Advertisement

ಅಂಕಣ

ಇರುಳಿನ ಹೊಸ ಬಣ್ಣ

ಇರುಳಿನ ಹೊಸ ಬಣ್ಣ

ಆಗಾಗ ಊರಿನ ಬಂಧುಗಳು ತಂದು ಕೊಡುವ ಕುರ್ಲಿ ಸರಿಯಾಗಿ ಸ್ವಚ್ಛಗೊಳಿಸಿ ಹದವಾದ ಮಸಾಲೆಯೊಂದಿಗೆ ಬೇಯಿಸುವ ಕೆಲಸವು ರಾತ್ರಿಯಾದೊಡನೆ ಶುರುವಾಗುತ್ತದೆ. ಜೋರು ಮಳೆ ಬೀಳುವಾಗ, ಚಳಿ ತನ್ನ ಚಹರೆಯ ತೋರಿಸುತ್ತಿರುವಾಗ ಕಾಜುವಾಡಾದ ಯಾವುದೋ ಓಣಿಯ ಮನೆಯ ಬೆಂಕಿ ಒಲೆಯಲ್ಲಿ ತನ್ನ ತಾ ಹಸಿಯಾಗಿಯೆ ಕೆಂಡದಲ್ಲಿ ಸುಟ್ಟುಕೊಳ್ಳುವ ಏಡಿ ತನ್ನ ಅಮೋಘ ಪರಿಮಳವನ್ನು ಸುತ್ತಲಿನ ಲೋಕಕ್ಕೂ ಹರಡುತ್ತದೆ.

read more
ಪ್ರತಿಭಟನೆಯ ದೃಷ್ಟಿಕೋನ ಮೀರಿ ಯೋಚಿಸುವ ಕೊಡಗಿನ ಗೌರಮ್ಮ

ಪ್ರತಿಭಟನೆಯ ದೃಷ್ಟಿಕೋನ ಮೀರಿ ಯೋಚಿಸುವ ಕೊಡಗಿನ ಗೌರಮ್ಮ

ಮೊದಲ ತಲೆಮಾರಿನ ಲೇಖಕಿಯರು ವಿಧವಾವಿವಾಹ, ಶೋಷಣೆ, ಸ್ತ್ರೀ ಸ್ವಾತಂತ್ರ್ಯ ಮೊದಲಾದ ವಿಷಯಗಳನ್ನು ಕುರಿತು ಬಹಳ ದಿಟ್ಟವಾಗಿ ಬರೆದಿದ್ದರೂ ಸ್ತ್ರೀ ವ್ಯಕ್ತಿತ್ವವನ್ನು ಕೇವಲ ಶೋಷಣೆ ಹಾಗೂ ಅದರ ವಿರುದ್ಧ ಪ್ರತಿಭಟಿಸುವ ಹೆಣ್ಣಿನ ಮಾದರಿಯನ್ನು ಹೊರತುಪಡಿಸಿ ನೋಡಲು ಸಾಧ್ಯವಾದರೆ ಅವಳನ್ನು ಹೊಸದಾದ ದೃಷ್ಟಿಕೋನದಲ್ಲಿ ಅರಿಯಲು ಸಾಧ್ಯವಾಗುತ್ತದೆ ಎಂಬುದು  ಕೊಡಗಿನ ಗೌರಮ್ಮ ಅವರ ನಿಲುವಾಗಿತ್ತು. ಈ ಕಾರಣಕ್ಕಾಗಿ ಹೆಣ್ಣೊಬ್ಬಳು ಬದುಕಿದ, ಭಾವಿಸಿದ ಅನುಭವಗಳನ್ನು ಕುರಿತು ಬರೆದು…

read more
ಚೆಕೊವ್‌ರ ಏಳು ಅಪರೂಪದ ಕತೆಗಳು

ಚೆಕೊವ್‌ರ ಏಳು ಅಪರೂಪದ ಕತೆಗಳು

ಮಗಳೊಂದಿಗೆ ಒಂದು ದಿನ ಕಳೆಯುವ ಸುಖ ಈ ಎಲ್ಲ ವೈಭವಕ್ಕಿಂತ ಮಿಗಿಲಾದುದು ಎಂದು ಕನಸು ಕಾಣುತ್ತ ದಿನ ಮುಗಿಸುತ್ತಿರುತ್ತಾಳೆ ನತಾಲ್ಯಾ. ಅಷ್ಟರಲ್ಲಿ ಅವಳ ಮರಿ ದೆಲ್, ಅಂದರೆ ಪತಿ ದೇವರ ಆಗಮನವಾಗುತ್ತದೆ. ಸಣ್ಣದೊಂದು ಕೆಲಸದಲ್ಲಿದ್ದ ಆಕೆಯ ಗಂಡ ನಿಕಿಟಿನ್ ಹೆಂಡತಿ ಪ್ರಸಿದ್ಧಳಾಗುತ್ತಲೇ ಕೆಲಸ ಬಿಟ್ಟು ಅವಳ ಹಣದಲ್ಲೇ ಐಶಾರಾಮಿ ಜೀವನ ನಡೆಸುತ್ತಿದ್ದಾನೆ. ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿದ್ದಾನೆ. ನತಾಲ್ಯಾ ಎಷ್ಟು ಬಿಡಿಸಿಕೊಳ್ಳಲು ಯತ್ನಿಸಿದರೂ…

read more
ದೇಶ ಯಾವುದಾದರೇನು, ಒಳಿತನ್ನು ಪರಾಂಬರಿಸೋಣ

ದೇಶ ಯಾವುದಾದರೇನು, ಒಳಿತನ್ನು ಪರಾಂಬರಿಸೋಣ

ಪಾಶ್ಚಿಮಾತ್ಯ ದೇಶಗಳಲ್ಲಿ ನಾಲ್ಕು ಋತುಗಳು ಕಂಡು ಬರುತ್ತದೆ, ಅದರಲ್ಲೂ ಕೆನಡಾ ದೇಶದಲ್ಲಿ ವರ್ಷದ ಆರು ತಿಂಗಳು ಮಂಜು ಬೀಳುತ್ತಿದ್ದು, ಹಿಮದಿಂದ ಕೂಡಿದ್ದರೂ ನಾಲ್ಕು ಋತುಗಳು ಬಂದು ಹೋಗುತ್ತವೆ. ಇಂತಹ ದೇಶಗಳಲ್ಲಿ ಸ್ಪ್ರಿಂಗ್ ಎನ್ನುವ ಒಂದು ಋತು ಇದೆ, ಅದನ್ನು ವಸಂತ ಕಾಲ ಎನ್ನುವುದು ಸೂಕ್ತ. ಈ ಋತುವಿನ ಸಮಯದಲ್ಲಿ ಬೋಳಾಗಿದ್ದ ಮರಗಳು ಇದ್ದಕ್ಕಿದ್ದಂತೆ ಚಿಗುರೊಡೆಯುತ್ತವೆ, ನೋಡು ನೋಡುತ್ತಿದ್ದಂತೆ ಎಲೆಗಳಿಂದ ಪೂರ್ತಿ ಆವರಿಸಿಕೊಳ್ಳುತ್ತದೆ. ಮಣ್ಣಿನ ಶಕ್ತಿಯೋ, ಜಾಗದ ಮಹಿಮೆಯೋ ಕೇವಲ ತಿಂಗಳಲ್ಲಿ…

read more
ನಾಟಕದ ನ್ಯೂನತೆಗಳೂ, ಬಂಡೇಳುವ ಜೀವಿಗಳೂ..

ನಾಟಕದ ನ್ಯೂನತೆಗಳೂ, ಬಂಡೇಳುವ ಜೀವಿಗಳೂ..

ಬೀಚಿ ಅವರ ವಿಡಂಬನೆಗಳಲ್ಲಿ ಬದುಕಿನ ಅಪಸವ್ಯಗಳ ಬಗೆಗೆ ಗಾಢ ವಿಷಾದ ಇರುತ್ತದೆ. ಅದನ್ನ ನಗೆಯಲ್ಲಿ ದಾಟಿಸಬೇಕಾದ ಅನಿವಾರ್ಯವನ್ನ ಅವರು ಸೃಷ್ಟಿಸಿಕೊಂಡಿದ್ದಾರೆ. ವಿಷಾದವನ್ನು ಅದರ ರೂಟ್ ಲೆವೆಲ್‌ನಲ್ಲಿ ಅರ್ಥೈಸಿಕೊಂಡವ ಮಾತ್ರ ಅವರ ವಿಡಂಬನೆಗೆ ನಗಬಲ್ಲ. ಬೀಚಿ ಅವರು ಬರೆದ ವಿಡಂಬನೆಗಳು ಅರ್ಥವಾಗಬೇಕು ಅಂದರೆ ಅವರ ಸಾಹಿತ್ಯವನ್ನು ಓದ್ತಾ ಇರುವವರ ಸುತ್ತ ಇರುವ…

read more
ಮರೆಯಲಾಗದ ಆ ನಾಲ್ಕು ರಾತ್ರಿಗಳು

ಮರೆಯಲಾಗದ ಆ ನಾಲ್ಕು ರಾತ್ರಿಗಳು

ಹಗಲಿನಲ್ಲಿ ಎಲ್ಲೆಲ್ಲೋ ಹಂಚಿಹೋಗಿದ್ದ ಇವರನ್ನೆಲ್ಲ ಹೀಗೆ ಒಂದೇ ಸೂರಿನಡಿ ಸೇರಿಸಿದ್ದ ಇರುಳು ಎಷ್ಟೊಂದು ಬಲಶಾಲಿ ಅಂದುಕೊಳ್ಳುತ್ತಲೇ ಸಣ್ಣಗೆ ತೂಕಡಿಕೆ. ಅಲ್ಯಾರೋ ಕೆಮ್ಮಿದ ಸದ್ದು. ಮತ್ಯಾರೋ ಮಗುವನ್ನು ತಟ್ಟಿದ ಸಪ್ಪಳ. ಇನ್ಯಾರೋ ಯಾರಿಗೋ ಗದರಿದ ದನಿ. ಮಧ್ಯೆ-ಮಧ್ಯೆ ಹೆಗ್ಗಣಗಳ ಓಡಾಟ. ಅಪರೂಪಕ್ಕೆ ರೈಲಿನ ಕೂಗು. ಮೈಕಿನ ಅನೌನ್ಸ್‌ಮೆಂಟು… ಎಲ್ಲವೂ ಬೇರಾವುದೋ ಲೋಕದ್ದು ಎನ್ನುವಂಥ ಮಂಪರು. ಮುಂಜಾನೆ ಎಚ್ಚರಾದಾಗ ಪಕ್ಕದಲ್ಲೇ ಹಮಾಲಿ ಮಂದಿಯ ಗುಂಪೊಂದು ಸೇರಿತ್ತು.

read more
ಮಳೆ, ಬೇಸಗೆ, ಕ್ರಿಕೆಟ್ ಇತ್ಯಾದಿ ಬಿಸಿ-ತಂಪು ಕಥೆಗಳು

ಮಳೆ, ಬೇಸಗೆ, ಕ್ರಿಕೆಟ್ ಇತ್ಯಾದಿ ಬಿಸಿ-ತಂಪು ಕಥೆಗಳು

ಬೇಸಗೆಯ ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ದೇಶದ ಪೂರ್ವ ಮತ್ತು ಉತ್ತರ ದಿಕ್ಕುಗಳ ಪೂರ್ತಿ ‘ಲ ನಿನಾ’ ಎಂಬ ಮಳೆ-ಮಾರುತ ಹವಾಮಾನ ವಿಜೃಂಭಿಸಲಿದೆ. ಬಿಸಿಲಿನ ಜೊತೆ ಒಂದಷ್ಟು ತಂಪು, ಅಗಾಧ ಮಳೆ ಮತ್ತು ಚಂಡಮಾರುತವು ಜನಜೀವನದಲ್ಲಿ ಆಟವಾಡಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಅದರ ಮುನ್ಸೂಚನೆಯೆಂಬಂತೆ ಈಗಾಗಲೇ ನ್ಯೂ ಸೌತ್ ವೇಲ್ಸ್ ಮತ್ತು ನಮ್ಮ ರಾಣಿರಾಜ್ಯದ ಕೆಲ ಭಾಗಗಳಲ್ಲಿ ಬೇಕಾದಷ್ಟು ಮಳೆಯಾಗಿದೆ.- ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

read more
ದೇಹ ಸಂಕೀರ್ಣತೆಯ ಮುಗಿಯದ ಜಿಜ್ಞಾಸೆ

ದೇಹ ಸಂಕೀರ್ಣತೆಯ ಮುಗಿಯದ ಜಿಜ್ಞಾಸೆ

ನಮ್ಮ ದೇಹವನ್ನು ಅರ್ಥ ಮಾಡಿಕೊಳ್ಳಲು, ನಮ್ಮನ್ನು ಆರೋಗ್ಯವಂತರನ್ನಾಗಿ ಇಡಲು, ರೋಗದಿಂದ ಗುಣಮುಖವಾಗುವಂತೆ ಮಾಡಲು, ವಿಜ್ಞಾನಿಗಳು ಮತ್ತು ವೈದ್ಯರು ಸಂಶೋಧನೆಗಳನ್ನು ಮಾಡುತ್ತಲೇ ಇದ್ದಾರೆ. ಹೊಸ ತಂತ್ರಜ್ಞಾನಗಳನ್ನು, ಔಷಧಿಗಳನ್ನು, ಶಸ್ತ್ರಚಿಕಿತ್ಸೆಗಳನ್ನು ಅವಿಷ್ಕಾರ ಮಾಡುತ್ತಲೇ ಇದ್ದಾರೆ. ಇಷ್ಟೊಂದು ಸೌಲಭ್ಯಗಳು ಔಷಧಗಳು ಇದ್ದರೂ ಮನುಷ್ಯನ ದೇಹರಚನೆ, ಜೀವಕೋಶಗಳ ಕ್ರಿಯೆ, ಅಂಗಾಂಗಳ ವ್ಯವಸ್ಥೆಯ ನಡುವಿನ ಸಂಬಂಧಗಳ ವಿಪರೀತ ಸಂಕೀರ್ಣತೆಯನ್ನು….

read more
ವಚನ ನೀಡಿ ಮರೆತವರ ಕತೆ

ವಚನ ನೀಡಿ ಮರೆತವರ ಕತೆ

ಎರಡನೆಯ ಅಧ್ಯಾಯ ಶುರುವಾಗುವುದು ರೇಚಲ್ ತೀರಿಕೊಂಡ ಹತ್ತು ವರ್ಷಗಳ ನಂತರ. ಮಣಿ ಹಾವು ಕಚ್ಚಿ ಮೃತನಾದಾಗ ಅವನ ಮಕ್ಕಳೆಲ್ಲ ಅಂತ್ಯಕ್ರಿಯೆಗಾಗಿ ಸೇರಿದಾಗ ಮತ್ತೆ ಸಲೋಮಿಯ ಹೆಸರಿಗೆ ಮನೆ ವರ್ಗಾಯಿಸುವ ಮಾತು ಬರುತ್ತದೆ. ಆಂಟನ್ ಆಮೋರಳ ಸಾಥ್ ನೀಡಿದರೂ ಹಿರಿಯಕ್ಕ ಆಸ್ಟ್ರಿಡ್ ಅಸಮ್ಮತಿ ಸೂಚಿಸುತ್ತಾಳೆ. ಅಷ್ಟಕ್ಕೂ ಸಲೋಮಿಯ ಹೆಸರಿನಲ್ಲಿಯೇ ಇರಬೇಕು ಎಂಬ ಹಠ ಏಕೆ?
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ ‘ದ ಪ್ರಾಮಿಸ್’ ಕಾದಂಬರಿಯ ಬಗ್ಗೆ ಬರೆದಿದ್ದಾರೆ ಕಾವ್ಯಾ ಕಡಮೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ