇಲೆ ಅವರ ತುಟಿಯ ಮೇಲೆ ಮೂಡಿದ ಮುಗುಳೆಂಥದು? ಅಪಹಾಸ್ಯಕ್ಕೊಳಗಾದರೇ? ಪ್ರೀತಿಸುವವರಿಂದ ದೂರವಾದರೇ? ಅವರು ತಮ್ಮ ಬರವಣಿಗೆಗಾಗಿ ತೆತ್ತ ಬೆಲೆಯೆಂಥದು? ಕಲೆಯಿಂದ ಸಿಗುವ ಸುಖ ಈ ಎಲ್ಲವನ್ನೂ ಮೀರಿದ್ದೇ?

read more
ಮಹಿಳಾ ಯುದ್ಧಸ್ಮಾರಕಗಳ ಹುಡುಕುತ್ತಾ ಕಂಡ ಸತ್ಯಗಳು

ಮಹಿಳಾ ಯುದ್ಧಸ್ಮಾರಕಗಳ ಹುಡುಕುತ್ತಾ ಕಂಡ ಸತ್ಯಗಳು

ಯುದ್ಧಗಳೇಕೆ ನಡೆಯುತ್ತವೆ ಎಂದು ಯೋಚಿಸುತ್ತಾ, ಸ್ಕಾಟ್‍ ಲ್ಯಾಂಡ್‍ನಲ್ಲಿ  ಯಾಂತ್ರಿಕವಾಗಿ ಆ ವಸ್ತು ಸಂಗ್ರಹಾಲಯವನ್ನು ನೋಡುತ್ತಿದ್ದಾಗ ‘ಹಾಲ್ ಆಫ್ ಆನರ್’ ಎನ್ನುವ ಇಪ್ಪತ್ತು ಅಡಿ ಉದ್ದ ಅಗಲವಿದ್ದ ಕೋಣೆಯಲ್ಲಿ ಕೆಂಪು ಬಣ್ನದ ಲೆದರ್ ಬೈಂಡಿಂಗ್ ಹೊಂದಿದ್ದ ವಿಪರೀತ ದಪ್ಪವಾದ ಒಂದು ಪುಸ್ತಕ ಕಂಡಿತು. ಅದರ ಹಿಂದೆಯೇ ಅದಕ್ಕೇ ಆತುಕೊಂಡಿದ್ದಂತೆ ನಿಂತಿದ್ದ ಗಾಜಿನ ಗೋಡೆ ಕಣ್ಣಿಗೆ ಬಿತ್ತು. ಹತ್ತಿರ ಹೋಗಿ ನೋಡಿದರೆ ಅದರಲ್ಲಿದ್ದ ಅಕ್ಷರಗಳನ್ನು ಓದಿ ಒಂದು ಕ್ಷಣ ದಂಗುಬಿಡಿದೆ.

read more
ಸಾಸಿವೆ ತಂದವಳ ಅಕ್ಷರಗಳಲ್ಲಿ ಕಂಡ ಜೀವಚೈತನ್ಯ

ಸಾಸಿವೆ ತಂದವಳ ಅಕ್ಷರಗಳಲ್ಲಿ ಕಂಡ ಜೀವಚೈತನ್ಯ

ನೋವಿನಲ್ಲೂ ನಗುವನ್ನು ಹುಡುಕುವ, ಅಷ್ಟು ಯಾತನಾಮಯವಾದ ಬರಹಗಳನ್ನು ಬರೆಯುವಾಗಲೂ ನಮ್ಮನ್ನು ನಗಿಸಲು ಪ್ರಯತ್ನಿಸುವ ಅವರ ಬರಹಗಳ ಮೆಚ್ಚಲೇಬೇಕು. ಇದು ಅವರ ಯಾತನಾಮಯವಾದ ಒಂದು ವರ್ಷದ ವಿವರಣೆ ಮಾತ್ರವಲ್ಲ. ಹೇಗೆ ಅವರು ಅದನ್ನು ಎದುರಿಸಿ ಎದ್ದು‌ನಿಂತರು, ಹೇಗೆ ಮನೋಬಲ ಬೆಳೆಸಿಕೊಂಡರು, ನಂತರ ಹೆದರಿ ಮನೆಯಲ್ಲಿ ಕೂರದೇ, ತಮ್ಮ ವೃತ್ತಿಗೆ ತೆರೆದುಕೊಂಡರು, ಬರೆಯಲಾರದಷ್ಟು ನಿಶ್ಯಕ್ತಿಯಿದ್ದರೂ ಕತೆ ಕವನಗಳ ಬರೆದರು, ತಮ್ಮ ಹವ್ಯಾಸಗಳನ್ನು ಕೂಡಾ…

read more
ಆತ್ಮಾವಲೋಕನ ಎಂಬುದೊಂದು ಯುದ್ಧ

ಆತ್ಮಾವಲೋಕನ ಎಂಬುದೊಂದು ಯುದ್ಧ

ಪ್ರಸಿದ್ಧ ರಂಗಶಾಲೆಗಳಲ್ಲಿ ಕಲಿತು ಹೊರಬರುವವರು ಮಿಕ್ಕವರಿಗಿಂತ ಒಂದು ಸ್ತರದ ಮೇಲೆ ಇರುತ್ತಾರೆ. ಯಾಕೆಂದರೆ ಅವರನ್ನು ಹಾಗೆ ತರಬೇತುಗೊಳಿಸಿರಲಾಗುತ್ತದೆ. ಅವರಿಗೆ ರಂಗಪಠ್ಯವನ್ನು ಅಭ್ಯಾಸ ಮಾಡಿಸುವ ಕ್ರಮವೇ ಬೇರೆ. ನಟನೆ ಮತ್ತು ನಟರ ಆಯ್ಕೆ ನಂತರದ ಕೆಲಸ. ಮೊದಲು ರಂಗಪಠ್ಯದ ಸಾರಸರ್ವದ ಬಗ್ಗೆ ಚರ್ಚೆಗಳು ಆರಂಭವಾಗುತ್ತವೆ. ಆ ರಂಗನಾಟಕ ರೂಪಕವಾಗಿ ಅರಳಿಕೊಂಡಿರುವ ಬಗೆಯನ್ನು ಬೆರಗಿನಲ್ಲಿ ಅರ್ಥೈಸಲಾಗುತ್ತದೆ. ನಂತರ ಪ್ರತಿಯೊಂದು ಪಾತ್ರ, ಅದರ ಅನನ್ಯತೆಯನ್ನು ವಿವರಿಸಲಾಗುತ್ತದೆ. ಚಿಕ್ಕ ಪಾತ್ರ ದೊಡ್ಡ ಪಾತ್ರದ ವರ್ಗೀಕರಣವನ್ನು ಮೊದಲು ಇಲ್ಲವಾಗಿಸುತ್ತಾರೆ.
ಎನ್.ಸಿ. ಮಹೇಶ್‌ ಬರೆಯುವ ರಂಗ ವಠಾರ ಅಂಕಣ

read more
ಕ್ಷಮೆ ಎಂಬ ಕನ್ನಡಿ…

ಕ್ಷಮೆ ಎಂಬ ಕನ್ನಡಿ…

‘ಡು ಐ ಹೇಟ್ ಮೈಸೆಲ್ಫ್?’ ಎಂದೆಲ್ಲಾ ಅನ್ನಿಸಲು ಶುರುವಾದರೂ ಬಲವಂತವಾಗಿ ಇಂತಹ ಯೋಚನೆಗಳನ್ನು ಅದುಮಿಟ್ಟೆ. ಇದೆಲ್ಲದರಿಂದ ಹೊರಬರಲು ಸಿನಿಮಾ ನೋಡುವುದೇ ಸೂಕ್ತ ಎಂದುಕೊಂಡು ಅವಳಲ್ಲಿ ಪ್ರಸ್ತಾಪಿಸಿದರೆ ಅವಳು ಒಲ್ಲದ ಮನಸ್ಸಿನಿಂದಲೇ ಸಮ್ಮತಿಸಿದಳು. ಸಿನಿಮಾದಲ್ಲಿ ಪ್ರತಿ ಪಾತ್ರಕ್ಕೆ ಅವಳು ತನ್ನನ್ನು, ರಘು ಮತ್ತು ಪೀಟರನಿಗೆ ಹೋಲಿಸಿಕೊಂಡು ಅದು ತನ್ನದೇ ಕಥೆಯಂತೆ ಭಾವಿಸಿ ಒಂದು ಭ್ರಮಾತ್ಮಕ ಸ್ಥಿತಿಗೆ ತಲುಪಿದಂತೆ ಕಾಣುತ್ತಿದ್ದಳು. ಯಾಕೋ ನನಗೆ ಹಿಂಸೆಯಾಗತೊಡಗಿತು. ನನ್ನ ಮಾನಸಿಕ ಸ್ಥಿಮಿತವನ್ನೇ ತಾನು ಕಳೆದುಕೊಳ್ಳುತ್ತಿದ್ದೇನೆ ಎನ್ನಿಸಲು ಶುರುವಾಯಿತು.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ